AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: 17 ವರ್ಷಗಳ ಬಳಿಕ ಐಪಿಎಲ್​ಗೆ ಜೇಮ್ಸ್ ಅ್ಯಂಡರ್ಸನ್

IPL 2025 James Anderson: ಜೇಮ್ಸ್ ಅ್ಯಂಡರ್ಸನ್ ಸಾರ್ವಕಾಲಿಕ ಶ್ರೇಷ್ಠ ಬೌಲರ್. ಇಂಗ್ಲೆಂಡ್ ಪರ 188 ಟೆಸ್ಟ್ ಪಂದ್ಯಗಳನ್ನಾಡಿರುವ ಅ್ಯಂಡರ್ಸನ್ 40037 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ ಒಟ್ಟು 704 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಟೆಸ್ಟ್ ಇತಿಹಾಸದಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ವೇಗದ ಬೌಲರ್ ಎಂಬ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ. ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿರುವ ಜಿಮ್ಮಿ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವ ಇರಾದೆಯಲ್ಲಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 06, 2024 | 7:30 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಕಾಣಿಸಿಕೊಳ್ಳದ ಕೆಲವೇ ಕೆಲವು ಶ್ರೇಷ್ಠ ಆಟಗಾರರಲ್ಲಿ ಇಂಗ್ಲೆಂಡ್ ವೇಗಿ ಜೇಮ್ಸ್ ಅ್ಯಂಡರ್ಸನ್ ಕೂಡ ಒಬ್ಬರು. ಇಂಗ್ಲೆಂಡ್ ಪರ ಮೂರು ಸ್ವರೂಪಗಳಲ್ಲಿ ಕಣಕ್ಕಿಳಿದರೂ ಅ್ಯಂಡರ್ಸನ್ ಐಪಿಎಲ್​ನತ್ತ ಮಾತ್ರ ಮುಖ ಮಾಡಿರಲಿಲ್ಲ. ಅದರಲ್ಲೂ ಐಪಿಎಲ್ ಹರಾಜಿಗಾಗಿ ಒಮ್ಮೆಯೂ ಹೆಸರು ನೋಂದಾಯಿಸಿಕೊಂಡಿರಲಿಲ್ಲ.

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಕಾಣಿಸಿಕೊಳ್ಳದ ಕೆಲವೇ ಕೆಲವು ಶ್ರೇಷ್ಠ ಆಟಗಾರರಲ್ಲಿ ಇಂಗ್ಲೆಂಡ್ ವೇಗಿ ಜೇಮ್ಸ್ ಅ್ಯಂಡರ್ಸನ್ ಕೂಡ ಒಬ್ಬರು. ಇಂಗ್ಲೆಂಡ್ ಪರ ಮೂರು ಸ್ವರೂಪಗಳಲ್ಲಿ ಕಣಕ್ಕಿಳಿದರೂ ಅ್ಯಂಡರ್ಸನ್ ಐಪಿಎಲ್​ನತ್ತ ಮಾತ್ರ ಮುಖ ಮಾಡಿರಲಿಲ್ಲ. ಅದರಲ್ಲೂ ಐಪಿಎಲ್ ಹರಾಜಿಗಾಗಿ ಒಮ್ಮೆಯೂ ಹೆಸರು ನೋಂದಾಯಿಸಿಕೊಂಡಿರಲಿಲ್ಲ.

1 / 5
ಆದರೆ ಇದೀಗ 17 ವರ್ಷಗಳ ಬಳಿಕ ಐಪಿಎಲ್ ಹರಾಜಿಗಾಗಿ ಜೇಮ್ಸ್ ಅ್ಯಂಡರ್ಸನ್ ಹೆಸರು ನೋಂದಾಯಿಸಿಕೊಂಡಿದ್ದಾರೆ. ಅದು ಸಹ ತಮ್ಮ 42ನೇ ವಯಸ್ಸಿನಲ್ಲಿ ಎಂಬುದು ವಿಶೇಷ. ಅಂದರೆ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತರಾಗಿರುವ ಅ್ಯಂಡರ್ಸನ್ ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್​ನತ್ತ ಮುಖ ಮಾಡಲು ಇಚ್ಛಿಸಿದ್ದಾರೆ.

