Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: CSK ಫ್ರಾಂಚೈಸಿಗೆ ಮರಳಿದ ರವಿಚಂದ್ರನ್ ಅಶ್ವಿನ್

R Ashwin: 2008 ರಿಂದ 2015 ರವರೆಗೆ ರವಿಚಂದ್ರನ್ ಅಶ್ವಿನ್ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿದ್ದರು. ಇದಾದ ಬಳಿಕ ಪಂಜಾಬ್ ಕಿಂಗ್ಸ್ (ಕಿಂಗ್ಸ್ ಇಲೆವೆನ್ ಪಂಜಾಬ್), ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿದಿದ್ದರು. ಇದೀಗ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿರುವ ಅಶ್ವಿನ್ ಅವರನ್ನು ಇದೀಗ ಪ್ರಮುಖ ಹುದ್ದೆಗೆ ಸಿಎಸ್​ಕೆ ಫ್ರಾಂಚೈಸಿ ನೇಮಿಸಿಕೊಂಡಿದೆ.

ಝಾಹಿರ್ ಯೂಸುಫ್
|

Updated on: Jun 06, 2024 | 1:54 PM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 18 ಮೆಗಾ ಹರಾಜಿಗೂ ಮುನ್ನ ಬಿಗ್ ಅಪ್​ಡೇಟ್​ವೊಂದು ಹೊರಬಿದ್ದಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರ ರವಿಚಂದ್ರನ್ ಅಶ್ವಿನ್ (R Ashwin) ಮುಂಬರುವ ಸೀಸನ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ಪರ ಕಣಕ್ಕಿಳಿಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 18 ಮೆಗಾ ಹರಾಜಿಗೂ ಮುನ್ನ ಬಿಗ್ ಅಪ್​ಡೇಟ್​ವೊಂದು ಹೊರಬಿದ್ದಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರ ರವಿಚಂದ್ರನ್ ಅಶ್ವಿನ್ (R Ashwin) ಮುಂಬರುವ ಸೀಸನ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ಪರ ಕಣಕ್ಕಿಳಿಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

1 / 6
ಕಳೆದ ಜೂನ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು (ಇಂಡಿಯಾ ಸಿಮೆಂಟ್ಸ್ ಗ್ರೂಪ್) ಸಿಎಸ್​ಕೆ ಹೈ ಪರ್ಫಾರ್ಮೆನ್ಸ್ ಸೆಂಟರ್‌ನ ಜವಾಬ್ದಾರಿಯನ್ನು ರವಿಚಂದ್ರನ್ ಅಶ್ವಿನ್ ಅವರಿಗೆ ವಹಿಸಿದ್ದರು. ಅಂದರೆ ಸಿಎಸ್​ಕೆ ತಂಡದ ಕ್ರಿಕೆಟ್ ಅಕಾಡೆಮಿ ಸೇರಿದಂತೆ ಪ್ರಮುಖ ಕೇಂದ್ರಗಳ ಜವಾಬ್ದಾರಿಯ ಹೊಣೆಯನ್ನು ಅಶ್ವಿನ್ ಅವರಿಗೆ ನೀಡಲಾಗಿದೆ.

ಕಳೆದ ಜೂನ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು (ಇಂಡಿಯಾ ಸಿಮೆಂಟ್ಸ್ ಗ್ರೂಪ್) ಸಿಎಸ್​ಕೆ ಹೈ ಪರ್ಫಾರ್ಮೆನ್ಸ್ ಸೆಂಟರ್‌ನ ಜವಾಬ್ದಾರಿಯನ್ನು ರವಿಚಂದ್ರನ್ ಅಶ್ವಿನ್ ಅವರಿಗೆ ವಹಿಸಿದ್ದರು. ಅಂದರೆ ಸಿಎಸ್​ಕೆ ತಂಡದ ಕ್ರಿಕೆಟ್ ಅಕಾಡೆಮಿ ಸೇರಿದಂತೆ ಪ್ರಮುಖ ಕೇಂದ್ರಗಳ ಜವಾಬ್ದಾರಿಯ ಹೊಣೆಯನ್ನು ಅಶ್ವಿನ್ ಅವರಿಗೆ ನೀಡಲಾಗಿದೆ.

