AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CSK ಪರ ಆಡಬೇಕು… RCB ಆಟಗಾರನ ಹೇಳಿಕೆ..!

IPL 2025: ಐಪಿಎಲ್​ನ ಸಾಂಪ್ರದಾಯಿಕ ಎದುರಾಳಿಗಳೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್. ಈ ಎರಡೂ ತಂಡಗಳ ಪರ ಕೆಲವೇ ಕೆಲವು ಆಟಗಾರರು ಆಡಿದ್ದಾರೆ. ಇದೀಗ ಆರ್​ಸಿಬಿ ತಂಡದ ಭಾಗವಾಗಿರುವ ಅನೂಜ್ ರಾವತ್ ಕೂಡ ಸಿಎಸ್​ಕೆ ಪರ ಕಣಕ್ಕಿಳಿಯಬೇಕೆಂಬ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

ಝಾಹಿರ್ ಯೂಸುಫ್
|

Updated on:Sep 10, 2024 | 2:49 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್ 18ರ ಸಿದ್ಧತೆಗಳು ಶುರುವಾಗಿದೆ. ಇದರ ಮೊದಲ ಹೆಜ್ಜೆಯಾಗಿ ಇದೀಗ ಮೆಗಾ ಹರಾಜಿಗಾಗಿ ರೂಪುರೇಷೆಗಳನ್ನು ರೂಪಿಸಲಾಗಿದೆ. ಅದರಂತೆ ಮುಂದಿನ ಸೀಸನ್​ಗೂ ಮುನ್ನ ಪ್ರತಿ ತಂಡಗಳಿಂದ ಬಹುತೇಕ ಆಟಗಾರರು ಹೊರಬೀಳಲಿದ್ದಾರೆ. ಅಂದರೆ ಹರಾಜಿಗೂ ಮುನ್ನ ಪ್ರತಿ ಫ್ರಾಂಚೈಸಿಗಳಿಗೆ 4 ರಿಂದ 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಅವಕಾಶ ನೀಡಲಾಗುತ್ತದೆ ಎಂದು ತಿಳಿದು ಬಂದಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್ 18ರ ಸಿದ್ಧತೆಗಳು ಶುರುವಾಗಿದೆ. ಇದರ ಮೊದಲ ಹೆಜ್ಜೆಯಾಗಿ ಇದೀಗ ಮೆಗಾ ಹರಾಜಿಗಾಗಿ ರೂಪುರೇಷೆಗಳನ್ನು ರೂಪಿಸಲಾಗಿದೆ. ಅದರಂತೆ ಮುಂದಿನ ಸೀಸನ್​ಗೂ ಮುನ್ನ ಪ್ರತಿ ತಂಡಗಳಿಂದ ಬಹುತೇಕ ಆಟಗಾರರು ಹೊರಬೀಳಲಿದ್ದಾರೆ. ಅಂದರೆ ಹರಾಜಿಗೂ ಮುನ್ನ ಪ್ರತಿ ಫ್ರಾಂಚೈಸಿಗಳಿಗೆ 4 ರಿಂದ 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಅವಕಾಶ ನೀಡಲಾಗುತ್ತದೆ ಎಂದು ತಿಳಿದು ಬಂದಿದೆ.

1 / 5
ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿರುವ ಬಹುತೇಕ ಆಟಗಾರರು ರಿಲೀಸ್ ಆಗುವುದು ಖಚಿತ. ಅದರಲ್ಲೂ 2022 ರಿಂದ ಆರ್​ಸಿಬಿ ತಂಡದಲ್ಲಿರುವ ವಿಕೆಟ್ ಕೀಪರ್ ಬ್ಯಾಟರ್ ಅನೂಜ್ ರಾವತ್ ಅವರನ್ನು ಉಳಿಸಿಕೊಳ್ಳುವ ಸಾಧ್ಯತೆಯಿಲ್ಲ. ಏಕೆಂದರೆ ಕಳೆದ ಮೂರು ಸೀಸನ್​ಗಳಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿರುವ ರಾವತ್ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ಹೀಗಾಗಿ ಈ ಬಾರಿ ಅನೂಜ್ ರಾವತ್ ರಾಯಲ್ ಬಳಗದಿಂದ ಹೊರಬೀಳುವುದು ಬಹುತೇಕ ಖಚಿತ.

ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿರುವ ಬಹುತೇಕ ಆಟಗಾರರು ರಿಲೀಸ್ ಆಗುವುದು ಖಚಿತ. ಅದರಲ್ಲೂ 2022 ರಿಂದ ಆರ್​ಸಿಬಿ ತಂಡದಲ್ಲಿರುವ ವಿಕೆಟ್ ಕೀಪರ್ ಬ್ಯಾಟರ್ ಅನೂಜ್ ರಾವತ್ ಅವರನ್ನು ಉಳಿಸಿಕೊಳ್ಳುವ ಸಾಧ್ಯತೆಯಿಲ್ಲ. ಏಕೆಂದರೆ ಕಳೆದ ಮೂರು ಸೀಸನ್​ಗಳಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿರುವ ರಾವತ್ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ಹೀಗಾಗಿ ಈ ಬಾರಿ ಅನೂಜ್ ರಾವತ್ ರಾಯಲ್ ಬಳಗದಿಂದ ಹೊರಬೀಳುವುದು ಬಹುತೇಕ ಖಚಿತ.

2 / 5
ಅತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ರಿಟೈನ್ ಮಾಡಿಕೊಳ್ಳದಿದ್ದರೆ ಮುಂದೇನು ಎಂಬ ಪ್ರಶ್ನೆಯೊಂದನ್ನು ಸ್ಪೋರ್ಟ್ಸ್​ ಯಾರಿ ಚಾನೆಲ್​ ಅನೂಜ್ ರಾವತ್ ಅವರ ಮುಂದಿಟ್ಟಿದ್ದಾರೆ. ಈ ಪ್ರಶ್ನೆಗೆ ಉತ್ತರಿಸಿದ ಆರ್​ಸಿಬಿ ಬ್ಯಾಟರ್, ನನಗೆ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಬೇಕೆಂಬ ಆಸೆಯಿದೆ ಎಂದು ತಿಳಿಸಿದ್ದಾರೆ.

ಅತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ರಿಟೈನ್ ಮಾಡಿಕೊಳ್ಳದಿದ್ದರೆ ಮುಂದೇನು ಎಂಬ ಪ್ರಶ್ನೆಯೊಂದನ್ನು ಸ್ಪೋರ್ಟ್ಸ್​ ಯಾರಿ ಚಾನೆಲ್​ ಅನೂಜ್ ರಾವತ್ ಅವರ ಮುಂದಿಟ್ಟಿದ್ದಾರೆ. ಈ ಪ್ರಶ್ನೆಗೆ ಉತ್ತರಿಸಿದ ಆರ್​ಸಿಬಿ ಬ್ಯಾಟರ್, ನನಗೆ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಬೇಕೆಂಬ ಆಸೆಯಿದೆ ಎಂದು ತಿಳಿಸಿದ್ದಾರೆ.

3 / 5
ಆರ್​ಸಿಬಿ ಇಲ್ಲದಿದ್ದರೆ, ನಾನು ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಲು ಬಯಸುತ್ತೇನೆ. ಏಕೆಂದರೆ ಸಿಎಸ್​ಕೆ ತಂಡದಲ್ಲಿ ಮಹೇಂದ್ರ ಸಿಂಗ್ ಧೋನಿ ಇದ್ದಾರೆ. ಅವರು ವಿಭಿನ್ನ ವ್ಯಕ್ತಿತ್ವವನ್ನು ಹೊಂದಿದ್ದಾರೆ. ಅಲ್ಲದೆ ಎಲ್ಲಾ ಆಟಗಾರರು ಅವರ ಬಗ್ಗೆ ಮಾತನಾಡುತ್ತಿರುತ್ತಾರೆ. ಹೀಗಾಗಿ ನನಗೂ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಬೇಕೆಂಬ ಆಸೆಯಿದೆ ಎಂದು ಅನೂಜ್ ರಾವತ್ ಹೇಳಿದ್ದಾರೆ. ಈ ಮೂಲಕ ಸಿಎಸ್​ಕೆ ಪರ ಕಣಕ್ಕಿಳಿಯಬೇಕೆಂಬ ಮನದಿಂಗಿತವನ್ನು ವ್ಯಕ್ತಪಡಿಸಿದ್ದಾರೆ.

ಆರ್​ಸಿಬಿ ಇಲ್ಲದಿದ್ದರೆ, ನಾನು ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಲು ಬಯಸುತ್ತೇನೆ. ಏಕೆಂದರೆ ಸಿಎಸ್​ಕೆ ತಂಡದಲ್ಲಿ ಮಹೇಂದ್ರ ಸಿಂಗ್ ಧೋನಿ ಇದ್ದಾರೆ. ಅವರು ವಿಭಿನ್ನ ವ್ಯಕ್ತಿತ್ವವನ್ನು ಹೊಂದಿದ್ದಾರೆ. ಅಲ್ಲದೆ ಎಲ್ಲಾ ಆಟಗಾರರು ಅವರ ಬಗ್ಗೆ ಮಾತನಾಡುತ್ತಿರುತ್ತಾರೆ. ಹೀಗಾಗಿ ನನಗೂ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಬೇಕೆಂಬ ಆಸೆಯಿದೆ ಎಂದು ಅನೂಜ್ ರಾವತ್ ಹೇಳಿದ್ದಾರೆ. ಈ ಮೂಲಕ ಸಿಎಸ್​ಕೆ ಪರ ಕಣಕ್ಕಿಳಿಯಬೇಕೆಂಬ ಮನದಿಂಗಿತವನ್ನು ವ್ಯಕ್ತಪಡಿಸಿದ್ದಾರೆ.

4 / 5
ಅಂದಹಾಗೆ, 2022 ರಲ್ಲಿ ಆರ್​ಸಿಬಿ ತಂಡಕ್ಕೆ ಎಂಟ್ರಿ ಕೊಟ್ಟಿದ್ದ ಅನೂಜ್ ರಾವತ್ ಒಟ್ಟು 22 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಈ ವೇಳೆ 1 ಅರ್ಧಶತಕದೊಂದಿಗೆ ಒಟ್ಟು 318 ರನ್ ಕಲೆಹಾಕಿದ್ದಾರೆ. ಅಂದರೆ ಅವರು ಆರ್​ಸಿಬಿ ಪರ ಕೇವಲ 19.88ರ ಸರಾಸರಿಯಲ್ಲಿ ಮಾತ್ರ ರನ್ ಗಳಿಸಿದ್ದಾರೆ. ಹೀಗಾಗಿಯೇ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ಆರ್​ಸಿಬಿ ತಂಡದಿಂದ ಅನೂಜ್ ರಾವತ್​ಗೆ ಗೇಟ್ ಪಾಸ್ ಸಿಗಲಿದೆ ಎನ್ನಬಹುದು.

ಅಂದಹಾಗೆ, 2022 ರಲ್ಲಿ ಆರ್​ಸಿಬಿ ತಂಡಕ್ಕೆ ಎಂಟ್ರಿ ಕೊಟ್ಟಿದ್ದ ಅನೂಜ್ ರಾವತ್ ಒಟ್ಟು 22 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಈ ವೇಳೆ 1 ಅರ್ಧಶತಕದೊಂದಿಗೆ ಒಟ್ಟು 318 ರನ್ ಕಲೆಹಾಕಿದ್ದಾರೆ. ಅಂದರೆ ಅವರು ಆರ್​ಸಿಬಿ ಪರ ಕೇವಲ 19.88ರ ಸರಾಸರಿಯಲ್ಲಿ ಮಾತ್ರ ರನ್ ಗಳಿಸಿದ್ದಾರೆ. ಹೀಗಾಗಿಯೇ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ಆರ್​ಸಿಬಿ ತಂಡದಿಂದ ಅನೂಜ್ ರಾವತ್​ಗೆ ಗೇಟ್ ಪಾಸ್ ಸಿಗಲಿದೆ ಎನ್ನಬಹುದು.

5 / 5

Published On - 9:21 am, Tue, 10 September 24

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್