IPL 2025: RCB ತಂಡಕ್ಕೆ ರೋಹಿತ್ ಶರ್ಮಾರನ್ನು ನಾಯಕರನ್ನಾಗಿ ಮಾಡಿ: ಕೈಫ್

IPL 2025 Rohit Sharma: ರೋಹಿತ್ ಶರ್ಮಾ ಮುಂಬರುವ ಐಪಿಎಲ್​ ಸೀಸನ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುವುದು ಅನುಮಾನ ಎನ್ನಲಾಗುತ್ತಿದೆ. ಕಳೆದ ಸೀಸನ್​ನಲ್ಲಿ ರೋಹಿತ್ ಶರ್ಮಾ ಅವರನ್ನು ಕೆಳಗಿಳಿಸಿ ಮುಂಬೈ ಫ್ರಾಂಚೈಸಿ ಹಾರ್ದಿಕ್ ಪಾಂಡ್ಯಗೆ ನಾಯಕತ್ವ ನೀಡಿದ್ದರು. ಇದರಿಂದ ನೊಂದಿರುವ ಹಿಟ್​ಮ್ಯಾನ್ ಐಪಿಎಲ್ 2025 ರಲ್ಲಿ ಹೊಸ ತಂಡದ ಪರ ಕಣಕ್ಕಿಳಿಯುವ ಸಾಧ್ಯತೆಯಿದೆ.

|

Updated on:Oct 02, 2024 | 1:01 PM

IPL 2025: ಐಪಿಎಲ್ ಸೀಸನ್-18ರ ಮೆಗಾ ಹರಾಜಿಗಾಗಿ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ರೋಹಿತ್ ಶರ್ಮಾ ಅವರ ಖರೀದಿಗೆ ಪ್ಲ್ಯಾನ್ ರೂಪಿಸಬೇಕೆಂದು ಟೀಮ್ ಇಂಡಿಯಾದ ಮಾಜಿ ಆಟಗಾರ ಮೊಹಮ್ಮದ್ ಕೈಫ್ ಸಲಹೆ ನೀಡಿದ್ದಾರೆ.

IPL 2025: ಐಪಿಎಲ್ ಸೀಸನ್-18ರ ಮೆಗಾ ಹರಾಜಿಗಾಗಿ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ರೋಹಿತ್ ಶರ್ಮಾ ಅವರ ಖರೀದಿಗೆ ಪ್ಲ್ಯಾನ್ ರೂಪಿಸಬೇಕೆಂದು ಟೀಮ್ ಇಂಡಿಯಾದ ಮಾಜಿ ಆಟಗಾರ ಮೊಹಮ್ಮದ್ ಕೈಫ್ ಸಲಹೆ ನೀಡಿದ್ದಾರೆ.

1 / 6
ಏಕೆಂದರೆ ರೋಹಿತ್ ಶರ್ಮಾ ಮುಂಬರುವ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುವುದು ಅನುಮಾನ. ಹೀಗಾಗಿ ರೋಹಿತ್ ಶರ್ಮಾ ಅವರನ್ನು ಖರೀದಿಸಲು ಆರ್​ಸಿಬಿ ಮುಂದಾಗಬೇಕು. ಅಲ್ಲದೆ ಅವರಿಗೆ ನಾಯಕತ್ವವನ್ನು ನೀಡಬೇಕೆಂದು ಕೈಫ್ ಅಭಿಪ್ರಾಯಪಟ್ಟಿದ್ದಾರೆ.

ಏಕೆಂದರೆ ರೋಹಿತ್ ಶರ್ಮಾ ಮುಂಬರುವ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುವುದು ಅನುಮಾನ. ಹೀಗಾಗಿ ರೋಹಿತ್ ಶರ್ಮಾ ಅವರನ್ನು ಖರೀದಿಸಲು ಆರ್​ಸಿಬಿ ಮುಂದಾಗಬೇಕು. ಅಲ್ಲದೆ ಅವರಿಗೆ ನಾಯಕತ್ವವನ್ನು ನೀಡಬೇಕೆಂದು ಕೈಫ್ ಅಭಿಪ್ರಾಯಪಟ್ಟಿದ್ದಾರೆ.

