AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಕೆಎಲ್ ರಾಹುಲ್​ಗೆ 7 ಕೋಟಿ, ಜಿತೇಶ್ ಶರ್ಮಾಗೆ 11 ಕೋಟಿ: RCB ಅಚ್ಚರಿಯ ನಿರ್ಧಾರ

IPL 2025 Auction: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಮೆಗಾ ಹರಾಜಿನ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಜಿತೇಶ್ ಶರ್ಮಾ ಅವರನ್ನು ಖರೀದಿಸಿದೆ. ಅದು ಕೂಡ 11 ಕೋಟಿ ರೂ. ನೀಡುವ ಮೂಲಕ ಎಂಬುದೇ ಅಚ್ಚರಿ. ಅತ್ತ ಕೆಎಲ್ ರಾಹುಲ್ ಖರೀದಿಗೆ ಆರ್​ಸಿಬಿ ನಿರಾಸಕ್ತಿ ತೋರಿರುವುದು ಇದೀಗ ಅಭಿಮಾನಿಗಳ ಅಚ್ಚರಿಗೆ ಕಾರಣವಾಗಿದೆ.

ಝಾಹಿರ್ ಯೂಸುಫ್
|

Updated on:Nov 25, 2024 | 8:30 AM

Share
ಐಪಿಎಲ್ ಮೆಗಾ ಹರಾಜಿನ ಮೊದಲ ದಿನದ ಬಿಡ್ಡಿಂಗ್​ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಒಟ್ಟು 6 ಆಟಗಾರರನ್ನು ಖರೀದಿಸಿದೆ. ಈ ಆರು ಆಟಗಾರರಲ್ಲಿ ಮೂವರು ಭಾರತೀಯರು, ಮೂವರು ವಿದೇಶಿ ಆಟಗಾರರಿದ್ದಾರೆ.

ಐಪಿಎಲ್ ಮೆಗಾ ಹರಾಜಿನ ಮೊದಲ ದಿನದ ಬಿಡ್ಡಿಂಗ್​ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಒಟ್ಟು 6 ಆಟಗಾರರನ್ನು ಖರೀದಿಸಿದೆ. ಈ ಆರು ಆಟಗಾರರಲ್ಲಿ ಮೂವರು ಭಾರತೀಯರು, ಮೂವರು ವಿದೇಶಿ ಆಟಗಾರರಿದ್ದಾರೆ.

1 / 6
ಇವರಲ್ಲಿ ಅತ್ಯಧಿಕ ಮೊತ್ತ ಪಡೆದ ಭಾರತೀಯ ಆಟಗಾರನೆಂದರೆ ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾ. ಕಳೆದ ಸೀಸನ್​ನಲ್ಲಿ ಪಂಜಾಬ್ ಕಿಂಗ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದ ಜಿತೇಶ್ ಶರ್ಮಾ ಅವರನ್ನು ಈ ಬಾರಿ ಆರ್​ಸಿಬಿ ಬರೋಬ್ಬರಿ 11 ಕೋಟಿ ರೂ. ನೀಡಿ ಖರೀದಿಸಿದೆ.

ಇವರಲ್ಲಿ ಅತ್ಯಧಿಕ ಮೊತ್ತ ಪಡೆದ ಭಾರತೀಯ ಆಟಗಾರನೆಂದರೆ ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾ. ಕಳೆದ ಸೀಸನ್​ನಲ್ಲಿ ಪಂಜಾಬ್ ಕಿಂಗ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದ ಜಿತೇಶ್ ಶರ್ಮಾ ಅವರನ್ನು ಈ ಬಾರಿ ಆರ್​ಸಿಬಿ ಬರೋಬ್ಬರಿ 11 ಕೋಟಿ ರೂ. ನೀಡಿ ಖರೀದಿಸಿದೆ.

2 / 6
ಇಲ್ಲಿ ಇಂಟ್ರೆಸ್ಟಿಂಗ್ ವಿಷಯ ಎಂದರೆ, ಕೆಎಲ್ ರಾಹುಲ್ ಅವರ ಖರೀದಿಗೆ ಆರ್​ಸಿಬಿ ಹೆಚ್ಚಿನ ಆಸಕ್ತಿವಹಿಸದಿರುವುದು. ಅಂದರೆ ಮೊದಲ ಸುತ್ತಿನಲ್ಲಿ ಒಂದಷ್ಟು ಬಿಡ್ಡಿಂಗ್ ನಡೆಸಿದ ಆರ್​ಸಿಬಿ ಕೆಎಲ್ ರಾಹುಲ್ ಅವರ ಮೌಲ್ಯ 7 ಕೋಟಿ ರೂ. ದಾಟುತ್ತಿದ್ದಂತೆ ಬಿಡ್ಡಿಂಗ್ ನಿಲ್ಲಿಸಿದ್ದರು.

ಇಲ್ಲಿ ಇಂಟ್ರೆಸ್ಟಿಂಗ್ ವಿಷಯ ಎಂದರೆ, ಕೆಎಲ್ ರಾಹುಲ್ ಅವರ ಖರೀದಿಗೆ ಆರ್​ಸಿಬಿ ಹೆಚ್ಚಿನ ಆಸಕ್ತಿವಹಿಸದಿರುವುದು. ಅಂದರೆ ಮೊದಲ ಸುತ್ತಿನಲ್ಲಿ ಒಂದಷ್ಟು ಬಿಡ್ಡಿಂಗ್ ನಡೆಸಿದ ಆರ್​ಸಿಬಿ ಕೆಎಲ್ ರಾಹುಲ್ ಅವರ ಮೌಲ್ಯ 7 ಕೋಟಿ ರೂ. ದಾಟುತ್ತಿದ್ದಂತೆ ಬಿಡ್ಡಿಂಗ್ ನಿಲ್ಲಿಸಿದ್ದರು.

3 / 6
ಅಂದರೆ ಕೆಎಲ್ ರಾಹುಲ್​ಗಾಗಿ 7 ಕೋಟಿ ರೂ.ಗಿಂತ ಅಧಿಕ ಮೊತ್ತ ವ್ಯಯಿಸಲು ಆರ್​ಸಿಬಿ ಮುಂದಾಗಲಿಲ್ಲ. ಆದರೆ ಅಚ್ಚರಿ ಎಂದರೆ, ಇದೇ ಆರ್​ಸಿಬಿ ಜಿತೇಶ್ ಶರ್ಮಾ ಅವರನ್ನು ಬರೋಬ್ಬರಿ 11 ಕೋಟಿ ರೂ. ನೀಡಿ ಖರೀದಿಸಿದರು. ಇಲ್ಲಿ ಎಲ್ಲಾ ರೀತಿಯಲ್ಲೂ ಜಿತೇಶ್ ಶರ್ಮಾಗಿಂತ ಕೆಎಲ್ ರಾಹುಲ್ ಉತ್ತಮ ಆಯ್ಕೆಯಾಗಿತ್ತು.

ಅಂದರೆ ಕೆಎಲ್ ರಾಹುಲ್​ಗಾಗಿ 7 ಕೋಟಿ ರೂ.ಗಿಂತ ಅಧಿಕ ಮೊತ್ತ ವ್ಯಯಿಸಲು ಆರ್​ಸಿಬಿ ಮುಂದಾಗಲಿಲ್ಲ. ಆದರೆ ಅಚ್ಚರಿ ಎಂದರೆ, ಇದೇ ಆರ್​ಸಿಬಿ ಜಿತೇಶ್ ಶರ್ಮಾ ಅವರನ್ನು ಬರೋಬ್ಬರಿ 11 ಕೋಟಿ ರೂ. ನೀಡಿ ಖರೀದಿಸಿದರು. ಇಲ್ಲಿ ಎಲ್ಲಾ ರೀತಿಯಲ್ಲೂ ಜಿತೇಶ್ ಶರ್ಮಾಗಿಂತ ಕೆಎಲ್ ರಾಹುಲ್ ಉತ್ತಮ ಆಯ್ಕೆಯಾಗಿತ್ತು.

