AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಈ ಸಲ ಕಪ್ ನಮ್ದೆ… ಇದುವೇ ಕೆಎಲ್ ರಾಹುಲ್ ಇಚ್ಛೆ..!

KL Rahul: ಕೆಎಲ್ ರಾಹುಲ್ RCB ಪರ ಎರಡು ಸೀಸನ್ ಆಡಿದ್ದಾರೆ. ಈ ವೇಳೆ ಒಟ್ಟು 19 ಪಂದ್ಯಗಳನ್ನಾಡಿರುವ ಅವರು 14 ಇನಿಂಗ್ಸ್​ಗಳಿಂದ 4 ಅರ್ಧಶತಕಗಳೊಂದಿಗೆ 417 ರನ್ ಕಲೆಹಾಕಿದ್ದಾರೆ. ಇದಾದ ಬಳಿಕ ಸನ್​ರೈಸರ್ಸ್ ಹೈದರಾಬಾದ್, ಪಂಜಾಬ್ ಕಿಂಗ್ಸ್ ಪರ ಆಡಿದ್ದ ರಾಹುಲ್ ಈಗ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿದ್ದಾರೆ.

ಝಾಹಿರ್ ಯೂಸುಫ್
|

Updated on: Sep 12, 2024 | 12:43 PM

Share
IPL 2025: ಐಪಿಎಲ್ 2025 ರಲ್ಲಿ ಕೆಎಲ್ ರಾಹುಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪರ ಕಣಕ್ಕಿಳಿಯಲಿದ್ದಾರಾ? ಈ ಪ್ರಶ್ನೆಗೆ ಸ್ಪಷ್ಟ ಉತ್ತರವಂತು ಸಿಕ್ಕಿಲ್ಲ. ಇದಾಗ್ಯೂ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ದುಲೀಪ್ ಟ್ರೋಫಿ ಪಂದ್ಯದ ವೇಳೆ ಆರ್​ಸಿಬಿ ಅಭಿಮಾನಿಗಳು ರಾಹುಲ್​ಗೆ ಭರ್ಜರಿ ಬೆಂಬಲ ವ್ಯಕ್ತಪಡಿಸಿದ್ದರು. ಈ ಬೆಂಬಲದಿಂದ ಪುಳಕಿತರಾಗಿರುವ ಕನ್ನಡಿಗ ಧನ್ಯವಾದಗಳನ್ನು ಸಹ ತಿಳಿಸಿದ್ದರು.

IPL 2025: ಐಪಿಎಲ್ 2025 ರಲ್ಲಿ ಕೆಎಲ್ ರಾಹುಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪರ ಕಣಕ್ಕಿಳಿಯಲಿದ್ದಾರಾ? ಈ ಪ್ರಶ್ನೆಗೆ ಸ್ಪಷ್ಟ ಉತ್ತರವಂತು ಸಿಕ್ಕಿಲ್ಲ. ಇದಾಗ್ಯೂ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ದುಲೀಪ್ ಟ್ರೋಫಿ ಪಂದ್ಯದ ವೇಳೆ ಆರ್​ಸಿಬಿ ಅಭಿಮಾನಿಗಳು ರಾಹುಲ್​ಗೆ ಭರ್ಜರಿ ಬೆಂಬಲ ವ್ಯಕ್ತಪಡಿಸಿದ್ದರು. ಈ ಬೆಂಬಲದಿಂದ ಪುಳಕಿತರಾಗಿರುವ ಕನ್ನಡಿಗ ಧನ್ಯವಾದಗಳನ್ನು ಸಹ ತಿಳಿಸಿದ್ದರು.

1 / 6
ಮತ್ತೊಂದೆಡೆ ಐಪಿಎಲ್ 2025 ರಲ್ಲಿ ಕೆಎಲ್ ರಾಹುಲ್ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿ ಕಾಣಿಸಿಕೊಳ್ಳುವುದಿಲ್ಲ ಎಂಬುದು ಖಚಿತವಾಗಿದೆ. ಹೀಗಾಗಿ ಎಲ್​ಎಸ್​ಜಿ ತಂಡದಿಂದ ಕನ್ನಡಿಗ ಹೊರಬರುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ. ಈ ವರದಿಗಳ ನಡುವೆ ರಾಹುಲ್ ಆರ್​ಸಿಬಿಗೆ ಬರಲಿ ಎಂದು ಅಭಿಮಾನಿಗಳು ಆಶಿಸುತ್ತಿದ್ದಾರೆ.

