AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್ ಮೆಗಾ ಹರಾಜಿಗೆ ಕೆಎಲ್ ರಾಹುಲ್

IPL 2025 KL Rahul: ಐಪಿಎಲ್ 2022ರ ಹರಾಜಿಗೂ ಮುನ್ನ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಕೆಎಲ್ ರಾಹುಲ್ ಅವರನ್ನು ಬರೋಬ್ಬರಿ 17 ಕೋಟಿ ರೂ.ಗೆ ಖರೀದಿಸಿತ್ತು. ಕಳೆದ ಮೂರು ಸೀಸನ್​ಗಳಲ್ಲಿ ಎಲ್​ಎಸ್​ಜಿ ಪರ ಕಣಕ್ಕಿಳಿದಿದ್ದ ರಾಹುಲ್ ಈ ಬಾರಿ ಮತ್ತೆ ಹರಾಜಿನಲ್ಲಿ ಕಾಣಿಸಿಕೊಳ್ಳಲು ನಿರ್ಧರಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 27, 2024 | 7:53 AM

Share
ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಮುಂಬರುವ ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದು ಖಚಿತವಾಗಿದೆ. ಎಲ್​ಎಸ್​ಜಿ ಫ್ರಾಂಚೈಸಿ ನೀಡಿದ ಆಫರ್ ಅನ್ನು ರಾಹುಲ್ ತಿರಸ್ಕರಿಸಿದ್ದು, ಹೀಗಾಗಿ ಅವರು ಮೆಗಾ ಆಕ್ಷನ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಫ್ರಾಂಚೈಸಿ ಮೂಲಗಳು ತಿಳಿಸಿವೆ.

ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಮುಂಬರುವ ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದು ಖಚಿತವಾಗಿದೆ. ಎಲ್​ಎಸ್​ಜಿ ಫ್ರಾಂಚೈಸಿ ನೀಡಿದ ಆಫರ್ ಅನ್ನು ರಾಹುಲ್ ತಿರಸ್ಕರಿಸಿದ್ದು, ಹೀಗಾಗಿ ಅವರು ಮೆಗಾ ಆಕ್ಷನ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಫ್ರಾಂಚೈಸಿ ಮೂಲಗಳು ತಿಳಿಸಿವೆ.

1 / 6
ಇಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಕೆಎಲ್ ರಾಹುಲ್ ಅವರನ್ನು ಕೇವಲ ಆಟಗಾರನಾಗಿ ತಂಡದಲ್ಲಿ ಉಳಿಸಿಕೊಳ್ಳಲು ಬಯಸಿತ್ತು ಎಂದು ತಿಳಿದು ಬಂದಿದೆ. ಆದರೆ ಇದಕ್ಕೆ ರಾಹುಲ್ ಅವರಿಂದ ಸಕರಾತ್ಮಕ ಸ್ಪಂದನೆ ದೊರೆತಿಲ್ಲ. ಹೀಗಾಗಿ ಕನ್ನಡಿಗನನ್ನು ಕೈ ಬಿಡಲು ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ನಿರ್ಧರಿಸಿದೆ.

ಇಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಕೆಎಲ್ ರಾಹುಲ್ ಅವರನ್ನು ಕೇವಲ ಆಟಗಾರನಾಗಿ ತಂಡದಲ್ಲಿ ಉಳಿಸಿಕೊಳ್ಳಲು ಬಯಸಿತ್ತು ಎಂದು ತಿಳಿದು ಬಂದಿದೆ. ಆದರೆ ಇದಕ್ಕೆ ರಾಹುಲ್ ಅವರಿಂದ ಸಕರಾತ್ಮಕ ಸ್ಪಂದನೆ ದೊರೆತಿಲ್ಲ. ಹೀಗಾಗಿ ಕನ್ನಡಿಗನನ್ನು ಕೈ ಬಿಡಲು ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ನಿರ್ಧರಿಸಿದೆ.

2 / 6
ಕಳೆದ ಮೂರು ಸೀಸನ್​ಗಳಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಕೆಎಲ್ ರಾಹುಲ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು. ಆದರೆ ಅವರ ನಾಯಕತ್ವದಲ್ಲಿ ತಂಡವು ಸತತ ವೈಫಲ್ಯ ಅನುಭವಿಸಿತ್ತು. ಇದೇ ಕಾರಣದಿಂದಾಗಿ ಕಳೆದ ಸೀಸನ್​ನಲ್ಲಿ ಎಸ್​ಆರ್​ಹೆಚ್ ವಿರುದ್ಧದ ಪಂದ್ಯದ ಬಳಿಕ ರಾಹುಲ್ ಅವರನ್ನು ಎಲ್​ಎಸ್​ಜಿ ತಂಡದ ಮಾಲೀಕರಾದ ಸಂಜೀವ್ ಗೊಯೆಂಕಾ ಬಹಿರಂಗವಾಗಿ ತರಾಟೆಗೆ ತೆಗೆದುಕೊಂಡಿದ್ದರು.

ಕಳೆದ ಮೂರು ಸೀಸನ್​ಗಳಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಕೆಎಲ್ ರಾಹುಲ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು. ಆದರೆ ಅವರ ನಾಯಕತ್ವದಲ್ಲಿ ತಂಡವು ಸತತ ವೈಫಲ್ಯ ಅನುಭವಿಸಿತ್ತು. ಇದೇ ಕಾರಣದಿಂದಾಗಿ ಕಳೆದ ಸೀಸನ್​ನಲ್ಲಿ ಎಸ್​ಆರ್​ಹೆಚ್ ವಿರುದ್ಧದ ಪಂದ್ಯದ ಬಳಿಕ ರಾಹುಲ್ ಅವರನ್ನು ಎಲ್​ಎಸ್​ಜಿ ತಂಡದ ಮಾಲೀಕರಾದ ಸಂಜೀವ್ ಗೊಯೆಂಕಾ ಬಹಿರಂಗವಾಗಿ ತರಾಟೆಗೆ ತೆಗೆದುಕೊಂಡಿದ್ದರು.

3 / 6
ಇದಾದ ಬಳಿಕ ಕೆಎಲ್ ರಾಹುಲ್ ಲಕ್ನೋ ಸೂಪರ್ ಜೈಂಟ್ಸ್ ತೊರೆಯಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಆದರೆ ಬಳಿಕ ಸಂಜೀವ್ ಗೊಯೆಂಕಾ ಜೊತೆ ಕಾಣಿಸಿಕೊಳ್ಳುವ ಮೂಲಕ ಕೆಎಲ್ ರಾಹುಲ್ ಎಲ್ಲಾ ವದಂತಿಗಳಿಗೆ ತೆರೆ ಎಳೆದಿದ್ದರು. ಅಷ್ಟೇ ಅಲ್ಲದೆ ಇತ್ತೀಚೆಗಷ್ಟೇ ಗೊಯೆಂಕಾ ಕೂಡ ಕೆಎಲ್ ರಾಹುಲ್ ನಮ್ಮ ಕುಟುಂಬದ ಅಂಗ ಎಂದಿದ್ದರು.

ಇದಾದ ಬಳಿಕ ಕೆಎಲ್ ರಾಹುಲ್ ಲಕ್ನೋ ಸೂಪರ್ ಜೈಂಟ್ಸ್ ತೊರೆಯಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಆದರೆ ಬಳಿಕ ಸಂಜೀವ್ ಗೊಯೆಂಕಾ ಜೊತೆ ಕಾಣಿಸಿಕೊಳ್ಳುವ ಮೂಲಕ ಕೆಎಲ್ ರಾಹುಲ್ ಎಲ್ಲಾ ವದಂತಿಗಳಿಗೆ ತೆರೆ ಎಳೆದಿದ್ದರು. ಅಷ್ಟೇ ಅಲ್ಲದೆ ಇತ್ತೀಚೆಗಷ್ಟೇ ಗೊಯೆಂಕಾ ಕೂಡ ಕೆಎಲ್ ರಾಹುಲ್ ನಮ್ಮ ಕುಟುಂಬದ ಅಂಗ ಎಂದಿದ್ದರು.

4 / 6
ಆದರೀಗ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯ ಒಡಂಬಡಿಕೆಗೆ ಕೆಎಲ್ ರಾಹುಲ್ ಸಿದ್ಧರಿಲ್ಲ ಎಂಬುದು ಸ್ಪಷ್ಟವಾಗಿದೆ. ಹೀಗಾಗಿಯೇ ಐಪಿಎಲ್ ಮೆಗಾ ಹರಾಜಿಗೂ ಮುನ್ನ ನಾಯಕನನ್ನು ತಂಡದಿಂದ ಕೈ ಬಿಡಲು ಎಲ್​ಎಸ್​ಜಿ ಫ್ರಾಂಚೈಸಿ ನಿರ್ಧರಿಸಿದೆ ಎಂದು ವರದಿಯಾಗಿದೆ.

ಆದರೀಗ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯ ಒಡಂಬಡಿಕೆಗೆ ಕೆಎಲ್ ರಾಹುಲ್ ಸಿದ್ಧರಿಲ್ಲ ಎಂಬುದು ಸ್ಪಷ್ಟವಾಗಿದೆ. ಹೀಗಾಗಿಯೇ ಐಪಿಎಲ್ ಮೆಗಾ ಹರಾಜಿಗೂ ಮುನ್ನ ನಾಯಕನನ್ನು ತಂಡದಿಂದ ಕೈ ಬಿಡಲು ಎಲ್​ಎಸ್​ಜಿ ಫ್ರಾಂಚೈಸಿ ನಿರ್ಧರಿಸಿದೆ ಎಂದು ವರದಿಯಾಗಿದೆ.

5 / 6
ಅದರಂತೆ ಐಪಿಎಲ್ 2025 ರ ಮೆಗಾ ಹರಾಜಿನಲ್ಲಿ ಕೆಎಲ್ ರಾಹುಲ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ. ಈ ಹರಾಜಿನ ಮೂಲಕ ಕನ್ನಡಿಗ ಯಾವ ತಂಡದ ಪಾಲಾಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಅದರಂತೆ ಐಪಿಎಲ್ 2025 ರ ಮೆಗಾ ಹರಾಜಿನಲ್ಲಿ ಕೆಎಲ್ ರಾಹುಲ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ. ಈ ಹರಾಜಿನ ಮೂಲಕ ಕನ್ನಡಿಗ ಯಾವ ತಂಡದ ಪಾಲಾಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

6 / 6
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