2 / 6
ಚೆನ್ನೈ ಸೂಪರ್ ಕಿಂಗ್ಸ್​ ಹೈ ಪರ್ಫಾರ್ಮೆನ್ಸ್ ಸೆಂಟರ್‌ ಅನ್ನು ಸಿಎಸ್‌ಕೆ ಆಟಗಾರರಿಗೆ ತರಬೇತಿ ನೀಡಲು ತೆರೆಯಲಾಗಿದೆ. ಈ ಕೇಂದ್ರದಲ್ಲಿ ತರಬೇತಿ ಪಡೆಯುತ್ತಿರುವ ಆಟಗಾರರಿಗೆ ಸಲಹೆ ನೀಡುವ ಮತ್ತು ಯಾವ ತರಬೇತಿ ನೀಡಬೇಕು ಎಂಬುದನ್ನು ನಿರ್ಧರಿಸುವ ಜವಾಬ್ದಾರಿಯನ್ನು ಅಶ್ವಿನ್ ಅವರಿಗೆ ನೀಡಲಾಗಿದೆ. ಹೀಗಾಗಿಯೇ ಮುಂದಿನ ಸೀಸನ್​ನಲ್ಲಿ ಅಶ್ವಿನ್ ಸಿಎಸ್​ಕೆ ಪರ ಕಣಕ್ಕಿಳಿಯುವ ಸಾಧ್ಯತೆಯಿದೆ.

ಚೆನ್ನೈ ಸೂಪರ್ ಕಿಂಗ್ಸ್​ ಹೈ ಪರ್ಫಾರ್ಮೆನ್ಸ್ ಸೆಂಟರ್‌ ಅನ್ನು ಸಿಎಸ್‌ಕೆ ಆಟಗಾರರಿಗೆ ತರಬೇತಿ ನೀಡಲು ತೆರೆಯಲಾಗಿದೆ. ಈ ಕೇಂದ್ರದಲ್ಲಿ ತರಬೇತಿ ಪಡೆಯುತ್ತಿರುವ ಆಟಗಾರರಿಗೆ ಸಲಹೆ ನೀಡುವ ಮತ್ತು ಯಾವ ತರಬೇತಿ ನೀಡಬೇಕು ಎಂಬುದನ್ನು ನಿರ್ಧರಿಸುವ ಜವಾಬ್ದಾರಿಯನ್ನು ಅಶ್ವಿನ್ ಅವರಿಗೆ ನೀಡಲಾಗಿದೆ. ಹೀಗಾಗಿಯೇ ಮುಂದಿನ ಸೀಸನ್​ನಲ್ಲಿ ಅಶ್ವಿನ್ ಸಿಎಸ್​ಕೆ ಪರ ಕಣಕ್ಕಿಳಿಯುವ ಸಾಧ್ಯತೆಯಿದೆ.

3 / 6
ಏಕೆಂದರೆ ಮುಂಬರುವ ಐಪಿಎಲ್​ಗಾಗಿ ಮೆಗಾ ಹರಾಜು ನಡೆಯಲಿದ್ದು, ಈ ಹರಾಜಿನಲ್ಲಿ ಅಶ್ವಿನ್ ಕಾಣಿಸಿಕೊಳ್ಳುವುದು ಖಚಿತ. ಇತ್ತ ಸಿಎಸ್​ಕೆಯ ಹೈ ಪರ್ಫಾರ್ಮೆನ್ಸ್ ಸೆಂಟರ್​ನ ಪ್ರಮುಖ ಹುದ್ದೆಯನ್ನು ಅಶ್ವಿನ್​ಗೆ ನೀಡಿರುವ ಕಾರಣ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿ ಅವರನ್ನು ಹರಾಜಿನಲ್ಲಿ ಖರೀದಿಸುವುದು ಬಹುತೇಕ ಖಚಿತ ಎಂದೇ ಹೇಳಬಹುದು.

ಏಕೆಂದರೆ ಮುಂಬರುವ ಐಪಿಎಲ್​ಗಾಗಿ ಮೆಗಾ ಹರಾಜು ನಡೆಯಲಿದ್ದು, ಈ ಹರಾಜಿನಲ್ಲಿ ಅಶ್ವಿನ್ ಕಾಣಿಸಿಕೊಳ್ಳುವುದು ಖಚಿತ. ಇತ್ತ ಸಿಎಸ್​ಕೆಯ ಹೈ ಪರ್ಫಾರ್ಮೆನ್ಸ್ ಸೆಂಟರ್​ನ ಪ್ರಮುಖ ಹುದ್ದೆಯನ್ನು ಅಶ್ವಿನ್​ಗೆ ನೀಡಿರುವ ಕಾರಣ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿ ಅವರನ್ನು ಹರಾಜಿನಲ್ಲಿ ಖರೀದಿಸುವುದು ಬಹುತೇಕ ಖಚಿತ ಎಂದೇ ಹೇಳಬಹುದು.

