AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ತಂಡಕ್ಕಿದೆ ಇನ್ನೂ ಮೂವರನ್ನು ಉಳಿಸಿಕೊಳ್ಳುವ ಅವಕಾಶ..!

IPL 2025 RCB: ಈ ಬಾರಿಯ ಮೆಗಾ ಹರಾಜಿಗೂ ಮುನ್ನ ಪ್ರತಿ ಫ್ರಾಂಚೈಸಿಗೆ 6 ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಆರಕ್ಕಿಂತ ಕಡಿಮೆ ಆಟಗಾರರನ್ನು ಉಳಿಸಿಕೊಂಡರೆ, ಅದರ ಬದಲಿಗೆ ಆರ್​ಟಿಎಂ ಆಯ್ಕೆ ಬಳಸಿಕೊಳ್ಳಬಹುದು. ಅದರಂತೆ ಇದೀಗ ಮೂವರನ್ನು ಉಳಿಸಿಕೊಂಡಿರುವ ಆರ್​ಸಿಬಿ ಬಳಿ 3 ಆರ್​ಟಿಎಂ ಆಯ್ಕೆಗಳಿವೆ.

ಝಾಹಿರ್ ಯೂಸುಫ್
|

Updated on: Nov 02, 2024 | 8:03 AM

Share
IPL 2025: ಐಪಿಎಲ್ ಸೀಸನ್-18ರ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯು ಮೂವರನ್ನು ರಿಟೈನ್ ಮಾಡಿಕೊಂಡಿದೆ. ಇಲ್ಲಿ ಆರ್​ಸಿಬಿ ತಂಡದ ಮೊದಲ ರಿಟೈನ್ ವಿರಾಟ್ ಕೊಹ್ಲಿ. ಹಾಗೆಯೇ ದ್ವಿತೀಯ ರಿಟೈನ್ ರಜತ್ ಪಾಟಿದಾರ್. ಇನ್ನು ಮೂರನೇ ಆಟಗಾರನಾಗಿ ಅನ್​ಕ್ಯಾಪ್ಡ್​ ಪಟ್ಟಿಯಲ್ಲಿ ಯಶ್ ದಯಾಳ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಲಾಗಿದೆ.

IPL 2025: ಐಪಿಎಲ್ ಸೀಸನ್-18ರ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯು ಮೂವರನ್ನು ರಿಟೈನ್ ಮಾಡಿಕೊಂಡಿದೆ. ಇಲ್ಲಿ ಆರ್​ಸಿಬಿ ತಂಡದ ಮೊದಲ ರಿಟೈನ್ ವಿರಾಟ್ ಕೊಹ್ಲಿ. ಹಾಗೆಯೇ ದ್ವಿತೀಯ ರಿಟೈನ್ ರಜತ್ ಪಾಟಿದಾರ್. ಇನ್ನು ಮೂರನೇ ಆಟಗಾರನಾಗಿ ಅನ್​ಕ್ಯಾಪ್ಡ್​ ಪಟ್ಟಿಯಲ್ಲಿ ಯಶ್ ದಯಾಳ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಲಾಗಿದೆ.

1 / 7
ಇಲ್ಲಿ ವಿರಾಟ್ ಕೊಹ್ಲಿಯನ್ನು 21 ಕೋಟಿ ರೂ. ನೀಡಿ ಉಳಿಸಿಕೊಂಡರೆ, ರಜತ್ ಪಾಟಿದಾರ್​ಗೆ 11 ಕೋಟಿ ರೂ. ನೀಡಲಾಗಿದೆ. ಹಾಗೆಯೇ ಯಶ್ ದಯಾಳ್ 5 ಕೋಟಿ ರೂ.ಗೆ ರಿಟೈನ್ ಆಗಿದ್ದಾರೆ. ಅಂದರೆ ಆರ್​ಸಿಬಿ ಫ್ರಾಂಚೈಸಿಯು ಮೂವರು ಆಟಗಾರರನ್ನು ಉಳಿಸಿಕೊಳ್ಳಲು 37 ಕೋಟಿ ರೂ. ಖರ್ಚು ಮಾಡಿದೆ.

ಇಲ್ಲಿ ವಿರಾಟ್ ಕೊಹ್ಲಿಯನ್ನು 21 ಕೋಟಿ ರೂ. ನೀಡಿ ಉಳಿಸಿಕೊಂಡರೆ, ರಜತ್ ಪಾಟಿದಾರ್​ಗೆ 11 ಕೋಟಿ ರೂ. ನೀಡಲಾಗಿದೆ. ಹಾಗೆಯೇ ಯಶ್ ದಯಾಳ್ 5 ಕೋಟಿ ರೂ.ಗೆ ರಿಟೈನ್ ಆಗಿದ್ದಾರೆ. ಅಂದರೆ ಆರ್​ಸಿಬಿ ಫ್ರಾಂಚೈಸಿಯು ಮೂವರು ಆಟಗಾರರನ್ನು ಉಳಿಸಿಕೊಳ್ಳಲು 37 ಕೋಟಿ ರೂ. ಖರ್ಚು ಮಾಡಿದೆ.

2 / 7
ಈ ಮೂವರು ಆಟಗಾರರಲ್ಲದೇ ಇನ್ನೂ ಮೂರು ಪ್ಲೇಯರ್ಸ್ ಅನ್ನು ತಂಡದಲ್ಲೇ ಉಳಿಸಿಕೊಳ್ಳಲು ಆರ್​ಸಿಬಿಗೆ ಅವಕಾಶವಿದೆ. ಅಂದರೆ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮೂವರು ಆಟಗಾರರ ಮೇಲೆ ಆರ್​ಟಿಎಂ ಆಯ್ಕೆಯನ್ನು ಬಳಸಿಕೊಳ್ಳಬಹುದು. ಈ ಆಯ್ಕೆಯನ್ನು ಬಳಸಿ ಆರ್​ಸಿಬಿ ಮೂವರನ್ನು ಬಿಡುಗಡೆ ಮಾಡಿದರೆ, ಬಿಡ್ಡಿಂಗ್ ವೇಳೆ ಅವರನ್ನು ಮತ್ತೆ ತಂಡಕ್ಕೆ ಸೇರಿಸಿಕೊಳ್ಳಬಹುದು.

ಈ ಮೂವರು ಆಟಗಾರರಲ್ಲದೇ ಇನ್ನೂ ಮೂರು ಪ್ಲೇಯರ್ಸ್ ಅನ್ನು ತಂಡದಲ್ಲೇ ಉಳಿಸಿಕೊಳ್ಳಲು ಆರ್​ಸಿಬಿಗೆ ಅವಕಾಶವಿದೆ. ಅಂದರೆ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮೂವರು ಆಟಗಾರರ ಮೇಲೆ ಆರ್​ಟಿಎಂ ಆಯ್ಕೆಯನ್ನು ಬಳಸಿಕೊಳ್ಳಬಹುದು. ಈ ಆಯ್ಕೆಯನ್ನು ಬಳಸಿ ಆರ್​ಸಿಬಿ ಮೂವರನ್ನು ಬಿಡುಗಡೆ ಮಾಡಿದರೆ, ಬಿಡ್ಡಿಂಗ್ ವೇಳೆ ಅವರನ್ನು ಮತ್ತೆ ತಂಡಕ್ಕೆ ಸೇರಿಸಿಕೊಳ್ಳಬಹುದು.

3 / 7
ಇಲ್ಲಿ ಆರ್​ಟಿಎಂ ಆಯ್ಕೆ ಎಂದರೆ ರೈಟ್ ಟು ಮ್ಯಾಚ್ (RTM) ಆಪ್ಷನ್. ಅಂದರೆ ಮೆಗಾ ಹರಾಜಿನಲ್ಲಿ ಆಟಗಾರರನ್ನು ಸ್ವಾಧೀನಪಡಿಸಿಕೊಳ್ಳಲು ಇರುವ ವಿಶೇಷ ಆಯ್ಕೆ. ಇನ್ನೂ ಸರಳವಾಗಿ ಹೇಳಬೇಕೆಂದರೆ, ಆಟಗಾರರ ಮೇಲೆ ಹಕ್ಕುಸ್ವಾಮ್ಯ ಸ್ಥಾಪಿಸುವುದು. ಆದರೆ ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶವೆಂದರೆ ಆರ್​ಟಿಎಂ ಆಯ್ಕೆಯನ್ನು ಬಳಸಲಾದ ಆಟಗಾರನನ್ನು ನೇರವಾಗಿ ಆಯ್ಕೆ ಮಾಡುವಂತಿಲ್ಲ ಎಂಬುದು.

ಇಲ್ಲಿ ಆರ್​ಟಿಎಂ ಆಯ್ಕೆ ಎಂದರೆ ರೈಟ್ ಟು ಮ್ಯಾಚ್ (RTM) ಆಪ್ಷನ್. ಅಂದರೆ ಮೆಗಾ ಹರಾಜಿನಲ್ಲಿ ಆಟಗಾರರನ್ನು ಸ್ವಾಧೀನಪಡಿಸಿಕೊಳ್ಳಲು ಇರುವ ವಿಶೇಷ ಆಯ್ಕೆ. ಇನ್ನೂ ಸರಳವಾಗಿ ಹೇಳಬೇಕೆಂದರೆ, ಆಟಗಾರರ ಮೇಲೆ ಹಕ್ಕುಸ್ವಾಮ್ಯ ಸ್ಥಾಪಿಸುವುದು. ಆದರೆ ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶವೆಂದರೆ ಆರ್​ಟಿಎಂ ಆಯ್ಕೆಯನ್ನು ಬಳಸಲಾದ ಆಟಗಾರನನ್ನು ನೇರವಾಗಿ ಆಯ್ಕೆ ಮಾಡುವಂತಿಲ್ಲ ಎಂಬುದು.

4 / 7
ಅಂದರೆ ಒಬ್ಬ ಆಟಗಾರನ ಮೇಲೆ ಆರ್​ಟಿಎಂ ಆಯ್ಕೆ ಬಳಸಿದರೆ ಆತನನ್ನು ಮೆಗಾ ಹರಾಜಿಗಾಗಿ ಬಿಡುಗಡೆ ಮಾಡಬೇಕಾಗುತ್ತದೆ. ಇದಾಗ್ಯೂ ಮೆಗಾ ಹರಾಜಿನಲ್ಲಿ ಆ ಆಟಗಾರನ ಸಂಪೂರ್ಣ ಹಕ್ಕು ಬಿಡುಗಡೆ ಮಾಡಿದ ಫ್ರಾಂಚೈಸಿಯ ಬಳಿಯೇ ಇರಲಿದೆ. ಇದುವೇ RTM ಆಯ್ಕೆಯ ವಿಶೇಷತೆ.

ಅಂದರೆ ಒಬ್ಬ ಆಟಗಾರನ ಮೇಲೆ ಆರ್​ಟಿಎಂ ಆಯ್ಕೆ ಬಳಸಿದರೆ ಆತನನ್ನು ಮೆಗಾ ಹರಾಜಿಗಾಗಿ ಬಿಡುಗಡೆ ಮಾಡಬೇಕಾಗುತ್ತದೆ. ಇದಾಗ್ಯೂ ಮೆಗಾ ಹರಾಜಿನಲ್ಲಿ ಆ ಆಟಗಾರನ ಸಂಪೂರ್ಣ ಹಕ್ಕು ಬಿಡುಗಡೆ ಮಾಡಿದ ಫ್ರಾಂಚೈಸಿಯ ಬಳಿಯೇ ಇರಲಿದೆ. ಇದುವೇ RTM ಆಯ್ಕೆಯ ವಿಶೇಷತೆ.

5 / 7
ಉದಾಹರಣೆಗೆ: ಆರ್​ಸಿಬಿ ತಂಡವು ಮೊಹಮ್ಮದ್ ಸಿರಾಜ್ ಅವರನ್ನು ಬಿಡುಗಡೆ ಮಾಡಿದೆ. ಆದರೆ ಹರಾಜಿಗೂ ಮುನ್ನ ಅವರ ಮೇಲೆ ಆರ್​ಟಿಎಂ ಆಯ್ಕೆ ಬಳಸಿದರೆ, ಸಿರಾಜ್ ಅವರ ಮೇಲಿನ ಹಕ್ಕು ಆರ್​ಸಿಬಿ ಬಳಿಯೇ ಇರುತ್ತದೆ. ಅದರಂತೆ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡ ಮೊಹಮ್ಮದ್ ಸಿರಾಜ್​ (ಆರ್​ಟಿಎಂ) ಅವರ ಖರೀದಿಗೆ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿಯು 10 ಕೋಟಿ ರೂ.ವರೆಗೆ ಬಿಡ್ ಮಾಡಿತು ಎಂದಿಟ್ಟುಕೊಳ್ಳಿ. ಈ ವೇಳೆ ಆ ಮೊತ್ತವನ್ನು ತಾವೇ ನೀಡುತ್ತೇವೆ ಎಂದು ಸಿರಾಜ್ ಅವರನ್ನು ಆರ್​ಸಿಬಿ ಮರಳಿ ಖರೀದಿಸಬಹುದು. ಒಂದು ವೇಳೆ ಬಿಡುಗಡೆ ಮಾಡಿದ ತಂಡವು ಮರಳಿ ಖರೀದಿಸಲು ಇಚ್ಛಿಸದಿದ್ದರೆ ಮಾತ್ರ ಆರ್​ಟಿಎಂ ಆಯ್ಕೆಯಲ್ಲಿ ಕಾಣಿಸಿಕೊಂಡ ಆಟಗಾರರು ಕೊನೆಯದಾಗಿ ಬಿಡ್ ಮಾಡಿದ ತಂಡದ ಪಾಲಾಗಲಿದ್ದಾರೆ.

