IPL 2025: LSG ನಾಯಕತ್ವದಿಂದ ಕೆಎಲ್ ರಾಹುಲ್​ ಕಿಕ್ ಔಟ್?

IPL 2025 KL Rahul: ಕೆಎಲ್ ರಾಹುಲ್ ಮುಂಬರುವ ಐಪಿಎಲ್​ನಲ್ಲಿ ಯಾವ ತಂಡದ ಪರ ಕಣಕ್ಕಿಳಿಯಲಿದ್ದಾರೆ ಎಂಬುದೇ ಈಗ ಕುತೂಹಲ. ಏಕೆಂದರೆ ಕಳೆದ ಸೀಸನ್​ನಲ್ಲಿ ಎಸ್​ಆರ್​ಹೆಚ್ ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್​ ತಂಡ ಸೋತಿದಕ್ಕಾಗಿ ಸಂಜಯ್ ಗೊಯೆಂಕಾ ಮೈದಾನದಲ್ಲೇ ನಾಯಕ ಕೆಎಲ್ ರಾಹುಲ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಇದಾದ ಬಳಿಕ ರಾಹುಲ್ ಎಲ್​ಎಸ್​ಜಿ ತಂಡವನ್ನು ತೊರೆಯಲಿದ್ದಾರೆ ಎಂಬ ಸುದ್ದಿ ಹುಟ್ಟಿಕೊಂಡಿತ್ತು.

|

Updated on: Aug 29, 2024 | 9:45 AM

ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕತ್ವದಿಂದ ಕೆಎಲ್ ರಾಹುಲ್ ವಾಜಾಗೊಳ್ಳುವುದು ಬಹುತೇಕ ಖಚಿತವಾಗಿದೆ. ಇದಕ್ಕೆ ಸಾಕ್ಷಿ ಬುಧವಾರ LSG ತಂಡದ ಮಾಲೀಕರಾದ ಸಂಜೀವ್ ಗೊಯೆಂಕಾ ನೀಡಿರುವ ಹೇಳಿಕೆಗಳು. ಐಪಿಎಲ್​ 2025ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಯಾರಾಗಲಿದ್ದಾರೆ ಎಂಬ ಪ್ರಶ್ನೆಗೆ ಸಂಜೀವ್ ಗೊಯೆಂಕಾ ಸ್ಪಷ್ಟ ಉತ್ತರ ನೀಡದೇ ಜಾರಿಕೊಂಡಿದ್ದಾರೆ.

ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕತ್ವದಿಂದ ಕೆಎಲ್ ರಾಹುಲ್ ವಾಜಾಗೊಳ್ಳುವುದು ಬಹುತೇಕ ಖಚಿತವಾಗಿದೆ. ಇದಕ್ಕೆ ಸಾಕ್ಷಿ ಬುಧವಾರ LSG ತಂಡದ ಮಾಲೀಕರಾದ ಸಂಜೀವ್ ಗೊಯೆಂಕಾ ನೀಡಿರುವ ಹೇಳಿಕೆಗಳು. ಐಪಿಎಲ್​ 2025ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಯಾರಾಗಲಿದ್ದಾರೆ ಎಂಬ ಪ್ರಶ್ನೆಗೆ ಸಂಜೀವ್ ಗೊಯೆಂಕಾ ಸ್ಪಷ್ಟ ಉತ್ತರ ನೀಡದೇ ಜಾರಿಕೊಂಡಿದ್ದಾರೆ.

1 / 6
ಬುಧವಾರ ನಡೆದ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯ ಪತ್ರಿಕಾಗೋಷ್ಠಿಯಲ್ಲಿ, ಕೆಎಲ್ ರಾಹುಲ್ ಬಗ್ಗೆ ಪ್ರಶ್ನಿಸಲಾಗಿತ್ತು. ಈ ವೇಳೆ ಸಂಜೀವ್ ಗೊಯೆಂಕಾ, ರಾಹುಲ್ ನಮ್ಮ ಕುಟುಂಬದ ಅವಿಭಾಜ್ಯ ಅಂಗ ಎಂಬ ಮಾರ್ಮಿಕ ಉತ್ತರ ನೀಡಿದರು. ಇದಾಗ್ಯೂ ಅವರು ಕೆಎಲ್ ರಾಹುಲ್ ಅವರನ್ನು ರಿಟೈನ್ ಮಾಡುತ್ತೇವೆ ಎಂದು ಎಲ್ಲೂ ಸಹ ಪ್ರಸ್ತಾಪಿಸಿಲ್ಲ.

