AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಟೀಮ್ ಇಂಡಿಯಾಗೆ ಎಂಟ್ರಿ: ತಲೆ ಕೆಳಗಾದ LSG ಮತ್ತು SRH ಲೆಕ್ಕಾಚಾರ

IPL 2025 Mega Auction: ಐಪಿಎಲ್ ಮೆಗಾ ಹರಾಜಿಗೂ ಮುನ್ನ ಒಟ್ಟು 6 ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳಬಹುದು. ಈ ಆರು ಪ್ಲೇಯರ್ಸ್​ಗಳಲ್ಲಿ ಒಬ್ಬರು ಅನ್​ಕ್ಯಾಪ್ಡ್ ಆಟಗಾರ ಇರಲೇಬೇಕು. ಅಂದರೆ ಇಲ್ಲಿ ರಾಷ್ಟ್ರೀಯ ತಂಡದ ಪರ ಆಡದ ಅಥವಾ ರಾಷ್ಟ್ರೀಯ ತಂಡದ ಪರ ಆಡಿ 5 ವರ್ಷ ಕಳೆದಿರುವ ಆಟಗಾರರನ್ನು ಅನ್​ಕ್ಯಾಪ್ಡ್ ಪ್ಲೇಯರ್ಸ್ ಎಂದು ಪರಿಗಣಿಸಲಾಗುತ್ತದೆ.

ಝಾಹಿರ್ ಯೂಸುಫ್
|

Updated on: Oct 07, 2024 | 10:20 AM

Share
ಬಾಂಗ್ಲಾದೇಶ್ ವಿರುದ್ಧದ ಮೊದಲ ಟಿ20 ಪಂದ್ಯದ ಮೂಲಕ ಯುವ ವೇಗಿ ಮಯಾಂಕ್ ಯಾದವ್ ಹಾಗೂ ಆಲ್​ರೌಂಡರ್ ನಿತೀಶ್ ರೆಡ್ಡಿ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿದ್ದಾರೆ. ಈ ಪಾದಾರ್ಪಣೆಯೊಂದಿಗೆ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಗಳ ಮೆಗಾ ಹರಾಜು ರಿಟೈನ್ ಲೆಕ್ಕಾಚಾರಗಳು ತಲೆ ಕೆಳಗಾಗಿದೆ.

ಬಾಂಗ್ಲಾದೇಶ್ ವಿರುದ್ಧದ ಮೊದಲ ಟಿ20 ಪಂದ್ಯದ ಮೂಲಕ ಯುವ ವೇಗಿ ಮಯಾಂಕ್ ಯಾದವ್ ಹಾಗೂ ಆಲ್​ರೌಂಡರ್ ನಿತೀಶ್ ರೆಡ್ಡಿ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿದ್ದಾರೆ. ಈ ಪಾದಾರ್ಪಣೆಯೊಂದಿಗೆ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಗಳ ಮೆಗಾ ಹರಾಜು ರಿಟೈನ್ ಲೆಕ್ಕಾಚಾರಗಳು ತಲೆ ಕೆಳಗಾಗಿದೆ.

1 / 5
ಏಕೆಂದರೆ ನಿತೀಶ್ ರೆಡ್ಡಿ ಅವರನ್ನು ಈ ಬಾರಿ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ತಂಡದಲ್ಲೇ ಉಳಿಸಿಕೊಳ್ಳುವ ಇರಾದೆಯಲ್ಲಿತ್ತು. ಆದರೀಗ ಟೀಮ್ ಇಂಡಿಯಾ ಪರ ಕಣಕ್ಕಿಳಿದಿರುವ ಕಾರಣ ಅವರನ್ನು ಅನ್​ಕ್ಯಾಪ್ಡ್ ಪಟ್ಟಿಯಲ್ಲಿ ಆಯ್ಕೆ ಮಾಡುವಂತಿಲ್ಲ. ಬದಲಾಗಿ ರಾಷ್ಟ್ರೀಯ ತಂಡದ ಆಟಗಾರ ಎಂದು ಪರಿಗಣಿಸಬೇಕಾಗುತ್ತದೆ.

