AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ತಂಡಕ್ಕೆ ವಿರಾಟ್ ಕೊಹ್ಲಿ ನಾಯಕ

IPL 2025 Virat Kohli: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ವಿರಾಟ್ ಕೊಹ್ಲಿ 143 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಈ ವೇಳೆ 66 ಪಂದ್ಯಗಳಲ್ಲಿ ಆರ್​ಸಿಬಿ ಜಯ ಸಾಧಿಸಿದೆ. ಹಾಗೆಯೇ 2016 ರಲ್ಲಿ ಕಿಂಗ್ ಕೊಹ್ಲಿ ನಾಯಕತ್ವದಲ್ಲೇ ಆರ್​ಸಿಬಿ ಫೈನಲ್​ಗೆ ಪ್ರವೇಶಿಸಿತ್ತು.

ಝಾಹಿರ್ ಯೂಸುಫ್
|

Updated on: Nov 26, 2024 | 7:41 AM

Share
ಐಪಿಎಲ್ ಸೀಸನ್-18ರ ಮೆಗಾ ಹರಾಜು ಪೂರ್ಣಗೊಂಡಿದೆ. ಈ ಬಾರಿಯ ಹರಾಜಿನ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು 19 ಆಟಗಾರರನ್ನು ಖರೀದಿಸಿದೆ. ಈ ಮೂಲಕ ಆರ್​ಸಿಬಿ ಫ್ರಾಂಚೈಸಿ 22 ಆಟಗಾರರ ಬಲಿಷ್ಠ ಪಡೆಯನ್ನು ರೂಪಿಸಿದೆ. ಆದರೆ ಈ ಪಡೆಯನ್ನು ಮುನ್ನಡೆಸುವವರು ಯಾರು ಎಂಬುದೇ ಈಗ ಪ್ರಶ್ನೆ.

ಐಪಿಎಲ್ ಸೀಸನ್-18ರ ಮೆಗಾ ಹರಾಜು ಪೂರ್ಣಗೊಂಡಿದೆ. ಈ ಬಾರಿಯ ಹರಾಜಿನ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು 19 ಆಟಗಾರರನ್ನು ಖರೀದಿಸಿದೆ. ಈ ಮೂಲಕ ಆರ್​ಸಿಬಿ ಫ್ರಾಂಚೈಸಿ 22 ಆಟಗಾರರ ಬಲಿಷ್ಠ ಪಡೆಯನ್ನು ರೂಪಿಸಿದೆ. ಆದರೆ ಈ ಪಡೆಯನ್ನು ಮುನ್ನಡೆಸುವವರು ಯಾರು ಎಂಬುದೇ ಈಗ ಪ್ರಶ್ನೆ.

1 / 5
ಈ ಪ್ರಶ್ನೆಗೆ ಆರ್​ಸಿಬಿ ಕಡೆಯಿಂದ ಕೇಳಿ ಬರುತ್ತಿರುವ ಉತ್ತರ ವಿರಾಟ್ ಕೊಹ್ಲಿ. ಆರ್​ಸಿಬಿ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ವಿರಾಟ್ ಕೊಹ್ಲಿ, ಯಶ್ ದಯಾಳ್ ಹಾಗೂ ರಜತ್ ಪಾಟಿದಾರ್ ಅವರನ್ನು ಉಳಿಸಿಕೊಂಡಿತ್ತು. ಇದೀಗ ಹರಾಜಿನ ಮೂಲಕ 19 ಆಟಗಾರರನ್ನು ಆಯ್ಕೆ ಮಾಡಿಕೊಂಡಿದೆ. ಹೀಗೆ ಆರ್​ಸಿಬಿಗೆ ಎಂಟ್ರಿ ಕೊಟ್ಟಿರುವ 19 ಆಟಗಾರರಲ್ಲಿ ಯಾರು ಸಹ ಯಶಸ್ವಿ ನಾಯಕರಾಗಿ ಗುರುತಿಸಿಕೊಂಡಿಲ್ಲ. ಅಂದರೆ ಯಾವುದೇ ತಂಡದ ಖಾಯಂ ನಾಯಕರಾಗಿ ಕಾಣಿಸಿಕೊಂಡಿಲ್ಲ.

ಈ ಪ್ರಶ್ನೆಗೆ ಆರ್​ಸಿಬಿ ಕಡೆಯಿಂದ ಕೇಳಿ ಬರುತ್ತಿರುವ ಉತ್ತರ ವಿರಾಟ್ ಕೊಹ್ಲಿ. ಆರ್​ಸಿಬಿ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ವಿರಾಟ್ ಕೊಹ್ಲಿ, ಯಶ್ ದಯಾಳ್ ಹಾಗೂ ರಜತ್ ಪಾಟಿದಾರ್ ಅವರನ್ನು ಉಳಿಸಿಕೊಂಡಿತ್ತು. ಇದೀಗ ಹರಾಜಿನ ಮೂಲಕ 19 ಆಟಗಾರರನ್ನು ಆಯ್ಕೆ ಮಾಡಿಕೊಂಡಿದೆ. ಹೀಗೆ ಆರ್​ಸಿಬಿಗೆ ಎಂಟ್ರಿ ಕೊಟ್ಟಿರುವ 19 ಆಟಗಾರರಲ್ಲಿ ಯಾರು ಸಹ ಯಶಸ್ವಿ ನಾಯಕರಾಗಿ ಗುರುತಿಸಿಕೊಂಡಿಲ್ಲ. ಅಂದರೆ ಯಾವುದೇ ತಂಡದ ಖಾಯಂ ನಾಯಕರಾಗಿ ಕಾಣಿಸಿಕೊಂಡಿಲ್ಲ.

2 / 5
ಇತ್ತ 22 ಆಟಗಾರರಲ್ಲಿ ನಾಯಕತ್ವದ ಅನುಭವ ಹೊಂದಿರುವವರು ವಿರಾಟ್ ಕೊಹ್ಲಿ ಮಾತ್ರ. ಹೀಗಾಗಿಯೇ ಆರ್​ಸಿಬಿ ಫ್ರಾಂಚೈಸಿ ಕಿಂಗ್ ಕೊಹ್ಲಿಗೆ ಕ್ಯಾಪ್ಟನ್ ಪಟ್ಟ ನೀಡುವುದು ಖಚಿತ ಎನ್ನಲಾಗುತ್ತಿದೆ. ಇದೇ ಕಾರಣದಿಂದಾಗಿ ಈ ಬಾರಿಯ ಮೆಗಾ ಹರಾಜಿನಲ್ಲಿ ಆರ್​ಸಿಬಿ ನಾಯಕನ ಸ್ಥಾನ ತುಂಬಲು ಯಾವುದೇ ಆಟಗಾರನನ್ನು ಟಾರ್ಗೆಟ್ ಮಾಡಿರಲಿಲ್ಲ ಎಂದು ತಿಳಿದು ಬಂದಿದೆ.

ಇತ್ತ 22 ಆಟಗಾರರಲ್ಲಿ ನಾಯಕತ್ವದ ಅನುಭವ ಹೊಂದಿರುವವರು ವಿರಾಟ್ ಕೊಹ್ಲಿ ಮಾತ್ರ. ಹೀಗಾಗಿಯೇ ಆರ್​ಸಿಬಿ ಫ್ರಾಂಚೈಸಿ ಕಿಂಗ್ ಕೊಹ್ಲಿಗೆ ಕ್ಯಾಪ್ಟನ್ ಪಟ್ಟ ನೀಡುವುದು ಖಚಿತ ಎನ್ನಲಾಗುತ್ತಿದೆ. ಇದೇ ಕಾರಣದಿಂದಾಗಿ ಈ ಬಾರಿಯ ಮೆಗಾ ಹರಾಜಿನಲ್ಲಿ ಆರ್​ಸಿಬಿ ನಾಯಕನ ಸ್ಥಾನ ತುಂಬಲು ಯಾವುದೇ ಆಟಗಾರನನ್ನು ಟಾರ್ಗೆಟ್ ಮಾಡಿರಲಿಲ್ಲ ಎಂದು ತಿಳಿದು ಬಂದಿದೆ.

3 / 5
ಅಲ್ಲದೆ ಆರ್​ಸಿಬಿ ಮೂಲಗಳ ಮಾಹಿತಿ ಪ್ರಕಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಈಗಾಗಲೇ ಕ್ಯಾಪ್ಟನ್ ಯಾರೆಂಬುದು ನಿರ್ಧರಿಸಿಯಾಗಿದೆ. ಅಂದರೆ ಮೆಗಾ ಹರಾಜಿಗೂ ಮುನ್ನವೇ ಐಪಿಎಲ್ ಸೀಸನ್-18 ರಲ್ಲಿ ಆರ್​ಸಿಬಿ ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎಂಬುದು ನಿರ್ಧರಿತವಾಗಿದೆ.

ಅಲ್ಲದೆ ಆರ್​ಸಿಬಿ ಮೂಲಗಳ ಮಾಹಿತಿ ಪ್ರಕಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಈಗಾಗಲೇ ಕ್ಯಾಪ್ಟನ್ ಯಾರೆಂಬುದು ನಿರ್ಧರಿಸಿಯಾಗಿದೆ. ಅಂದರೆ ಮೆಗಾ ಹರಾಜಿಗೂ ಮುನ್ನವೇ ಐಪಿಎಲ್ ಸೀಸನ್-18 ರಲ್ಲಿ ಆರ್​ಸಿಬಿ ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎಂಬುದು ನಿರ್ಧರಿತವಾಗಿದೆ.

4 / 5
ಹೀಗಾಗಿಯೇ ಐಪಿಎಲ್ 2025 ರಲ್ಲಿ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳುವುದು ಖಚಿತ. ಅದರಂತೆ ಈ ಬಾರಿ ಕಿಂಗ್ ಕೊಹ್ಲಿ ಸಾರಥ್ಯದಲ್ಲಿ ಆರ್​ಸಿಬಿ ಪಡೆ ಕಣಕ್ಕಿಳಿಯಲಿದ್ದು, ಈ ಮೂಲಕ 17 ವರ್ಷಗಳ ಕಪ್ ಗೆಲ್ಲಬೇಕೆಂಬ ಕನಸನ್ನು ಈಡೇರಿಸಲಿದೆಯಾ ಕಾದು ನೋಡಬೇಕಿದೆ.

ಹೀಗಾಗಿಯೇ ಐಪಿಎಲ್ 2025 ರಲ್ಲಿ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳುವುದು ಖಚಿತ. ಅದರಂತೆ ಈ ಬಾರಿ ಕಿಂಗ್ ಕೊಹ್ಲಿ ಸಾರಥ್ಯದಲ್ಲಿ ಆರ್​ಸಿಬಿ ಪಡೆ ಕಣಕ್ಕಿಳಿಯಲಿದ್ದು, ಈ ಮೂಲಕ 17 ವರ್ಷಗಳ ಕಪ್ ಗೆಲ್ಲಬೇಕೆಂಬ ಕನಸನ್ನು ಈಡೇರಿಸಲಿದೆಯಾ ಕಾದು ನೋಡಬೇಕಿದೆ.

5 / 5
Follow Us
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!