4 / 6
ಇದಾಗ್ಯೂ ಆರ್​ಸಿಬಿ ಆಕ್ಷನ್ ಬಳಗವು ರಾಹುಲ್​ ಖರೀದಿಗಾಗಿ ಹೆಚ್ಚಿನ ಆಸಕ್ತಿವಹಿಸದಿರುವುದು ಅಚ್ಚರಿಕೆಗೆ ಕಾರಣವಾಗಿತ್ತು. ಒಂದು ವೇಳೆ ಆರ್​ಸಿಬಿ ಜಿತೇಶ್ ಶರ್ಮಾಗೆ ವ್ಯಯಿಸಿದ 11 ಕೋಟಿ ರೂ.ಗಿಂತ ಒಂದೆರಡು ಕೋಟಿ ರೂ. ಹೆಚ್ಚು ನೀಡಿದ್ದರೂ ರಾಹುಲ್ ಆರ್​ಸಿಬಿ ಪಾಲಾಗುತ್ತಿತ್ತು.

ಇದಾಗ್ಯೂ ಆರ್​ಸಿಬಿ ಆಕ್ಷನ್ ಬಳಗವು ರಾಹುಲ್​ ಖರೀದಿಗಾಗಿ ಹೆಚ್ಚಿನ ಆಸಕ್ತಿವಹಿಸದಿರುವುದು ಅಚ್ಚರಿಕೆಗೆ ಕಾರಣವಾಗಿತ್ತು. ಒಂದು ವೇಳೆ ಆರ್​ಸಿಬಿ ಜಿತೇಶ್ ಶರ್ಮಾಗೆ ವ್ಯಯಿಸಿದ 11 ಕೋಟಿ ರೂ.ಗಿಂತ ಒಂದೆರಡು ಕೋಟಿ ರೂ. ಹೆಚ್ಚು ನೀಡಿದ್ದರೂ ರಾಹುಲ್ ಆರ್​ಸಿಬಿ ಪಾಲಾಗುತ್ತಿತ್ತು.

5 / 6
ಏಕೆಂದರೆ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಕೆಎಲ್ ರಾಹುಲ್ ಅವರನ್ನು ಖರೀದಿಸಿದ್ದು 14 ಕೋಟಿ ರೂ.ಗೆ. ಆರ್​ಸಿಬಿ ಫ್ರಾಂಚೈಸಿಯು ನಿರಾಸಕ್ತಿ ತೋರಿದ್ದರಿಂದ ಇದೀಗ ತವರಿನ ತಂಡದ ಪರ ಮತ್ತೆ ಕಣಕ್ಕಿಳಿಯಬೇಕೆಂಬ ಕೆಎಲ್ ರಾಹುಲ್ ಅವರ ಕನಸು ಕಮರಿದೆ. ಇತ್ತ ಕನ್ನಡಿಗನನ್ನು ಮತ್ತೆ ಆರ್​ಸಿಬಿ ತಂಡದಲ್ಲಿ ನೋಡಬೇಕೆಂಬ ಕನ್ನಡಿಗರ ಆಸೆಗೂ ತೆರೆಬಿದ್ದಂತಾಗಿದೆ.

ಏಕೆಂದರೆ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಕೆಎಲ್ ರಾಹುಲ್ ಅವರನ್ನು ಖರೀದಿಸಿದ್ದು 14 ಕೋಟಿ ರೂ.ಗೆ. ಆರ್​ಸಿಬಿ ಫ್ರಾಂಚೈಸಿಯು ನಿರಾಸಕ್ತಿ ತೋರಿದ್ದರಿಂದ ಇದೀಗ ತವರಿನ ತಂಡದ ಪರ ಮತ್ತೆ ಕಣಕ್ಕಿಳಿಯಬೇಕೆಂಬ ಕೆಎಲ್ ರಾಹುಲ್ ಅವರ ಕನಸು ಕಮರಿದೆ. ಇತ್ತ ಕನ್ನಡಿಗನನ್ನು ಮತ್ತೆ ಆರ್​ಸಿಬಿ ತಂಡದಲ್ಲಿ ನೋಡಬೇಕೆಂಬ ಕನ್ನಡಿಗರ ಆಸೆಗೂ ತೆರೆಬಿದ್ದಂತಾಗಿದೆ.

6 / 6

Published On - 8:29 am, Mon, 25 November 24

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್