Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್ ಮೆಗಾ ಹರಾಜಿಗೆ ಕೆಎಲ್ ರಾಹುಲ್

IPL 2025 KL Rahul: ಐಪಿಎಲ್ 2022ರ ಹರಾಜಿಗೂ ಮುನ್ನ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಕೆಎಲ್ ರಾಹುಲ್ ಅವರನ್ನು ಬರೋಬ್ಬರಿ 17 ಕೋಟಿ ರೂ.ಗೆ ಖರೀದಿಸಿತ್ತು. ಕಳೆದ ಮೂರು ಸೀಸನ್​ಗಳಲ್ಲಿ ಎಲ್​ಎಸ್​ಜಿ ಪರ ಕಣಕ್ಕಿಳಿದಿದ್ದ ರಾಹುಲ್ ಈ ಬಾರಿ ಮತ್ತೆ ಹರಾಜಿನಲ್ಲಿ ಕಾಣಿಸಿಕೊಳ್ಳಲು ನಿರ್ಧರಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 27, 2024 | 7:53 AM

ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಮುಂಬರುವ ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದು ಖಚಿತವಾಗಿದೆ. ಎಲ್​ಎಸ್​ಜಿ ಫ್ರಾಂಚೈಸಿ ನೀಡಿದ ಆಫರ್ ಅನ್ನು ರಾಹುಲ್ ತಿರಸ್ಕರಿಸಿದ್ದು, ಹೀಗಾಗಿ ಅವರು ಮೆಗಾ ಆಕ್ಷನ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಫ್ರಾಂಚೈಸಿ ಮೂಲಗಳು ತಿಳಿಸಿವೆ.

ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಮುಂಬರುವ ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದು ಖಚಿತವಾಗಿದೆ. ಎಲ್​ಎಸ್​ಜಿ ಫ್ರಾಂಚೈಸಿ ನೀಡಿದ ಆಫರ್ ಅನ್ನು ರಾಹುಲ್ ತಿರಸ್ಕರಿಸಿದ್ದು, ಹೀಗಾಗಿ ಅವರು ಮೆಗಾ ಆಕ್ಷನ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಫ್ರಾಂಚೈಸಿ ಮೂಲಗಳು ತಿಳಿಸಿವೆ.

1 / 6
ಇಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಕೆಎಲ್ ರಾಹುಲ್ ಅವರನ್ನು ಕೇವಲ ಆಟಗಾರನಾಗಿ ತಂಡದಲ್ಲಿ ಉಳಿಸಿಕೊಳ್ಳಲು ಬಯಸಿತ್ತು ಎಂದು ತಿಳಿದು ಬಂದಿದೆ. ಆದರೆ ಇದಕ್ಕೆ ರಾಹುಲ್ ಅವರಿಂದ ಸಕರಾತ್ಮಕ ಸ್ಪಂದನೆ ದೊರೆತಿಲ್ಲ. ಹೀಗಾಗಿ ಕನ್ನಡಿಗನನ್ನು ಕೈ ಬಿಡಲು ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ನಿರ್ಧರಿಸಿದೆ.

ಇಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಕೆಎಲ್ ರಾಹುಲ್ ಅವರನ್ನು ಕೇವಲ ಆಟಗಾರನಾಗಿ ತಂಡದಲ್ಲಿ ಉಳಿಸಿಕೊಳ್ಳಲು ಬಯಸಿತ್ತು ಎಂದು ತಿಳಿದು ಬಂದಿದೆ. ಆದರೆ ಇದಕ್ಕೆ ರಾಹುಲ್ ಅವರಿಂದ ಸಕರಾತ್ಮಕ ಸ್ಪಂದನೆ ದೊರೆತಿಲ್ಲ. ಹೀಗಾಗಿ ಕನ್ನಡಿಗನನ್ನು ಕೈ ಬಿಡಲು ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ನಿರ್ಧರಿಸಿದೆ.

2 / 6
ಕಳೆದ ಮೂರು ಸೀಸನ್​ಗಳಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಕೆಎಲ್ ರಾಹುಲ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು. ಆದರೆ ಅವರ ನಾಯಕತ್ವದಲ್ಲಿ ತಂಡವು ಸತತ ವೈಫಲ್ಯ ಅನುಭವಿಸಿತ್ತು. ಇದೇ ಕಾರಣದಿಂದಾಗಿ ಕಳೆದ ಸೀಸನ್​ನಲ್ಲಿ ಎಸ್​ಆರ್​ಹೆಚ್ ವಿರುದ್ಧದ ಪಂದ್ಯದ ಬಳಿಕ ರಾಹುಲ್ ಅವರನ್ನು ಎಲ್​ಎಸ್​ಜಿ ತಂಡದ ಮಾಲೀಕರಾದ ಸಂಜೀವ್ ಗೊಯೆಂಕಾ ಬಹಿರಂಗವಾಗಿ ತರಾಟೆಗೆ ತೆಗೆದುಕೊಂಡಿದ್ದರು.