2 / 6
ಖಾಸಗಿ ಚಾನೆಲ್​ವೊಂದರ ಚಿಟ್​ ಚಾಟ್​ನಲ್ಲಿ ಮಾತನಾಡಿದ ಕೈಫ್, ರೋಹಿತ್ ಶರ್ಮಾ ಐಪಿಎಲ್​ನಲ್ಲಿ ನಾಯಕರಾಗಿ ಮಾತ್ರ ಕಣಕ್ಕಿಳಿಯಬೇಕು. ಅವರು ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದ ಯಶಸ್ವಿ ನಾಯಕರಲ್ಲಿ ಒಬ್ಬರು. ಇತ್ತ ಆರ್​ಸಿಬಿ ಕೂಡ ಹೊಸ ನಾಯಕನ ಹುಡುಕಾಟದಲ್ಲಿದೆ.

ಖಾಸಗಿ ಚಾನೆಲ್​ವೊಂದರ ಚಿಟ್​ ಚಾಟ್​ನಲ್ಲಿ ಮಾತನಾಡಿದ ಕೈಫ್, ರೋಹಿತ್ ಶರ್ಮಾ ಐಪಿಎಲ್​ನಲ್ಲಿ ನಾಯಕರಾಗಿ ಮಾತ್ರ ಕಣಕ್ಕಿಳಿಯಬೇಕು. ಅವರು ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದ ಯಶಸ್ವಿ ನಾಯಕರಲ್ಲಿ ಒಬ್ಬರು. ಇತ್ತ ಆರ್​ಸಿಬಿ ಕೂಡ ಹೊಸ ನಾಯಕನ ಹುಡುಕಾಟದಲ್ಲಿದೆ.

3 / 6
ಹೀಗಾಗಿ ರೋಹಿತ್ ಶರ್ಮಾ ಅವರನ್ನು ಖರೀದಿಸಿ ಆರ್​ಸಿಬಿ ಅವರನ್ನು ನಾಯಕನನ್ನಾಗಿ ಮಾಡುವುದು ಉತ್ತಮ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು 17 ವರ್ಷಗಳ ಪ್ರಶಸ್ತಿ ಬರವನ್ನು ನೀಗಿಸಿಕೊಳ್ಳಬಹುದು ಎಂದು ಮೊಹಮ್ಮದ್ ಕೈಫ್ ಹೇಳಿದ್ದಾರೆ.

ಹೀಗಾಗಿ ರೋಹಿತ್ ಶರ್ಮಾ ಅವರನ್ನು ಖರೀದಿಸಿ ಆರ್​ಸಿಬಿ ಅವರನ್ನು ನಾಯಕನನ್ನಾಗಿ ಮಾಡುವುದು ಉತ್ತಮ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು 17 ವರ್ಷಗಳ ಪ್ರಶಸ್ತಿ ಬರವನ್ನು ನೀಗಿಸಿಕೊಳ್ಳಬಹುದು ಎಂದು ಮೊಹಮ್ಮದ್ ಕೈಫ್ ಹೇಳಿದ್ದಾರೆ.

4 / 6
ಮೊಹಮ್ಮದ್ ಕೈಫ್ ಅವರ ಈ ಹೇಳಿಕೆಯು ವೈರಲ್ ಆಗುತ್ತಿದ್ದಂತೆ ಅಭಿಮಾನಿಗಳು ಸಹ ರೋಹಿತ್ ಶರ್ಮಾ ಆರ್​ಸಿಬಿಗೆ ಬಂದರೆ ಉತ್ತಮ ಎಂದು ಅಭಿಪ್ರಾಯಪಟ್ಟಿದ್ದಾರೆ. ಏಕೆಂದರೆ ಹಿಟ್​ಮ್ಯಾನ್ ಹಾಗೂ ಕಿಂಗ್ ಕೊಹ್ಲಿ ನಡುವೆ ಉತ್ತಮ ಬಾಂಧವ್ಯವಿದ್ದು, ಇಬ್ಬರು ದಿಗ್ಗಜರನ್ನು ಜೊತೆಗೂಡಿಸಿ ಆರ್​ಸಿಬಿ ಬಲಿಷ್ಠ ತಂಡವನ್ನು ರೂಪಿಸಿಕೊಳ್ಳಬಹುದು ಎಂದು ಅನೇಕರು ಪ್ರತಿಕ್ರಿಯಿಸಿದ್ದಾರೆ.

