AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ಟಾರ್ಗೆಟ್ ಲಿಸ್ಟ್​ನಲ್ಲಿ ಇಬ್ಬರು ಮಾಜಿ ಆಟಗಾರರು

IPL 2025 RCB: ಐಪಿಎಲ್ ಮೆಗಾ ಹರಾಜು ನವೆಂಬರ್ 24 ಮತ್ತು 25 ರಂದು ನಡೆಯಲಿದೆ. ಸೌದಿ ಅರೇಬಿಯಾದ ಜಿದ್ದಾದಲ್ಲಿ ನಡೆಯಲಿರುವ ಈ ಹರಾಜಿನ ಮೂಲಕ ಆರ್​ಸಿಬಿ ಫ್ರಾಂಚೈಸಿಯು ತನ್ನಿಬ್ಬರ ಹಳೆಯ ಆಟಗಾರರನ್ನು ಟಾರ್ಗೆಟ್ ಮಾಡಲಿದೆ. ಈ ಆಟಗಾರರ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

ಝಾಹಿರ್ ಯೂಸುಫ್
|

Updated on: Nov 18, 2024 | 12:09 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18ರ ಮೆಗಾ ಹರಾಜಿಗಾಗಿ ದಿನಗಣನೆ ಶುರುವಾಗಿದೆ. ಈ ದಿನಗಣನೆಯ ನಡುವೆ ಎಲ್ಲಾ ಫ್ರಾಂಚೈಸಿಗಳು ಹರಾಜಿಗಾಗಿ ಮಾಸ್ಟರ್ ಪ್ಲ್ಯಾನ್ ರೂಪಿಸುತ್ತಿದೆ. ಈ ಪ್ಲ್ಯಾನ್​ನೊಂದಿಗೆ ಹರಾಜಿನಲ್ಲಿ ಖರೀದಿಸಬೇಕಾದ ಆಟಗಾರರ ಪಟ್ಟಿಯನ್ನು ಸಿದ್ಧಪಡಿಸಿಕೊಳ್ಳುತ್ತಿದೆ. ಅದರಂತೆ ಆರ್​ಸಿಬಿ ಫ್ರಾಂಚೈಸಿ ರೂಪಿಸಿರುವ ಟಾರ್ಗೆಟ್ ಲಿಸ್ಟ್​ನಲ್ಲಿ ಇಬ್ಬರು ಮಾಜಿ ಆಟಗಾರರ ಹೆಸರು ಕಾಣಿಸಿಕೊಂಡಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18ರ ಮೆಗಾ ಹರಾಜಿಗಾಗಿ ದಿನಗಣನೆ ಶುರುವಾಗಿದೆ. ಈ ದಿನಗಣನೆಯ ನಡುವೆ ಎಲ್ಲಾ ಫ್ರಾಂಚೈಸಿಗಳು ಹರಾಜಿಗಾಗಿ ಮಾಸ್ಟರ್ ಪ್ಲ್ಯಾನ್ ರೂಪಿಸುತ್ತಿದೆ. ಈ ಪ್ಲ್ಯಾನ್​ನೊಂದಿಗೆ ಹರಾಜಿನಲ್ಲಿ ಖರೀದಿಸಬೇಕಾದ ಆಟಗಾರರ ಪಟ್ಟಿಯನ್ನು ಸಿದ್ಧಪಡಿಸಿಕೊಳ್ಳುತ್ತಿದೆ. ಅದರಂತೆ ಆರ್​ಸಿಬಿ ಫ್ರಾಂಚೈಸಿ ರೂಪಿಸಿರುವ ಟಾರ್ಗೆಟ್ ಲಿಸ್ಟ್​ನಲ್ಲಿ ಇಬ್ಬರು ಮಾಜಿ ಆಟಗಾರರ ಹೆಸರು ಕಾಣಿಸಿಕೊಂಡಿದೆ.

1 / 6
ಆರ್​ಸಿಬಿ ಮೂಲಗಳ ಮಾಹಿತಿ ಪ್ರಕಾರ, ಮುಂಬರುವ ಮೆಗಾ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಕೆಎಲ್ ರಾಹುಲ್ ಅವರ ಖರೀದಿಗೆ ಮುಂದಾಗಲಿದೆ. ದ್ವಿತೀಯ ಸುತ್ತಿನ ಹರಾಜು ಪಟ್ಟಿಯಲ್ಲಿರುವ ರಾಹುಲ್ ಅವರ ಮೂಲ ಬೆಲೆ 2 ಕೋಟಿ ರೂ. ಹೀಗಾಗಿ ಆರ್​ಸಿಬಿ ಫ್ರಾಂಚೈಸಿ ಅವರ ಖರೀದಿಗೆ ಕನಿಷ್ಠ 10 ಕೋಟಿಯನ್ನಾದರೂ ಮೀಸಲಿಡಲಿದೆ.

