AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025 ಮೂಲಕ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡ್ತೀನಿ: ಕೆಎಲ್ ರಾಹುಲ್

KL Rahul: ಭಾರತದ ಪರ 72 ಟಿ20 ಪಂದ್ಯಗಳನ್ನಾಡಿರುವ ಕೆಎಲ್ ರಾಹುಲ್ 68 ಇನಿಂಗ್ಸ್​ಗಳಲ್ಲಿ ಒಟ್ಟು 2265 ರನ್ ಕಲೆಹಾಕಿದ್ದಾರೆ. ಈ ವೇಳೆ 2 ಶತಕ ಹಾಗೂ 22 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದೀಗ ಮತ್ತೆ ಭಾರತ ಟಿ20 ತಂಡದಲ್ಲಿ ಸ್ಥಾನ ಪಡೆಯುವ ವಿಶ್ವಾಸವನ್ನು ರಾಹುಲ್ ವ್ಯಕ್ತಪಡಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 12, 2024 | 12:31 PM

Share
ಕೆಎಲ್ ರಾಹುಲ್ ಭಾರತ ಟಿ20 ತಂಡದಿಂದ ಹೊರಬಿದ್ದು 2 ವರ್ಷಗಳೇ ಕಳೆದಿವೆ. 2022ರಲ್ಲಿ ಕೊನೆಯ ಬಾರಿ ಟೀಮ್ ಇಂಡಿಯಾ ಟಿ20 ತಂಡದಲ್ಲಿ ಕಾಣಿಸಿಕೊಂಡಿದ್ದ ಕನ್ನಡಿಗ ಇದೀಗ ಮತ್ತೆ ಬ್ಲೂ ಜೆರ್ಸಿಯಲ್ಲಿ ಕಾಣಿಸಿಕೊಳ್ಳಲು ಪಣತೊಟ್ಟಿದ್ದಾರೆ. ಅದು ಕೂಡ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಮೂಲಕ ಎಂಬುದು ವಿಶೇಷ.

ಕೆಎಲ್ ರಾಹುಲ್ ಭಾರತ ಟಿ20 ತಂಡದಿಂದ ಹೊರಬಿದ್ದು 2 ವರ್ಷಗಳೇ ಕಳೆದಿವೆ. 2022ರಲ್ಲಿ ಕೊನೆಯ ಬಾರಿ ಟೀಮ್ ಇಂಡಿಯಾ ಟಿ20 ತಂಡದಲ್ಲಿ ಕಾಣಿಸಿಕೊಂಡಿದ್ದ ಕನ್ನಡಿಗ ಇದೀಗ ಮತ್ತೆ ಬ್ಲೂ ಜೆರ್ಸಿಯಲ್ಲಿ ಕಾಣಿಸಿಕೊಳ್ಳಲು ಪಣತೊಟ್ಟಿದ್ದಾರೆ. ಅದು ಕೂಡ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಮೂಲಕ ಎಂಬುದು ವಿಶೇಷ.

1 / 5
ಐಪಿಎಲ್ 2025 ರಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ನಾನು ಮತ್ತೆ ಭಾರತ ಟಿ20 ತಂಡದಲ್ಲಿ ಸ್ಥಾನ ಪಡೆಯುವ ಗುರಿ ಹೊಂದಿದ್ದೇನೆ. ಹಾಗಾಗಿ ಈ ಬಾರಿಯ ಐಪಿಎಲ್​ನೊಂದಿಗೆ ನಾನು ಮತ್ತೆ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡುವ ವಿಶ್ವಾಸವಿದೆ ಎಂದು ಕೆಎಲ್ ರಾಹುಲ್ ಹೇಳಿದ್ದಾರೆ.

ಐಪಿಎಲ್ 2025 ರಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ನಾನು ಮತ್ತೆ ಭಾರತ ಟಿ20 ತಂಡದಲ್ಲಿ ಸ್ಥಾನ ಪಡೆಯುವ ಗುರಿ ಹೊಂದಿದ್ದೇನೆ. ಹಾಗಾಗಿ ಈ ಬಾರಿಯ ಐಪಿಎಲ್​ನೊಂದಿಗೆ ನಾನು ಮತ್ತೆ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡುವ ವಿಶ್ವಾಸವಿದೆ ಎಂದು ಕೆಎಲ್ ರಾಹುಲ್ ಹೇಳಿದ್ದಾರೆ.

2 / 5
ಸ್ವಲ್ಪ ಸಮಯದಿಂದ ನಾನು T20 ತಂಡದಿಂದ ಹೊರಗಿದ್ದೇನೆ. ತಂಡಕ್ಕೆ ಕಂಬ್ಯಾಕ್ ಮಾಡಲು ನಾನು ಏನು ಮಾಡಬೇಕೆಂದು ನನಗೆ ತಿಳಿದಿದೆ. ಹಾಗಾಗಿ, ಈ ಬಾರಿಯ ಐಪಿಎಲ್​ ಸೀಸನ್​ನಲ್ಲಿ ಅದ್ಭುತ ಪ್ರದರ್ಶನ ನೀಡಿ ಮತ್ತೆ ಭಾರತ ಟಿ20 ತಂಡದಲ್ಲಿ ಕಾಣಿಸಿಕೊಳ್ಳುತ್ತೇನೆ ಎಂದು ರಾಹುಲ್ ಹೇಳಿದ್ದಾರೆ.