4 / 6
ಈ ಬಗ್ಗೆ ಮಾತನಾಡಿರುವ ಸಿಎಸ್​ಕೆ ಸಿಇಒ ಕಾಶಿ ವಿಶ್ವನಾಥನ್, ಅಶ್ವಿನ್ ಭಾರತ ಮತ್ತು ತಮಿಳುನಾಡಿನ ಶ್ರೇಷ್ಠ ಕ್ರಿಕೆಟಿಗರಲ್ಲಿ ಒಬ್ಬರು. ಅವರ ಉಪಸ್ಥಿತಿಯು ಹೈ ಪರ್ಫಾರ್ಮೆನ್ಸ್ ಸೆಂಟರ್ ಮತ್ತು ನಮ್ಮ ಅಕಾಡೆಮಿಗಳಿಗೆ ದೊಡ್ಡ ಉತ್ತೇಜನ ನೀಡಲಿದೆ. ಸೂಪರ್ ಕಿಂಗ್ಸ್ ವೆಂಚರ್ಸ್ ಮತ್ತು ನಮ್ಮ ಹೈ-ಪರ್ಫಾರ್ಮೆನ್ಸ್ ಸೆಂಟರ್‌ನಲ್ಲಿ ಅವರು ದೊಡ್ಡ ಪಾತ್ರವನ್ನು ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸಿಎಸ್​ಕೆ ಸಿಇಒ ಕಾಶಿ ವಿಶ್ವನಾಥನ್, ಅಶ್ವಿನ್ ಭಾರತ ಮತ್ತು ತಮಿಳುನಾಡಿನ ಶ್ರೇಷ್ಠ ಕ್ರಿಕೆಟಿಗರಲ್ಲಿ ಒಬ್ಬರು. ಅವರ ಉಪಸ್ಥಿತಿಯು ಹೈ ಪರ್ಫಾರ್ಮೆನ್ಸ್ ಸೆಂಟರ್ ಮತ್ತು ನಮ್ಮ ಅಕಾಡೆಮಿಗಳಿಗೆ ದೊಡ್ಡ ಉತ್ತೇಜನ ನೀಡಲಿದೆ. ಸೂಪರ್ ಕಿಂಗ್ಸ್ ವೆಂಚರ್ಸ್ ಮತ್ತು ನಮ್ಮ ಹೈ-ಪರ್ಫಾರ್ಮೆನ್ಸ್ ಸೆಂಟರ್‌ನಲ್ಲಿ ಅವರು ದೊಡ್ಡ ಪಾತ್ರವನ್ನು ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

5 / 6
ಇತ್ತ ಸಿಎಸ್​ಕೆ ತಂಡದ ಹೈ ಪರ್ಫಾಮೆನ್ಸ್ ಸೆಂಟರ್​ನ ಉನ್ನತ ಹುದ್ದೆಯಲ್ಲಿ ಅಶ್ವಿನ್ ಕಾಣಿಸಿಕೊಳ್ಳುತ್ತಿರುವುದರಿಂದ, ಈ ಬಾರಿಯ ಮೆಗಾ ಹರಾಜಿನಲ್ಲಿ ಸಿಎಸ್​ಕೆ ಫ್ರಾಂಚೈಸಿಯೇ ಅವರನ್ನು ಖರೀದಿಸಲಿದೆ ಎಂದೇ ಹೇಳಬಹುದು. ಹೀಗಾಗಿ ಐಪಿಎಲ್ 2025 ರಲ್ಲಿ ರವಿಚಂದ್ರನ್ ಅಶ್ವಿನ್ ಚೆನ್ನೈ ಸೂಪರ್ ಕಿಂಗ್ಸ್ ಪರ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

ಇತ್ತ ಸಿಎಸ್​ಕೆ ತಂಡದ ಹೈ ಪರ್ಫಾಮೆನ್ಸ್ ಸೆಂಟರ್​ನ ಉನ್ನತ ಹುದ್ದೆಯಲ್ಲಿ ಅಶ್ವಿನ್ ಕಾಣಿಸಿಕೊಳ್ಳುತ್ತಿರುವುದರಿಂದ, ಈ ಬಾರಿಯ ಮೆಗಾ ಹರಾಜಿನಲ್ಲಿ ಸಿಎಸ್​ಕೆ ಫ್ರಾಂಚೈಸಿಯೇ ಅವರನ್ನು ಖರೀದಿಸಲಿದೆ ಎಂದೇ ಹೇಳಬಹುದು. ಹೀಗಾಗಿ ಐಪಿಎಲ್ 2025 ರಲ್ಲಿ ರವಿಚಂದ್ರನ್ ಅಶ್ವಿನ್ ಚೆನ್ನೈ ಸೂಪರ್ ಕಿಂಗ್ಸ್ ಪರ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

6 / 6
Follow us
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು