AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಫೈನಲ್ ಸೋಲಿನ ಕಹಿ ನೆನಪು ಕಾಡ್ತಿರುತ್ತದೆ: ಕೆಎಲ್ ರಾಹುಲ್

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್) ಆರ್​ಸಿಬಿ ತಂಡವು ಮೂರು ಬಾರಿ ಫೈನಲ್​ಗೆ ಪ್ರವೇಶಿಸಿದೆ. 2009 ರಲ್ಲಿ ಚೊಚ್ಚಲ ಬಾರಿ ಫೈನಲ್​ಗೆ ಎಂಟ್ರಿ ಕೊಟ್ಟಿದ್ದ ಆರ್​ಸಿಬಿ ಇದಾದ ಬಳಿಕ 2011 ರಲ್ಲಿ ಅಂತಿಮ ಸುತ್ತಿಗೆ ಪ್ರವೇಶಿಸಿತ್ತು. ಆ ಬಳಿಕ 2016 ರಲ್ಲಿ ವಿರಾಟ್ ಕೊಹ್ಲಿಯ ನೇತೃತ್ವದಲ್ಲಿ ಆರ್​ಸಿಬಿ ಫೈನಲ್ ಆಡಿತ್ತು. ಇದಾಗ್ಯೂ ಆರ್​ಸಿಬಿಗೆ ಒಮ್ಮೆಯೂ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಳ್ಳಲು ಸಾಧ್ಯವಾಗಿಲ್ಲ.

ಝಾಹಿರ್ ಯೂಸುಫ್
|

Updated on: Nov 13, 2024 | 10:14 AM

Share
ಅದು 2016... ಐಪಿಎಲ್​ನ ಫೈನಲ್​ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಸನ್​ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಿತ್ತು. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ SRH ತಂಡದ ನಾಯಕ ಡೇವಿಡ್ ವಾರ್ನರ್ ಬ್ಯಾಟಿಂಗ್ ಆಯ್ದುಕೊಂಡರು.

ಅದು 2016... ಐಪಿಎಲ್​ನ ಫೈನಲ್​ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಸನ್​ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಿತ್ತು. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ SRH ತಂಡದ ನಾಯಕ ಡೇವಿಡ್ ವಾರ್ನರ್ ಬ್ಯಾಟಿಂಗ್ ಆಯ್ದುಕೊಂಡರು.

1 / 7
ಅದರಂತೆ ಇನಿಂಗ್ಸ್ ಆರಂಭಿಸಿದ ಸನ್​ರೈಸರ್ಸ್​ ಹೈದರಾಬಾದ್ ತಂಡವು 16.2 ಓವರ್​ಗಳಲ್ಲಿ 150 ರನ್​ ಕಲೆಹಾಕಿತು. ಈ ಹಂತದಲ್ಲಿ ಅತ್ಯುತ್ತಮ ದಾಳಿ ಸಂಘಟಿಸಿದ ಆರ್​ಸಿಬಿ ರನ್​ ಗತಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಯಿತು. ಪರಿಣಾಮ 19 ಓವರ್​ಗಳ ಮುಕ್ತಾಯದ ವೇಳೆ ಎಸ್​ಆರ್​ಹೆಚ್​ ತಂಡದ ಸ್ಕೋರ್ 184 ರನ್​ಗಳು.

ಅದರಂತೆ ಇನಿಂಗ್ಸ್ ಆರಂಭಿಸಿದ ಸನ್​ರೈಸರ್ಸ್​ ಹೈದರಾಬಾದ್ ತಂಡವು 16.2 ಓವರ್​ಗಳಲ್ಲಿ 150 ರನ್​ ಕಲೆಹಾಕಿತು. ಈ ಹಂತದಲ್ಲಿ ಅತ್ಯುತ್ತಮ ದಾಳಿ ಸಂಘಟಿಸಿದ ಆರ್​ಸಿಬಿ ರನ್​ ಗತಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಯಿತು. ಪರಿಣಾಮ 19 ಓವರ್​ಗಳ ಮುಕ್ತಾಯದ ವೇಳೆ ಎಸ್​ಆರ್​ಹೆಚ್​ ತಂಡದ ಸ್ಕೋರ್ 184 ರನ್​ಗಳು.

2 / 7
ಆದರೆ ಕೊನೆಯ ಓವರ್​ನಲ್ಲಿ ಬೆನ್ ಕಟ್ಟಿಂಗ್ ಇಡೀ ಪಂದ್ಯದ ಚಿತ್ರಣ ಬದಲಿಸಿಬಿಟ್ಟರು. ಶೇನ್ ವಾಟ್ಸನ್ ಎಸೆದ ಅಂತಿಮ ಓವರ್​ನಲ್ಲಿ 4, 6, 6, 1, 1, 6 ಸಿಡಿಸುವ ಮೂಲಕ ಕಟ್ಟಿಂಗ್ ಬರೋಬ್ಬರಿ 24 ರನ್ ಕಲೆಹಾಕಿದರು. ಈ ಮೂಲಕ ಸನ್​ರೈಸರ್ಸ್​ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 208 ರನ್ ಕಲೆಹಾಕಿತು.