ಆರ್​ಸಿಬಿ ಮೂಲಗಳ ಮಾಹಿತಿ ಪ್ರಕಾರ, ಮುಂಬರುವ ಮೆಗಾ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಕೆಎಲ್ ರಾಹುಲ್ ಅವರ ಖರೀದಿಗೆ ಮುಂದಾಗಲಿದೆ. ದ್ವಿತೀಯ ಸುತ್ತಿನ ಹರಾಜು ಪಟ್ಟಿಯಲ್ಲಿರುವ ರಾಹುಲ್ ಅವರ ಮೂಲ ಬೆಲೆ 2 ಕೋಟಿ ರೂ. ಹೀಗಾಗಿ ಆರ್​ಸಿಬಿ ಫ್ರಾಂಚೈಸಿ ಅವರ ಖರೀದಿಗೆ ಕನಿಷ್ಠ 10 ಕೋಟಿಯನ್ನಾದರೂ ಮೀಸಲಿಡಲಿದೆ.

2 / 6
ಏಕೆಂದರೆ ಕೆಎಲ್ ರಾಹುಲ್ ಅವರ ಖರೀದಿಯಿಂದ ಆರ್​ಸಿಬಿ ವಿಕೆಟ್ ಕೀಪರ್ ಹಾಗೂ ನಾಯಕನ ಸ್ಥಾನಗಳನ್ನು ತುಂಬಿಕೊಳ್ಳಬಹುದು. ಅಲ್ಲದೆ ಕನ್ನಡಿಗ ಖರೀದಿಯಿಂದ ತವರಿನ ಪ್ರೇಕ್ಷಕರ ಮನಗೆಲ್ಲುವಲ್ಲಿಯೂ ಯಶಸ್ವಿಯಾಗಬಹುದು. ಈ ಎಲ್ಲಾ ಕಾರಣಗಳಿಂದಾಗಿ ಕೆಎಲ್ ರಾಹುಲ್ ಅವರ ಖರೀದಿಗೆ ಆರ್​ಸಿಬಿ ಮಾಸ್ಟರ್ ಪ್ಲ್ಯಾನ್ ರೂಪಿಸುತ್ತಿದೆ.

ಏಕೆಂದರೆ ಕೆಎಲ್ ರಾಹುಲ್ ಅವರ ಖರೀದಿಯಿಂದ ಆರ್​ಸಿಬಿ ವಿಕೆಟ್ ಕೀಪರ್ ಹಾಗೂ ನಾಯಕನ ಸ್ಥಾನಗಳನ್ನು ತುಂಬಿಕೊಳ್ಳಬಹುದು. ಅಲ್ಲದೆ ಕನ್ನಡಿಗ ಖರೀದಿಯಿಂದ ತವರಿನ ಪ್ರೇಕ್ಷಕರ ಮನಗೆಲ್ಲುವಲ್ಲಿಯೂ ಯಶಸ್ವಿಯಾಗಬಹುದು. ಈ ಎಲ್ಲಾ ಕಾರಣಗಳಿಂದಾಗಿ ಕೆಎಲ್ ರಾಹುಲ್ ಅವರ ಖರೀದಿಗೆ ಆರ್​ಸಿಬಿ ಮಾಸ್ಟರ್ ಪ್ಲ್ಯಾನ್ ರೂಪಿಸುತ್ತಿದೆ.

3 / 6
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಎರಡನೇ ಟಾರ್ಗೆಟ್ ಯುಜ್ವೇಂದ್ರ ಚಹಲ್. ಆರ್​ಸಿಬಿ ಪರ 8 ಸೀಸನ್​ ಆಡಿದ್ದ ಚಹಲ್ ಅವರನ್ನು 2022 ರಲ್ಲಿ ಕೈ ಬಿಡಲಾಗಿತ್ತು. ಇದೀಗ ಮತ್ತೆ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿರುವ ಸ್ಪಿನ್ ಮೋಡಿಗಾರನ ಖರೀದಿಗೆ ಆರ್​ಸಿಬಿ ಆಸಕ್ತಿ ಹೊಂದಿದೆ. ಹೀಗಾಗಿ ಮೆಗಾ ಹರಾಜಿನಲ್ಲಿ ಚಹಲ್​ಗಾಗಿ ಆರ್​ಸಿಬಿ ಭರ್ಜರಿ ಪೈಪೋಟಿ ನಡೆಸಲಿದೆ.

ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಎರಡನೇ ಟಾರ್ಗೆಟ್ ಯುಜ್ವೇಂದ್ರ ಚಹಲ್. ಆರ್​ಸಿಬಿ ಪರ 8 ಸೀಸನ್​ ಆಡಿದ್ದ ಚಹಲ್ ಅವರನ್ನು 2022 ರಲ್ಲಿ ಕೈ ಬಿಡಲಾಗಿತ್ತು. ಇದೀಗ ಮತ್ತೆ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿರುವ ಸ್ಪಿನ್ ಮೋಡಿಗಾರನ ಖರೀದಿಗೆ ಆರ್​ಸಿಬಿ ಆಸಕ್ತಿ ಹೊಂದಿದೆ. ಹೀಗಾಗಿ ಮೆಗಾ ಹರಾಜಿನಲ್ಲಿ ಚಹಲ್​ಗಾಗಿ ಆರ್​ಸಿಬಿ ಭರ್ಜರಿ ಪೈಪೋಟಿ ನಡೆಸಲಿದೆ.

4 / 6
ಏಕೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಅತ್ಯಧಿಕ ವಿಕೆಟ್ ಪಡೆದ ದಾಖಲೆ ಯುಜ್ವೇಂದ್ರ ಚಹಲ್ ಹೆಸರಿನಲ್ಲಿದೆ. 2014 ರಿಂದ 2021 ರವರೆಗೆ ಆರ್​ಸಿಬಿ ಪರ 113 ಪಂದ್ಯಗಳನ್ನಾಡಿರುವ ಚಹಲ್ ಒಟ್ಟು 139 ವಿಕೆಟ್ ಕಬಳಿಸಿದ್ದಾರೆ. ಇತ್ತ ಆರ್​ಸಿಬಿ ಕೋಚ್ ಆ್ಯಂಡ್ರಿ ಫ್ಲವರ್​ ಕೂಡ ವಿಕೆಟ್ ಟೇಕರ್​ ಬೌಲರ್​ಗಳನ್ನು ಟಾರ್ಗೆಟ್ ಮಾಡುವುದಾಗಿ ತಿಳಿಸಿದ್ದಾರೆ. ಹೀಗಾಗಿ ಚಹಲ್​ ಖರೀದಿಗಾಗಿ ಆರ್​ಸಿಬಿ ಹೆಚ್ಚಿನ ಆಸಕ್ತಿವಹಿಸಲಿದೆ.

ಏಕೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಅತ್ಯಧಿಕ ವಿಕೆಟ್ ಪಡೆದ ದಾಖಲೆ ಯುಜ್ವೇಂದ್ರ ಚಹಲ್ ಹೆಸರಿನಲ್ಲಿದೆ. 2014 ರಿಂದ 2021 ರವರೆಗೆ ಆರ್​ಸಿಬಿ ಪರ 113 ಪಂದ್ಯಗಳನ್ನಾಡಿರುವ ಚಹಲ್ ಒಟ್ಟು 139 ವಿಕೆಟ್ ಕಬಳಿಸಿದ್ದಾರೆ. ಇತ್ತ ಆರ್​ಸಿಬಿ ಕೋಚ್ ಆ್ಯಂಡ್ರಿ ಫ್ಲವರ್​ ಕೂಡ ವಿಕೆಟ್ ಟೇಕರ್​ ಬೌಲರ್​ಗಳನ್ನು ಟಾರ್ಗೆಟ್ ಮಾಡುವುದಾಗಿ ತಿಳಿಸಿದ್ದಾರೆ. ಹೀಗಾಗಿ ಚಹಲ್​ ಖರೀದಿಗಾಗಿ ಆರ್​ಸಿಬಿ ಹೆಚ್ಚಿನ ಆಸಕ್ತಿವಹಿಸಲಿದೆ.

5 / 6
ಅದರಂತೆ ಮುಂಬರುವ ಮೆಗಾ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ತನ್ನ ಇಬ್ಬರು ಮಾಜಿ ಆಟಗಾರರ ಖರೀದಿಗಾಗಿ ಫೈಪೋಟಿ ನಡೆಸುವುದಂತು ದಿಟ. ಈ ಮೂಲಕ ಆರ್​ಸಿಬಿ ಫ್ರಾಂಚೈಸಿ, ಕೆಎಲ್ ರಾಹುಲ್ ಹಾಗೂ ಯುಜ್ವೇಂದ್ರ ಚಹಲ್ ಅವರನ್ನು ಮರಳಿ ತಂಡಕ್ಕೆ ಕರೆ ತರಲಿದ್ದಾರಾ ಕಾದು ನೋಡಬೆಖೀಧೇ.

ಅದರಂತೆ ಮುಂಬರುವ ಮೆಗಾ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ತನ್ನ ಇಬ್ಬರು ಮಾಜಿ ಆಟಗಾರರ ಖರೀದಿಗಾಗಿ ಫೈಪೋಟಿ ನಡೆಸುವುದಂತು ದಿಟ. ಈ ಮೂಲಕ ಆರ್​ಸಿಬಿ ಫ್ರಾಂಚೈಸಿ, ಕೆಎಲ್ ರಾಹುಲ್ ಹಾಗೂ ಯುಜ್ವೇಂದ್ರ ಚಹಲ್ ಅವರನ್ನು ಮರಳಿ ತಂಡಕ್ಕೆ ಕರೆ ತರಲಿದ್ದಾರಾ ಕಾದು ನೋಡಬೆಖೀಧೇ.

6 / 6
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?