AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಮಹೇಂದ್ರ ಸಿಂಗ್ ಧೋನಿಗೆ ಕೇವಲ 4 ಕೋಟಿ ರೂ.

IPL 2025 MS Dhoni: ಮಹೇಂದ್ರ ಸಿಂಗ್ ಧೋನಿ ಐಪಿಎಲ್ 2021 ರಲ್ಲಿ 15 ಕೋಟಿ ರೂ. ಪಡೆದಿದ್ದರು. ಇನ್ನು 2022 ರಲ್ಲಿ ಹರಾಜಿಗೂ ಮುನ್ನ 12 ಕೋಟಿ ರೂ.ನೊಂದಿಗೆ ಅವರು ಸಿಎಸ್​ಕೆ ತಂಡದಲ್ಲಿ ರಿಟೈನ್ ಆಗಿದ್ದರು. ಇದೀಗ ಮೆಗಾ ಹರಾಜಿಗೂ ಮುನ್ನ ಅನ್​ಕ್ಯಾಪ್ಡ್ ಪಟ್ಟಿಯಲ್ಲಿ ಧೋನಿ ರಿಟೈನ್ ಆಗಲಿದ್ದಾರೆ ಎಂದು ತಿಳಿದು ಬಂದಿದೆ.

ಝಾಹಿರ್ ಯೂಸುಫ್
|

Updated on: Oct 06, 2024 | 1:08 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18ರ ಮೆಗಾ ಹರಾಜಿಗಾಗಿ ಕೆಲ ನಿಯಮಗಳಲ್ಲಿ ಬದಲಾವಣೆ ತರಲಾಗಿದೆ. ಹೀಗೆ ಮಾಡಲಾದ ಬದಲಾವಣೆಗಳಲ್ಲಿ ಅನ್​ಕ್ಯಾಪ್ಡ್ ರೂಲ್ಸ್ ಕೂಡ ಒಂದು. ಅಂದರೆ ಈ ಹಿಂದೆಯಿದ್ದ ಅನ್​ಕ್ಯಾಪ್ಡ್ ಆಟಗಾರರ ನಿಯಮಗಳಲ್ಲಿ ಈ ಬಾರಿ ಮಾರ್ಪಾಡು ಮಾಡಲಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18ರ ಮೆಗಾ ಹರಾಜಿಗಾಗಿ ಕೆಲ ನಿಯಮಗಳಲ್ಲಿ ಬದಲಾವಣೆ ತರಲಾಗಿದೆ. ಹೀಗೆ ಮಾಡಲಾದ ಬದಲಾವಣೆಗಳಲ್ಲಿ ಅನ್​ಕ್ಯಾಪ್ಡ್ ರೂಲ್ಸ್ ಕೂಡ ಒಂದು. ಅಂದರೆ ಈ ಹಿಂದೆಯಿದ್ದ ಅನ್​ಕ್ಯಾಪ್ಡ್ ಆಟಗಾರರ ನಿಯಮಗಳಲ್ಲಿ ಈ ಬಾರಿ ಮಾರ್ಪಾಡು ಮಾಡಲಾಗಿದೆ.

1 / 6
ಈ ಹಿಂದೆ ರಾಷ್ಟ್ರೀಯ ತಂಡದ ಪರ ಆಡದ ಆಟಗಾರರನ್ನು ಮಾತ್ರ ಅನ್​ಕ್ಯಾಪ್ಡ್ ಪಟ್ಟಿಯಲ್ಲಿ ಆಯ್ಕೆ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಕಾಣಿಸಿಕೊಂಡು 5 ವರ್ಷ ಕಳೆದಿರುವ ಆಟಗಾರರನ್ನು ಸಹ ಅನ್​ಕ್ಯಾಪ್ಡ್​ ಆಟಗಾರರ ಪಟ್ಟಿಗೆ ಪರಿಗಣಿಸಬಹುದು.

ಈ ಹಿಂದೆ ರಾಷ್ಟ್ರೀಯ ತಂಡದ ಪರ ಆಡದ ಆಟಗಾರರನ್ನು ಮಾತ್ರ ಅನ್​ಕ್ಯಾಪ್ಡ್ ಪಟ್ಟಿಯಲ್ಲಿ ಆಯ್ಕೆ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಕಾಣಿಸಿಕೊಂಡು 5 ವರ್ಷ ಕಳೆದಿರುವ ಆಟಗಾರರನ್ನು ಸಹ ಅನ್​ಕ್ಯಾಪ್ಡ್​ ಆಟಗಾರರ ಪಟ್ಟಿಗೆ ಪರಿಗಣಿಸಬಹುದು.

2 / 6
ಇಂತಹದೊಂದು ನಿಯಮವು 2008 ರಲ್ಲಿ ಜಾರಿಯಲ್ಲಿತ್ತು. ಆದರೆ ಆ ಸಂದರ್ಭಗಳಲ್ಲಿ ಈ ನಿಯಮ ಬಳಕೆ ಬರದಿದ್ದ ಕಾರಣ ಅದನ್ನು ತೆಗೆದು ಹಾಕಲಾಗಿತ್ತು. ಇದೀಗ ಐಪಿಎಲ್ ಮೆಗಾ ಹರಾಜಿಗೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯ ಕೋರಿಕೆಯ ಮೇರೆಗೆ ಈ ನಿಯಮವನ್ನು ಮತ್ತೆ ಜಾರಿಗೊಳಿಸಲಾಗಿದೆ.

ಇಂತಹದೊಂದು ನಿಯಮವು 2008 ರಲ್ಲಿ ಜಾರಿಯಲ್ಲಿತ್ತು. ಆದರೆ ಆ ಸಂದರ್ಭಗಳಲ್ಲಿ ಈ ನಿಯಮ ಬಳಕೆ ಬರದಿದ್ದ ಕಾರಣ ಅದನ್ನು ತೆಗೆದು ಹಾಕಲಾಗಿತ್ತು. ಇದೀಗ ಐಪಿಎಲ್ ಮೆಗಾ ಹರಾಜಿಗೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯ ಕೋರಿಕೆಯ ಮೇರೆಗೆ ಈ ನಿಯಮವನ್ನು ಮತ್ತೆ ಜಾರಿಗೊಳಿಸಲಾಗಿದೆ.

3 / 6
ಮಹೇಂದ್ರ ಸಿಂಗ್ ಧೋನಿಯನ್ನು ಕಡಿಮೆ ಮೊತ್ತದಲ್ಲಿ ರಿಟೈನ್ ಮಾಡಿಕೊಳ್ಳಲು ಸಿಎಸ್​ಕೆ ಫ್ರಾಂಚೈಸಿಯು ಈ ನಿಯಮವನ್ನು ಜಾರಿಗೊಳಿಸುವಂತೆ ಆಗ್ರಹಿಸಿದೆ. ಏಕೆಂದರೆ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತರಾಗಿ 5 ವರ್ಷ ಕಳೆದಿದೆ. ಇದೀಗ ಅವರನ್ನು ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಗೆ ಪರಿಗಣಿಸಬಹುದು. ಈ ಮೂಲಕ ಕೇವಲ 4 ಕೋಟಿ ರೂ.ಗೆ ​ರಿಟೈನ್ ಮಾಡಿಕೊಳ್ಳಬಹುದು.

ಮಹೇಂದ್ರ ಸಿಂಗ್ ಧೋನಿಯನ್ನು ಕಡಿಮೆ ಮೊತ್ತದಲ್ಲಿ ರಿಟೈನ್ ಮಾಡಿಕೊಳ್ಳಲು ಸಿಎಸ್​ಕೆ ಫ್ರಾಂಚೈಸಿಯು ಈ ನಿಯಮವನ್ನು ಜಾರಿಗೊಳಿಸುವಂತೆ ಆಗ್ರಹಿಸಿದೆ. ಏಕೆಂದರೆ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತರಾಗಿ 5 ವರ್ಷ ಕಳೆದಿದೆ. ಇದೀಗ ಅವರನ್ನು ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಗೆ ಪರಿಗಣಿಸಬಹುದು. ಈ ಮೂಲಕ ಕೇವಲ 4 ಕೋಟಿ ರೂ.ಗೆ ​ರಿಟೈನ್ ಮಾಡಿಕೊಳ್ಳಬಹುದು.

4 / 6
ಅದರಂತೆ ಐಪಿಎಲ್ ಮೆಗಾ ಹರಾಜಿಗೂ ಮುನ್ನ ಮಹೇಂದ್ರ ಸಿಂಗ್ ಧೋನಿಯನ್ನು 4 ಕೋಟಿ ರೂ.ಗೆ ರಿಟೈನ್ ಮಾಡಿಕೊಂಡರೆ, ಸಿಎಸ್​ಕೆ ಫ್ರಾಂಚೈಸಿಯು ಹೆಚ್ಚಿನ ಹರಾಜು ಮೊತ್ತವನ್ನು ಉಳಿಸಿಕೊಳ್ಳಬಹುದು. ಹೀಗಾಗಿಯೇ ಈ ಬಾರಿ ಧೋನಿ ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ರಿಟೈನ್ ಆಗುವುದು ಖಚಿತ ಎನ್ನಲಾಗಿದೆ.

ಅದರಂತೆ ಐಪಿಎಲ್ ಮೆಗಾ ಹರಾಜಿಗೂ ಮುನ್ನ ಮಹೇಂದ್ರ ಸಿಂಗ್ ಧೋನಿಯನ್ನು 4 ಕೋಟಿ ರೂ.ಗೆ ರಿಟೈನ್ ಮಾಡಿಕೊಂಡರೆ, ಸಿಎಸ್​ಕೆ ಫ್ರಾಂಚೈಸಿಯು ಹೆಚ್ಚಿನ ಹರಾಜು ಮೊತ್ತವನ್ನು ಉಳಿಸಿಕೊಳ್ಳಬಹುದು. ಹೀಗಾಗಿಯೇ ಈ ಬಾರಿ ಧೋನಿ ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ರಿಟೈನ್ ಆಗುವುದು ಖಚಿತ ಎನ್ನಲಾಗಿದೆ.

5 / 6
ಈ ಬಗ್ಗೆ ಚರ್ಚಿಸಲೆಂದೇ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯ ಮಾಲೀಕರು ಇದೇ ತಿಂಗಳು ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಧೋನಿ ಕೂಡ ಭಾಗವಹಿಸಲಿದ್ದಾರೆ. ಈ ಮೀಟಿಂಗ್​ ಬಳಿಕ ಸಿಎಸ್​ಕೆ ತಂಡದ ರಿಟೈನ್ ಪಟ್ಟಿ ಹೊರಬೀಳುವ ಸಾಧ್ಯತೆಯಿದೆ. ಅದರಂತೆ ಮಹೇಂದ್ರ ಸಿಂಗ್ ಧೋನಿ ಈ ಬಾರಿ ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ಉಳಿದುಕೊಂಡರೆ, ಕಳೆದ ಬಾರಿಗಿಂತ 8 ಕೋಟಿ ರೂ. ಕಡಿಮೆ ಪಡೆಯಲಿದ್ದಾರೆ. ಅಂದರೆ ಕೇವಲ 4 ಕೋಟಿ ರೂ. ಮಾತ್ರ.

ಈ ಬಗ್ಗೆ ಚರ್ಚಿಸಲೆಂದೇ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯ ಮಾಲೀಕರು ಇದೇ ತಿಂಗಳು ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಧೋನಿ ಕೂಡ ಭಾಗವಹಿಸಲಿದ್ದಾರೆ. ಈ ಮೀಟಿಂಗ್​ ಬಳಿಕ ಸಿಎಸ್​ಕೆ ತಂಡದ ರಿಟೈನ್ ಪಟ್ಟಿ ಹೊರಬೀಳುವ ಸಾಧ್ಯತೆಯಿದೆ. ಅದರಂತೆ ಮಹೇಂದ್ರ ಸಿಂಗ್ ಧೋನಿ ಈ ಬಾರಿ ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ಉಳಿದುಕೊಂಡರೆ, ಕಳೆದ ಬಾರಿಗಿಂತ 8 ಕೋಟಿ ರೂ. ಕಡಿಮೆ ಪಡೆಯಲಿದ್ದಾರೆ. ಅಂದರೆ ಕೇವಲ 4 ಕೋಟಿ ರೂ. ಮಾತ್ರ.

6 / 6
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