AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ಧೋನಿಯನ್ನು ಬ್ಯಾನ್ ಮಾಡಬೇಕಿತ್ತು: ವೀರೇಂದ್ರ ಸೆಹ್ವಾಗ್

IPL 2025: ಐಪಿಎಲ್ 2025 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಮಹೇಂದ್ರ ಸಿಂಗ್ ಧೋನಿ ಕಣಕ್ಕಿಳಿಯುವುದು ಬಹುತೇಕ ಖಚಿತ. ಏಕೆಂದರೆ ಧೋನಿಯನ್ನು ರಿಟೈನ್ ಮಾಡಿಕೊಳ್ಳಲು ಸಿಎಸ್​ಕೆ ಕೆಲ ನಿಯಮಗಳಲ್ಲಿ ಬದಲಾವಣೆ ಮಾಡುವಂತೆ ಬಿಸಿಸಿಐಗೆ ಮನವಿ ಮಾಡಿದೆ. ಅದರಂತೆ ಐಪಿಎಲ್ ಮೆಗಾ ಹರಾಜಿಗೂ ಮುನ್ನ ಧೋನಿಯನ್ನು ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ರಿಟೈನ್ ಮಾಡಿಕೊಳ್ಳುವ ಸಾದ್ಯತೆಯಿದೆ.

ಝಾಹಿರ್ ಯೂಸುಫ್
|

Updated on: Aug 24, 2024 | 9:23 AM

Share
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಯಶಸ್ವಿ ನಾಯಕ ಮಹೇಂದ್ರ ಸಿಂಗ್ ಧೋನಿಯನ್ನು ಐಪಿಎಲ್​ನಿಂದಲೇ ಬ್ಯಾನ್ ಮಾಡಬೇಕಿತ್ತು. ಇದರಿಂದ ಬೇರೆಯವರು ಪಾಠ ಕಲಿಯುತ್ತಿದ್ದರು. ಇಂತಹ ಅಚ್ಚರಿಯ ಹೇಳಿಕೆ ನೀಡಿದ್ದು ಮತ್ಯಾರೂ ಅಲ್ಲ, ಟೀಮ್ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್.

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಯಶಸ್ವಿ ನಾಯಕ ಮಹೇಂದ್ರ ಸಿಂಗ್ ಧೋನಿಯನ್ನು ಐಪಿಎಲ್​ನಿಂದಲೇ ಬ್ಯಾನ್ ಮಾಡಬೇಕಿತ್ತು. ಇದರಿಂದ ಬೇರೆಯವರು ಪಾಠ ಕಲಿಯುತ್ತಿದ್ದರು. ಇಂತಹ ಅಚ್ಚರಿಯ ಹೇಳಿಕೆ ನೀಡಿದ್ದು ಮತ್ಯಾರೂ ಅಲ್ಲ, ಟೀಮ್ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್.

1 / 6
ಅಷ್ಟಕ್ಕೂ ಧೋನಿಯನ್ನು ಸೆಹ್ವಾಗ್ ಬ್ಯಾನ್ ಮಾಡಬೇಕಿತ್ತು ಅಂದಿರುವುದು 2019ರಲ್ಲಿ ನಡೆದ ಘಟನೆಗೆ. 2019ರ ಐಪಿಎಲ್​ನಲ್ಲಿ ಸಿಎಸ್​ಕೆ ತಂಡವನ್ನು ಮುನ್ನಡೆಸಿದ್ದ ಧೋನಿ ಮೈದಾನಕ್ಕೆ ನುಗ್ಗಿ ಅಂಪೈರ್​ ಜೊತೆ ವಾಗ್ವಾದ ನಡೆಸಿದ್ದರು. ಕ್ರಿಕ್​ಬಝ್​ ಸಂದರ್ಶನದಲ್ಲಿ ಈ ಘಟನೆಯನ್ನು ಪ್ರಸ್ತಾಪಿಸಿ ಮಾತನಾಡಿರುವ ಸೆಹ್ವಾಗ್, ಅಂದು ಧೋನಿಯನ್ನು ಬ್ಯಾನ್ ಮಾಡಬೇಕಿತ್ತು ಅಂದಿದ್ದಾರೆ.