ಆದರೆ ಇದೀಗ 17 ವರ್ಷಗಳ ಬಳಿಕ ಐಪಿಎಲ್ ಹರಾಜಿಗಾಗಿ ಜೇಮ್ಸ್ ಅ್ಯಂಡರ್ಸನ್ ಹೆಸರು ನೋಂದಾಯಿಸಿಕೊಂಡಿದ್ದಾರೆ. ಅದು ಸಹ ತಮ್ಮ 42ನೇ ವಯಸ್ಸಿನಲ್ಲಿ ಎಂಬುದು ವಿಶೇಷ. ಅಂದರೆ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತರಾಗಿರುವ ಅ್ಯಂಡರ್ಸನ್ ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್​ನತ್ತ ಮುಖ ಮಾಡಲು ಇಚ್ಛಿಸಿದ್ದಾರೆ.

2 / 5
ಇಂಗ್ಲೆಂಡ್​ನಲ್ಲಿ ನಡೆದ ದಿ ಹಂಡ್ರೆಡ್ ಲೀಗ್ ವೇಳೆ ಮಾತನಾಡಿದ್ದ ಜೇಮ್ಸ್ ಅ್ಯಂಡರ್ಸನ್, ಈ ಲೀಗ್​ನಲ್ಲಿ ಒಬ್ಬ ಬೌಲರ್​ಗೆ ಕೇವಲ 20 ಎಸೆತಗಳು ಮಾತ್ರ ಇದೆ. ವಿಶೇಷ ಎಂದರೆ ಮೊದಲ 20 ಎಸೆತಗಳಲ್ಲಿ ಚೆಂಡು ಸ್ವಿಂಗ್ ಪಡೆಯುತ್ತಿರುವುದನ್ನು ನಾನು ಗಮನಿಸಿದ್ದೇನೆ. ನಾನು ಸಹ ಅದನ್ನು ಮಾಡಬಲ್ಲೆ ಎಂದು ತಿಳಿಸಿದ್ದರು. ಈ ಮೂಲಕ ಫ್ರಾಂಚೈಸಿ ಲೀಗ್​ ಆಡುವ ಇಂಗಿತವನ್ನು ವ್ಯಕ್ತಪಡಿಸಿದ್ದರು.

ಇಂಗ್ಲೆಂಡ್​ನಲ್ಲಿ ನಡೆದ ದಿ ಹಂಡ್ರೆಡ್ ಲೀಗ್ ವೇಳೆ ಮಾತನಾಡಿದ್ದ ಜೇಮ್ಸ್ ಅ್ಯಂಡರ್ಸನ್, ಈ ಲೀಗ್​ನಲ್ಲಿ ಒಬ್ಬ ಬೌಲರ್​ಗೆ ಕೇವಲ 20 ಎಸೆತಗಳು ಮಾತ್ರ ಇದೆ. ವಿಶೇಷ ಎಂದರೆ ಮೊದಲ 20 ಎಸೆತಗಳಲ್ಲಿ ಚೆಂಡು ಸ್ವಿಂಗ್ ಪಡೆಯುತ್ತಿರುವುದನ್ನು ನಾನು ಗಮನಿಸಿದ್ದೇನೆ. ನಾನು ಸಹ ಅದನ್ನು ಮಾಡಬಲ್ಲೆ ಎಂದು ತಿಳಿಸಿದ್ದರು. ಈ ಮೂಲಕ ಫ್ರಾಂಚೈಸಿ ಲೀಗ್​ ಆಡುವ ಇಂಗಿತವನ್ನು ವ್ಯಕ್ತಪಡಿಸಿದ್ದರು.

3 / 5
ಇದರೊಂದಿಗೆ ಜೇಮ್ಸ್ ಅ್ಯಂಡರ್ಸನ್ ಐಪಿಎಲ್​ ಸೇರಿದಂತೆ ಪ್ರಮುಖ ಲೀಗ್​ನಲ್ಲಿ ಕಾಣಿಸಿಕೊಳ್ಳುವುದು ಖಚಿತ ಎನ್ನಲಾಗಿತ್ತು. ಅದರ ಮೊದಲ ಭಾಗವಾಗಿ ಇದೀಗ ಅ್ಯಂಡರ್ಸನ್ ಐಪಿಎಲ್ ಮೆಗಾ ಹರಾಜಿಗಾಗಿ 1.5 ಕೋಟಿ ರೂ. ಮೂಲಬೆಲೆಯೊಂದಿಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ. ಹೀಗಾಗಿ ನವೆಂಬರ್ 24 ಮತ್ತು 25 ರಂದು ನಡೆಯಲಿರುವ ಮೆಗಾ ಹರಾಜಿನಲ್ಲಿ ಜೇಮ್ಸ್ ಅ್ಯಂಡರ್ಸನ್ ಹೆಸರು ಕೂಡ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

