AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ಹಿಂದಿ ಖಾತೆ ವಿರುದ್ಧ ತಿರುಗಿಬಿದ್ದ ಕನ್ನಡಿಗರು

IPL 2025: ಐಪಿಎಲ್ ಮೆಗಾ ಹರಾಜಿನ ಮೂಲಕ ಆರ್​​ಸಿಬಿ ಫ್ರಾಂಚೈಸಿಯು ಕೇವಲ ಇಬ್ಬರು ಕನ್ನಡಿಗರನ್ನು ಮಾತ್ರ ಖರೀದಿಸಿದೆ. ಅದರಂತೆ ದೇವದತ್ ಪಡಿಕ್ಕಲ್ ಹಾಗೂ ಮನೋಜ್ ಭಾಂಡಗೆ ಆರ್​​ಸಿಬಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇದಾಗ್ಯೂ ಕರ್ನಾಟಕದ ಬೇರೆ ಆಟಗಾರರಿಗೆ ಮಣೆ ಹಾಕದಿರುವ ಬಗ್ಗೆ ಆರ್​​ಸಿಬಿ ವಿರುದ್ಧ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದರು. ಇದೀಗ ಹಿಂದಿ ಖಾತೆ ತೆರೆಯುವ ಮೂಲಕ ಮತ್ತೊಮ್ಮೆ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 27, 2024 | 10:30 AM

Share
ರಾಯಲ್ ಚಾಲೆಂಜರ್ಸ್ ಬೆಂಗಳೂರು… ಇದು ಕನ್ನಡಿಗರ ಪಾಲಿಗೆ ಕೇವಲ ತಂಡವಲ್ಲ. ಅದೊಂದು ಭಾವನೆ. ಹೀಗಾಗಿಯೇ ಸೋತರೂ, ಗೆದ್ದರೂ ಕಳೆದ 17 ವರ್ಷಗಳಿಂದ ಆರ್​​ಸಿಬಿ ತಂಡವನ್ನು ಕನ್ನಡಿಗರು ಕೈ ಬಿಟ್ಟಿಲ್ಲ. ಆದರೆ ಇದೀಗ ಆರ್​​ಸಿಬಿ ಫ್ರಾಂಚೈಸಿ ತೆಗೆದುಕೊಂಡ ಒಂದು ನಿರ್ಧಾರದ ವಿರುದ್ಧ ಕರ್ನಾಟಕದ ಅಭಿಮಾನಿಗಳೇ ತಿರುಗಿ ಬಿದ್ದಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು… ಇದು ಕನ್ನಡಿಗರ ಪಾಲಿಗೆ ಕೇವಲ ತಂಡವಲ್ಲ. ಅದೊಂದು ಭಾವನೆ. ಹೀಗಾಗಿಯೇ ಸೋತರೂ, ಗೆದ್ದರೂ ಕಳೆದ 17 ವರ್ಷಗಳಿಂದ ಆರ್​​ಸಿಬಿ ತಂಡವನ್ನು ಕನ್ನಡಿಗರು ಕೈ ಬಿಟ್ಟಿಲ್ಲ. ಆದರೆ ಇದೀಗ ಆರ್​​ಸಿಬಿ ಫ್ರಾಂಚೈಸಿ ತೆಗೆದುಕೊಂಡ ಒಂದು ನಿರ್ಧಾರದ ವಿರುದ್ಧ ಕರ್ನಾಟಕದ ಅಭಿಮಾನಿಗಳೇ ತಿರುಗಿ ಬಿದ್ದಿದ್ದಾರೆ.

1 / 5
ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಸೋಷಿಯಲ್ ಮೀಡಿಯಾದಲ್ಲಿ ಅಧಿಕೃತ ಹಿಂದಿ ಖಾತೆಯನ್ನು ತೆರೆದಿದೆ. ಆರ್​ಸಿಬಿಯ ಈ ನಿರ್ಧಾರಕ್ಕೆ ಇದೀಗ ಕನ್ನಡಿಗರು ಆಕ್ರೋಶಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಸೋಷಿಯಲ್ ಮೀಡಿಯಾದಲ್ಲಿ ಅಧಿಕೃತ ಹಿಂದಿ ಖಾತೆಯನ್ನು ತೆರೆದಿದೆ. ಆರ್​ಸಿಬಿಯ ಈ ನಿರ್ಧಾರಕ್ಕೆ ಇದೀಗ ಕನ್ನಡಿಗರು ಆಕ್ರೋಶಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

2 / 5
RCB ಫ್ರಾಂಚೈಸಿ ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಲ್ಲಿ ಹಿಂದಿಯನ್ನು ಬಳಸುವುದನ್ನು ನೋಡಲು ಬೇಸರವಾಗುತ್ತದೆ. ಬೆಂಗಳೂರು ಕನ್ನಡ  ಸಂಸ್ಕೃತಿ ಮತ್ತು ಭಾಷೆಯನ್ನು ಪ್ರತಿನಿಧಿಸುತ್ತದೆ. ಹೀಗಾಗಿ RCB ಕನ್ನಡ ಮತ್ತು ಇಂಗ್ಲಿಷ್​​ಗೆ ಆದ್ಯತೆ ನೀಡುವ ಮೂಲಕ ಇದನ್ನು ಗೌರವಿಸಬೇಕು ಎಂದು ವ್ಯಕ್ತಿಯೊಬ್ಬರು ಬರೆದುಕೊಂಡಿದ್ದಾರೆ. ಇನ್ನು ಮತ್ತೊಬ್ಬರು ಕರ್ನಾಟಕಕ್ಕೂ ಹಿಂದಿಗೂ ಏನು ಸಂಬಂಧ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ಆರ್​​ಸಿಬಿ ಹಿಂದಿ ಖಾತೆಯನ್ನು ಡಿಲೀಟ್ ಮಾಡಬೇಕೆಂದು ಅನೇಕರು ಆಗ್ರಹಿಸಿದ್ದಾರೆ.

RCB ಫ್ರಾಂಚೈಸಿ ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಲ್ಲಿ ಹಿಂದಿಯನ್ನು ಬಳಸುವುದನ್ನು ನೋಡಲು ಬೇಸರವಾಗುತ್ತದೆ. ಬೆಂಗಳೂರು ಕನ್ನಡ ಸಂಸ್ಕೃತಿ ಮತ್ತು ಭಾಷೆಯನ್ನು ಪ್ರತಿನಿಧಿಸುತ್ತದೆ. ಹೀಗಾಗಿ RCB ಕನ್ನಡ ಮತ್ತು ಇಂಗ್ಲಿಷ್​​ಗೆ ಆದ್ಯತೆ ನೀಡುವ ಮೂಲಕ ಇದನ್ನು ಗೌರವಿಸಬೇಕು ಎಂದು ವ್ಯಕ್ತಿಯೊಬ್ಬರು ಬರೆದುಕೊಂಡಿದ್ದಾರೆ. ಇನ್ನು ಮತ್ತೊಬ್ಬರು ಕರ್ನಾಟಕಕ್ಕೂ ಹಿಂದಿಗೂ ಏನು ಸಂಬಂಧ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ಆರ್​​ಸಿಬಿ ಹಿಂದಿ ಖಾತೆಯನ್ನು ಡಿಲೀಟ್ ಮಾಡಬೇಕೆಂದು ಅನೇಕರು ಆಗ್ರಹಿಸಿದ್ದಾರೆ.

3 / 5
ಇನ್ನೂ ಕೆಲವರು ಆರ್​​ಸಿಬಿ ಹಿಂದಿ ಖಾತೆಯನ್ನು ಬ್ಲಾಕ್ ಮಾಡುವಂತೆ ಅಭಿಯಾನ ಆರಂಭಿಸಿದ್ದಾರೆ. ಹಾಗೆಯೇ ಆರ್​​ಸಿಬಿ ಹಿಂದಿ ಹೇರಿಕೆಯನ್ನು ನಿಲ್ಲಿಸಬೇಕೆಂದು ಕೆಲ ಕನ್ನಡಿಗರು ಆಗ್ರಹಿಸಿದ್ದಾರೆ. ಒಟ್ಟಿನಲ್ಲಿ ಆರ್​​ಸಿಬಿ ಹಿಂದಿಯ ಖಾತೆಗೆ ಇದೀಗ ಆರ್​​ಸಿಬಿ ಅಭಿಮಾನಿಗಳಿಂದಲೇ ಆಕ್ರೋಶ ಮೂಡಿ ಬರುತ್ತಿದೆ.

ಇನ್ನೂ ಕೆಲವರು ಆರ್​​ಸಿಬಿ ಹಿಂದಿ ಖಾತೆಯನ್ನು ಬ್ಲಾಕ್ ಮಾಡುವಂತೆ ಅಭಿಯಾನ ಆರಂಭಿಸಿದ್ದಾರೆ. ಹಾಗೆಯೇ ಆರ್​​ಸಿಬಿ ಹಿಂದಿ ಹೇರಿಕೆಯನ್ನು ನಿಲ್ಲಿಸಬೇಕೆಂದು ಕೆಲ ಕನ್ನಡಿಗರು ಆಗ್ರಹಿಸಿದ್ದಾರೆ. ಒಟ್ಟಿನಲ್ಲಿ ಆರ್​​ಸಿಬಿ ಹಿಂದಿಯ ಖಾತೆಗೆ ಇದೀಗ ಆರ್​​ಸಿಬಿ ಅಭಿಮಾನಿಗಳಿಂದಲೇ ಆಕ್ರೋಶ ಮೂಡಿ ಬರುತ್ತಿದೆ.

4 / 5
ಇಲ್ಲಿ ಕನ್ನಡಿಗರು ಮುಂದಿಡುತ್ತಿರುವ ಪ್ರಶ್ನೆಯೆಂದರೆ… ಕರ್ನಾಟಕದಲ್ಲಿ ಇತರೆ ತಂಡಗಳ ಅಭಿಮಾನಿಗಳಿದ್ದಾರೆ. ಇದಾಗ್ಯೂ ಡೆಲ್ಲಿ ಕ್ಯಾಪಿಟಲ್ಸ್, ಗುಜರಾತ್ ಟೈಟಾನ್ಸ್, ಪಂಜಾಬ್ ಕಿಂಗ್ಸ್​, ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿಗಳು ಕನ್ನಡದಲ್ಲಿ ಖಾತೆ ತೆರೆದಿಲ್ಲ. ಆದರೆ ಆರ್​​ಸಿಬಿ ಫ್ರಾಂಚೈಸಿಗೇಕೆ ಈ ದರದು? ಎಂದು ಪ್ರಶ್ನಿಸುತ್ತಿದ್ದಾರೆ. ಅಲ್ಲದೆ ಇದು ಹಿಂದಿ ಹೇರಿಕೆಯ ಮತ್ತೊಂದು ವಾಮಮಾರ್ಗ ಎಂದು ಅನೇಕರು ಆರೋಪಿಸಿದ್ದಾರೆ. ಒಟ್ಟಿನಲ್ಲಿ ಒಂದು ಖಾತೆಯಿಂದ ಆರ್​ಸಿಬಿ ಫ್ರಾಂಚೈಸಿಯು ಇದೀಗ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ.

ಇಲ್ಲಿ ಕನ್ನಡಿಗರು ಮುಂದಿಡುತ್ತಿರುವ ಪ್ರಶ್ನೆಯೆಂದರೆ… ಕರ್ನಾಟಕದಲ್ಲಿ ಇತರೆ ತಂಡಗಳ ಅಭಿಮಾನಿಗಳಿದ್ದಾರೆ. ಇದಾಗ್ಯೂ ಡೆಲ್ಲಿ ಕ್ಯಾಪಿಟಲ್ಸ್, ಗುಜರಾತ್ ಟೈಟಾನ್ಸ್, ಪಂಜಾಬ್ ಕಿಂಗ್ಸ್​, ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿಗಳು ಕನ್ನಡದಲ್ಲಿ ಖಾತೆ ತೆರೆದಿಲ್ಲ. ಆದರೆ ಆರ್​​ಸಿಬಿ ಫ್ರಾಂಚೈಸಿಗೇಕೆ ಈ ದರದು? ಎಂದು ಪ್ರಶ್ನಿಸುತ್ತಿದ್ದಾರೆ. ಅಲ್ಲದೆ ಇದು ಹಿಂದಿ ಹೇರಿಕೆಯ ಮತ್ತೊಂದು ವಾಮಮಾರ್ಗ ಎಂದು ಅನೇಕರು ಆರೋಪಿಸಿದ್ದಾರೆ. ಒಟ್ಟಿನಲ್ಲಿ ಒಂದು ಖಾತೆಯಿಂದ ಆರ್​ಸಿಬಿ ಫ್ರಾಂಚೈಸಿಯು ಇದೀಗ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