ಉದಾಹರಣೆಗೆ: ಆರ್​ಸಿಬಿ ತಂಡವು ಮೊಹಮ್ಮದ್ ಸಿರಾಜ್ ಅವರನ್ನು ಬಿಡುಗಡೆ ಮಾಡಿದೆ. ಆದರೆ ಹರಾಜಿಗೂ ಮುನ್ನ ಅವರ ಮೇಲೆ ಆರ್​ಟಿಎಂ ಆಯ್ಕೆ ಬಳಸಿದರೆ, ಸಿರಾಜ್ ಅವರ ಮೇಲಿನ ಹಕ್ಕು ಆರ್​ಸಿಬಿ ಬಳಿಯೇ ಇರುತ್ತದೆ. ಅದರಂತೆ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡ ಮೊಹಮ್ಮದ್ ಸಿರಾಜ್​ (ಆರ್​ಟಿಎಂ) ಅವರ ಖರೀದಿಗೆ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿಯು 10 ಕೋಟಿ ರೂ.ವರೆಗೆ ಬಿಡ್ ಮಾಡಿತು ಎಂದಿಟ್ಟುಕೊಳ್ಳಿ. ಈ ವೇಳೆ ಆ ಮೊತ್ತವನ್ನು ತಾವೇ ನೀಡುತ್ತೇವೆ ಎಂದು ಸಿರಾಜ್ ಅವರನ್ನು ಆರ್​ಸಿಬಿ ಮರಳಿ ಖರೀದಿಸಬಹುದು. ಒಂದು ವೇಳೆ ಬಿಡುಗಡೆ ಮಾಡಿದ ತಂಡವು ಮರಳಿ ಖರೀದಿಸಲು ಇಚ್ಛಿಸದಿದ್ದರೆ ಮಾತ್ರ ಆರ್​ಟಿಎಂ ಆಯ್ಕೆಯಲ್ಲಿ ಕಾಣಿಸಿಕೊಂಡ ಆಟಗಾರರು ಕೊನೆಯದಾಗಿ ಬಿಡ್ ಮಾಡಿದ ತಂಡದ ಪಾಲಾಗಲಿದ್ದಾರೆ.

6 / 7
ಇದೀಗ ಮೂವರನ್ನು ಮಾತ್ರ ಉಳಿಸಿಕೊಂಡಿರುವ ಆರ್​ಸಿಬಿ ಬಳಿ ಮೂರು ಆರ್​ಟಿಎಂ ಆಯ್ಕೆಗಳಿವೆ. ಅಂದರೆ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ಒಟ್ಟು 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಅವಕಾಶ ನೀಡಲಾಗಿತ್ತು. ಇಲ್ಲಿ ಆರ್​ಸಿಬಿ ಮೂವರನ್ನು ಮಾತ್ರ ರಿಟೈನ್ ಮಾಡಿಕೊಂಡಿರುವ ಕಾರಣ, ಇನ್ನುಳಿದ 3 ಸ್ಥಾನಗಳಲ್ಲಿ ಆರ್​ಟಿಎಂ ಆಯ್ಕೆಯನ್ನು ಬಳಸಿಕೊಳ್ಳಬಹುದು. ಅದರಂತೆ ಮೆಗಾ ಹರಾಜಿಗೂ ಮುನ್ನ ಆರ್​ಸಿಬಿ ಯಾವೆಲ್ಲಾ ಆಟಗಾರರನ್ನು ಆರ್​ಟಿಎಂ ಆಯ್ಕೆ ಬಳಸಿ ತಂಡದಲ್ಲೇ ಉಳಿಸಿಕೊಳ್ಳುವ ಪ್ರಯತ್ನ ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇದೀಗ ಮೂವರನ್ನು ಮಾತ್ರ ಉಳಿಸಿಕೊಂಡಿರುವ ಆರ್​ಸಿಬಿ ಬಳಿ ಮೂರು ಆರ್​ಟಿಎಂ ಆಯ್ಕೆಗಳಿವೆ. ಅಂದರೆ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ಒಟ್ಟು 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಅವಕಾಶ ನೀಡಲಾಗಿತ್ತು. ಇಲ್ಲಿ ಆರ್​ಸಿಬಿ ಮೂವರನ್ನು ಮಾತ್ರ ರಿಟೈನ್ ಮಾಡಿಕೊಂಡಿರುವ ಕಾರಣ, ಇನ್ನುಳಿದ 3 ಸ್ಥಾನಗಳಲ್ಲಿ ಆರ್​ಟಿಎಂ ಆಯ್ಕೆಯನ್ನು ಬಳಸಿಕೊಳ್ಳಬಹುದು. ಅದರಂತೆ ಮೆಗಾ ಹರಾಜಿಗೂ ಮುನ್ನ ಆರ್​ಸಿಬಿ ಯಾವೆಲ್ಲಾ ಆಟಗಾರರನ್ನು ಆರ್​ಟಿಎಂ ಆಯ್ಕೆ ಬಳಸಿ ತಂಡದಲ್ಲೇ ಉಳಿಸಿಕೊಳ್ಳುವ ಪ್ರಯತ್ನ ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

7 / 7
Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು