IPL 2025: ಮುಂಬೈ ಇಂಡಿಯನ್ಸ್​ಗೆ ಈಗ ರೋಹಿತ್ ಶರ್ಮಾ ಬೇಕೇ ಬೇಕು..!

IPL 2025: ಐಪಿಎಲ್​ 2025 ಸೀಸನ್​ಗಾಗಿ ಮೆಗಾ ಹರಾಜು ನಡೆಯಲಿದ್ದು, ಇದಕ್ಕೂ ಮುನ್ನ 10 ಫ್ರಾಂಚೈಸಿಗಳಿಗೆ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಲು ಆಯ್ಕೆ ನೀಡುವ ಸಾಧ್ಯತೆಯಿದೆ. ಈ ಆಯ್ಕೆಯೊಂದಿಗೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ರೋಹಿತ್ ಶರ್ಮಾ ಸೇರಿದಂತೆ ನಾಲ್ವರು ಸ್ಟಾರ್ ಆಟಗಾರರನ್ನು ರಿಟೈನ್ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

|

Updated on: Jul 11, 2024 | 3:17 PM

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 18 ಗಾಗಿ ಮೆಗಾ ಹರಾಜು ನಡೆಯಲಿದೆ. ಈ ಮೆಗಾ ಹರಾಜಿಗೂ ಮುನ್ನ ಪ್ರತಿ ತಂಡಗಳಿಗೂ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡುವ ಸಾಧ್ಯತೆಯಿದೆ. ಈ ಸಾಧ್ಯತೆಗಳ ನಡುವೆ ರೋಹಿತ್ ಶರ್ಮಾ (Rohit Sharma) ಅವರನ್ನು ರಿಲೀಸ್ ಮಾಡದಿರಲು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ನಿರ್ಧರಿಸಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 18 ಗಾಗಿ ಮೆಗಾ ಹರಾಜು ನಡೆಯಲಿದೆ. ಈ ಮೆಗಾ ಹರಾಜಿಗೂ ಮುನ್ನ ಪ್ರತಿ ತಂಡಗಳಿಗೂ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡುವ ಸಾಧ್ಯತೆಯಿದೆ. ಈ ಸಾಧ್ಯತೆಗಳ ನಡುವೆ ರೋಹಿತ್ ಶರ್ಮಾ (Rohit Sharma) ಅವರನ್ನು ರಿಲೀಸ್ ಮಾಡದಿರಲು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ನಿರ್ಧರಿಸಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ.

1 / 5
ಕಳೆದ ಸೀಸನ್​ನಲ್ಲಿ ರೋಹಿತ್ ಶರ್ಮಾ ಅವರನ್ನು ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವದಿಂದ ಕೆಳಗಿಳಿಸಲಾಗಿತ್ತು. ಅಲ್ಲದೆ ಹಾರ್ದಿಕ್ ಪಾಂಡ್ಯಗೆ ನಾಯಕತ್ವ ನೀಡಲಾಗಿತ್ತು. ಇದರ ಬೆನ್ನಲ್ಲೇ ಇದು ಮುಂಬೈ ಇಂಡಿಯನ್ಸ್ ಪರ ರೋಹಿತ್ ಶರ್ಮಾ ಅವರ ಕೊನೆಯ ಸೀಸನ್ ಎಂಬ ಸುದ್ದಿಗಳು ಹರಿದಾಡಿದ್ದವು.

ಕಳೆದ ಸೀಸನ್​ನಲ್ಲಿ ರೋಹಿತ್ ಶರ್ಮಾ ಅವರನ್ನು ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವದಿಂದ ಕೆಳಗಿಳಿಸಲಾಗಿತ್ತು. ಅಲ್ಲದೆ ಹಾರ್ದಿಕ್ ಪಾಂಡ್ಯಗೆ ನಾಯಕತ್ವ ನೀಡಲಾಗಿತ್ತು. ಇದರ ಬೆನ್ನಲ್ಲೇ ಇದು ಮುಂಬೈ ಇಂಡಿಯನ್ಸ್ ಪರ ರೋಹಿತ್ ಶರ್ಮಾ ಅವರ ಕೊನೆಯ ಸೀಸನ್ ಎಂಬ ಸುದ್ದಿಗಳು ಹರಿದಾಡಿದ್ದವು.

2 / 5
ಆದರೀಗ ಹಿಟ್​ಮ್ಯಾನ್​ನನ್ನು ತಂಡದಲ್ಲೇ ಉಳಿಸಿಕೊಳ್ಳಲು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಮುಂದಾಗಿದೆ ಎಂದು ತಿಳಿದು ಬಂದಿದೆ. ಏಕೆಂದರೆ ಮುಂಬೈ ಇಂಡಿಯನ್ಸ್ ತಂಡದಲ್ಲಿ ಸ್ಟಾರ್ ಆಟಗಾರರ ಕೊರತೆಯಿದೆ. ಇತ್ತ ಹಿಟ್​ಮ್ಯಾನ್​ರನ್ನು ಕೈ ಬಿಟ್ಟರೆ ಅದು ತಂಡದ ಬ್ರಾಂಡ್​ ಮೇಲೆ ಪರಿಣಾಮ ಬೀರುವುದು ಖಚಿತ. ಇದಕ್ಕೆ ಸಾಕ್ಷಿ, ಕಳೆದ ಬಾರಿ ಸ್ಟೇಡಿಯಂನಲ್ಲಿ ರೋಹಿತ್ ಶರ್ಮಾ ಪರ ಕಂಡು ಬಂದ ಭಾರೀ ಬೆಂಬಲ.

ಆದರೀಗ ಹಿಟ್​ಮ್ಯಾನ್​ನನ್ನು ತಂಡದಲ್ಲೇ ಉಳಿಸಿಕೊಳ್ಳಲು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಮುಂದಾಗಿದೆ ಎಂದು ತಿಳಿದು ಬಂದಿದೆ. ಏಕೆಂದರೆ ಮುಂಬೈ ಇಂಡಿಯನ್ಸ್ ತಂಡದಲ್ಲಿ ಸ್ಟಾರ್ ಆಟಗಾರರ ಕೊರತೆಯಿದೆ. ಇತ್ತ ಹಿಟ್​ಮ್ಯಾನ್​ರನ್ನು ಕೈ ಬಿಟ್ಟರೆ ಅದು ತಂಡದ ಬ್ರಾಂಡ್​ ಮೇಲೆ ಪರಿಣಾಮ ಬೀರುವುದು ಖಚಿತ. ಇದಕ್ಕೆ ಸಾಕ್ಷಿ, ಕಳೆದ ಬಾರಿ ಸ್ಟೇಡಿಯಂನಲ್ಲಿ ರೋಹಿತ್ ಶರ್ಮಾ ಪರ ಕಂಡು ಬಂದ ಭಾರೀ ಬೆಂಬಲ.

3 / 5
ಇದೀಗ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿ ರೋಹಿತ್ ಶರ್ಮಾ ಮತ್ತಷ್ಟು ಕ್ರೇಝ್ ಹೆಚ್ಚಿಸಿದ್ದಾರೆ. ಹೀಗಾಗಿ ಹಿಟ್​ಮ್ಯಾನ್​ರನ್ನು ತಂಡದಿಂದ ಬಿಡುಗಡೆ ಮಾಡಿದರೆ, ಅದು ಫ್ರಾಂಚೈಸಿ ಬ್ರಾಂಡ್​ ಮೇಲೂ ಭಾರೀ ಪರಿಣಾಮ ಬೀರಲಿದೆ. ಹಾಗಾಗಿ ಮೆಗಾ ಹರಾಜಿಗೂ ಮುನ್ನವೇ ರೋಹಿತ್ ಶರ್ಮಾ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಲು ಮುಂಬೈ ಇಂಡಿಯನ್ಸ್ ಯೋಜನೆ ರೂಪಿಸಿದೆ.

ಇದೀಗ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿ ರೋಹಿತ್ ಶರ್ಮಾ ಮತ್ತಷ್ಟು ಕ್ರೇಝ್ ಹೆಚ್ಚಿಸಿದ್ದಾರೆ. ಹೀಗಾಗಿ ಹಿಟ್​ಮ್ಯಾನ್​ರನ್ನು ತಂಡದಿಂದ ಬಿಡುಗಡೆ ಮಾಡಿದರೆ, ಅದು ಫ್ರಾಂಚೈಸಿ ಬ್ರಾಂಡ್​ ಮೇಲೂ ಭಾರೀ ಪರಿಣಾಮ ಬೀರಲಿದೆ. ಹಾಗಾಗಿ ಮೆಗಾ ಹರಾಜಿಗೂ ಮುನ್ನವೇ ರೋಹಿತ್ ಶರ್ಮಾ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಲು ಮುಂಬೈ ಇಂಡಿಯನ್ಸ್ ಯೋಜನೆ ರೂಪಿಸಿದೆ.

4 / 5
ಅದರಂತೆ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ಸಿಕ್ಕರೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಹಾರ್ದಿಕ್ ಪಾಂಡ್ಯ, ಜಸ್​ಪ್ರೀತ್ ಬುಮ್ರಾ, ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಅವರನ್ನು ಉಳಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಐಪಿಎಲ್ 2025 ರಲ್ಲೂ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡದ ಪರ ಕಣಕ್ಕಿಳಿದರೂ ಅಚ್ಚರಿಪಡಬೇಕಿಲ್ಲ.

ಅದರಂತೆ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ಸಿಕ್ಕರೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಹಾರ್ದಿಕ್ ಪಾಂಡ್ಯ, ಜಸ್​ಪ್ರೀತ್ ಬುಮ್ರಾ, ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಅವರನ್ನು ಉಳಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಐಪಿಎಲ್ 2025 ರಲ್ಲೂ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡದ ಪರ ಕಣಕ್ಕಿಳಿದರೂ ಅಚ್ಚರಿಪಡಬೇಕಿಲ್ಲ.

5 / 5
Follow us
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್