AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ತಂಡಕ್ಕೆ ವಿರಾಟ್ ಕೊಹ್ಲಿ ನಾಯಕ

IPL 2025 Virat Kohli: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ವಿರಾಟ್ ಕೊಹ್ಲಿ 143 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಈ ವೇಳೆ 66 ಪಂದ್ಯಗಳಲ್ಲಿ ಆರ್​ಸಿಬಿ ಜಯ ಸಾಧಿಸಿದೆ. ಹಾಗೆಯೇ 2016 ರಲ್ಲಿ ಕಿಂಗ್ ಕೊಹ್ಲಿ ನಾಯಕತ್ವದಲ್ಲೇ ಆರ್​ಸಿಬಿ ಫೈನಲ್​ಗೆ ಪ್ರವೇಶಿಸಿತ್ತು.

ಝಾಹಿರ್ ಯೂಸುಫ್
|

Updated on: Nov 26, 2024 | 7:41 AM

Share
ಐಪಿಎಲ್ ಸೀಸನ್-18ರ ಮೆಗಾ ಹರಾಜು ಪೂರ್ಣಗೊಂಡಿದೆ. ಈ ಬಾರಿಯ ಹರಾಜಿನ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು 19 ಆಟಗಾರರನ್ನು ಖರೀದಿಸಿದೆ. ಈ ಮೂಲಕ ಆರ್​ಸಿಬಿ ಫ್ರಾಂಚೈಸಿ 22 ಆಟಗಾರರ ಬಲಿಷ್ಠ ಪಡೆಯನ್ನು ರೂಪಿಸಿದೆ. ಆದರೆ ಈ ಪಡೆಯನ್ನು ಮುನ್ನಡೆಸುವವರು ಯಾರು ಎಂಬುದೇ ಈಗ ಪ್ರಶ್ನೆ.

ಐಪಿಎಲ್ ಸೀಸನ್-18ರ ಮೆಗಾ ಹರಾಜು ಪೂರ್ಣಗೊಂಡಿದೆ. ಈ ಬಾರಿಯ ಹರಾಜಿನ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು 19 ಆಟಗಾರರನ್ನು ಖರೀದಿಸಿದೆ. ಈ ಮೂಲಕ ಆರ್​ಸಿಬಿ ಫ್ರಾಂಚೈಸಿ 22 ಆಟಗಾರರ ಬಲಿಷ್ಠ ಪಡೆಯನ್ನು ರೂಪಿಸಿದೆ. ಆದರೆ ಈ ಪಡೆಯನ್ನು ಮುನ್ನಡೆಸುವವರು ಯಾರು ಎಂಬುದೇ ಈಗ ಪ್ರಶ್ನೆ.

1 / 5
ಈ ಪ್ರಶ್ನೆಗೆ ಆರ್​ಸಿಬಿ ಕಡೆಯಿಂದ ಕೇಳಿ ಬರುತ್ತಿರುವ ಉತ್ತರ ವಿರಾಟ್ ಕೊಹ್ಲಿ. ಆರ್​ಸಿಬಿ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ವಿರಾಟ್ ಕೊಹ್ಲಿ, ಯಶ್ ದಯಾಳ್ ಹಾಗೂ ರಜತ್ ಪಾಟಿದಾರ್ ಅವರನ್ನು ಉಳಿಸಿಕೊಂಡಿತ್ತು. ಇದೀಗ ಹರಾಜಿನ ಮೂಲಕ 19 ಆಟಗಾರರನ್ನು ಆಯ್ಕೆ ಮಾಡಿಕೊಂಡಿದೆ. ಹೀಗೆ ಆರ್​ಸಿಬಿಗೆ ಎಂಟ್ರಿ ಕೊಟ್ಟಿರುವ 19 ಆಟಗಾರರಲ್ಲಿ ಯಾರು ಸಹ ಯಶಸ್ವಿ ನಾಯಕರಾಗಿ ಗುರುತಿಸಿಕೊಂಡಿಲ್ಲ. ಅಂದರೆ ಯಾವುದೇ ತಂಡದ ಖಾಯಂ ನಾಯಕರಾಗಿ ಕಾಣಿಸಿಕೊಂಡಿಲ್ಲ.

ಈ ಪ್ರಶ್ನೆಗೆ ಆರ್​ಸಿಬಿ ಕಡೆಯಿಂದ ಕೇಳಿ ಬರುತ್ತಿರುವ ಉತ್ತರ ವಿರಾಟ್ ಕೊಹ್ಲಿ. ಆರ್​ಸಿಬಿ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ವಿರಾಟ್ ಕೊಹ್ಲಿ, ಯಶ್ ದಯಾಳ್ ಹಾಗೂ ರಜತ್ ಪಾಟಿದಾರ್ ಅವರನ್ನು ಉಳಿಸಿಕೊಂಡಿತ್ತು. ಇದೀಗ ಹರಾಜಿನ ಮೂಲಕ 19 ಆಟಗಾರರನ್ನು ಆಯ್ಕೆ ಮಾಡಿಕೊಂಡಿದೆ. ಹೀಗೆ ಆರ್​ಸಿಬಿಗೆ ಎಂಟ್ರಿ ಕೊಟ್ಟಿರುವ 19 ಆಟಗಾರರಲ್ಲಿ ಯಾರು ಸಹ ಯಶಸ್ವಿ ನಾಯಕರಾಗಿ ಗುರುತಿಸಿಕೊಂಡಿಲ್ಲ. ಅಂದರೆ ಯಾವುದೇ ತಂಡದ ಖಾಯಂ ನಾಯಕರಾಗಿ ಕಾಣಿಸಿಕೊಂಡಿಲ್ಲ.

2 / 5
ಇತ್ತ 22 ಆಟಗಾರರಲ್ಲಿ ನಾಯಕತ್ವದ ಅನುಭವ ಹೊಂದಿರುವವರು ವಿರಾಟ್ ಕೊಹ್ಲಿ ಮಾತ್ರ. ಹೀಗಾಗಿಯೇ ಆರ್​ಸಿಬಿ ಫ್ರಾಂಚೈಸಿ ಕಿಂಗ್ ಕೊಹ್ಲಿಗೆ ಕ್ಯಾಪ್ಟನ್ ಪಟ್ಟ ನೀಡುವುದು ಖಚಿತ ಎನ್ನಲಾಗುತ್ತಿದೆ. ಇದೇ ಕಾರಣದಿಂದಾಗಿ ಈ ಬಾರಿಯ ಮೆಗಾ ಹರಾಜಿನಲ್ಲಿ ಆರ್​ಸಿಬಿ ನಾಯಕನ ಸ್ಥಾನ ತುಂಬಲು ಯಾವುದೇ ಆಟಗಾರನನ್ನು ಟಾರ್ಗೆಟ್ ಮಾಡಿರಲಿಲ್ಲ ಎಂದು ತಿಳಿದು ಬಂದಿದೆ.

ಇತ್ತ 22 ಆಟಗಾರರಲ್ಲಿ ನಾಯಕತ್ವದ ಅನುಭವ ಹೊಂದಿರುವವರು ವಿರಾಟ್ ಕೊಹ್ಲಿ ಮಾತ್ರ. ಹೀಗಾಗಿಯೇ ಆರ್​ಸಿಬಿ ಫ್ರಾಂಚೈಸಿ ಕಿಂಗ್ ಕೊಹ್ಲಿಗೆ ಕ್ಯಾಪ್ಟನ್ ಪಟ್ಟ ನೀಡುವುದು ಖಚಿತ ಎನ್ನಲಾಗುತ್ತಿದೆ. ಇದೇ ಕಾರಣದಿಂದಾಗಿ ಈ ಬಾರಿಯ ಮೆಗಾ ಹರಾಜಿನಲ್ಲಿ ಆರ್​ಸಿಬಿ ನಾಯಕನ ಸ್ಥಾನ ತುಂಬಲು ಯಾವುದೇ ಆಟಗಾರನನ್ನು ಟಾರ್ಗೆಟ್ ಮಾಡಿರಲಿಲ್ಲ ಎಂದು ತಿಳಿದು ಬಂದಿದೆ.

3 / 5
ಅಲ್ಲದೆ ಆರ್​ಸಿಬಿ ಮೂಲಗಳ ಮಾಹಿತಿ ಪ್ರಕಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಈಗಾಗಲೇ ಕ್ಯಾಪ್ಟನ್ ಯಾರೆಂಬುದು ನಿರ್ಧರಿಸಿಯಾಗಿದೆ. ಅಂದರೆ ಮೆಗಾ ಹರಾಜಿಗೂ ಮುನ್ನವೇ ಐಪಿಎಲ್ ಸೀಸನ್-18 ರಲ್ಲಿ ಆರ್​ಸಿಬಿ ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎಂಬುದು ನಿರ್ಧರಿತವಾಗಿದೆ.

ಅಲ್ಲದೆ ಆರ್​ಸಿಬಿ ಮೂಲಗಳ ಮಾಹಿತಿ ಪ್ರಕಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಈಗಾಗಲೇ ಕ್ಯಾಪ್ಟನ್ ಯಾರೆಂಬುದು ನಿರ್ಧರಿಸಿಯಾಗಿದೆ. ಅಂದರೆ ಮೆಗಾ ಹರಾಜಿಗೂ ಮುನ್ನವೇ ಐಪಿಎಲ್ ಸೀಸನ್-18 ರಲ್ಲಿ ಆರ್​ಸಿಬಿ ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎಂಬುದು ನಿರ್ಧರಿತವಾಗಿದೆ.

4 / 5
ಹೀಗಾಗಿಯೇ ಐಪಿಎಲ್ 2025 ರಲ್ಲಿ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳುವುದು ಖಚಿತ. ಅದರಂತೆ ಈ ಬಾರಿ ಕಿಂಗ್ ಕೊಹ್ಲಿ ಸಾರಥ್ಯದಲ್ಲಿ ಆರ್​ಸಿಬಿ ಪಡೆ ಕಣಕ್ಕಿಳಿಯಲಿದ್ದು, ಈ ಮೂಲಕ 17 ವರ್ಷಗಳ ಕಪ್ ಗೆಲ್ಲಬೇಕೆಂಬ ಕನಸನ್ನು ಈಡೇರಿಸಲಿದೆಯಾ ಕಾದು ನೋಡಬೇಕಿದೆ.

ಹೀಗಾಗಿಯೇ ಐಪಿಎಲ್ 2025 ರಲ್ಲಿ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳುವುದು ಖಚಿತ. ಅದರಂತೆ ಈ ಬಾರಿ ಕಿಂಗ್ ಕೊಹ್ಲಿ ಸಾರಥ್ಯದಲ್ಲಿ ಆರ್​ಸಿಬಿ ಪಡೆ ಕಣಕ್ಕಿಳಿಯಲಿದ್ದು, ಈ ಮೂಲಕ 17 ವರ್ಷಗಳ ಕಪ್ ಗೆಲ್ಲಬೇಕೆಂಬ ಕನಸನ್ನು ಈಡೇರಿಸಲಿದೆಯಾ ಕಾದು ನೋಡಬೇಕಿದೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಆಲಿಕಲ್ಲು ಮಳೆ; ಮನೆ ಮೇಲ್ಚಾವಣಿ ಮೇಲಿನ ಕಲ್ಲುಬಿದ್ದು 6 ವರ್ಷದ ಮಗು ಸಾವು
ಆಲಿಕಲ್ಲು ಮಳೆ; ಮನೆ ಮೇಲ್ಚಾವಣಿ ಮೇಲಿನ ಕಲ್ಲುಬಿದ್ದು 6 ವರ್ಷದ ಮಗು ಸಾವು
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