ಇದರೊಂದಿಗೆ ಜೇಮ್ಸ್ ಅ್ಯಂಡರ್ಸನ್ ಐಪಿಎಲ್​ ಸೇರಿದಂತೆ ಪ್ರಮುಖ ಲೀಗ್​ನಲ್ಲಿ ಕಾಣಿಸಿಕೊಳ್ಳುವುದು ಖಚಿತ ಎನ್ನಲಾಗಿತ್ತು. ಅದರ ಮೊದಲ ಭಾಗವಾಗಿ ಇದೀಗ ಅ್ಯಂಡರ್ಸನ್ ಐಪಿಎಲ್ ಮೆಗಾ ಹರಾಜಿಗಾಗಿ 1.5 ಕೋಟಿ ರೂ. ಮೂಲಬೆಲೆಯೊಂದಿಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ. ಹೀಗಾಗಿ ನವೆಂಬರ್ 24 ಮತ್ತು 25 ರಂದು ನಡೆಯಲಿರುವ ಮೆಗಾ ಹರಾಜಿನಲ್ಲಿ ಜೇಮ್ಸ್ ಅ್ಯಂಡರ್ಸನ್ ಹೆಸರು ಕೂಡ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

4 / 5
ಅಂದಹಾಗೆ ಜೇಮ್ಸ್ ಅ್ಯಂಡರ್ಸನ್ ಸದ್ಯ ಇಂಗ್ಲೆಂಡ್ ತಂಡದ ಬೌಲಿಂಗ್ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ ಇನ್ನುಳಿದ ಸಮಯದಲ್ಲಿ ಲೀಗ್ ಕ್ರಿಕೆಟ್ ಆಡುವ ಇರಾದೆಯಲ್ಲಿದ್ದಾರೆ. ಅಂದರೆ ಇಂಗ್ಲೆಂಡ್ ಆಟಗಾರರು ಐಪಿಎಲ್ ಸೇರಿದಂತೆ ಇತರೆ ಲೀಗ್ ಆಡುವ ವೇಳೆ ಜೇಮ್ಸ್ ಅ್ಯಂಡರ್ಸನ್ ಸಂಪೂರ್ಣ ಫ್ರೀಯಾಗಿರಲಿದ್ದಾರೆ. ಹೀಗಾಗಿ 42ನೇ ವಯಸ್ಸಿನಲ್ಲಿ ಜೇಮ್ಸ್ ಅ್ಯಂಡರ್ಸನ್ ಐಪಿಎಲ್​ನತ್ತ ಮುಖ ಮಾಡಲು ಇಚ್ಛಿಸಿದ್ದಾರೆ.

ಅಂದಹಾಗೆ ಜೇಮ್ಸ್ ಅ್ಯಂಡರ್ಸನ್ ಸದ್ಯ ಇಂಗ್ಲೆಂಡ್ ತಂಡದ ಬೌಲಿಂಗ್ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ ಇನ್ನುಳಿದ ಸಮಯದಲ್ಲಿ ಲೀಗ್ ಕ್ರಿಕೆಟ್ ಆಡುವ ಇರಾದೆಯಲ್ಲಿದ್ದಾರೆ. ಅಂದರೆ ಇಂಗ್ಲೆಂಡ್ ಆಟಗಾರರು ಐಪಿಎಲ್ ಸೇರಿದಂತೆ ಇತರೆ ಲೀಗ್ ಆಡುವ ವೇಳೆ ಜೇಮ್ಸ್ ಅ್ಯಂಡರ್ಸನ್ ಸಂಪೂರ್ಣ ಫ್ರೀಯಾಗಿರಲಿದ್ದಾರೆ. ಹೀಗಾಗಿ 42ನೇ ವಯಸ್ಸಿನಲ್ಲಿ ಜೇಮ್ಸ್ ಅ್ಯಂಡರ್ಸನ್ ಐಪಿಎಲ್​ನತ್ತ ಮುಖ ಮಾಡಲು ಇಚ್ಛಿಸಿದ್ದಾರೆ.

5 / 5
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?