AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐದನೇ ಬಾರಿ ಅರ್ಜುನ್ ತೆಂಡೂಲ್ಕರ್ ಕೈ ಹಿಡಿದ ಮುಂಬೈ ಇಂಡಿಯನ್ಸ್

IPL 2025: ಐಪಿಎಲ್ 2021 ರಿಂದ ಅರ್ಜುನ್ ತೆಂಡೂಲ್ಕರ್ ಮುಂಬೈ ಇಂಡಿಯನ್ಸ್ ತಂಡದ ಭಾಗವಾಗಿದ್ದಾರೆ. ಇದರ ನಡುವೆ 5 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಸಚಿನ್ ತೆಂಡೂಲ್ಕರ್ ಅವರ ಪುತ್ರ 3 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 26, 2024 | 1:00 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಮೆಗಾ ಹರಾಜಿನಲ್ಲಿ 182 ಆಟಗಾರರು ಬಿಕರಿಯಾಗಿದ್ದಾರೆ. ಇವರಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಪುತ್ರ  ಅರ್ಜುನ್ ತೆಂಡೂಲ್ಕರ್ ಕೂಡ ಸೇರಿದ್ದಾರೆ. ಈ ಬಾರಿ ಕೂಡ ಅರ್ಜುನ್ ಅವರ ಕೈ ಹಿಡಿದದ್ದು ಮುಂಬೈ ಇಂಡಿಯನ್ಸ್ ಎಂಬುದು ವಿಶೇಷ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಮೆಗಾ ಹರಾಜಿನಲ್ಲಿ 182 ಆಟಗಾರರು ಬಿಕರಿಯಾಗಿದ್ದಾರೆ. ಇವರಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಕೂಡ ಸೇರಿದ್ದಾರೆ. ಈ ಬಾರಿ ಕೂಡ ಅರ್ಜುನ್ ಅವರ ಕೈ ಹಿಡಿದದ್ದು ಮುಂಬೈ ಇಂಡಿಯನ್ಸ್ ಎಂಬುದು ವಿಶೇಷ.

1 / 5
ಪ್ರತಿ ಸೀಸನ್​​ನಂತೆ ಈ ಬಾರಿ ಕೂಡ ಕನಿಷ್ಠ ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡ ಅರ್ಜುನ್ ತೆಂಡೂಲ್ಕರ್ ಅವರನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಖರೀದಿಸಿದೆ. ವಿಶೇಷ ಎಂದರೆ ಕಳೆದ 5 ಸೀಸನ್​​ಗಳಿಂದ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಹೊರತುಪಡಿಸಿ ಜೂನಿಯರ್ ತೆಂಡೂಲ್ಕರ್ ಅವರನ್ನು ಯಾವುದೇ ತಂಡ ಖರೀದಿಸಿಲ್ಲ.

ಪ್ರತಿ ಸೀಸನ್​​ನಂತೆ ಈ ಬಾರಿ ಕೂಡ ಕನಿಷ್ಠ ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡ ಅರ್ಜುನ್ ತೆಂಡೂಲ್ಕರ್ ಅವರನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಖರೀದಿಸಿದೆ. ವಿಶೇಷ ಎಂದರೆ ಕಳೆದ 5 ಸೀಸನ್​​ಗಳಿಂದ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಹೊರತುಪಡಿಸಿ ಜೂನಿಯರ್ ತೆಂಡೂಲ್ಕರ್ ಅವರನ್ನು ಯಾವುದೇ ತಂಡ ಖರೀದಿಸಿಲ್ಲ.

2 / 5
ಇನ್ನು ಮುಂಬೈ ಇಂಡಿಯನ್ಸ್ ಹೊರತುಪಡಿಸಿ ಅರ್ಜುನ್ ತೆಂಡೂಲ್ಕರ್​​ಗಾಗಿ ಬಿಡ್ ಮಾಡಿದ ಏಕೈಕ ತಂಡವೆಂದರೆ ಗುಜರಾತ್ ಟೈಟಾನ್ಸ್. 2022ರ ಹರಾಜಿನಲ್ಲಿ 20 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಅರ್ಜುನ್ ತೆಂಡೂಲ್ಕರ್ ಅವರ ಮೊತ್ತವನ್ನು ಗುಜರಾತ್ ಟೈಟಾನ್ಸ್ 25 ಲಕ್ಷ ರೂ.ಗೆ ಏರಿಸಿದ್ದರು. ಇದಾದ ಬಳಿಕ 30 ಲಕ್ಷ ರೂ.ಗೆ ಮುಂಬೈ ಇಂಡಿಯನ್ಸ್ ಖರೀದಿಸಿತ್ತು.

