AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಈ ಸಲ ಕಪ್ ನಮ್ದೆ… ಇದುವೇ ಕೆಎಲ್ ರಾಹುಲ್ ಇಚ್ಛೆ..!

KL Rahul: ಕೆಎಲ್ ರಾಹುಲ್ RCB ಪರ ಎರಡು ಸೀಸನ್ ಆಡಿದ್ದಾರೆ. ಈ ವೇಳೆ ಒಟ್ಟು 19 ಪಂದ್ಯಗಳನ್ನಾಡಿರುವ ಅವರು 14 ಇನಿಂಗ್ಸ್​ಗಳಿಂದ 4 ಅರ್ಧಶತಕಗಳೊಂದಿಗೆ 417 ರನ್ ಕಲೆಹಾಕಿದ್ದಾರೆ. ಇದಾದ ಬಳಿಕ ಸನ್​ರೈಸರ್ಸ್ ಹೈದರಾಬಾದ್, ಪಂಜಾಬ್ ಕಿಂಗ್ಸ್ ಪರ ಆಡಿದ್ದ ರಾಹುಲ್ ಈಗ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿದ್ದಾರೆ.

ಝಾಹಿರ್ ಯೂಸುಫ್
|

Updated on: Sep 12, 2024 | 12:43 PM

Share
IPL 2025: ಐಪಿಎಲ್ 2025 ರಲ್ಲಿ ಕೆಎಲ್ ರಾಹುಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪರ ಕಣಕ್ಕಿಳಿಯಲಿದ್ದಾರಾ? ಈ ಪ್ರಶ್ನೆಗೆ ಸ್ಪಷ್ಟ ಉತ್ತರವಂತು ಸಿಕ್ಕಿಲ್ಲ. ಇದಾಗ್ಯೂ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ದುಲೀಪ್ ಟ್ರೋಫಿ ಪಂದ್ಯದ ವೇಳೆ ಆರ್​ಸಿಬಿ ಅಭಿಮಾನಿಗಳು ರಾಹುಲ್​ಗೆ ಭರ್ಜರಿ ಬೆಂಬಲ ವ್ಯಕ್ತಪಡಿಸಿದ್ದರು. ಈ ಬೆಂಬಲದಿಂದ ಪುಳಕಿತರಾಗಿರುವ ಕನ್ನಡಿಗ ಧನ್ಯವಾದಗಳನ್ನು ಸಹ ತಿಳಿಸಿದ್ದರು.

IPL 2025: ಐಪಿಎಲ್ 2025 ರಲ್ಲಿ ಕೆಎಲ್ ರಾಹುಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪರ ಕಣಕ್ಕಿಳಿಯಲಿದ್ದಾರಾ? ಈ ಪ್ರಶ್ನೆಗೆ ಸ್ಪಷ್ಟ ಉತ್ತರವಂತು ಸಿಕ್ಕಿಲ್ಲ. ಇದಾಗ್ಯೂ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ದುಲೀಪ್ ಟ್ರೋಫಿ ಪಂದ್ಯದ ವೇಳೆ ಆರ್​ಸಿಬಿ ಅಭಿಮಾನಿಗಳು ರಾಹುಲ್​ಗೆ ಭರ್ಜರಿ ಬೆಂಬಲ ವ್ಯಕ್ತಪಡಿಸಿದ್ದರು. ಈ ಬೆಂಬಲದಿಂದ ಪುಳಕಿತರಾಗಿರುವ ಕನ್ನಡಿಗ ಧನ್ಯವಾದಗಳನ್ನು ಸಹ ತಿಳಿಸಿದ್ದರು.

1 / 6
ಮತ್ತೊಂದೆಡೆ ಐಪಿಎಲ್ 2025 ರಲ್ಲಿ ಕೆಎಲ್ ರಾಹುಲ್ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿ ಕಾಣಿಸಿಕೊಳ್ಳುವುದಿಲ್ಲ ಎಂಬುದು ಖಚಿತವಾಗಿದೆ. ಹೀಗಾಗಿ ಎಲ್​ಎಸ್​ಜಿ ತಂಡದಿಂದ ಕನ್ನಡಿಗ ಹೊರಬರುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ. ಈ ವರದಿಗಳ ನಡುವೆ ರಾಹುಲ್ ಆರ್​ಸಿಬಿಗೆ ಬರಲಿ ಎಂದು ಅಭಿಮಾನಿಗಳು ಆಶಿಸುತ್ತಿದ್ದಾರೆ.

