AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ರಾಜಸ್ಥಾನ್ ರಾಯಲ್ಸ್​ಗೆ ರಾಹುಲ್ ದ್ರಾವಿಡ್ ಕೋಚ್: ವರದಿ

Rahul Dravid: ರಾಹುಲ್ ದ್ರಾವಿಡ್ ಐಪಿಎಲ್​ನಲ್ಲಿ ಏಕೈಕ ತಂಡದ ಪರ ಮೆಂಟರ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಅದು ಕೂಡ ರಾಜಸ್ಥಾನ್ ರಾಯಲ್ಸ್ ಪರ ಎಂಬುದು ವಿಶೇಷ. ಇದೀಗ ಟೀಮ್ ಇಂಡಿಯಾವನ್ನು ಟಿ20 ವಿಶ್ವಕಪ್​ನಲ್ಲಿ ಚಾಂಪಿಯನ್ ಪಟ್ಟಕ್ಕೇರಿಸಿರುವ ರಾಹುಲ್ ದ್ರಾವಿಡ್ ಅವರನ್ನು ಮುಖ್ಯ ಕೋಚ್ ಆಗಿ ನೇಮಿಸಿಕೊಳ್ಳಲು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಆಸಕ್ತಿ ಹೊಂದಿದೆ.

ಝಾಹಿರ್ ಯೂಸುಫ್
|

Updated on:Aug 10, 2024 | 10:39 AM

Share
ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ (Rahul Dravid) ನೇಮಕವಾಗಿದ್ದಾರೆ. ಕಳೆದ ಸೀಸನ್​ನಲ್ಲಿ ಆರ್​ಆರ್ ತಂಡದ ಕೋಚ್ ಆಗಿ ಕುಮಾರ ಸಂಗಾಕ್ಕರ ಕಾರ್ಯ ನಿರ್ವಹಿಸಿದ್ದರು. ಆದರೆ ಐಪಿಎಲ್ 2025ರಲ್ಲಿ ಈ ಜವಾಬ್ದಾರಿಯಲ್ಲಿ ರಾಹುಲ್ ದ್ರಾವಿಡ್​ಗೆ ವಹಿಸಲಾಗಿದೆ. ಅದರಂತೆ ಮುಂಬರುವ ಐಪಿಎಲ್​ ಸೀಸನ್​ನಲ್ಲಿ ಆರ್​ಆರ್ ತಂಡದ ಮುಖ್ಯ ಕೋಚ್ ಆಗಿ ದ್ರಾವಿಡ್ ಕಾಣಿಸಿಕೊಳ್ಳಲಿದ್ದಾರೆ.

ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ (Rahul Dravid) ನೇಮಕವಾಗಿದ್ದಾರೆ. ಕಳೆದ ಸೀಸನ್​ನಲ್ಲಿ ಆರ್​ಆರ್ ತಂಡದ ಕೋಚ್ ಆಗಿ ಕುಮಾರ ಸಂಗಾಕ್ಕರ ಕಾರ್ಯ ನಿರ್ವಹಿಸಿದ್ದರು. ಆದರೆ ಐಪಿಎಲ್ 2025ರಲ್ಲಿ ಈ ಜವಾಬ್ದಾರಿಯಲ್ಲಿ ರಾಹುಲ್ ದ್ರಾವಿಡ್​ಗೆ ವಹಿಸಲಾಗಿದೆ. ಅದರಂತೆ ಮುಂಬರುವ ಐಪಿಎಲ್​ ಸೀಸನ್​ನಲ್ಲಿ ಆರ್​ಆರ್ ತಂಡದ ಮುಖ್ಯ ಕೋಚ್ ಆಗಿ ದ್ರಾವಿಡ್ ಕಾಣಿಸಿಕೊಳ್ಳಲಿದ್ದಾರೆ.

1 / 5
ಕ್ರಿಕ್​ಬಝ್ ವರದಿ ಪ್ರಕಾರ, ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ಈಗಾಗಲೇ ರಾಹುಲ್ ದ್ರಾವಿಡ್ ಅವರೊಂದಿಗೆ ಚರ್ಚಿಸಿದ್ದು, ಅವರು ಕೂಡ ಆಸಕ್ತಿ ಹೊಂದಿರುವುದಾಗಿ ತಿಳಿಸಿದ್ದಾರೆ. ಹೀಗಾಗಿ ಐಪಿಎಲ್ 2025 ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.

ಕ್ರಿಕ್​ಬಝ್ ವರದಿ ಪ್ರಕಾರ, ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ಈಗಾಗಲೇ ರಾಹುಲ್ ದ್ರಾವಿಡ್ ಅವರೊಂದಿಗೆ ಚರ್ಚಿಸಿದ್ದು, ಅವರು ಕೂಡ ಆಸಕ್ತಿ ಹೊಂದಿರುವುದಾಗಿ ತಿಳಿಸಿದ್ದಾರೆ. ಹೀಗಾಗಿ ಐಪಿಎಲ್ 2025 ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.

2 / 5
ಮತ್ತೊಂದೆಡೆ ಕಳೆದ ಸೀಸನ್​ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಕೋಚ್ ಆಗಿ ಕಾಣಿಸಿಕೊಂಡಿದ್ದ ಕುಮಾರ ಸಂಗಾಕ್ಕರ RR ಫ್ರಾಂಚೈಸಿಯ ಡೈರೆಕ್ಟರ್ ಹುದ್ದೆಯಲ್ಲಿ ಮುಂದುವರೆಯುವ ಸಾಧ್ಯತೆಯಿದೆ. IPL 2021 ರವರೆಗೆ ಸಂಗಾಕ್ಕರ ರಾಜಸ್ಥಾನ್ ರಾಯಲ್ಸ್ ತಂಡದ ಕ್ರಿಕೆಟ್ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಹೀಗಾಗಿ ಅದೇ ಹುದ್ದೆಗೆ ಅವರನ್ನು ಪುನರ್ ನೇಮಕ ಮಾಡುವ ಸಾಧ್ಯತೆಯಿದೆ.

ಮತ್ತೊಂದೆಡೆ ಕಳೆದ ಸೀಸನ್​ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಕೋಚ್ ಆಗಿ ಕಾಣಿಸಿಕೊಂಡಿದ್ದ ಕುಮಾರ ಸಂಗಾಕ್ಕರ RR ಫ್ರಾಂಚೈಸಿಯ ಡೈರೆಕ್ಟರ್ ಹುದ್ದೆಯಲ್ಲಿ ಮುಂದುವರೆಯುವ ಸಾಧ್ಯತೆಯಿದೆ. IPL 2021 ರವರೆಗೆ ಸಂಗಾಕ್ಕರ ರಾಜಸ್ಥಾನ್ ರಾಯಲ್ಸ್ ತಂಡದ ಕ್ರಿಕೆಟ್ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಹೀಗಾಗಿ ಅದೇ ಹುದ್ದೆಗೆ ಅವರನ್ನು ಪುನರ್ ನೇಮಕ ಮಾಡುವ ಸಾಧ್ಯತೆಯಿದೆ.

3 / 5
ಈ ಹಿಂದೆ ರಾಹುಲ್ ದ್ರಾವಿಡ್ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದರು ಎಂಬುದು ವಿಶೇಷ. 2011 ರಿಂದ 2013ರವರೆಗೆ ಅವರು ಆರ್​ಆರ್ ತಂಡವನ್ನು ಮುನ್ನಡೆಸಿದ್ದಾರೆ. ಈ ವೇಳೆ 46 ಪಂದ್ಯಗಳನ್ನಾಡಿರುವ ದ್ರಾವಿಡ್ 7 ಅರ್ಧಶತಕಗಳೊಂದಿಗೆ 1276 ರನ್ ಕಲೆಹಾಕಿದ್ದಾರೆ.

ಈ ಹಿಂದೆ ರಾಹುಲ್ ದ್ರಾವಿಡ್ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದರು ಎಂಬುದು ವಿಶೇಷ. 2011 ರಿಂದ 2013ರವರೆಗೆ ಅವರು ಆರ್​ಆರ್ ತಂಡವನ್ನು ಮುನ್ನಡೆಸಿದ್ದಾರೆ. ಈ ವೇಳೆ 46 ಪಂದ್ಯಗಳನ್ನಾಡಿರುವ ದ್ರಾವಿಡ್ 7 ಅರ್ಧಶತಕಗಳೊಂದಿಗೆ 1276 ರನ್ ಕಲೆಹಾಕಿದ್ದಾರೆ.

4 / 5
ಇದಾದ ಬಳಿಕ 2014 ಮತ್ತು 2015 ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಮೆಂಟರ್ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಇದೀಗ ತನ್ನ ಮಾಜಿ ಆಟಗಾರರನ್ನೇ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ಮುಖ್ಯ ಕೋಚ್ ಆಗಿ ನೇಮಿಸಿಕೊಂಡಿರುವುದು ವಿಶೇಷ.

ಇದಾದ ಬಳಿಕ 2014 ಮತ್ತು 2015 ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಮೆಂಟರ್ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಇದೀಗ ತನ್ನ ಮಾಜಿ ಆಟಗಾರರನ್ನೇ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ಮುಖ್ಯ ಕೋಚ್ ಆಗಿ ನೇಮಿಸಿಕೊಂಡಿರುವುದು ವಿಶೇಷ.

5 / 5

Published On - 10:03 am, Sat, 10 August 24

Follow Us
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