ಅಷ್ಟಕ್ಕೂ ಧೋನಿಯನ್ನು ಸೆಹ್ವಾಗ್ ಬ್ಯಾನ್ ಮಾಡಬೇಕಿತ್ತು ಅಂದಿರುವುದು 2019ರಲ್ಲಿ ನಡೆದ ಘಟನೆಗೆ. 2019ರ ಐಪಿಎಲ್​ನಲ್ಲಿ ಸಿಎಸ್​ಕೆ ತಂಡವನ್ನು ಮುನ್ನಡೆಸಿದ್ದ ಧೋನಿ ಮೈದಾನಕ್ಕೆ ನುಗ್ಗಿ ಅಂಪೈರ್​ ಜೊತೆ ವಾಗ್ವಾದ ನಡೆಸಿದ್ದರು. ಕ್ರಿಕ್​ಬಝ್​ ಸಂದರ್ಶನದಲ್ಲಿ ಈ ಘಟನೆಯನ್ನು ಪ್ರಸ್ತಾಪಿಸಿ ಮಾತನಾಡಿರುವ ಸೆಹ್ವಾಗ್, ಅಂದು ಧೋನಿಯನ್ನು ಬ್ಯಾನ್ ಮಾಡಬೇಕಿತ್ತು ಅಂದಿದ್ದಾರೆ.

2 / 6
2019ರ ಐಪಿಎಲ್​ ಪಂದ್ಯದಲ್ಲಿ ಸಿಎಸ್​ಕೆ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿತ್ತು. ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದ್ದ ಈ ಪಂದ್ಯದ ಕೊನೆಯ ಓವರ್​ನಲ್ಲಿ ಸಿಎಸ್​ಕೆ ತಂಡಕ್ಕೆ 18 ರನ್​ಗಳ ಅವಶ್ಯಕತೆಯಿತ್ತು. ಬೆನ್ ಸ್ಟೋಕ್ಸ್ ಎಸೆದ ಅಂತಿಮ ಓವರ್​ನ ಮೊದಲ ಮೂರು ಎಸೆತಗಳಲ್ಲಿ 9 ರನ್​ಗಳು ಮೂಡಿಬಂದಿದ್ದವು.

2019ರ ಐಪಿಎಲ್​ ಪಂದ್ಯದಲ್ಲಿ ಸಿಎಸ್​ಕೆ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿತ್ತು. ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದ್ದ ಈ ಪಂದ್ಯದ ಕೊನೆಯ ಓವರ್​ನಲ್ಲಿ ಸಿಎಸ್​ಕೆ ತಂಡಕ್ಕೆ 18 ರನ್​ಗಳ ಅವಶ್ಯಕತೆಯಿತ್ತು. ಬೆನ್ ಸ್ಟೋಕ್ಸ್ ಎಸೆದ ಅಂತಿಮ ಓವರ್​ನ ಮೊದಲ ಮೂರು ಎಸೆತಗಳಲ್ಲಿ 9 ರನ್​ಗಳು ಮೂಡಿಬಂದಿದ್ದವು.

3 / 6
4ನೇ ಎಸೆತವು ಫುಲ್ ಟಾಸ್ ರೂಪದಲ್ಲಿ ಮೂಡಿಬಂತು. ಲೆಗ್ ಅಂಪೈರ್ ನೋ ಬಾಲ್ ನೀಡಿರಲಿಲ್ಲ. ಇದರಿಂದ ಕುಪಿತಗೊಂಡ ಸಿಎಸ್​ಕೆ ತಂಡದ ನಾಯಕ ಮಹೇಂದ್ರ ಸಿಂಗ್ ಮೈದಾನಕ್ಕೆ ಆಗಮಿಸಿ ಅಂಪೈರ್ ಜೊತೆ ವಾಗ್ವಾದ ನಡೆಸಿದರು. ಇದರಿಂದಾಗಿ ಕೆಲ ಹೊತ್ತು ಪಂದ್ಯ ಸ್ಥಗಿತಗೊಂಡಿತ್ತು. ಅಂದು ಮೈದಾನಕ್ಕೆ ಬಂದು ಅಂಪೈರ್ ಜೊತೆ ಮಾತಿನ ಚಕಮಕಿ ನಡೆಸಿದ ಧೋನಿಗೆ ಪಂದ್ಯ ಶುಲ್ಕದ ಶೇ.50 ರಷ್ಟು ದಂಡ ವಿಧಿಸಲಾಗಿತ್ತು.

4ನೇ ಎಸೆತವು ಫುಲ್ ಟಾಸ್ ರೂಪದಲ್ಲಿ ಮೂಡಿಬಂತು. ಲೆಗ್ ಅಂಪೈರ್ ನೋ ಬಾಲ್ ನೀಡಿರಲಿಲ್ಲ. ಇದರಿಂದ ಕುಪಿತಗೊಂಡ ಸಿಎಸ್​ಕೆ ತಂಡದ ನಾಯಕ ಮಹೇಂದ್ರ ಸಿಂಗ್ ಮೈದಾನಕ್ಕೆ ಆಗಮಿಸಿ ಅಂಪೈರ್ ಜೊತೆ ವಾಗ್ವಾದ ನಡೆಸಿದರು. ಇದರಿಂದಾಗಿ ಕೆಲ ಹೊತ್ತು ಪಂದ್ಯ ಸ್ಥಗಿತಗೊಂಡಿತ್ತು. ಅಂದು ಮೈದಾನಕ್ಕೆ ಬಂದು ಅಂಪೈರ್ ಜೊತೆ ಮಾತಿನ ಚಕಮಕಿ ನಡೆಸಿದ ಧೋನಿಗೆ ಪಂದ್ಯ ಶುಲ್ಕದ ಶೇ.50 ರಷ್ಟು ದಂಡ ವಿಧಿಸಲಾಗಿತ್ತು.

4 / 6
ಈ ಘಟನೆಯ ಬಗ್ಗೆ ಮಾತನಾಡಿದ ವೀರೇಂದ್ರ ಸೆಹ್ವಾಗ್, ಅಂದು ಧೋನಿಯ ನಡೆಯನ್ನು ಗಂಭೀರವಾಗಿ ತೆಗೆದುಕೊಳ್ಳಲಿಲ್ಲ. ಇದರಿಂದ ಅವರು ಸುಲಭವಾಗಿ ಹೊರಬಂದರು. ನನ್ನ ಪ್ರಕಾರ ಧೋನಿಯನ್ನು ಎರಡು ಮೂರು ಪಂದ್ಯಗಳಿಂದ ಬ್ಯಾನ್ ಮಾಡಬೇಕಿತ್ತು. ಏಕೆಂದರೆ ಧೋನಿ ಮಾಡಿರುವುದನ್ನು, ನಾಳೆ ಇನ್ನೊಬ್ಬ ನಾಯಕ ಮಾಡಬಹುದು.

ಈ ಘಟನೆಯ ಬಗ್ಗೆ ಮಾತನಾಡಿದ ವೀರೇಂದ್ರ ಸೆಹ್ವಾಗ್, ಅಂದು ಧೋನಿಯ ನಡೆಯನ್ನು ಗಂಭೀರವಾಗಿ ತೆಗೆದುಕೊಳ್ಳಲಿಲ್ಲ. ಇದರಿಂದ ಅವರು ಸುಲಭವಾಗಿ ಹೊರಬಂದರು. ನನ್ನ ಪ್ರಕಾರ ಧೋನಿಯನ್ನು ಎರಡು ಮೂರು ಪಂದ್ಯಗಳಿಂದ ಬ್ಯಾನ್ ಮಾಡಬೇಕಿತ್ತು. ಏಕೆಂದರೆ ಧೋನಿ ಮಾಡಿರುವುದನ್ನು, ನಾಳೆ ಇನ್ನೊಬ್ಬ ನಾಯಕ ಮಾಡಬಹುದು.

5 / 6
ಇಂತಹ ಘಟನೆಗಳನ್ನು ಗಂಭೀರವಾಗಿ ಪರಿಗಣಿಸದಿದ್ದರೆ ಅಂಪೈರ್​ಗಳ ಮಾಲ್ಯವೇನು? ಎಂದು ವೀರೇಂದ್ರ ಸೆಹ್ವಾಗ್ ಪ್ರಶ್ನಿಸಿದ್ದಾರೆ. ಹೀಗಾಗಿಯೇ ಮೈದಾನಕ್ಕೆ ನುಗ್ಗಿ ಅಂಪೈರ್ ಜೊತೆ ವಾಗ್ವಾದ ನಡೆಸಿದ್ದ ಸಿಎಸ್​ಕೆ ನಾಯಕನನ್ನು ಕೆಲ ಪಂದ್ಯಗಳಿಂದ ಅಮಾನತುಗೊಳಿಸಬೇಕಾಗಿತ್ತು ಎಂದು ಸೆಹ್ವಾಗ್ ಅಭಿಪ್ರಾಯಪಟ್ಟಿದ್ದಾರೆ.

ಇಂತಹ ಘಟನೆಗಳನ್ನು ಗಂಭೀರವಾಗಿ ಪರಿಗಣಿಸದಿದ್ದರೆ ಅಂಪೈರ್​ಗಳ ಮಾಲ್ಯವೇನು? ಎಂದು ವೀರೇಂದ್ರ ಸೆಹ್ವಾಗ್ ಪ್ರಶ್ನಿಸಿದ್ದಾರೆ. ಹೀಗಾಗಿಯೇ ಮೈದಾನಕ್ಕೆ ನುಗ್ಗಿ ಅಂಪೈರ್ ಜೊತೆ ವಾಗ್ವಾದ ನಡೆಸಿದ್ದ ಸಿಎಸ್​ಕೆ ನಾಯಕನನ್ನು ಕೆಲ ಪಂದ್ಯಗಳಿಂದ ಅಮಾನತುಗೊಳಿಸಬೇಕಾಗಿತ್ತು ಎಂದು ಸೆಹ್ವಾಗ್ ಅಭಿಪ್ರಾಯಪಟ್ಟಿದ್ದಾರೆ.

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