ಆದರೆ ಕೊನೆಯ ಓವರ್​ನಲ್ಲಿ ಬೆನ್ ಕಟ್ಟಿಂಗ್ ಇಡೀ ಪಂದ್ಯದ ಚಿತ್ರಣ ಬದಲಿಸಿಬಿಟ್ಟರು. ಶೇನ್ ವಾಟ್ಸನ್ ಎಸೆದ ಅಂತಿಮ ಓವರ್​ನಲ್ಲಿ 4, 6, 6, 1, 1, 6 ಸಿಡಿಸುವ ಮೂಲಕ ಕಟ್ಟಿಂಗ್ ಬರೋಬ್ಬರಿ 24 ರನ್ ಕಲೆಹಾಕಿದರು. ಈ ಮೂಲಕ ಸನ್​ರೈಸರ್ಸ್​ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 208 ರನ್ ಕಲೆಹಾಕಿತು.

3 / 7
209 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ತಂಡವು 10.3 ಓವರ್​ಗಳಲ್ಲಿ 114 ರನ್ ಕಲೆಹಾಕಿತು. ಈ ಹಂತದಲ್ಲಿ ಕ್ರಿಸ್ ಗೇಲ್ (76) ಔಟಾದರು. ಇದರ ಬೆನ್ನಲ್ಲೇ ವಿರಾಟ್ ಕೊಹ್ಲಿ (54) ಕೂಡ ವಿಕೆಟ್ ಒಪ್ಪಿಸಿದರು. ಆ ಬಳಿಕ ಬಂದ ಎಬಿ ಡಿವಿಲಿಯರ್ಸ್ (5) ಹಾಗೂ ಕೆಎಲ್ ರಾಹುಲ್ (11) ಬಂದ ವೇಗದಲ್ಲೇ ಪೆವಿಲಿಯನ್​ಗೆ ಹಿಂತಿರುಗಿದರು.

209 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ತಂಡವು 10.3 ಓವರ್​ಗಳಲ್ಲಿ 114 ರನ್ ಕಲೆಹಾಕಿತು. ಈ ಹಂತದಲ್ಲಿ ಕ್ರಿಸ್ ಗೇಲ್ (76) ಔಟಾದರು. ಇದರ ಬೆನ್ನಲ್ಲೇ ವಿರಾಟ್ ಕೊಹ್ಲಿ (54) ಕೂಡ ವಿಕೆಟ್ ಒಪ್ಪಿಸಿದರು. ಆ ಬಳಿಕ ಬಂದ ಎಬಿ ಡಿವಿಲಿಯರ್ಸ್ (5) ಹಾಗೂ ಕೆಎಲ್ ರಾಹುಲ್ (11) ಬಂದ ವೇಗದಲ್ಲೇ ಪೆವಿಲಿಯನ್​ಗೆ ಹಿಂತಿರುಗಿದರು.

4 / 7
ಇದಾಗ್ಯೂ 15.3 ಓವರ್​ಗಳಲ್ಲಿ ಆರ್​ಸಿಬಿ 160 ರನ್​ ಗಳಿಸಿತ್ತು. ಹೀಗಾಗಿ ಆರ್​ಸಿಬಿಗೆ ಗೆಲ್ಲಲು ಉತ್ತಮ ಅವಕಾಶವಿತ್ತು. ಆದರೆ ಬೌಲಿಂಗ್​ನಲ್ಲಿ ದುಬಾರಿಯಾಗಿದ್ದ ಶೇನ್ ವಾಟ್ಸನ್ ಬ್ಯಾಟಿಂಗ್​ನಲ್ಲೂ ವಿಫಲರಾದರು. ಕೇವಲ 11 ರನ್​ಗಳಿಸಿ ವಿಕೆಟ್ ಒಪ್ಪಿಸುವ ಮೂಲಕ ಹೊರ ನಡೆದರು. ಅಂತಿಮವಾಗಿ ಆರ್​ಸಿಬಿ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 200 ರನ್​ಗಳಿಸಿ ಸೋಲೊಪ್ಪಿಕೊಂಡಿತು.

ಇದಾಗ್ಯೂ 15.3 ಓವರ್​ಗಳಲ್ಲಿ ಆರ್​ಸಿಬಿ 160 ರನ್​ ಗಳಿಸಿತ್ತು. ಹೀಗಾಗಿ ಆರ್​ಸಿಬಿಗೆ ಗೆಲ್ಲಲು ಉತ್ತಮ ಅವಕಾಶವಿತ್ತು. ಆದರೆ ಬೌಲಿಂಗ್​ನಲ್ಲಿ ದುಬಾರಿಯಾಗಿದ್ದ ಶೇನ್ ವಾಟ್ಸನ್ ಬ್ಯಾಟಿಂಗ್​ನಲ್ಲೂ ವಿಫಲರಾದರು. ಕೇವಲ 11 ರನ್​ಗಳಿಸಿ ವಿಕೆಟ್ ಒಪ್ಪಿಸುವ ಮೂಲಕ ಹೊರ ನಡೆದರು. ಅಂತಿಮವಾಗಿ ಆರ್​ಸಿಬಿ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 200 ರನ್​ಗಳಿಸಿ ಸೋಲೊಪ್ಪಿಕೊಂಡಿತು.