ಮತ್ತೊಂದೆಡೆ ಐಪಿಎಲ್ 2025 ರಲ್ಲಿ ಕೆಎಲ್ ರಾಹುಲ್ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿ ಕಾಣಿಸಿಕೊಳ್ಳುವುದಿಲ್ಲ ಎಂಬುದು ಖಚಿತವಾಗಿದೆ. ಹೀಗಾಗಿ ಎಲ್​ಎಸ್​ಜಿ ತಂಡದಿಂದ ಕನ್ನಡಿಗ ಹೊರಬರುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ. ಈ ವರದಿಗಳ ನಡುವೆ ರಾಹುಲ್ ಆರ್​ಸಿಬಿಗೆ ಬರಲಿ ಎಂದು ಅಭಿಮಾನಿಗಳು ಆಶಿಸುತ್ತಿದ್ದಾರೆ.

2 / 6
ಅದರಲ್ಲೂ ಕನ್ನಡಿಗನ ನಾಯಕತ್ವದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ ಟ್ರೋಫಿ ಎತ್ತಿ ಹಿಡಿಯಲಿ ಎಂಬ ಬಯಕೆಯನ್ನು ಆರ್​ಸಿಬಿ ಅಭಿಮಾನಿಗಳು ವ್ಯಕ್ತಪಡಿಸುತ್ತಿದ್ದಾರೆ. ಇದರ ನಡುವೆ ಕೆಎಲ್ ರಾಹುಲ್ ನೀಡಿರುವ ಹೇಳಿಕೆಯಿಂದ ಆರ್​ಸಿಬಿ ಫ್ಯಾನ್ಸ್ ಕೂಡ ಪುಳಕಿತರಾಗಿದ್ದಾರೆ.

ಅದರಲ್ಲೂ ಕನ್ನಡಿಗನ ನಾಯಕತ್ವದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ ಟ್ರೋಫಿ ಎತ್ತಿ ಹಿಡಿಯಲಿ ಎಂಬ ಬಯಕೆಯನ್ನು ಆರ್​ಸಿಬಿ ಅಭಿಮಾನಿಗಳು ವ್ಯಕ್ತಪಡಿಸುತ್ತಿದ್ದಾರೆ. ಇದರ ನಡುವೆ ಕೆಎಲ್ ರಾಹುಲ್ ನೀಡಿರುವ ಹೇಳಿಕೆಯಿಂದ ಆರ್​ಸಿಬಿ ಫ್ಯಾನ್ಸ್ ಕೂಡ ಪುಳಕಿತರಾಗಿದ್ದಾರೆ.

3 / 6
ಸಂದರ್ಶನವೊಂದರಲ್ಲಿ ಮಾತನಾಡಿದ ಕೆಎಲ್ ರಾಹುಲ್ ಅವರಿಗೆ ಈ ಸಲ ಆರ್​ಸಿಬಿ ಕಪ್ ಗೆಲ್ಲಲಿದೆಯಾ ಎಂಬ ಪ್ರಶ್ನೆಯನ್ನು ಮುಂದಿಡಲಾಗಿದೆ. ಈ ಪ್ರಶ್ನೆಗೆ ಉತ್ತರಿಸಿದ ಕೆಎಲ್​ಆರ್​, ನಾನು ಸಹ ಆರ್​ಸಿಬಿ ಕಪ್ ಗೆಲ್ಲಲಿ ಎಂದು ಆಶಿಸುತ್ತೇನೆ ಎಂದು ತಿಳಿಸಿದ್ದಾರೆ. ಈ ಮೂಲಕ ಆರ್​ಸಿಬಿ ತಂಡವು ಟ್ರೋಫಿ ಗೆಲ್ಲಬೇಕೆಂಬ ಆಸೆಯಿದೆ ಕೆಎಲ್ ರಾಹುಲ್ ಹೇಳಿದ್ದಾರೆ. ಈ ಹೇಳಿಕೆಯು ಇದೀಗ ವೈರಲ್ ಆಗಿದ್ದು, ಅಭಿಮಾನಿಗಳಿಂದ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಕೆಎಲ್ ರಾಹುಲ್ ಅವರಿಗೆ ಈ ಸಲ ಆರ್​ಸಿಬಿ ಕಪ್ ಗೆಲ್ಲಲಿದೆಯಾ ಎಂಬ ಪ್ರಶ್ನೆಯನ್ನು ಮುಂದಿಡಲಾಗಿದೆ. ಈ ಪ್ರಶ್ನೆಗೆ ಉತ್ತರಿಸಿದ ಕೆಎಲ್​ಆರ್​, ನಾನು ಸಹ ಆರ್​ಸಿಬಿ ಕಪ್ ಗೆಲ್ಲಲಿ ಎಂದು ಆಶಿಸುತ್ತೇನೆ ಎಂದು ತಿಳಿಸಿದ್ದಾರೆ. ಈ ಮೂಲಕ ಆರ್​ಸಿಬಿ ತಂಡವು ಟ್ರೋಫಿ ಗೆಲ್ಲಬೇಕೆಂಬ ಆಸೆಯಿದೆ ಕೆಎಲ್ ರಾಹುಲ್ ಹೇಳಿದ್ದಾರೆ. ಈ ಹೇಳಿಕೆಯು ಇದೀಗ ವೈರಲ್ ಆಗಿದ್ದು, ಅಭಿಮಾನಿಗಳಿಂದ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

4 / 6
ಅಂದಹಾಗೆ ಕೆಎಲ್ ರಾಹುಲ್ ಆರ್​ಸಿಬಿ ಪರ ಒಟ್ಟು 19 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 14 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಅವರು 4 ಅರ್ಧಶತಕಗಳೊಂದಿಗೆ ಒಟ್ಟು 417 ರನ್ ಕಲೆಹಾಕಿದ್ದಾರೆ. ಇದಾದ ಬಳಿಕ ಸನ್​ರೈಸರ್ಸ್ ಹೈದರಾಬಾದ್, ಪಂಜಾಬ್ ಕಿಂಗ್ಸ್ ಪರ ಆಡಿದ್ದ ರಾಹುಲ್ ಈಗ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿದ್ದಾರೆ.

ಅಂದಹಾಗೆ ಕೆಎಲ್ ರಾಹುಲ್ ಆರ್​ಸಿಬಿ ಪರ ಒಟ್ಟು 19 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 14 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಅವರು 4 ಅರ್ಧಶತಕಗಳೊಂದಿಗೆ ಒಟ್ಟು 417 ರನ್ ಕಲೆಹಾಕಿದ್ದಾರೆ. ಇದಾದ ಬಳಿಕ ಸನ್​ರೈಸರ್ಸ್ ಹೈದರಾಬಾದ್, ಪಂಜಾಬ್ ಕಿಂಗ್ಸ್ ಪರ ಆಡಿದ್ದ ರಾಹುಲ್ ಈಗ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿದ್ದಾರೆ.

5 / 6
ಒಂದು ವೇಳೆ ಕೆಎಲ್ ರಾಹುಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡರೆ, ಅವರ ಖರೀದಿಗಾಗಿ ಆರ್​ಸಿಬಿ ಮುಂದಾಗಲಿರುವುದು ಸ್ಪಷ್ಟ. ಏಕೆಂದರೆ ಆರ್​ಸಿಬಿ ತಂಡವು ವಿಕೆಟ್ ಕೀಪರ್ ಹಾಗೂ ನಾಯಕನನ್ನು ಎದುರು ನೋಡುತ್ತಿದೆ. ಇತ್ತ ರಾಹುಲ್ ಖರೀದಿಯಿಂದಾಗಿ ಈ ಎರಡು ಸ್ಥಾನಗಳನ್ನು ತುಂಬಬಹುದು. ಅದರಂತೆ ಕೆಎಲ್ ರಾಹುಲ್ ಮುಂದಿನ ಸೀಸನ್​ನಲ್ಲಿ ಆರ್​ಸಿಬಿ ಪರ ಕಣಕ್ಕಿಳಿಯಲಿದ್ದಾರಾ ಕಾದು ನೋಡಬೇಕಿದೆ.

ಒಂದು ವೇಳೆ ಕೆಎಲ್ ರಾಹುಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡರೆ, ಅವರ ಖರೀದಿಗಾಗಿ ಆರ್​ಸಿಬಿ ಮುಂದಾಗಲಿರುವುದು ಸ್ಪಷ್ಟ. ಏಕೆಂದರೆ ಆರ್​ಸಿಬಿ ತಂಡವು ವಿಕೆಟ್ ಕೀಪರ್ ಹಾಗೂ ನಾಯಕನನ್ನು ಎದುರು ನೋಡುತ್ತಿದೆ. ಇತ್ತ ರಾಹುಲ್ ಖರೀದಿಯಿಂದಾಗಿ ಈ ಎರಡು ಸ್ಥಾನಗಳನ್ನು ತುಂಬಬಹುದು. ಅದರಂತೆ ಕೆಎಲ್ ರಾಹುಲ್ ಮುಂದಿನ ಸೀಸನ್​ನಲ್ಲಿ ಆರ್​ಸಿಬಿ ಪರ ಕಣಕ್ಕಿಳಿಯಲಿದ್ದಾರಾ ಕಾದು ನೋಡಬೇಕಿದೆ.

6 / 6
Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!