AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಮುಂಬೈ ಇಂಡಿಯನ್ಸ್ ಉಳಿಸಿಕೊಳ್ಳುವ ನಾಲ್ವರು ಆಟಗಾರರು ಇವರಂತೆ..!

IPL 2025: ಐಪಿಎಲ್ ಮೆಗಾ ಹರಾಜಿಗೂ ಮುನ್ನ ಪ್ರತಿ ಫ್ರಾಂಚೈಸಿಗಳಿಗೆ ಗರಿಷ್ಠ 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಅವಕಾಶವಿದೆ. ಅದರಂತೆ ಇದೀಗ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ನಾಲ್ವರು ಆಟಗಾರರ ಪಟ್ಟಿಯನ್ನು ಸಿದ್ಧಪಡಿಸಿಕೊಂಡಿದೆ ಎಂದು ತಿಳಿದು ಬಂದಿದೆ. ಆ ನಾಲ್ವರು ಆಟಗಾರರು ಯಾರೆಲ್ಲಾ ಎಂಬುದರ ಮಾಹಿತಿ ಇಲ್ಲಿದೆ...

ಝಾಹಿರ್ ಯೂಸುಫ್
|

Updated on: Oct 17, 2024 | 11:05 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ರ ಮೆಗಾ ಹರಾಜಿಗೂ ಮುನ್ನ ಸ್ಟಾರ್ ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ನಿರ್ಧರಿಸಿದೆ. ಅದರಂತೆ ಇದೀಗ ನಾಲ್ವರು ಆಟಗಾರರ ಪಟ್ಟಿಯನ್ನು ಸಿದ್ಧಪಡಿಸಿಕೊಂಡಿದ್ದು, ಈ ಆಟಗಾರರನ್ನು ಮುಂಬೈ ಇಂಡಿಯನ್ಸ್ ತಂಡದಲ್ಲೇ ಉಳಿಸಿಕೊಳ್ಳಲಿದೆ ಎಂದು ವರದಿಯಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ರ ಮೆಗಾ ಹರಾಜಿಗೂ ಮುನ್ನ ಸ್ಟಾರ್ ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ನಿರ್ಧರಿಸಿದೆ. ಅದರಂತೆ ಇದೀಗ ನಾಲ್ವರು ಆಟಗಾರರ ಪಟ್ಟಿಯನ್ನು ಸಿದ್ಧಪಡಿಸಿಕೊಂಡಿದ್ದು, ಈ ಆಟಗಾರರನ್ನು ಮುಂಬೈ ಇಂಡಿಯನ್ಸ್ ತಂಡದಲ್ಲೇ ಉಳಿಸಿಕೊಳ್ಳಲಿದೆ ಎಂದು ವರದಿಯಾಗಿದೆ.

1 / 6
ಅದರಂತೆ ಮುಂಬೈ ಇಂಡಿಯನ್ಸ್ ಮುಂದಿನ ಸೀಸನ್​ಗಾಗಿ ಮಾಜಿ ನಾಯಕ ರೋಹಿತ್ ಶರ್ಮಾ ಅವರನ್ನು ರಿಟೈನ್ ಮಾಡಿಕೊಳ್ಳುವುದು ಕನ್ಫಮ್​ ಎನ್ನಲಾಗಿದೆ. ರೋಹಿತ್ ಶರ್ಮಾ ಅವರನ್ನು ಮೊದಲ ರಿಟೈನ್ ಆಗಿ ಉಳಿಸಿಕೊಳ್ಳಲು ಬಯಸಿದ್ದು, ಹೀಗಾಗಿ ಐಪಿಎಲ್ 2025 ರಲ್ಲೂ ಹಿಟ್​ಮ್ಯಾನ್ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುವುದು ಖಚಿತ ಎನ್ನಬಹುದು.

ಅದರಂತೆ ಮುಂಬೈ ಇಂಡಿಯನ್ಸ್ ಮುಂದಿನ ಸೀಸನ್​ಗಾಗಿ ಮಾಜಿ ನಾಯಕ ರೋಹಿತ್ ಶರ್ಮಾ ಅವರನ್ನು ರಿಟೈನ್ ಮಾಡಿಕೊಳ್ಳುವುದು ಕನ್ಫಮ್​ ಎನ್ನಲಾಗಿದೆ. ರೋಹಿತ್ ಶರ್ಮಾ ಅವರನ್ನು ಮೊದಲ ರಿಟೈನ್ ಆಗಿ ಉಳಿಸಿಕೊಳ್ಳಲು ಬಯಸಿದ್ದು, ಹೀಗಾಗಿ ಐಪಿಎಲ್ 2025 ರಲ್ಲೂ ಹಿಟ್​ಮ್ಯಾನ್ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುವುದು ಖಚಿತ ಎನ್ನಬಹುದು.

2 / 6
ಹಾಗೆಯೇ ಜಸ್​ಪ್ರೀತ್ ಬುಮ್ರಾ ಕೂಡ ಮುಂಬೈ ಇಂಡಿಯನ್ಸ್ ತಂಡದಲ್ಲೇ ಉಳಿಯಲಿದ್ದಾರೆ. ಬುಮ್ರಾ ಅವರಿಗೂ ಬೃಹತ್ ಮೊತ್ತದ ಸಂಭಾವನೆಯ ಆಫರ್ ನೀಡಲಾಗಿದೆ. ಹೀಗಾಗಿ ಯಾರ್ಕರ್ ಸ್ಪೆಷಲಿಸ್ಟ್ ಕೂಡ ಈ ಬಾರಿಯ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ತಿಳಿದು ಬಂದಿದೆ.