ಏಕೆಂದರೆ ನಿತೀಶ್ ರೆಡ್ಡಿ ಅವರನ್ನು ಈ ಬಾರಿ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ತಂಡದಲ್ಲೇ ಉಳಿಸಿಕೊಳ್ಳುವ ಇರಾದೆಯಲ್ಲಿತ್ತು. ಆದರೀಗ ಟೀಮ್ ಇಂಡಿಯಾ ಪರ ಕಣಕ್ಕಿಳಿದಿರುವ ಕಾರಣ ಅವರನ್ನು ಅನ್​ಕ್ಯಾಪ್ಡ್ ಪಟ್ಟಿಯಲ್ಲಿ ಆಯ್ಕೆ ಮಾಡುವಂತಿಲ್ಲ. ಬದಲಾಗಿ ರಾಷ್ಟ್ರೀಯ ತಂಡದ ಆಟಗಾರ ಎಂದು ಪರಿಗಣಿಸಬೇಕಾಗುತ್ತದೆ.

2 / 5
ಹಾಗೆಯೇ ಲಕ್ನೋ ಸೂಪರ್ ಜೈಂಟ್ಸ್ ಪರ ಕಳೆದ ಸೀಸನ್​ನಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ್ದ ಮಯಾಂಕ್ ಯಾದವ್ ಕೂಡ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ರಿಟೈನ್ ಆಗುವ ಸಾಧ್ಯತೆಯಿತ್ತು. ಇದೀಗ ಟೀಮ್ ಇಂಡಿಯಾ ಮಯಾಂಕ್ ಕಣಕ್ಕಿಳಿದಿರುವ ಕಾರಣ ಅವರನ್ನು ಸಹ ರಾಷ್ಟ್ರೀಯ ತಂಡದ ಆಟಗಾರರ ಪಟ್ಟಿಯಲ್ಲಿ ರಿಟೈನ್ ಮಾಡಬೇಕಾಗುತ್ತದೆ.

ಹಾಗೆಯೇ ಲಕ್ನೋ ಸೂಪರ್ ಜೈಂಟ್ಸ್ ಪರ ಕಳೆದ ಸೀಸನ್​ನಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ್ದ ಮಯಾಂಕ್ ಯಾದವ್ ಕೂಡ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ರಿಟೈನ್ ಆಗುವ ಸಾಧ್ಯತೆಯಿತ್ತು. ಇದೀಗ ಟೀಮ್ ಇಂಡಿಯಾ ಮಯಾಂಕ್ ಕಣಕ್ಕಿಳಿದಿರುವ ಕಾರಣ ಅವರನ್ನು ಸಹ ರಾಷ್ಟ್ರೀಯ ತಂಡದ ಆಟಗಾರರ ಪಟ್ಟಿಯಲ್ಲಿ ರಿಟೈನ್ ಮಾಡಬೇಕಾಗುತ್ತದೆ.

3 / 5
ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ ಎಂದರೆ ಐಪಿಎಲ್ ನಿಯಮದ ಪ್ರಕಾರ, ಅನ್​ಕ್ಯಾಪ್ಡ್ ಆಟಗಾರರನ್ನು ಕೇವಲ 4 ಕೋಟಿ ರೂ.ಗೆ ತಂಡದಲ್ಲೇ ಉಳಿಸಿಕೊಳ್ಳಬಹುದು ಎಂಬುದು. ಆದರೀಗ ಮಯಾಂಕ್ ಯಾದವ್ ಹಾಗೂ ನಿತೀಶ್ ರೆಡ್ಡಿ ಟೀಮ್ ಇಂಡಿಯಾ ಪರ ಕಣಕ್ಕಿಳಿದಿರುವ ಕಾರಣ ಅವರ ಕನಿಷ್ಠ ರಿಟೈನ್ ಮೊತ್ತ 11 ಕೋಟಿ ರೂ.ಗೆ ಏರಿಕೆಯಾಗಿದೆ.

ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ ಎಂದರೆ ಐಪಿಎಲ್ ನಿಯಮದ ಪ್ರಕಾರ, ಅನ್​ಕ್ಯಾಪ್ಡ್ ಆಟಗಾರರನ್ನು ಕೇವಲ 4 ಕೋಟಿ ರೂ.ಗೆ ತಂಡದಲ್ಲೇ ಉಳಿಸಿಕೊಳ್ಳಬಹುದು ಎಂಬುದು. ಆದರೀಗ ಮಯಾಂಕ್ ಯಾದವ್ ಹಾಗೂ ನಿತೀಶ್ ರೆಡ್ಡಿ ಟೀಮ್ ಇಂಡಿಯಾ ಪರ ಕಣಕ್ಕಿಳಿದಿರುವ ಕಾರಣ ಅವರ ಕನಿಷ್ಠ ರಿಟೈನ್ ಮೊತ್ತ 11 ಕೋಟಿ ರೂ.ಗೆ ಏರಿಕೆಯಾಗಿದೆ.

4 / 5
ಇತ್ತ 4 ಕೋಟಿ ರೂ.ಗೆ ಯುವ ಆಟಗಾರರನ್ನು ಉಳಿಸಿಕೊಳ್ಳುವ ಯೋಜನೆಯಲ್ಲಿದ್ದ ಲಕ್ನೋ ಸೂಪರ್ ಜೈಂಟ್ಸ್​ ಹಾಗೂ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಗಳ ಲೆಕ್ಕಾಚಾರಗಳು ತಲೆ ಕೆಳಗಾಗಿದ್ದು, ಹೀಗಾಗಿ ಈ ಆಟಗಾರರನ್ನು ಮುಂಬರುವ ಐಪಿಎಲ್ ಮೆಗಾ ಹರಾಜಿಗೆ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಏಕೆಂದರೆ ಇವರಿಬ್ಬರನ್ನು ಉಳಿಸಿಕೊಳ್ಳಬೇಕಿದ್ದರೆ ತಲಾ ಕನಿಷ್ಠ 11 ಕೋಟಿ ರೂ. ನೀಡಲೇಬೇಕು. ಹೀಗಾಗಿಯೇ ಮಯಾಂಕ್ ಯಾದವ್ ಹಾಗೂ ನಿತೀಶ್ ರೆಡ್ಡಿ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

ಇತ್ತ 4 ಕೋಟಿ ರೂ.ಗೆ ಯುವ ಆಟಗಾರರನ್ನು ಉಳಿಸಿಕೊಳ್ಳುವ ಯೋಜನೆಯಲ್ಲಿದ್ದ ಲಕ್ನೋ ಸೂಪರ್ ಜೈಂಟ್ಸ್​ ಹಾಗೂ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಗಳ ಲೆಕ್ಕಾಚಾರಗಳು ತಲೆ ಕೆಳಗಾಗಿದ್ದು, ಹೀಗಾಗಿ ಈ ಆಟಗಾರರನ್ನು ಮುಂಬರುವ ಐಪಿಎಲ್ ಮೆಗಾ ಹರಾಜಿಗೆ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಏಕೆಂದರೆ ಇವರಿಬ್ಬರನ್ನು ಉಳಿಸಿಕೊಳ್ಳಬೇಕಿದ್ದರೆ ತಲಾ ಕನಿಷ್ಠ 11 ಕೋಟಿ ರೂ. ನೀಡಲೇಬೇಕು. ಹೀಗಾಗಿಯೇ ಮಯಾಂಕ್ ಯಾದವ್ ಹಾಗೂ ನಿತೀಶ್ ರೆಡ್ಡಿ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

5 / 5
Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್