CSK ಪರ ಆಡಬೇಕು… RCB ಆಟಗಾರನ ಹೇಳಿಕೆ..!

IPL 2025: ಐಪಿಎಲ್​ನ ಸಾಂಪ್ರದಾಯಿಕ ಎದುರಾಳಿಗಳೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್. ಈ ಎರಡೂ ತಂಡಗಳ ಪರ ಕೆಲವೇ ಕೆಲವು ಆಟಗಾರರು ಆಡಿದ್ದಾರೆ. ಇದೀಗ ಆರ್​ಸಿಬಿ ತಂಡದ ಭಾಗವಾಗಿರುವ ಅನೂಜ್ ರಾವತ್ ಕೂಡ ಸಿಎಸ್​ಕೆ ಪರ ಕಣಕ್ಕಿಳಿಯಬೇಕೆಂಬ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

|

Updated on:Sep 10, 2024 | 2:49 PM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್ 18ರ ಸಿದ್ಧತೆಗಳು ಶುರುವಾಗಿದೆ. ಇದರ ಮೊದಲ ಹೆಜ್ಜೆಯಾಗಿ ಇದೀಗ ಮೆಗಾ ಹರಾಜಿಗಾಗಿ ರೂಪುರೇಷೆಗಳನ್ನು ರೂಪಿಸಲಾಗಿದೆ. ಅದರಂತೆ ಮುಂದಿನ ಸೀಸನ್​ಗೂ ಮುನ್ನ ಪ್ರತಿ ತಂಡಗಳಿಂದ ಬಹುತೇಕ ಆಟಗಾರರು ಹೊರಬೀಳಲಿದ್ದಾರೆ. ಅಂದರೆ ಹರಾಜಿಗೂ ಮುನ್ನ ಪ್ರತಿ ಫ್ರಾಂಚೈಸಿಗಳಿಗೆ 4 ರಿಂದ 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಅವಕಾಶ ನೀಡಲಾಗುತ್ತದೆ ಎಂದು ತಿಳಿದು ಬಂದಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್ 18ರ ಸಿದ್ಧತೆಗಳು ಶುರುವಾಗಿದೆ. ಇದರ ಮೊದಲ ಹೆಜ್ಜೆಯಾಗಿ ಇದೀಗ ಮೆಗಾ ಹರಾಜಿಗಾಗಿ ರೂಪುರೇಷೆಗಳನ್ನು ರೂಪಿಸಲಾಗಿದೆ. ಅದರಂತೆ ಮುಂದಿನ ಸೀಸನ್​ಗೂ ಮುನ್ನ ಪ್ರತಿ ತಂಡಗಳಿಂದ ಬಹುತೇಕ ಆಟಗಾರರು ಹೊರಬೀಳಲಿದ್ದಾರೆ. ಅಂದರೆ ಹರಾಜಿಗೂ ಮುನ್ನ ಪ್ರತಿ ಫ್ರಾಂಚೈಸಿಗಳಿಗೆ 4 ರಿಂದ 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಅವಕಾಶ ನೀಡಲಾಗುತ್ತದೆ ಎಂದು ತಿಳಿದು ಬಂದಿದೆ.

1 / 5
ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿರುವ ಬಹುತೇಕ ಆಟಗಾರರು ರಿಲೀಸ್ ಆಗುವುದು ಖಚಿತ. ಅದರಲ್ಲೂ 2022 ರಿಂದ ಆರ್​ಸಿಬಿ ತಂಡದಲ್ಲಿರುವ ವಿಕೆಟ್ ಕೀಪರ್ ಬ್ಯಾಟರ್ ಅನೂಜ್ ರಾವತ್ ಅವರನ್ನು ಉಳಿಸಿಕೊಳ್ಳುವ ಸಾಧ್ಯತೆಯಿಲ್ಲ. ಏಕೆಂದರೆ ಕಳೆದ ಮೂರು ಸೀಸನ್​ಗಳಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿರುವ ರಾವತ್ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ಹೀಗಾಗಿ ಈ ಬಾರಿ ಅನೂಜ್ ರಾವತ್ ರಾಯಲ್ ಬಳಗದಿಂದ ಹೊರಬೀಳುವುದು ಬಹುತೇಕ ಖಚಿತ.

ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿರುವ ಬಹುತೇಕ ಆಟಗಾರರು ರಿಲೀಸ್ ಆಗುವುದು ಖಚಿತ. ಅದರಲ್ಲೂ 2022 ರಿಂದ ಆರ್​ಸಿಬಿ ತಂಡದಲ್ಲಿರುವ ವಿಕೆಟ್ ಕೀಪರ್ ಬ್ಯಾಟರ್ ಅನೂಜ್ ರಾವತ್ ಅವರನ್ನು ಉಳಿಸಿಕೊಳ್ಳುವ ಸಾಧ್ಯತೆಯಿಲ್ಲ. ಏಕೆಂದರೆ ಕಳೆದ ಮೂರು ಸೀಸನ್​ಗಳಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿರುವ ರಾವತ್ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ಹೀಗಾಗಿ ಈ ಬಾರಿ ಅನೂಜ್ ರಾವತ್ ರಾಯಲ್ ಬಳಗದಿಂದ ಹೊರಬೀಳುವುದು ಬಹುತೇಕ ಖಚಿತ.

2 / 5
ಅತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ರಿಟೈನ್ ಮಾಡಿಕೊಳ್ಳದಿದ್ದರೆ ಮುಂದೇನು ಎಂಬ ಪ್ರಶ್ನೆಯೊಂದನ್ನು ಸ್ಪೋರ್ಟ್ಸ್​ ಯಾರಿ ಚಾನೆಲ್​ ಅನೂಜ್ ರಾವತ್ ಅವರ ಮುಂದಿಟ್ಟಿದ್ದಾರೆ. ಈ ಪ್ರಶ್ನೆಗೆ ಉತ್ತರಿಸಿದ ಆರ್​ಸಿಬಿ ಬ್ಯಾಟರ್, ನನಗೆ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಬೇಕೆಂಬ ಆಸೆಯಿದೆ ಎಂದು ತಿಳಿಸಿದ್ದಾರೆ.

ಅತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ರಿಟೈನ್ ಮಾಡಿಕೊಳ್ಳದಿದ್ದರೆ ಮುಂದೇನು ಎಂಬ ಪ್ರಶ್ನೆಯೊಂದನ್ನು ಸ್ಪೋರ್ಟ್ಸ್​ ಯಾರಿ ಚಾನೆಲ್​ ಅನೂಜ್ ರಾವತ್ ಅವರ ಮುಂದಿಟ್ಟಿದ್ದಾರೆ. ಈ ಪ್ರಶ್ನೆಗೆ ಉತ್ತರಿಸಿದ ಆರ್​ಸಿಬಿ ಬ್ಯಾಟರ್, ನನಗೆ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಬೇಕೆಂಬ ಆಸೆಯಿದೆ ಎಂದು ತಿಳಿಸಿದ್ದಾರೆ.

3 / 5
ಆರ್​ಸಿಬಿ ಇಲ್ಲದಿದ್ದರೆ, ನಾನು ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಲು ಬಯಸುತ್ತೇನೆ. ಏಕೆಂದರೆ ಸಿಎಸ್​ಕೆ ತಂಡದಲ್ಲಿ ಮಹೇಂದ್ರ ಸಿಂಗ್ ಧೋನಿ ಇದ್ದಾರೆ. ಅವರು ವಿಭಿನ್ನ ವ್ಯಕ್ತಿತ್ವವನ್ನು ಹೊಂದಿದ್ದಾರೆ. ಅಲ್ಲದೆ ಎಲ್ಲಾ ಆಟಗಾರರು ಅವರ ಬಗ್ಗೆ ಮಾತನಾಡುತ್ತಿರುತ್ತಾರೆ. ಹೀಗಾಗಿ ನನಗೂ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಬೇಕೆಂಬ ಆಸೆಯಿದೆ ಎಂದು ಅನೂಜ್ ರಾವತ್ ಹೇಳಿದ್ದಾರೆ. ಈ ಮೂಲಕ ಸಿಎಸ್​ಕೆ ಪರ ಕಣಕ್ಕಿಳಿಯಬೇಕೆಂಬ ಮನದಿಂಗಿತವನ್ನು ವ್ಯಕ್ತಪಡಿಸಿದ್ದಾರೆ.

