AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಧೋನಿಗಾಗಿ IPL ನಿಯಮವನ್ನೇ ಬದಲಿಸಲಿದೆ ಬಿಸಿಸಿಐ

IPL 2025: ಐಪಿಎಲ್ ಮೆಗಾ ಹರಾಜಿಗೂ ಮುನ್ನ ಕೆಲ ನಿಯಮಗಳಲ್ಲಿ ಬದಲಾವಣೆಗಳು ಕಂಡು ಬರುವುದು ಬಹುತೇಕ ಖಚಿತ. ಈ ನಿಯಮಗಳಲ್ಲಿ ಐಪಿಎಲ್ 2008ರ ನಿಯಮವೊಂದು ಮತ್ತೆ ಜಾರಿಗೆ ಬರುವ ಸಾಧ್ಯತೆ ಹೆಚ್ಚಿದೆ. ಅದು ಕೂಡ ಮಹೇಂದ್ರ ಸಿಂಗ್ ಧೋನಿಗಾಗಿ ಈ ರೂಲ್ಸ್ ಅನ್ನು ಮತ್ತೆ ಜಾರಿಗೊಳಿಸಲು ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಆಗ್ರಹಿಸಿದೆ.

ಝಾಹಿರ್ ಯೂಸುಫ್
|

Updated on: Aug 17, 2024 | 10:54 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ರಲ್ಲಿ ಮಹೇಂದ್ರ ಸಿಂಗ್ ಧೋನಿ ಆಡಲಿದ್ದಾರಾ? ಈ ಪ್ರಶ್ನೆಗೆ ಸದ್ಯದ ಉತ್ತರ ಖಂಡಿತವಾಗಿಯೂ ಆಡ್ತಾರೆ. ಏಕೆಂದರೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಧೋನಿಗಾಗಿಯೇ ಐಪಿಎಲ್​ ನಿಯಮದಲ್ಲಿ ಮಹತ್ವದ ಬದಲಾವಣೆ ತರಲು ಬಿಸಿಸಿಐಗೆ ಮನವಿ ಮಾಡಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ರಲ್ಲಿ ಮಹೇಂದ್ರ ಸಿಂಗ್ ಧೋನಿ ಆಡಲಿದ್ದಾರಾ? ಈ ಪ್ರಶ್ನೆಗೆ ಸದ್ಯದ ಉತ್ತರ ಖಂಡಿತವಾಗಿಯೂ ಆಡ್ತಾರೆ. ಏಕೆಂದರೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಧೋನಿಗಾಗಿಯೇ ಐಪಿಎಲ್​ ನಿಯಮದಲ್ಲಿ ಮಹತ್ವದ ಬದಲಾವಣೆ ತರಲು ಬಿಸಿಸಿಐಗೆ ಮನವಿ ಮಾಡಿದೆ.

1 / 6
ಈ ಮನವಿಯಂತೆ ಮಹೇಂದ್ರ ಸಿಂಗ್ ಧೋನಿಯನ್ನು ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ರಿಟೈನ್ ಮಾಡಿಕೊಳ್ಳಲು ಅವಕಾಶ ನೀಡಬೇಕೆಂದು ಸಿಎಸ್​ಕೆ ಕೋರಿದೆ. ಈ ಕೋರಿಕೆಯನ್ನು ಈಡೇರಿಸಲು ಬಿಸಿಸಿಐ ಕೂಡ ಮುಂದಾಗಿದೆ ಎಂಬ ಸುದ್ದಿಯೊಂದಿಗೆ ಇದೀಗ ಹೊರಬಿದ್ದಿದೆ.

ಈ ಮನವಿಯಂತೆ ಮಹೇಂದ್ರ ಸಿಂಗ್ ಧೋನಿಯನ್ನು ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ರಿಟೈನ್ ಮಾಡಿಕೊಳ್ಳಲು ಅವಕಾಶ ನೀಡಬೇಕೆಂದು ಸಿಎಸ್​ಕೆ ಕೋರಿದೆ. ಈ ಕೋರಿಕೆಯನ್ನು ಈಡೇರಿಸಲು ಬಿಸಿಸಿಐ ಕೂಡ ಮುಂದಾಗಿದೆ ಎಂಬ ಸುದ್ದಿಯೊಂದಿಗೆ ಇದೀಗ ಹೊರಬಿದ್ದಿದೆ.

2 / 6
ಐಪಿಎಲ್ 2008ರ ನಿಯಮದ ಪ್ರಕಾರ ಯಾವುದಾದರೂ ಆಟಗಾರ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿಯಾದ 5 ವರ್ಷಗಳ ಬಳಿಕ ಆತನನ್ನು ಅನ್​ಕ್ಯಾಪ್ಡ್ ಪ್ಲೇಯರ್ಸ್ ಪಟ್ಟಿಗೆ ಪರಿಗಣಿಸಬಹುದು. ಆದರೆ ಈ ನಿಯಮವು ಬಳಕೆಗೆ ಬಾರದ ಕಾರಣ 2021 ರಲ್ಲಿ ರದ್ದುಗೊಳಿಸಲಾಗಿತ್ತು. ಇದೀಗ ಇದೇ ನಿಯಮವನ್ನು ಜಾರಿಗೊಳಿಸುವಂತೆ ಸಿಎಸ್​ಕೆ ಫ್ರಾಂಚೈಸಿ ಮನವಿ ಮಾಡಿದೆ.

ಐಪಿಎಲ್ 2008ರ ನಿಯಮದ ಪ್ರಕಾರ ಯಾವುದಾದರೂ ಆಟಗಾರ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿಯಾದ 5 ವರ್ಷಗಳ ಬಳಿಕ ಆತನನ್ನು ಅನ್​ಕ್ಯಾಪ್ಡ್ ಪ್ಲೇಯರ್ಸ್ ಪಟ್ಟಿಗೆ ಪರಿಗಣಿಸಬಹುದು. ಆದರೆ ಈ ನಿಯಮವು ಬಳಕೆಗೆ ಬಾರದ ಕಾರಣ 2021 ರಲ್ಲಿ ರದ್ದುಗೊಳಿಸಲಾಗಿತ್ತು. ಇದೀಗ ಇದೇ ನಿಯಮವನ್ನು ಜಾರಿಗೊಳಿಸುವಂತೆ ಸಿಎಸ್​ಕೆ ಫ್ರಾಂಚೈಸಿ ಮನವಿ ಮಾಡಿದೆ.

3 / 6
ಮಹೇಂದ್ರ ಸಿಂಗ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿ 5 ವರ್ಷ ಆಗಿರುವ ಕಾರಣ ಈ ನಿಯಮವನ್ನು ಜಾರಿಗೊಳಿಸುವಂತೆ ಸಿಎಸ್​ಕೆ ಆಗ್ರಹಿಸಿದೆ. ಅದರಂತೆ ಈ ನಿಯಮ ಜಾರಿಯಾದರೆ ಧೋನಿಯನ್ನು ಕಡಿಮೆ ಮೊತ್ತ ನೀಡಿ ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ತಂಡದಲ್ಲೇ ಉಳಿಸಿಕೊಳ್ಳಬಹುದು.

ಮಹೇಂದ್ರ ಸಿಂಗ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿ 5 ವರ್ಷ ಆಗಿರುವ ಕಾರಣ ಈ ನಿಯಮವನ್ನು ಜಾರಿಗೊಳಿಸುವಂತೆ ಸಿಎಸ್​ಕೆ ಆಗ್ರಹಿಸಿದೆ. ಅದರಂತೆ ಈ ನಿಯಮ ಜಾರಿಯಾದರೆ ಧೋನಿಯನ್ನು ಕಡಿಮೆ ಮೊತ್ತ ನೀಡಿ ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ತಂಡದಲ್ಲೇ ಉಳಿಸಿಕೊಳ್ಳಬಹುದು.

4 / 6
ಅಂದರೆ ಮಹೇಂದ್ರ ಸಿಂಗ್ ಧೋನಿಯನ್ನು ಸಿಎಸ್​ಕೆ ಕಳೆದ ಸೀಸನ್​ ಹರಾಜಿನ 12 ಕೋಟಿ ರೂ. ನೀಡಿ ಉಳಿಸಿಕೊಂಡಿತ್ತು. ಆದರೆ ಈ ಬಾರಿ ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ಉಳಿಸಿಕೊಂಡರೆ ಕೇವಲ 4 ಕೋಟಿ ರೂ. ಮಾತ್ರ ನೀಡಿದರೆ ಸಾಕು. ಇತ್ತ ಧೋನಿಯನ್ನು ಅನ್​ಕ್ಯಾಪ್ಡ್​ ಪಟ್ಟಿಯಲ್ಲಿ ಉಳಿಸಿಕೊಂಡರೆ, ಮತ್ತೋರ್ವ ರಾಷ್ಟ್ರೀಯ ಆಟಗಾರನನ್ನು ದೊಡ್ಡ ಮೊತ್ತ ನೀಡಿ ಉಳಿಸಿಕೊಳ್ಳುವ ಅವಕಾಶ ಸಿಎಸ್​ಕೆ ತಂಡಕ್ಕೆ ದೊರೆಯಲಿದೆ.

ಅಂದರೆ ಮಹೇಂದ್ರ ಸಿಂಗ್ ಧೋನಿಯನ್ನು ಸಿಎಸ್​ಕೆ ಕಳೆದ ಸೀಸನ್​ ಹರಾಜಿನ 12 ಕೋಟಿ ರೂ. ನೀಡಿ ಉಳಿಸಿಕೊಂಡಿತ್ತು. ಆದರೆ ಈ ಬಾರಿ ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ಉಳಿಸಿಕೊಂಡರೆ ಕೇವಲ 4 ಕೋಟಿ ರೂ. ಮಾತ್ರ ನೀಡಿದರೆ ಸಾಕು. ಇತ್ತ ಧೋನಿಯನ್ನು ಅನ್​ಕ್ಯಾಪ್ಡ್​ ಪಟ್ಟಿಯಲ್ಲಿ ಉಳಿಸಿಕೊಂಡರೆ, ಮತ್ತೋರ್ವ ರಾಷ್ಟ್ರೀಯ ಆಟಗಾರನನ್ನು ದೊಡ್ಡ ಮೊತ್ತ ನೀಡಿ ಉಳಿಸಿಕೊಳ್ಳುವ ಅವಕಾಶ ಸಿಎಸ್​ಕೆ ತಂಡಕ್ಕೆ ದೊರೆಯಲಿದೆ.

5 / 6
ಇಂತಹದೊಂದು ಪ್ಲ್ಯಾನ್ ರೂಪಿಸಿಯೇ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಹಳೆಯ ನಿಯಮವನ್ನು ಜಾರಿಗೆ ತರುವಂತೆ ಬಿಸಿಸಿಐಗೆ ಮನವಿ ಮಾಡಿದೆ. ಅತ್ತ ಬಿಸಿಸಿಐ ಕೂಡ ಹಳೆಯ ನಿಯಮವನ್ನು ಜಾರಿಗೆ ತರಲು ಸಜ್ಜಾಗಿದೆ ಎಂದು ವರದಿಯಾಗಿದೆ. ಹೀಗಾಗಿ ಮುಂಬರುವ ಸೀಸನ್​ ಹರಾಜಿಗೂ ಮುನ್ನ ಧೋನಿಯನ್ನು ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ಸಿಎಸ್​ಕೆ ಉಳಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

ಇಂತಹದೊಂದು ಪ್ಲ್ಯಾನ್ ರೂಪಿಸಿಯೇ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಹಳೆಯ ನಿಯಮವನ್ನು ಜಾರಿಗೆ ತರುವಂತೆ ಬಿಸಿಸಿಐಗೆ ಮನವಿ ಮಾಡಿದೆ. ಅತ್ತ ಬಿಸಿಸಿಐ ಕೂಡ ಹಳೆಯ ನಿಯಮವನ್ನು ಜಾರಿಗೆ ತರಲು ಸಜ್ಜಾಗಿದೆ ಎಂದು ವರದಿಯಾಗಿದೆ. ಹೀಗಾಗಿ ಮುಂಬರುವ ಸೀಸನ್​ ಹರಾಜಿಗೂ ಮುನ್ನ ಧೋನಿಯನ್ನು ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ಸಿಎಸ್​ಕೆ ಉಳಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

6 / 6
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