5 / 7
ಈ ಮೂಲಕ ಚೊಚ್ಚಲ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವ ಅವಕಾಶವನ್ನು ಆರ್​ಸಿಬಿ ಕೇವಲ 8 ರನ್​ಗಳಿಂದ ಕೈಚೆಲ್ಲಿಕೊಂಡಿತು. ಈ ಫೈನಲ್ ಸೋಲು ಯಾವಾಗಲೂ ಕಾಡುತ್ತಿರುತ್ತದೆ ಎಂದಿದ್ದಾರೆ ಆರ್​ಸಿಬಿ ತಂಡದ ಮಾಜಿ ಆಟಗಾರ ಕೆಎಲ್ ರಾಹುಲ್.

ಈ ಮೂಲಕ ಚೊಚ್ಚಲ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವ ಅವಕಾಶವನ್ನು ಆರ್​ಸಿಬಿ ಕೇವಲ 8 ರನ್​ಗಳಿಂದ ಕೈಚೆಲ್ಲಿಕೊಂಡಿತು. ಈ ಫೈನಲ್ ಸೋಲು ಯಾವಾಗಲೂ ಕಾಡುತ್ತಿರುತ್ತದೆ ಎಂದಿದ್ದಾರೆ ಆರ್​ಸಿಬಿ ತಂಡದ ಮಾಜಿ ಆಟಗಾರ ಕೆಎಲ್ ರಾಹುಲ್.

6 / 7
ಖಾಸಗಿ ಚಾನೆಲ್​ ಸಂದರ್ಶನದಲ್ಲಿ ಮಾತನಾಡಿದ ರಾಹುಲ್, 2016ರ ಫೈನಲ್ ಪಂದ್ಯದ ನೆನಪು ಇನ್ನೂ ತಾಜಾವಾಗಿದೆ. ನಾನು ಮತ್ತು ವಿರಾಟ್ ಕೊಹ್ಲಿ ಹಲವು ಬಾರಿ ಈ ಸೋಲಿನ ಬಗ್ಗೆ ಚರ್ಚಿಸಿದ್ದೇವೆ. ಅಂದು ನಮ್ಮಲ್ಲಿ ಒಬ್ಬರು ಕ್ರೀಸ್ ಕಚ್ಚಿ ಆಡಿದ್ದರೆ ಫಲಿತಾಂಶ ಭಿನ್ನವಾಗಿರುತ್ತಿತ್ತು. ಒಂದು ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾವು ಅಂದು ಕಪ್ ಗೆದ್ದಿದ್ದರೆ ಅದು ತುಂಬಾ ವಿಶೇಷವಾಗಿರುತ್ತಿತ್ತು. ದುರಾದೃಷ್ಟ ಅದು ಸಾಧ್ಯವಾಗಲಿಲ್ಲ ಎಂದು ಕೆಎಲ್ ರಾಹುಲ್ ಬೇಸರ ವ್ಯಕ್ತಪಡಿಸಿದ್ದಾರೆ.

ಖಾಸಗಿ ಚಾನೆಲ್​ ಸಂದರ್ಶನದಲ್ಲಿ ಮಾತನಾಡಿದ ರಾಹುಲ್, 2016ರ ಫೈನಲ್ ಪಂದ್ಯದ ನೆನಪು ಇನ್ನೂ ತಾಜಾವಾಗಿದೆ. ನಾನು ಮತ್ತು ವಿರಾಟ್ ಕೊಹ್ಲಿ ಹಲವು ಬಾರಿ ಈ ಸೋಲಿನ ಬಗ್ಗೆ ಚರ್ಚಿಸಿದ್ದೇವೆ. ಅಂದು ನಮ್ಮಲ್ಲಿ ಒಬ್ಬರು ಕ್ರೀಸ್ ಕಚ್ಚಿ ಆಡಿದ್ದರೆ ಫಲಿತಾಂಶ ಭಿನ್ನವಾಗಿರುತ್ತಿತ್ತು. ಒಂದು ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾವು ಅಂದು ಕಪ್ ಗೆದ್ದಿದ್ದರೆ ಅದು ತುಂಬಾ ವಿಶೇಷವಾಗಿರುತ್ತಿತ್ತು. ದುರಾದೃಷ್ಟ ಅದು ಸಾಧ್ಯವಾಗಲಿಲ್ಲ ಎಂದು ಕೆಎಲ್ ರಾಹುಲ್ ಬೇಸರ ವ್ಯಕ್ತಪಡಿಸಿದ್ದಾರೆ.

7 / 7