ಸ್ವಲ್ಪ ಸಮಯದಿಂದ ನಾನು T20 ತಂಡದಿಂದ ಹೊರಗಿದ್ದೇನೆ. ತಂಡಕ್ಕೆ ಕಂಬ್ಯಾಕ್ ಮಾಡಲು ನಾನು ಏನು ಮಾಡಬೇಕೆಂದು ನನಗೆ ತಿಳಿದಿದೆ. ಹಾಗಾಗಿ, ಈ ಬಾರಿಯ ಐಪಿಎಲ್​ ಸೀಸನ್​ನಲ್ಲಿ ಅದ್ಭುತ ಪ್ರದರ್ಶನ ನೀಡಿ ಮತ್ತೆ ಭಾರತ ಟಿ20 ತಂಡದಲ್ಲಿ ಕಾಣಿಸಿಕೊಳ್ಳುತ್ತೇನೆ ಎಂದು ರಾಹುಲ್ ಹೇಳಿದ್ದಾರೆ.

3 / 5
ವಿಶೇಷ ಎಂದರೆ ಈ ಬಾರಿಯ ಐಪಿಎಲ್​ನಲ್ಲಿ ಕೆಎಲ್ ರಾಹುಲ್ ಯಾವ ತಂಡದ ಪರ ಕಣಕ್ಕಿಳಿಯಲಿದ್ದಾರೆ ಎಂಬುದು ಇನ್ನೂ ಸಹ ನಿರ್ಧಾರವಾಗಿಲ್ಲ. ಏಕೆಂದರೆ ಲಕ್ನೋ ಸೂಪರ್ ಜೈಂಟ್ಸ್ ತಂಡದಿಂದ ಹೊರಬಂದಿರುವ ಕೆಎಲ್​ಆರ್​ ಮುಂಬರುವ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿ ಐಪಿಎಲ್ ಸೀಸನ್-18 ರಲ್ಲಿ ರಾಹುಲ್ ಹೊಸ ತಂಡದ ಪರ ಕಣಕ್ಕಿಳಿಯುವುದು ಖಚಿತ.

ವಿಶೇಷ ಎಂದರೆ ಈ ಬಾರಿಯ ಐಪಿಎಲ್​ನಲ್ಲಿ ಕೆಎಲ್ ರಾಹುಲ್ ಯಾವ ತಂಡದ ಪರ ಕಣಕ್ಕಿಳಿಯಲಿದ್ದಾರೆ ಎಂಬುದು ಇನ್ನೂ ಸಹ ನಿರ್ಧಾರವಾಗಿಲ್ಲ. ಏಕೆಂದರೆ ಲಕ್ನೋ ಸೂಪರ್ ಜೈಂಟ್ಸ್ ತಂಡದಿಂದ ಹೊರಬಂದಿರುವ ಕೆಎಲ್​ಆರ್​ ಮುಂಬರುವ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿ ಐಪಿಎಲ್ ಸೀಸನ್-18 ರಲ್ಲಿ ರಾಹುಲ್ ಹೊಸ ತಂಡದ ಪರ ಕಣಕ್ಕಿಳಿಯುವುದು ಖಚಿತ.

4 / 5
ಇನ್ನು ಭಾರತದ ಪರ 72 ಟಿ20 ಪಂದ್ಯಗಳನ್ನಾಡಿರುವ ಕೆಎಲ್ ರಾಹುಲ್ 68 ಇನಿಂಗ್ಸ್​ಗಳಲ್ಲಿ ಒಟ್ಟು 2265 ರನ್ ಕಲೆಹಾಕಿದ್ದಾರೆ. ಈ ವೇಳೆ 2 ಶತಕ ಹಾಗೂ 22 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದೀಗ ಭಾರತ ಟಿ20 ತಂಡದಿಂದ ಹೊರಗುಳಿದಿರುವ ರಾಹುಲ್ ಮುಂಬರುವ ಐಪಿಎಲ್​ ಮೂಲಕ ಮತ್ತೆ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡಲಿದ್ದಾರಾ ಕಾದು ನೋಡಬೇಕಿದೆ.

ಇನ್ನು ಭಾರತದ ಪರ 72 ಟಿ20 ಪಂದ್ಯಗಳನ್ನಾಡಿರುವ ಕೆಎಲ್ ರಾಹುಲ್ 68 ಇನಿಂಗ್ಸ್​ಗಳಲ್ಲಿ ಒಟ್ಟು 2265 ರನ್ ಕಲೆಹಾಕಿದ್ದಾರೆ. ಈ ವೇಳೆ 2 ಶತಕ ಹಾಗೂ 22 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದೀಗ ಭಾರತ ಟಿ20 ತಂಡದಿಂದ ಹೊರಗುಳಿದಿರುವ ರಾಹುಲ್ ಮುಂಬರುವ ಐಪಿಎಲ್​ ಮೂಲಕ ಮತ್ತೆ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡಲಿದ್ದಾರಾ ಕಾದು ನೋಡಬೇಕಿದೆ.

5 / 5
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