ಮೊಹಮ್ಮದ್ ಕೈಫ್ ಅವರ ಈ ಹೇಳಿಕೆಯು ವೈರಲ್ ಆಗುತ್ತಿದ್ದಂತೆ ಅಭಿಮಾನಿಗಳು ಸಹ ರೋಹಿತ್ ಶರ್ಮಾ ಆರ್​ಸಿಬಿಗೆ ಬಂದರೆ ಉತ್ತಮ ಎಂದು ಅಭಿಪ್ರಾಯಪಟ್ಟಿದ್ದಾರೆ. ಏಕೆಂದರೆ ಹಿಟ್​ಮ್ಯಾನ್ ಹಾಗೂ ಕಿಂಗ್ ಕೊಹ್ಲಿ ನಡುವೆ ಉತ್ತಮ ಬಾಂಧವ್ಯವಿದ್ದು, ಇಬ್ಬರು ದಿಗ್ಗಜರನ್ನು ಜೊತೆಗೂಡಿಸಿ ಆರ್​ಸಿಬಿ ಬಲಿಷ್ಠ ತಂಡವನ್ನು ರೂಪಿಸಿಕೊಳ್ಳಬಹುದು ಎಂದು ಅನೇಕರು ಪ್ರತಿಕ್ರಿಯಿಸಿದ್ದಾರೆ.

5 / 6
ಅಂದಹಾಗೆ ರೋಹಿತ್ ಶರ್ಮಾ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ತಂಡವು 5 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಅಲ್ಲದೆ ಇತ್ತೀಚೆಗೆ ಮುಗಿದ ಟಿ20 ವಿಶ್ವಕಪ್ ಮುಡಿಗೇರಿಸಿಕೊಳ್ಳುವಲ್ಲಿಯೂ ನಾಯಕ ರೋಹಿತ್ ಪಾತ್ರ ಮಹತ್ವದ್ದು. ಹೀಗಾಗಿ ಹಿಟ್​ಮ್ಯಾನ್ ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡರೆ ಅವರ ಖರೀದಿಗೆ ಫ್ರಾಂಚೈಸಿಗಳ ನಡುವೆ ಪೈಪೋಟಿ ಕಂಡು ಬರುವುದು ಖಚಿತ.

ಅಂದಹಾಗೆ ರೋಹಿತ್ ಶರ್ಮಾ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ತಂಡವು 5 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಅಲ್ಲದೆ ಇತ್ತೀಚೆಗೆ ಮುಗಿದ ಟಿ20 ವಿಶ್ವಕಪ್ ಮುಡಿಗೇರಿಸಿಕೊಳ್ಳುವಲ್ಲಿಯೂ ನಾಯಕ ರೋಹಿತ್ ಪಾತ್ರ ಮಹತ್ವದ್ದು. ಹೀಗಾಗಿ ಹಿಟ್​ಮ್ಯಾನ್ ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡರೆ ಅವರ ಖರೀದಿಗೆ ಫ್ರಾಂಚೈಸಿಗಳ ನಡುವೆ ಪೈಪೋಟಿ ಕಂಡು ಬರುವುದು ಖಚಿತ.

6 / 6

Published On - 12:58 pm, Wed, 2 October 24

Follow us
ಸಿಎಂ ಸಿದ್ದರಾಮಯ್ಯಗೆ ಗಾಂಧಿ ಟೋಪಿ ಹಾಕಿದ ಡಿಕೆ ಶಿವಕುಮಾರ್​
ಸಿಎಂ ಸಿದ್ದರಾಮಯ್ಯಗೆ ಗಾಂಧಿ ಟೋಪಿ ಹಾಕಿದ ಡಿಕೆ ಶಿವಕುಮಾರ್​
ಗಾಂಧಿ ಜಂಯತಿ 2024: ವಿಧಾನಸೌಧದವರೆಗೂ ನಡೆದುಕೊಂಡೇ ಹೋದ ಸಿಎಂ, ಡಿಸಿಎಂ
ಗಾಂಧಿ ಜಂಯತಿ 2024: ವಿಧಾನಸೌಧದವರೆಗೂ ನಡೆದುಕೊಂಡೇ ಹೋದ ಸಿಎಂ, ಡಿಸಿಎಂ
ಇದು ಪ್ರಾರಂಭ ಅಷ್ಟೆ, ಪಿಕ್ಚರ್ ಇನ್ನೂ ಬಾಕಿ ಇದೆ ಎಂದ ಜಗದೀಶ್
ಇದು ಪ್ರಾರಂಭ ಅಷ್ಟೆ, ಪಿಕ್ಚರ್ ಇನ್ನೂ ಬಾಕಿ ಇದೆ ಎಂದ ಜಗದೀಶ್
ಗಾಂಧಿ ಜಯಂತಿ: ಮಕ್ಕಳೊಂದಿಗೆ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡ ಮೋದಿ
ಗಾಂಧಿ ಜಯಂತಿ: ಮಕ್ಕಳೊಂದಿಗೆ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡ ಮೋದಿ
ಬೆಂಗಳೂರು ಹನುಮಂತನಗರದಲ್ಲಿ ಲಾಂಗ್, ಬ್ಯಾಟ್ ಹಿಡಿದು ಪುಡಿ ರೌಡಿಗಳ ಅಟ್ಟಹಾಸ
ಬೆಂಗಳೂರು ಹನುಮಂತನಗರದಲ್ಲಿ ಲಾಂಗ್, ಬ್ಯಾಟ್ ಹಿಡಿದು ಪುಡಿ ರೌಡಿಗಳ ಅಟ್ಟಹಾಸ
ರಾಜ್​ಘಾಟ್​ನಲ್ಲಿ ರಾಷ್ಟ್ರಪಿತನಿಗೆ ಪುಷ್ಟನಮನ ಸಲ್ಲಿಸಿದ ಪ್ರಧಾನಿ ಮೋದಿ
ರಾಜ್​ಘಾಟ್​ನಲ್ಲಿ ರಾಷ್ಟ್ರಪಿತನಿಗೆ ಪುಷ್ಟನಮನ ಸಲ್ಲಿಸಿದ ಪ್ರಧಾನಿ ಮೋದಿ
ಪ್ರಯಾಣಿಕರ ಗಮನಕ್ಕೆ: ಬೆಳಗಾವಿ-ಮೀರಜ್ ನಡುವೆ ವಿಶೇಷ ರೈಲು ಸೇವೆ
ಪ್ರಯಾಣಿಕರ ಗಮನಕ್ಕೆ: ಬೆಳಗಾವಿ-ಮೀರಜ್ ನಡುವೆ ವಿಶೇಷ ರೈಲು ಸೇವೆ
ಕೇತುಗ್ರಸ್ತ ಸೂರ್ಯಗ್ರಹಣ ಪ್ರಭಾವ ಹೇಗಿರುತ್ತೆ ತಿಳಿಯಿರಿ
ಕೇತುಗ್ರಸ್ತ ಸೂರ್ಯಗ್ರಹಣ ಪ್ರಭಾವ ಹೇಗಿರುತ್ತೆ ತಿಳಿಯಿರಿ
Nithya Bhavishya: ಮಹಾಲಯ ಅಮವಾಸ್ಯೆ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಮಹಾಲಯ ಅಮವಾಸ್ಯೆ ದಿನದ ರಾಶಿ ಭವಿಷ್ಯ ತಿಳಿಯಿರಿ
ಪರೀಕ್ಷೆಯ ಹಿಂದಿನ ರಾತ್ರಿ ಬೆಂಗಳೂರು ಹಾಸ್ಟೆಲ್ ಹುಡುಗೀರ ಡ್ಯಾನ್ಸ್
ಪರೀಕ್ಷೆಯ ಹಿಂದಿನ ರಾತ್ರಿ ಬೆಂಗಳೂರು ಹಾಸ್ಟೆಲ್ ಹುಡುಗೀರ ಡ್ಯಾನ್ಸ್