ಹಾಗೆಯೇ ಜಸ್​ಪ್ರೀತ್ ಬುಮ್ರಾ ಕೂಡ ಮುಂಬೈ ಇಂಡಿಯನ್ಸ್ ತಂಡದಲ್ಲೇ ಉಳಿಯಲಿದ್ದಾರೆ. ಬುಮ್ರಾ ಅವರಿಗೂ ಬೃಹತ್ ಮೊತ್ತದ ಸಂಭಾವನೆಯ ಆಫರ್ ನೀಡಲಾಗಿದೆ. ಹೀಗಾಗಿ ಯಾರ್ಕರ್ ಸ್ಪೆಷಲಿಸ್ಟ್ ಕೂಡ ಈ ಬಾರಿಯ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ತಿಳಿದು ಬಂದಿದೆ.

3 / 6
ಇನ್ನು ನಾಯಕ ಹಾರ್ದಿಕ್ ಪಾಂಡ್ಯ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಲು ನಿರ್ಧರಿಸಲಾಗಿದೆ. ಕಳೆದ ಸೀಸನ್​ನಲ್ಲಿ ಪಾಂಡ್ಯ ಮುಂದಾಳತ್ವದಲ್ಲಿ ಮುಂಬೈ ಇಂಡಿಯನ್ಸ್ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಗಿತ್ತು. ಇದಾಗ್ಯೂ ಹಾರ್ದಿಕ್ ಪಾಂಡ್ಯರನ್ನು ರಿಟೈನ್ ಮಾಡಿಕೊಳ್ಳಲು ಮುಂಬೈ ಇಂಡಿಯನ್ಸ್ ನಿರ್ಧರಿಸಿದೆ.

ಇನ್ನು ನಾಯಕ ಹಾರ್ದಿಕ್ ಪಾಂಡ್ಯ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಲು ನಿರ್ಧರಿಸಲಾಗಿದೆ. ಕಳೆದ ಸೀಸನ್​ನಲ್ಲಿ ಪಾಂಡ್ಯ ಮುಂದಾಳತ್ವದಲ್ಲಿ ಮುಂಬೈ ಇಂಡಿಯನ್ಸ್ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಗಿತ್ತು. ಇದಾಗ್ಯೂ ಹಾರ್ದಿಕ್ ಪಾಂಡ್ಯರನ್ನು ರಿಟೈನ್ ಮಾಡಿಕೊಳ್ಳಲು ಮುಂಬೈ ಇಂಡಿಯನ್ಸ್ ನಿರ್ಧರಿಸಿದೆ.

4 / 6
ಅದೇ ರೀತಿ ಸೂರ್ಯಕುಮಾರ್ ಯಾದವ್ ಕೂಡ ಮುಂಬೈ ಇಂಡಿಯನ್ಸ್ ತಂಡದಲ್ಲೇ ಉಳಿಯಲಿದ್ದಾರೆ. ಟೀಮ್ ಇಂಡಿಯಾ ಟಿ20 ತಂಡದ ನಾಯಕನಿಗೆ ಬೃಹತ್ ಮೊತ್ತದ ಆಫರ್ ನೀಡಲಾಗಿದ್ದು, ಹೀಗಾಗಿ ಸೂರ್ಯಕುಮಾರ್ ಕೂಡ ಮುಂಬೈ ಇಂಡಿಯನ್ಸ್ ತಂಡದಿಂದ ಹೊರಬರುವುದಿಲ್ಲ ಎಂಬುದು ಖಚಿತವಾಗಿದೆ.

ಅದೇ ರೀತಿ ಸೂರ್ಯಕುಮಾರ್ ಯಾದವ್ ಕೂಡ ಮುಂಬೈ ಇಂಡಿಯನ್ಸ್ ತಂಡದಲ್ಲೇ ಉಳಿಯಲಿದ್ದಾರೆ. ಟೀಮ್ ಇಂಡಿಯಾ ಟಿ20 ತಂಡದ ನಾಯಕನಿಗೆ ಬೃಹತ್ ಮೊತ್ತದ ಆಫರ್ ನೀಡಲಾಗಿದ್ದು, ಹೀಗಾಗಿ ಸೂರ್ಯಕುಮಾರ್ ಕೂಡ ಮುಂಬೈ ಇಂಡಿಯನ್ಸ್ ತಂಡದಿಂದ ಹೊರಬರುವುದಿಲ್ಲ ಎಂಬುದು ಖಚಿತವಾಗಿದೆ.

5 / 6
ಅದರಂತೆ ಮೆಗಾ ಹರಾಜಿಗೂ ಮುನ್ನ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಜಸ್​ಪ್ರೀತ್ ಬುಮ್ರಾ ಹಾಗೂ ಹಾರ್ದಿಕ್ ಪಾಂಡ್ಯರನ್ನು ತಂಡದಲ್ಲೇ ಉಳಿಸಿಕೊಳ್ಳುವುದು ಖಚಿತ ಎಂದು ಎಕ್ಸ್​ಪ್ರೆಸ್ ಸ್ಪೋರ್ಟ್ ವರದಿ ಮಾಡಿದೆ.

ಅದರಂತೆ ಮೆಗಾ ಹರಾಜಿಗೂ ಮುನ್ನ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಜಸ್​ಪ್ರೀತ್ ಬುಮ್ರಾ ಹಾಗೂ ಹಾರ್ದಿಕ್ ಪಾಂಡ್ಯರನ್ನು ತಂಡದಲ್ಲೇ ಉಳಿಸಿಕೊಳ್ಳುವುದು ಖಚಿತ ಎಂದು ಎಕ್ಸ್​ಪ್ರೆಸ್ ಸ್ಪೋರ್ಟ್ ವರದಿ ಮಾಡಿದೆ.

6 / 6
Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