ಮತ್ತೊಂದೆಡೆ ಐಪಿಎಲ್ 2025 ರಲ್ಲಿ ಕೆಎಲ್ ರಾಹುಲ್ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿ ಕಾಣಿಸಿಕೊಳ್ಳುವುದಿಲ್ಲ ಎಂಬುದು ಖಚಿತವಾಗಿದೆ. ಹೀಗಾಗಿ ಎಲ್​ಎಸ್​ಜಿ ತಂಡದಿಂದ ಕನ್ನಡಿಗ ಹೊರಬರುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ. ಈ ವರದಿಗಳ ನಡುವೆ ರಾಹುಲ್ ಆರ್​ಸಿಬಿಗೆ ಬರಲಿ ಎಂದು ಅಭಿಮಾನಿಗಳು ಆಶಿಸುತ್ತಿದ್ದಾರೆ.

2 / 6
ಅದರಲ್ಲೂ ಕನ್ನಡಿಗನ ನಾಯಕತ್ವದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ ಟ್ರೋಫಿ ಎತ್ತಿ ಹಿಡಿಯಲಿ ಎಂಬ ಬಯಕೆಯನ್ನು ಆರ್​ಸಿಬಿ ಅಭಿಮಾನಿಗಳು ವ್ಯಕ್ತಪಡಿಸುತ್ತಿದ್ದಾರೆ. ಇದರ ನಡುವೆ ಕೆಎಲ್ ರಾಹುಲ್ ನೀಡಿರುವ ಹೇಳಿಕೆಯಿಂದ ಆರ್​ಸಿಬಿ ಫ್ಯಾನ್ಸ್ ಕೂಡ ಪುಳಕಿತರಾಗಿದ್ದಾರೆ.

ಅದರಲ್ಲೂ ಕನ್ನಡಿಗನ ನಾಯಕತ್ವದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ ಟ್ರೋಫಿ ಎತ್ತಿ ಹಿಡಿಯಲಿ ಎಂಬ ಬಯಕೆಯನ್ನು ಆರ್​ಸಿಬಿ ಅಭಿಮಾನಿಗಳು ವ್ಯಕ್ತಪಡಿಸುತ್ತಿದ್ದಾರೆ. ಇದರ ನಡುವೆ ಕೆಎಲ್ ರಾಹುಲ್ ನೀಡಿರುವ ಹೇಳಿಕೆಯಿಂದ ಆರ್​ಸಿಬಿ ಫ್ಯಾನ್ಸ್ ಕೂಡ ಪುಳಕಿತರಾಗಿದ್ದಾರೆ.

3 / 6
ಸಂದರ್ಶನವೊಂದರಲ್ಲಿ ಮಾತನಾಡಿದ ಕೆಎಲ್ ರಾಹುಲ್ ಅವರಿಗೆ ಈ ಸಲ ಆರ್​ಸಿಬಿ ಕಪ್ ಗೆಲ್ಲಲಿದೆಯಾ ಎಂಬ ಪ್ರಶ್ನೆಯನ್ನು ಮುಂದಿಡಲಾಗಿದೆ. ಈ ಪ್ರಶ್ನೆಗೆ ಉತ್ತರಿಸಿದ ಕೆಎಲ್​ಆರ್​, ನಾನು ಸಹ ಆರ್​ಸಿಬಿ ಕಪ್ ಗೆಲ್ಲಲಿ ಎಂದು ಆಶಿಸುತ್ತೇನೆ ಎಂದು ತಿಳಿಸಿದ್ದಾರೆ. ಈ ಮೂಲಕ ಆರ್​ಸಿಬಿ ತಂಡವು ಟ್ರೋಫಿ ಗೆಲ್ಲಬೇಕೆಂಬ ಆಸೆಯಿದೆ ಕೆಎಲ್ ರಾಹುಲ್ ಹೇಳಿದ್ದಾರೆ. ಈ ಹೇಳಿಕೆಯು ಇದೀಗ ವೈರಲ್ ಆಗಿದ್ದು, ಅಭಿಮಾನಿಗಳಿಂದ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಕೆಎಲ್ ರಾಹುಲ್ ಅವರಿಗೆ ಈ ಸಲ ಆರ್​ಸಿಬಿ ಕಪ್ ಗೆಲ್ಲಲಿದೆಯಾ ಎಂಬ ಪ್ರಶ್ನೆಯನ್ನು ಮುಂದಿಡಲಾಗಿದೆ. ಈ ಪ್ರಶ್ನೆಗೆ ಉತ್ತರಿಸಿದ ಕೆಎಲ್​ಆರ್​, ನಾನು ಸಹ ಆರ್​ಸಿಬಿ ಕಪ್ ಗೆಲ್ಲಲಿ ಎಂದು ಆಶಿಸುತ್ತೇನೆ ಎಂದು ತಿಳಿಸಿದ್ದಾರೆ. ಈ ಮೂಲಕ ಆರ್​ಸಿಬಿ ತಂಡವು ಟ್ರೋಫಿ ಗೆಲ್ಲಬೇಕೆಂಬ ಆಸೆಯಿದೆ ಕೆಎಲ್ ರಾಹುಲ್ ಹೇಳಿದ್ದಾರೆ. ಈ ಹೇಳಿಕೆಯು ಇದೀಗ ವೈರಲ್ ಆಗಿದ್ದು, ಅಭಿಮಾನಿಗಳಿಂದ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

4 / 6
ಅಂದಹಾಗೆ ಕೆಎಲ್ ರಾಹುಲ್ ಆರ್​ಸಿಬಿ ಪರ ಒಟ್ಟು 19 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 14 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಅವರು 4 ಅರ್ಧಶತಕಗಳೊಂದಿಗೆ ಒಟ್ಟು 417 ರನ್ ಕಲೆಹಾಕಿದ್ದಾರೆ. ಇದಾದ ಬಳಿಕ ಸನ್​ರೈಸರ್ಸ್ ಹೈದರಾಬಾದ್, ಪಂಜಾಬ್ ಕಿಂಗ್ಸ್ ಪರ ಆಡಿದ್ದ ರಾಹುಲ್ ಈಗ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿದ್ದಾರೆ.

ಅಂದಹಾಗೆ ಕೆಎಲ್ ರಾಹುಲ್ ಆರ್​ಸಿಬಿ ಪರ ಒಟ್ಟು 19 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 14 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಅವರು 4 ಅರ್ಧಶತಕಗಳೊಂದಿಗೆ ಒಟ್ಟು 417 ರನ್ ಕಲೆಹಾಕಿದ್ದಾರೆ. ಇದಾದ ಬಳಿಕ ಸನ್​ರೈಸರ್ಸ್ ಹೈದರಾಬಾದ್, ಪಂಜಾಬ್ ಕಿಂಗ್ಸ್ ಪರ ಆಡಿದ್ದ ರಾಹುಲ್ ಈಗ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿದ್ದಾರೆ.

5 / 6
ಒಂದು ವೇಳೆ ಕೆಎಲ್ ರಾಹುಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡರೆ, ಅವರ ಖರೀದಿಗಾಗಿ ಆರ್​ಸಿಬಿ ಮುಂದಾಗಲಿರುವುದು ಸ್ಪಷ್ಟ. ಏಕೆಂದರೆ ಆರ್​ಸಿಬಿ ತಂಡವು ವಿಕೆಟ್ ಕೀಪರ್ ಹಾಗೂ ನಾಯಕನನ್ನು ಎದುರು ನೋಡುತ್ತಿದೆ. ಇತ್ತ ರಾಹುಲ್ ಖರೀದಿಯಿಂದಾಗಿ ಈ ಎರಡು ಸ್ಥಾನಗಳನ್ನು ತುಂಬಬಹುದು. ಅದರಂತೆ ಕೆಎಲ್ ರಾಹುಲ್ ಮುಂದಿನ ಸೀಸನ್​ನಲ್ಲಿ ಆರ್​ಸಿಬಿ ಪರ ಕಣಕ್ಕಿಳಿಯಲಿದ್ದಾರಾ ಕಾದು ನೋಡಬೇಕಿದೆ.

ಒಂದು ವೇಳೆ ಕೆಎಲ್ ರಾಹುಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡರೆ, ಅವರ ಖರೀದಿಗಾಗಿ ಆರ್​ಸಿಬಿ ಮುಂದಾಗಲಿರುವುದು ಸ್ಪಷ್ಟ. ಏಕೆಂದರೆ ಆರ್​ಸಿಬಿ ತಂಡವು ವಿಕೆಟ್ ಕೀಪರ್ ಹಾಗೂ ನಾಯಕನನ್ನು ಎದುರು ನೋಡುತ್ತಿದೆ. ಇತ್ತ ರಾಹುಲ್ ಖರೀದಿಯಿಂದಾಗಿ ಈ ಎರಡು ಸ್ಥಾನಗಳನ್ನು ತುಂಬಬಹುದು. ಅದರಂತೆ ಕೆಎಲ್ ರಾಹುಲ್ ಮುಂದಿನ ಸೀಸನ್​ನಲ್ಲಿ ಆರ್​ಸಿಬಿ ಪರ ಕಣಕ್ಕಿಳಿಯಲಿದ್ದಾರಾ ಕಾದು ನೋಡಬೇಕಿದೆ.

6 / 6
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್