ಕಳೆದ ಮೂರು ಸೀಸನ್​ಗಳಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಕೆಎಲ್ ರಾಹುಲ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು. ಆದರೆ ಅವರ ನಾಯಕತ್ವದಲ್ಲಿ ತಂಡವು ಸತತ ವೈಫಲ್ಯ ಅನುಭವಿಸಿತ್ತು. ಇದೇ ಕಾರಣದಿಂದಾಗಿ ಕಳೆದ ಸೀಸನ್​ನಲ್ಲಿ ಎಸ್​ಆರ್​ಹೆಚ್ ವಿರುದ್ಧದ ಪಂದ್ಯದ ಬಳಿಕ ರಾಹುಲ್ ಅವರನ್ನು ಎಲ್​ಎಸ್​ಜಿ ತಂಡದ ಮಾಲೀಕರಾದ ಸಂಜೀವ್ ಗೊಯೆಂಕಾ ಬಹಿರಂಗವಾಗಿ ತರಾಟೆಗೆ ತೆಗೆದುಕೊಂಡಿದ್ದರು.

3 / 6
ಇದಾದ ಬಳಿಕ ಕೆಎಲ್ ರಾಹುಲ್ ಲಕ್ನೋ ಸೂಪರ್ ಜೈಂಟ್ಸ್ ತೊರೆಯಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಆದರೆ ಬಳಿಕ ಸಂಜೀವ್ ಗೊಯೆಂಕಾ ಜೊತೆ ಕಾಣಿಸಿಕೊಳ್ಳುವ ಮೂಲಕ ಕೆಎಲ್ ರಾಹುಲ್ ಎಲ್ಲಾ ವದಂತಿಗಳಿಗೆ ತೆರೆ ಎಳೆದಿದ್ದರು. ಅಷ್ಟೇ ಅಲ್ಲದೆ ಇತ್ತೀಚೆಗಷ್ಟೇ ಗೊಯೆಂಕಾ ಕೂಡ ಕೆಎಲ್ ರಾಹುಲ್ ನಮ್ಮ ಕುಟುಂಬದ ಅಂಗ ಎಂದಿದ್ದರು.

ಇದಾದ ಬಳಿಕ ಕೆಎಲ್ ರಾಹುಲ್ ಲಕ್ನೋ ಸೂಪರ್ ಜೈಂಟ್ಸ್ ತೊರೆಯಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಆದರೆ ಬಳಿಕ ಸಂಜೀವ್ ಗೊಯೆಂಕಾ ಜೊತೆ ಕಾಣಿಸಿಕೊಳ್ಳುವ ಮೂಲಕ ಕೆಎಲ್ ರಾಹುಲ್ ಎಲ್ಲಾ ವದಂತಿಗಳಿಗೆ ತೆರೆ ಎಳೆದಿದ್ದರು. ಅಷ್ಟೇ ಅಲ್ಲದೆ ಇತ್ತೀಚೆಗಷ್ಟೇ ಗೊಯೆಂಕಾ ಕೂಡ ಕೆಎಲ್ ರಾಹುಲ್ ನಮ್ಮ ಕುಟುಂಬದ ಅಂಗ ಎಂದಿದ್ದರು.

4 / 6
ಆದರೀಗ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯ ಒಡಂಬಡಿಕೆಗೆ ಕೆಎಲ್ ರಾಹುಲ್ ಸಿದ್ಧರಿಲ್ಲ ಎಂಬುದು ಸ್ಪಷ್ಟವಾಗಿದೆ. ಹೀಗಾಗಿಯೇ ಐಪಿಎಲ್ ಮೆಗಾ ಹರಾಜಿಗೂ ಮುನ್ನ ನಾಯಕನನ್ನು ತಂಡದಿಂದ ಕೈ ಬಿಡಲು ಎಲ್​ಎಸ್​ಜಿ ಫ್ರಾಂಚೈಸಿ ನಿರ್ಧರಿಸಿದೆ ಎಂದು ವರದಿಯಾಗಿದೆ.

ಆದರೀಗ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯ ಒಡಂಬಡಿಕೆಗೆ ಕೆಎಲ್ ರಾಹುಲ್ ಸಿದ್ಧರಿಲ್ಲ ಎಂಬುದು ಸ್ಪಷ್ಟವಾಗಿದೆ. ಹೀಗಾಗಿಯೇ ಐಪಿಎಲ್ ಮೆಗಾ ಹರಾಜಿಗೂ ಮುನ್ನ ನಾಯಕನನ್ನು ತಂಡದಿಂದ ಕೈ ಬಿಡಲು ಎಲ್​ಎಸ್​ಜಿ ಫ್ರಾಂಚೈಸಿ ನಿರ್ಧರಿಸಿದೆ ಎಂದು ವರದಿಯಾಗಿದೆ.

5 / 6
ಅದರಂತೆ ಐಪಿಎಲ್ 2025 ರ ಮೆಗಾ ಹರಾಜಿನಲ್ಲಿ ಕೆಎಲ್ ರಾಹುಲ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ. ಈ ಹರಾಜಿನ ಮೂಲಕ ಕನ್ನಡಿಗ ಯಾವ ತಂಡದ ಪಾಲಾಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಅದರಂತೆ ಐಪಿಎಲ್ 2025 ರ ಮೆಗಾ ಹರಾಜಿನಲ್ಲಿ ಕೆಎಲ್ ರಾಹುಲ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ. ಈ ಹರಾಜಿನ ಮೂಲಕ ಕನ್ನಡಿಗ ಯಾವ ತಂಡದ ಪಾಲಾಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

6 / 6
Follow us
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