ಆರ್​ಸಿಬಿ ಇಲ್ಲದಿದ್ದರೆ, ನಾನು ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಲು ಬಯಸುತ್ತೇನೆ. ಏಕೆಂದರೆ ಸಿಎಸ್​ಕೆ ತಂಡದಲ್ಲಿ ಮಹೇಂದ್ರ ಸಿಂಗ್ ಧೋನಿ ಇದ್ದಾರೆ. ಅವರು ವಿಭಿನ್ನ ವ್ಯಕ್ತಿತ್ವವನ್ನು ಹೊಂದಿದ್ದಾರೆ. ಅಲ್ಲದೆ ಎಲ್ಲಾ ಆಟಗಾರರು ಅವರ ಬಗ್ಗೆ ಮಾತನಾಡುತ್ತಿರುತ್ತಾರೆ. ಹೀಗಾಗಿ ನನಗೂ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಬೇಕೆಂಬ ಆಸೆಯಿದೆ ಎಂದು ಅನೂಜ್ ರಾವತ್ ಹೇಳಿದ್ದಾರೆ. ಈ ಮೂಲಕ ಸಿಎಸ್​ಕೆ ಪರ ಕಣಕ್ಕಿಳಿಯಬೇಕೆಂಬ ಮನದಿಂಗಿತವನ್ನು ವ್ಯಕ್ತಪಡಿಸಿದ್ದಾರೆ.

4 / 5
ಅಂದಹಾಗೆ, 2022 ರಲ್ಲಿ ಆರ್​ಸಿಬಿ ತಂಡಕ್ಕೆ ಎಂಟ್ರಿ ಕೊಟ್ಟಿದ್ದ ಅನೂಜ್ ರಾವತ್ ಒಟ್ಟು 22 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಈ ವೇಳೆ 1 ಅರ್ಧಶತಕದೊಂದಿಗೆ ಒಟ್ಟು 318 ರನ್ ಕಲೆಹಾಕಿದ್ದಾರೆ. ಅಂದರೆ ಅವರು ಆರ್​ಸಿಬಿ ಪರ ಕೇವಲ 19.88ರ ಸರಾಸರಿಯಲ್ಲಿ ಮಾತ್ರ ರನ್ ಗಳಿಸಿದ್ದಾರೆ. ಹೀಗಾಗಿಯೇ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ಆರ್​ಸಿಬಿ ತಂಡದಿಂದ ಅನೂಜ್ ರಾವತ್​ಗೆ ಗೇಟ್ ಪಾಸ್ ಸಿಗಲಿದೆ ಎನ್ನಬಹುದು.

ಅಂದಹಾಗೆ, 2022 ರಲ್ಲಿ ಆರ್​ಸಿಬಿ ತಂಡಕ್ಕೆ ಎಂಟ್ರಿ ಕೊಟ್ಟಿದ್ದ ಅನೂಜ್ ರಾವತ್ ಒಟ್ಟು 22 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಈ ವೇಳೆ 1 ಅರ್ಧಶತಕದೊಂದಿಗೆ ಒಟ್ಟು 318 ರನ್ ಕಲೆಹಾಕಿದ್ದಾರೆ. ಅಂದರೆ ಅವರು ಆರ್​ಸಿಬಿ ಪರ ಕೇವಲ 19.88ರ ಸರಾಸರಿಯಲ್ಲಿ ಮಾತ್ರ ರನ್ ಗಳಿಸಿದ್ದಾರೆ. ಹೀಗಾಗಿಯೇ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ಆರ್​ಸಿಬಿ ತಂಡದಿಂದ ಅನೂಜ್ ರಾವತ್​ಗೆ ಗೇಟ್ ಪಾಸ್ ಸಿಗಲಿದೆ ಎನ್ನಬಹುದು.

5 / 5

Published On - 9:21 am, Tue, 10 September 24

Follow us
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು