AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ಯಲ್ಲಿ ಇಬ್ಬರು, DC ಯಲ್ಲಿ ಮೂವರು ಕನ್ನಡಿಗರು..!

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರ ಮೆಗಾ ಹರಾಜಿನಲ್ಲಿ ಕರ್ನಾಟಕದ 24 ಆಟಗಾರರು ಕಾಣಿಸಿಕೊಂಡಿದ್ದರು. ಇವರಲ್ಲಿ ಆರ್​​ಸಿಬಿ ಫ್ರಾಂಚೈಸಿಯು ಕೇವಲ ಇಬ್ಬರನ್ನು ಮಾತ್ರ ಖರೀದಿಸಿದೆ. ಅತ್ತ ಡೆಲ್ಲಿ ಕ್ಯಾಪಿಟಲ್ಸ್ ಮೂವರನ್ನು ಖರೀದಿಸಿ ಒಂದು ಹೆಜ್ಜೆ ಮುಂದೆ ಹೋಗಿರುವುದು ವಿಶೇಷ.

ಝಾಹಿರ್ ಯೂಸುಫ್
|

Updated on: Nov 26, 2024 | 1:54 PM

Share
ಐಪಿಎಲ್ ಮೆಗಾ ಹರಾಜಿನ ಮೂಲಕ RCB ಫ್ರಾಂಚೈಸಿಯು 22 ಸದಸ್ಯರ ಬಲಿಷ್ಠ ಬಳಗವನ್ನು ರೂಪಿಸಿದೆ. ಈ ಬಳಗದಲ್ಲಿ ಕರ್ನಾಟಕದಿಂದ ಆಯ್ಕೆಯಾಗಿರುವುದು ಕೇವಲ ಇಬ್ಬರು ಮಾತ್ರ ಎಂಬುದೇ ಅಚ್ಚರಿ. ಅದರಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಕರ್ನಾಟಕದ ಯುವ ಪ್ರತಿಭೆಗಳನ್ನು ನಿರ್ಲಕ್ಷಿಸಿದ್ದಾರೆ ಎಂಬ ಆರೋಪವೊಂದು ಕೇಳಿ ಬಂದಿದೆ.

ಐಪಿಎಲ್ ಮೆಗಾ ಹರಾಜಿನ ಮೂಲಕ RCB ಫ್ರಾಂಚೈಸಿಯು 22 ಸದಸ್ಯರ ಬಲಿಷ್ಠ ಬಳಗವನ್ನು ರೂಪಿಸಿದೆ. ಈ ಬಳಗದಲ್ಲಿ ಕರ್ನಾಟಕದಿಂದ ಆಯ್ಕೆಯಾಗಿರುವುದು ಕೇವಲ ಇಬ್ಬರು ಮಾತ್ರ ಎಂಬುದೇ ಅಚ್ಚರಿ. ಅದರಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಕರ್ನಾಟಕದ ಯುವ ಪ್ರತಿಭೆಗಳನ್ನು ನಿರ್ಲಕ್ಷಿಸಿದ್ದಾರೆ ಎಂಬ ಆರೋಪವೊಂದು ಕೇಳಿ ಬಂದಿದೆ.

1 / 5
ಏಕೆಂದರೆ ಆರ್​​ಸಿಬಿ ಈ ಬಾರಿ ಖರೀದಿಸಿರುವುದು ಮಾಜಿ ಆಟಗಾರರನ್ನು ಎಂಬುದು ಇಲ್ಲಿ ಉಲ್ಲೇಖಾರ್ಹ. ಅಂದರೆ ಈ ಹಿಂದೆ ಆರ್​​ಸಿಬಿ ಪರ ಆಡಿದ್ದ ದೇವದತ್ ಪಡಿಕ್ಕಲ್​ ಅವರನ್ನು ಮತ್ತೆ ತಂಡಕ್ಕೆ ಆಯ್ಕೆ ಮಾಡಿದ್ದಾರೆ. ಹಾಗೆಯೇ ಕಳೆದ ಎರಡು ಸೀಸನ್​​ಗಳಿಂದ ಆರ್​ಸಿಬಿ ಬಳಗದಲ್ಲಿದ್ದ ಮನೋಜ್ ಭಾಂಡಗೆಯನ್ನು ಮತ್ತೆ ಖರೀದಿಸಿದ್ದಾರೆ.

ಏಕೆಂದರೆ ಆರ್​​ಸಿಬಿ ಈ ಬಾರಿ ಖರೀದಿಸಿರುವುದು ಮಾಜಿ ಆಟಗಾರರನ್ನು ಎಂಬುದು ಇಲ್ಲಿ ಉಲ್ಲೇಖಾರ್ಹ. ಅಂದರೆ ಈ ಹಿಂದೆ ಆರ್​​ಸಿಬಿ ಪರ ಆಡಿದ್ದ ದೇವದತ್ ಪಡಿಕ್ಕಲ್​ ಅವರನ್ನು ಮತ್ತೆ ತಂಡಕ್ಕೆ ಆಯ್ಕೆ ಮಾಡಿದ್ದಾರೆ. ಹಾಗೆಯೇ ಕಳೆದ ಎರಡು ಸೀಸನ್​​ಗಳಿಂದ ಆರ್​ಸಿಬಿ ಬಳಗದಲ್ಲಿದ್ದ ಮನೋಜ್ ಭಾಂಡಗೆಯನ್ನು ಮತ್ತೆ ಖರೀದಿಸಿದ್ದಾರೆ.

2 / 5
ಅದರಂತೆ ಐಪಿಎಲ್​ 2025 ರಲ್ಲಿ ಆರ್​​ಸಿಬಿ ಪಡೆಯ ಕನ್ನಡಿಗರಾಗಿ ದೇವದತ್ ಪಡಿಕ್ಕಲ್ ಹಾಗೂ ಮನೋಜ್ ಭಾಂಡಗೆ ಕಾಣಿಸಿಕೊಳ್ಳಲಿದ್ದಾರೆ. ಇಲ್ಲಿ ಇಂಟ್ರೆಸ್ಟಿಗ್ ವಿಷಯ ಎಂದರೆ ಆರ್​​ಸಿಬಿಗಿಂತ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಕನ್ನಡಿಗರಿಗೆ ಮಣೆ ಹಾಕಿರುವುದು.

ಅದರಂತೆ ಐಪಿಎಲ್​ 2025 ರಲ್ಲಿ ಆರ್​​ಸಿಬಿ ಪಡೆಯ ಕನ್ನಡಿಗರಾಗಿ ದೇವದತ್ ಪಡಿಕ್ಕಲ್ ಹಾಗೂ ಮನೋಜ್ ಭಾಂಡಗೆ ಕಾಣಿಸಿಕೊಳ್ಳಲಿದ್ದಾರೆ. ಇಲ್ಲಿ ಇಂಟ್ರೆಸ್ಟಿಗ್ ವಿಷಯ ಎಂದರೆ ಆರ್​​ಸಿಬಿಗಿಂತ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಕನ್ನಡಿಗರಿಗೆ ಮಣೆ ಹಾಕಿರುವುದು.

3 / 5
ಅಂದರೆ ಡೆಲ್ಲಿ ಕ್ಯಾಪಿಟಲ್ಸ್ ರೂಪಿಸಿರುವ 23 ಆಟಗಾರರ ಬಳಗದಲ್ಲಿ ಮೂವರು ಕನ್ನಡಿಗರು ಸ್ಥಾನ ಪಡೆದಿದ್ದಾರೆ. ಅದರಂತೆ ಐಪಿಎಲ್ 2025 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಕೆಎಲ್ ರಾಹುಲ್, ಕರುಣ್ ನಾಯರ್ ಹಾಗೂ ಮನ್ವಂತ್ ಕುಮಾರ್ ಕಾಣಿಸಿಕೊಳ್ಳಲಿದ್ದಾರೆ.

ಅಂದರೆ ಡೆಲ್ಲಿ ಕ್ಯಾಪಿಟಲ್ಸ್ ರೂಪಿಸಿರುವ 23 ಆಟಗಾರರ ಬಳಗದಲ್ಲಿ ಮೂವರು ಕನ್ನಡಿಗರು ಸ್ಥಾನ ಪಡೆದಿದ್ದಾರೆ. ಅದರಂತೆ ಐಪಿಎಲ್ 2025 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಕೆಎಲ್ ರಾಹುಲ್, ಕರುಣ್ ನಾಯರ್ ಹಾಗೂ ಮನ್ವಂತ್ ಕುಮಾರ್ ಕಾಣಿಸಿಕೊಳ್ಳಲಿದ್ದಾರೆ.

4 / 5
ಇತ್ತ ಐಪಿಎಲ್ ಮೆಗಾ ಹರಾಜಿನಲ್ಲಿ ಕರ್ನಾಟಕದ 24 ಆಟಗಾರರು ಕಾಣಿಸಿಕೊಂಡಿದ್ದರೂ, ಆರ್​ಸಿಬಿ ಫ್ರಾಂಚೈಸಿ ಸ್ಥಳೀಯ ಆಟಗಾರರನ್ನು ನಿರ್ಲಕ್ಷಿಸಿರುವುದು ಇದೀಗ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಅದರಲ್ಲೂ ಕೆಎಲ್ ರಾಹುಲ್​ನಂತಹ ಆಟಗಾರನಿಗಾಗಿ ಬಿಡ್ಡಿಂಗ್​ನಲ್ಲಿ ಪೈಪೋಟಿ ನೀಡಿದಿರುವ ಬಗ್ಗೆ ಅಭಿಮಾನಿಗಳು ಅಸಮಾಧಾನ ಹೊರಹಾಕಿದ್ದಾರೆ. ಇವೆಲ್ಲದರ ನಡುವೆ ಬಲಿಷ್ಠ ಪಡೆಯನ್ನು ರೂಪಿಸಿರುವ ಆರ್​​ಸಿಬಿ ಈ ಬಾರಿಯಾದರೂ ಕಪ್ ಗೆಲ್ಲಲಿದೆಯಾ ಕಾದು ನೋಡಬೇಕಿದೆ.

ಇತ್ತ ಐಪಿಎಲ್ ಮೆಗಾ ಹರಾಜಿನಲ್ಲಿ ಕರ್ನಾಟಕದ 24 ಆಟಗಾರರು ಕಾಣಿಸಿಕೊಂಡಿದ್ದರೂ, ಆರ್​ಸಿಬಿ ಫ್ರಾಂಚೈಸಿ ಸ್ಥಳೀಯ ಆಟಗಾರರನ್ನು ನಿರ್ಲಕ್ಷಿಸಿರುವುದು ಇದೀಗ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಅದರಲ್ಲೂ ಕೆಎಲ್ ರಾಹುಲ್​ನಂತಹ ಆಟಗಾರನಿಗಾಗಿ ಬಿಡ್ಡಿಂಗ್​ನಲ್ಲಿ ಪೈಪೋಟಿ ನೀಡಿದಿರುವ ಬಗ್ಗೆ ಅಭಿಮಾನಿಗಳು ಅಸಮಾಧಾನ ಹೊರಹಾಕಿದ್ದಾರೆ. ಇವೆಲ್ಲದರ ನಡುವೆ ಬಲಿಷ್ಠ ಪಡೆಯನ್ನು ರೂಪಿಸಿರುವ ಆರ್​​ಸಿಬಿ ಈ ಬಾರಿಯಾದರೂ ಕಪ್ ಗೆಲ್ಲಲಿದೆಯಾ ಕಾದು ನೋಡಬೇಕಿದೆ.

5 / 5
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