ಬುಧವಾರ ನಡೆದ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯ ಪತ್ರಿಕಾಗೋಷ್ಠಿಯಲ್ಲಿ, ಕೆಎಲ್ ರಾಹುಲ್ ಬಗ್ಗೆ ಪ್ರಶ್ನಿಸಲಾಗಿತ್ತು. ಈ ವೇಳೆ ಸಂಜೀವ್ ಗೊಯೆಂಕಾ, ರಾಹುಲ್ ನಮ್ಮ ಕುಟುಂಬದ ಅವಿಭಾಜ್ಯ ಅಂಗ ಎಂಬ ಮಾರ್ಮಿಕ ಉತ್ತರ ನೀಡಿದರು. ಇದಾಗ್ಯೂ ಅವರು ಕೆಎಲ್ ರಾಹುಲ್ ಅವರನ್ನು ರಿಟೈನ್ ಮಾಡುತ್ತೇವೆ ಎಂದು ಎಲ್ಲೂ ಸಹ ಪ್ರಸ್ತಾಪಿಸಿಲ್ಲ.

2 / 6
ಅಷ್ಟೇ ಅಲ್ಲದೆ ನಾಯಕ ಯಾರಾಗಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಂಜೀವ್ ಗೊಯೆಂಕಾ, ನಾಯಕ ಬಗ್ಗೆ ನಿರ್ಧರಿಸಲು ಮತ್ತು ರಿಟೈನ್ ಪ್ರಕ್ರಿಯೆನ್ನು ಪೂರ್ಣಗೊಳಿಸಲು ಇನ್ನೂ ಸಾಕಷ್ಟು ಸಮಯವಿದೆ ಎಂಬ ಉತ್ತರ ನೀಡಿದ್ದಾರೆ. ಇದಾಗ್ಯೂ ಕೆಎಲ್ ರಾಹುಲ್ ಅವರೇ ಮುಂದಿನ ಸೀಸನ್​ನಲ್ಲೂ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿ ಮುಂದುವರೆಯಲಿದ್ದಾರೆ ಎಂದು ಹೇಳಿಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ.

ಅಷ್ಟೇ ಅಲ್ಲದೆ ನಾಯಕ ಯಾರಾಗಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಂಜೀವ್ ಗೊಯೆಂಕಾ, ನಾಯಕ ಬಗ್ಗೆ ನಿರ್ಧರಿಸಲು ಮತ್ತು ರಿಟೈನ್ ಪ್ರಕ್ರಿಯೆನ್ನು ಪೂರ್ಣಗೊಳಿಸಲು ಇನ್ನೂ ಸಾಕಷ್ಟು ಸಮಯವಿದೆ ಎಂಬ ಉತ್ತರ ನೀಡಿದ್ದಾರೆ. ಇದಾಗ್ಯೂ ಕೆಎಲ್ ರಾಹುಲ್ ಅವರೇ ಮುಂದಿನ ಸೀಸನ್​ನಲ್ಲೂ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿ ಮುಂದುವರೆಯಲಿದ್ದಾರೆ ಎಂದು ಹೇಳಿಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ.

3 / 6
ಇಲ್ಲಿ ಮತ್ತೊಂದು ಇಂಟ್ರೆಸ್ಟಿಂಗ್ ವಿಷಯ ಎಂದರೆ ಕಳೆದ ಮೂರು ತಿಂಗಳಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡದ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಕೆಎಲ್ ರಾಹುಲ್ ಕುರಿತಾಗಿ ಒಂದೇ ಒಂದು ಪೋಸ್ಟ್ ಹಂಚಿಕೊಂಡಿಲ್ಲ ಎಂಬುದು. ಇದೇ ವೇಳೆ ಎಲ್​ಎಸ್​ಜಿ ಪರ ಕಣಕ್ಕಿಳಿದ ಹಲವು ಆಟಗಾರರ ಫೋಟೋಗಳನ್ನು ಹಾಗೂ ವಿಡಿಯೋಗಳನ್ನು ಶೇರ್ ಮಾಡಲಾಗಿದೆ.

ಇಲ್ಲಿ ಮತ್ತೊಂದು ಇಂಟ್ರೆಸ್ಟಿಂಗ್ ವಿಷಯ ಎಂದರೆ ಕಳೆದ ಮೂರು ತಿಂಗಳಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡದ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಕೆಎಲ್ ರಾಹುಲ್ ಕುರಿತಾಗಿ ಒಂದೇ ಒಂದು ಪೋಸ್ಟ್ ಹಂಚಿಕೊಂಡಿಲ್ಲ ಎಂಬುದು. ಇದೇ ವೇಳೆ ಎಲ್​ಎಸ್​ಜಿ ಪರ ಕಣಕ್ಕಿಳಿದ ಹಲವು ಆಟಗಾರರ ಫೋಟೋಗಳನ್ನು ಹಾಗೂ ವಿಡಿಯೋಗಳನ್ನು ಶೇರ್ ಮಾಡಲಾಗಿದೆ.

4 / 6
ಆದರೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಶ್ರೀಲಂಕಾ ವಿರುದ್ಧದ ಸರಣಿಗೆ ಆಯ್ಕೆಯಾದರೂ ಆ ಬಗ್ಗೆ ಒಂದೇ ಒಂದು ಪೋಸ್ಟ್ ಮಾಡಲಾಗಿಲ್ಲ. ಇನ್ನು ಕೆಲ ದಿನಗಳ ಹಿಂದೆಯಷ್ಟೇ ರಾಹುಲ್ ಎಲ್​ಎಸ್​ಜಿ ಮಾಲೀಕರಾದ ಸಂಜೀವ್ ಗೊಯೆಂಕಾ ಅವರನ್ನು ಕೊಲ್ಕತ್ತಾದಲ್ಲಿ ಭೇಟಿಯಾಗಿದ್ದರು. ಆ ಫೋಟೋವನ್ನು ಸಹ ಲಕ್ನೋ ಸೂಪರ್ ಜೈಂಟ್ಸ್ ತನ್ನ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿಲ್ಲ.

ಆದರೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಶ್ರೀಲಂಕಾ ವಿರುದ್ಧದ ಸರಣಿಗೆ ಆಯ್ಕೆಯಾದರೂ ಆ ಬಗ್ಗೆ ಒಂದೇ ಒಂದು ಪೋಸ್ಟ್ ಮಾಡಲಾಗಿಲ್ಲ. ಇನ್ನು ಕೆಲ ದಿನಗಳ ಹಿಂದೆಯಷ್ಟೇ ರಾಹುಲ್ ಎಲ್​ಎಸ್​ಜಿ ಮಾಲೀಕರಾದ ಸಂಜೀವ್ ಗೊಯೆಂಕಾ ಅವರನ್ನು ಕೊಲ್ಕತ್ತಾದಲ್ಲಿ ಭೇಟಿಯಾಗಿದ್ದರು. ಆ ಫೋಟೋವನ್ನು ಸಹ ಲಕ್ನೋ ಸೂಪರ್ ಜೈಂಟ್ಸ್ ತನ್ನ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿಲ್ಲ.

5 / 6
ಈ ಎಲ್ಲಾ ನಡೆಗಳನ್ನು ಗಮನಿಸಿದರೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕತ್ವದಿಂದ ಕೆಎಲ್ ರಾಹುಲ್ ವಜಾಗೊಳ್ಳುವುದು ಬಹುತೇಕ ಖಚಿತ. ಇನ್ನು ಪ್ರಸ್ತುತ ಸನ್ನಿವೇಶವನ್ನು ಅವಲೋಕಿಸಿದರೆ, ಮುಂಬರುವ ಸೀಸನ್​ನಲ್ಲಿ ರಾಹುಲ್ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕಾಣಿಸಿಕೊಳ್ಳುವುದು ಸಹ ಅನುಮಾನ.

ಈ ಎಲ್ಲಾ ನಡೆಗಳನ್ನು ಗಮನಿಸಿದರೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕತ್ವದಿಂದ ಕೆಎಲ್ ರಾಹುಲ್ ವಜಾಗೊಳ್ಳುವುದು ಬಹುತೇಕ ಖಚಿತ. ಇನ್ನು ಪ್ರಸ್ತುತ ಸನ್ನಿವೇಶವನ್ನು ಅವಲೋಕಿಸಿದರೆ, ಮುಂಬರುವ ಸೀಸನ್​ನಲ್ಲಿ ರಾಹುಲ್ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕಾಣಿಸಿಕೊಳ್ಳುವುದು ಸಹ ಅನುಮಾನ.

6 / 6
Follow us
ರ‍್ಯಾಪ್ ಸಾಂಗ್ ಬಗ್ಗೆ ಸಿರಿ ಮಾತು; ನಕ್ಕು ಖುಷಿಪಟ್ಟ ತನಿಷಾ
ರ‍್ಯಾಪ್ ಸಾಂಗ್ ಬಗ್ಗೆ ಸಿರಿ ಮಾತು; ನಕ್ಕು ಖುಷಿಪಟ್ಟ ತನಿಷಾ
Daily Devotional: ಅಧ್ಯಯನದಲ್ಲಿ ಆಸಕ್ತಿ ಮೂಡಲು ಹೀಗೆ ಮಾಡಿ
Daily Devotional: ಅಧ್ಯಯನದಲ್ಲಿ ಆಸಕ್ತಿ ಮೂಡಲು ಹೀಗೆ ಮಾಡಿ
Nithya Bhavishya: ಶನಿವಾರದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ರಾಶಿ ಭವಿಷ್ಯ ತಿಳಿಯಿರಿ
ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ಬಂದ್​​ ಗತಿ ಕಾಣಿಸುತ್ತೇವೆ: ಗೃಹ ಸಚಿವ ಜಿ ಪರಮೇಶ್ವರ್​ ಹೀಗೆ ಹೇಳಿದ್ದೇಕೆ?
ಬಂದ್​​ ಗತಿ ಕಾಣಿಸುತ್ತೇವೆ: ಗೃಹ ಸಚಿವ ಜಿ ಪರಮೇಶ್ವರ್​ ಹೀಗೆ ಹೇಳಿದ್ದೇಕೆ?
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!