ಇನ್ನು ಮುಂಬೈ ಇಂಡಿಯನ್ಸ್ ಹೊರತುಪಡಿಸಿ ಅರ್ಜುನ್ ತೆಂಡೂಲ್ಕರ್​​ಗಾಗಿ ಬಿಡ್ ಮಾಡಿದ ಏಕೈಕ ತಂಡವೆಂದರೆ ಗುಜರಾತ್ ಟೈಟಾನ್ಸ್. 2022ರ ಹರಾಜಿನಲ್ಲಿ 20 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಅರ್ಜುನ್ ತೆಂಡೂಲ್ಕರ್ ಅವರ ಮೊತ್ತವನ್ನು ಗುಜರಾತ್ ಟೈಟಾನ್ಸ್ 25 ಲಕ್ಷ ರೂ.ಗೆ ಏರಿಸಿದ್ದರು. ಇದಾದ ಬಳಿಕ 30 ಲಕ್ಷ ರೂ.ಗೆ ಮುಂಬೈ ಇಂಡಿಯನ್ಸ್ ಖರೀದಿಸಿತ್ತು.

3 / 5
ಈ ಬಾರಿ 30 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಅರ್ಜುನ್ ತೆಂಡೂಲ್ಕರ್ ಮೊದಲ ಸುತ್ತಿನಲ್ಲಿ ಮಾರಾಟವಾಗಿರಲಿಲ್ಲ. ಆದರೆ ಅಂತಿಮ ಸುತ್ತಿನಲ್ಲಿ ಅರ್ಜುನ್ ಅವರ ಖರೀದಿಗೆ ಮುಂಬೈ ಇಂಡಿಯನ್ಸ್ ಆಸಕ್ತಿ ತೋರಿಸಿತು. ಅದರಂತೆ ಬೇಸ್ ಪ್ರೈಸ್​ಗೆ ಐದನೇ ಬಾರಿ ಅರ್ಜುನ್ ತೆಂಡೂಲ್ಕರ್ ಮುಂಬೈ ಇಂಡಿಯನ್ಸ್ ಪಾಲಾಗಿ ದ್ದಾರೆ.

ಈ ಬಾರಿ 30 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಅರ್ಜುನ್ ತೆಂಡೂಲ್ಕರ್ ಮೊದಲ ಸುತ್ತಿನಲ್ಲಿ ಮಾರಾಟವಾಗಿರಲಿಲ್ಲ. ಆದರೆ ಅಂತಿಮ ಸುತ್ತಿನಲ್ಲಿ ಅರ್ಜುನ್ ಅವರ ಖರೀದಿಗೆ ಮುಂಬೈ ಇಂಡಿಯನ್ಸ್ ಆಸಕ್ತಿ ತೋರಿಸಿತು. ಅದರಂತೆ ಬೇಸ್ ಪ್ರೈಸ್​ಗೆ ಐದನೇ ಬಾರಿ ಅರ್ಜುನ್ ತೆಂಡೂಲ್ಕರ್ ಮುಂಬೈ ಇಂಡಿಯನ್ಸ್ ಪಾಲಾಗಿ ದ್ದಾರೆ.

4 / 5
2021 ರಿಂದ ಐಪಿಎಲ್​​​ನಲ್ಲಿರುವ ಅರ್ಜುನ್ ತೆಂಡೂಲ್ಕರ್ ಮೊದಲೆರಡು ಸೀಸನ್​ಗಳಲ್ಲಿ ಮುಂಬ ಇಂಡಿಯನ್ಸ್ ಪರ ಬೆಂಚ್ ಕಾದಿದ್ದರು. ಇನ್ನು 2023 ಮತ್ತು 2024 ರಲ್ಲಿ ಒಟ್ಟು 5 ಪಂದ್ಯಗಳನ್ನಾಡಿರುವ ಜೂನಿಯರ್ ತೆಂಡೂಲ್ಕರ್ 3 ವಿಕೆಟ್ ಕಬಳಿಸಿದ್ದಾರೆ. ಇದೀಗ ಮತ್ತೆ ಮುಂಬೈ ತಂಡಕ್ಕೆ ಆಯ್ಕೆಯಾಗಿರುವ ಜೂನಿಯರ್ ತೆಂಡೂಲ್ಕರ್ ಈ ಬಾರಿ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರಾ ಕಾದು ನೋಡಬೇಕಿದೆ.

2021 ರಿಂದ ಐಪಿಎಲ್​​​ನಲ್ಲಿರುವ ಅರ್ಜುನ್ ತೆಂಡೂಲ್ಕರ್ ಮೊದಲೆರಡು ಸೀಸನ್​ಗಳಲ್ಲಿ ಮುಂಬ ಇಂಡಿಯನ್ಸ್ ಪರ ಬೆಂಚ್ ಕಾದಿದ್ದರು. ಇನ್ನು 2023 ಮತ್ತು 2024 ರಲ್ಲಿ ಒಟ್ಟು 5 ಪಂದ್ಯಗಳನ್ನಾಡಿರುವ ಜೂನಿಯರ್ ತೆಂಡೂಲ್ಕರ್ 3 ವಿಕೆಟ್ ಕಬಳಿಸಿದ್ದಾರೆ. ಇದೀಗ ಮತ್ತೆ ಮುಂಬೈ ತಂಡಕ್ಕೆ ಆಯ್ಕೆಯಾಗಿರುವ ಜೂನಿಯರ್ ತೆಂಡೂಲ್ಕರ್ ಈ ಬಾರಿ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರಾ ಕಾದು ನೋಡಬೇಕಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