AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಈ ಸಲ ಕಪ್ ನಮ್ದೆ… ಇದುವೇ ಕೆಎಲ್ ರಾಹುಲ್ ಇಚ್ಛೆ..!

KL Rahul: ಕೆಎಲ್ ರಾಹುಲ್ RCB ಪರ ಎರಡು ಸೀಸನ್ ಆಡಿದ್ದಾರೆ. ಈ ವೇಳೆ ಒಟ್ಟು 19 ಪಂದ್ಯಗಳನ್ನಾಡಿರುವ ಅವರು 14 ಇನಿಂಗ್ಸ್​ಗಳಿಂದ 4 ಅರ್ಧಶತಕಗಳೊಂದಿಗೆ 417 ರನ್ ಕಲೆಹಾಕಿದ್ದಾರೆ. ಇದಾದ ಬಳಿಕ ಸನ್​ರೈಸರ್ಸ್ ಹೈದರಾಬಾದ್, ಪಂಜಾಬ್ ಕಿಂಗ್ಸ್ ಪರ ಆಡಿದ್ದ ರಾಹುಲ್ ಈಗ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿದ್ದಾರೆ.

ಝಾಹಿರ್ ಯೂಸುಫ್
|

Updated on: Sep 12, 2024 | 12:43 PM

Share
IPL 2025: ಐಪಿಎಲ್ 2025 ರಲ್ಲಿ ಕೆಎಲ್ ರಾಹುಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪರ ಕಣಕ್ಕಿಳಿಯಲಿದ್ದಾರಾ? ಈ ಪ್ರಶ್ನೆಗೆ ಸ್ಪಷ್ಟ ಉತ್ತರವಂತು ಸಿಕ್ಕಿಲ್ಲ. ಇದಾಗ್ಯೂ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ದುಲೀಪ್ ಟ್ರೋಫಿ ಪಂದ್ಯದ ವೇಳೆ ಆರ್​ಸಿಬಿ ಅಭಿಮಾನಿಗಳು ರಾಹುಲ್​ಗೆ ಭರ್ಜರಿ ಬೆಂಬಲ ವ್ಯಕ್ತಪಡಿಸಿದ್ದರು. ಈ ಬೆಂಬಲದಿಂದ ಪುಳಕಿತರಾಗಿರುವ ಕನ್ನಡಿಗ ಧನ್ಯವಾದಗಳನ್ನು ಸಹ ತಿಳಿಸಿದ್ದರು.

IPL 2025: ಐಪಿಎಲ್ 2025 ರಲ್ಲಿ ಕೆಎಲ್ ರಾಹುಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪರ ಕಣಕ್ಕಿಳಿಯಲಿದ್ದಾರಾ? ಈ ಪ್ರಶ್ನೆಗೆ ಸ್ಪಷ್ಟ ಉತ್ತರವಂತು ಸಿಕ್ಕಿಲ್ಲ. ಇದಾಗ್ಯೂ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ದುಲೀಪ್ ಟ್ರೋಫಿ ಪಂದ್ಯದ ವೇಳೆ ಆರ್​ಸಿಬಿ ಅಭಿಮಾನಿಗಳು ರಾಹುಲ್​ಗೆ ಭರ್ಜರಿ ಬೆಂಬಲ ವ್ಯಕ್ತಪಡಿಸಿದ್ದರು. ಈ ಬೆಂಬಲದಿಂದ ಪುಳಕಿತರಾಗಿರುವ ಕನ್ನಡಿಗ ಧನ್ಯವಾದಗಳನ್ನು ಸಹ ತಿಳಿಸಿದ್ದರು.

1 / 6
ಮತ್ತೊಂದೆಡೆ ಐಪಿಎಲ್ 2025 ರಲ್ಲಿ ಕೆಎಲ್ ರಾಹುಲ್ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿ ಕಾಣಿಸಿಕೊಳ್ಳುವುದಿಲ್ಲ ಎಂಬುದು ಖಚಿತವಾಗಿದೆ. ಹೀಗಾಗಿ ಎಲ್​ಎಸ್​ಜಿ ತಂಡದಿಂದ ಕನ್ನಡಿಗ ಹೊರಬರುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ. ಈ ವರದಿಗಳ ನಡುವೆ ರಾಹುಲ್ ಆರ್​ಸಿಬಿಗೆ ಬರಲಿ ಎಂದು ಅಭಿಮಾನಿಗಳು ಆಶಿಸುತ್ತಿದ್ದಾರೆ.

ಮತ್ತೊಂದೆಡೆ ಐಪಿಎಲ್ 2025 ರಲ್ಲಿ ಕೆಎಲ್ ರಾಹುಲ್ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿ ಕಾಣಿಸಿಕೊಳ್ಳುವುದಿಲ್ಲ ಎಂಬುದು ಖಚಿತವಾಗಿದೆ. ಹೀಗಾಗಿ ಎಲ್​ಎಸ್​ಜಿ ತಂಡದಿಂದ ಕನ್ನಡಿಗ ಹೊರಬರುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ. ಈ ವರದಿಗಳ ನಡುವೆ ರಾಹುಲ್ ಆರ್​ಸಿಬಿಗೆ ಬರಲಿ ಎಂದು ಅಭಿಮಾನಿಗಳು ಆಶಿಸುತ್ತಿದ್ದಾರೆ.

2 / 6
ಅದರಲ್ಲೂ ಕನ್ನಡಿಗನ ನಾಯಕತ್ವದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ ಟ್ರೋಫಿ ಎತ್ತಿ ಹಿಡಿಯಲಿ ಎಂಬ ಬಯಕೆಯನ್ನು ಆರ್​ಸಿಬಿ ಅಭಿಮಾನಿಗಳು ವ್ಯಕ್ತಪಡಿಸುತ್ತಿದ್ದಾರೆ. ಇದರ ನಡುವೆ ಕೆಎಲ್ ರಾಹುಲ್ ನೀಡಿರುವ ಹೇಳಿಕೆಯಿಂದ ಆರ್​ಸಿಬಿ ಫ್ಯಾನ್ಸ್ ಕೂಡ ಪುಳಕಿತರಾಗಿದ್ದಾರೆ.

ಅದರಲ್ಲೂ ಕನ್ನಡಿಗನ ನಾಯಕತ್ವದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ ಟ್ರೋಫಿ ಎತ್ತಿ ಹಿಡಿಯಲಿ ಎಂಬ ಬಯಕೆಯನ್ನು ಆರ್​ಸಿಬಿ ಅಭಿಮಾನಿಗಳು ವ್ಯಕ್ತಪಡಿಸುತ್ತಿದ್ದಾರೆ. ಇದರ ನಡುವೆ ಕೆಎಲ್ ರಾಹುಲ್ ನೀಡಿರುವ ಹೇಳಿಕೆಯಿಂದ ಆರ್​ಸಿಬಿ ಫ್ಯಾನ್ಸ್ ಕೂಡ ಪುಳಕಿತರಾಗಿದ್ದಾರೆ.

3 / 6
ಸಂದರ್ಶನವೊಂದರಲ್ಲಿ ಮಾತನಾಡಿದ ಕೆಎಲ್ ರಾಹುಲ್ ಅವರಿಗೆ ಈ ಸಲ ಆರ್​ಸಿಬಿ ಕಪ್ ಗೆಲ್ಲಲಿದೆಯಾ ಎಂಬ ಪ್ರಶ್ನೆಯನ್ನು ಮುಂದಿಡಲಾಗಿದೆ. ಈ ಪ್ರಶ್ನೆಗೆ ಉತ್ತರಿಸಿದ ಕೆಎಲ್​ಆರ್​, ನಾನು ಸಹ ಆರ್​ಸಿಬಿ ಕಪ್ ಗೆಲ್ಲಲಿ ಎಂದು ಆಶಿಸುತ್ತೇನೆ ಎಂದು ತಿಳಿಸಿದ್ದಾರೆ. ಈ ಮೂಲಕ ಆರ್​ಸಿಬಿ ತಂಡವು ಟ್ರೋಫಿ ಗೆಲ್ಲಬೇಕೆಂಬ ಆಸೆಯಿದೆ ಕೆಎಲ್ ರಾಹುಲ್ ಹೇಳಿದ್ದಾರೆ. ಈ ಹೇಳಿಕೆಯು ಇದೀಗ ವೈರಲ್ ಆಗಿದ್ದು, ಅಭಿಮಾನಿಗಳಿಂದ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಕೆಎಲ್ ರಾಹುಲ್ ಅವರಿಗೆ ಈ ಸಲ ಆರ್​ಸಿಬಿ ಕಪ್ ಗೆಲ್ಲಲಿದೆಯಾ ಎಂಬ ಪ್ರಶ್ನೆಯನ್ನು ಮುಂದಿಡಲಾಗಿದೆ. ಈ ಪ್ರಶ್ನೆಗೆ ಉತ್ತರಿಸಿದ ಕೆಎಲ್​ಆರ್​, ನಾನು ಸಹ ಆರ್​ಸಿಬಿ ಕಪ್ ಗೆಲ್ಲಲಿ ಎಂದು ಆಶಿಸುತ್ತೇನೆ ಎಂದು ತಿಳಿಸಿದ್ದಾರೆ. ಈ ಮೂಲಕ ಆರ್​ಸಿಬಿ ತಂಡವು ಟ್ರೋಫಿ ಗೆಲ್ಲಬೇಕೆಂಬ ಆಸೆಯಿದೆ ಕೆಎಲ್ ರಾಹುಲ್ ಹೇಳಿದ್ದಾರೆ. ಈ ಹೇಳಿಕೆಯು ಇದೀಗ ವೈರಲ್ ಆಗಿದ್ದು, ಅಭಿಮಾನಿಗಳಿಂದ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

4 / 6
ಅಂದಹಾಗೆ ಕೆಎಲ್ ರಾಹುಲ್ ಆರ್​ಸಿಬಿ ಪರ ಒಟ್ಟು 19 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 14 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಅವರು 4 ಅರ್ಧಶತಕಗಳೊಂದಿಗೆ ಒಟ್ಟು 417 ರನ್ ಕಲೆಹಾಕಿದ್ದಾರೆ. ಇದಾದ ಬಳಿಕ ಸನ್​ರೈಸರ್ಸ್ ಹೈದರಾಬಾದ್, ಪಂಜಾಬ್ ಕಿಂಗ್ಸ್ ಪರ ಆಡಿದ್ದ ರಾಹುಲ್ ಈಗ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿದ್ದಾರೆ.

ಅಂದಹಾಗೆ ಕೆಎಲ್ ರಾಹುಲ್ ಆರ್​ಸಿಬಿ ಪರ ಒಟ್ಟು 19 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 14 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಅವರು 4 ಅರ್ಧಶತಕಗಳೊಂದಿಗೆ ಒಟ್ಟು 417 ರನ್ ಕಲೆಹಾಕಿದ್ದಾರೆ. ಇದಾದ ಬಳಿಕ ಸನ್​ರೈಸರ್ಸ್ ಹೈದರಾಬಾದ್, ಪಂಜಾಬ್ ಕಿಂಗ್ಸ್ ಪರ ಆಡಿದ್ದ ರಾಹುಲ್ ಈಗ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿದ್ದಾರೆ.

5 / 6
ಒಂದು ವೇಳೆ ಕೆಎಲ್ ರಾಹುಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡರೆ, ಅವರ ಖರೀದಿಗಾಗಿ ಆರ್​ಸಿಬಿ ಮುಂದಾಗಲಿರುವುದು ಸ್ಪಷ್ಟ. ಏಕೆಂದರೆ ಆರ್​ಸಿಬಿ ತಂಡವು ವಿಕೆಟ್ ಕೀಪರ್ ಹಾಗೂ ನಾಯಕನನ್ನು ಎದುರು ನೋಡುತ್ತಿದೆ. ಇತ್ತ ರಾಹುಲ್ ಖರೀದಿಯಿಂದಾಗಿ ಈ ಎರಡು ಸ್ಥಾನಗಳನ್ನು ತುಂಬಬಹುದು. ಅದರಂತೆ ಕೆಎಲ್ ರಾಹುಲ್ ಮುಂದಿನ ಸೀಸನ್​ನಲ್ಲಿ ಆರ್​ಸಿಬಿ ಪರ ಕಣಕ್ಕಿಳಿಯಲಿದ್ದಾರಾ ಕಾದು ನೋಡಬೇಕಿದೆ.

ಒಂದು ವೇಳೆ ಕೆಎಲ್ ರಾಹುಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡರೆ, ಅವರ ಖರೀದಿಗಾಗಿ ಆರ್​ಸಿಬಿ ಮುಂದಾಗಲಿರುವುದು ಸ್ಪಷ್ಟ. ಏಕೆಂದರೆ ಆರ್​ಸಿಬಿ ತಂಡವು ವಿಕೆಟ್ ಕೀಪರ್ ಹಾಗೂ ನಾಯಕನನ್ನು ಎದುರು ನೋಡುತ್ತಿದೆ. ಇತ್ತ ರಾಹುಲ್ ಖರೀದಿಯಿಂದಾಗಿ ಈ ಎರಡು ಸ್ಥಾನಗಳನ್ನು ತುಂಬಬಹುದು. ಅದರಂತೆ ಕೆಎಲ್ ರಾಹುಲ್ ಮುಂದಿನ ಸೀಸನ್​ನಲ್ಲಿ ಆರ್​ಸಿಬಿ ಪರ ಕಣಕ್ಕಿಳಿಯಲಿದ್ದಾರಾ ಕಾದು ನೋಡಬೇಕಿದೆ.

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