AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಬರೀ ದುಡ್ಡಿಗಾಗಿ ಅಲ್ಲ… ಮೌನ ಮುರಿದ ರಿಷಭ್ ಪಂತ್

IPL 2025 Mega Auction: ಈ ಬಾರಿಯ ಐಪಿಎಲ್ ಮೆಗಾ ಹರಾಜು ನವೆಂಬರ್ 24 ಮತ್ತು 25 ರಂದು ನಡೆಯಲಿದೆ. ಸೌದಿ ಅರೇಬಿಯಾದ ಜಿದ್ಧಾದಲ್ಲಿ ಜರುಗಲಿರುವ ಈ ಹರಾಜು ಪ್ರಕ್ರಿಯೆಯಲ್ಲಿ 574 ಆಟಗಾರರ ಹೆಸರು ಕಾಣಿಸಿಕೊಳ್ಳಲಿದೆ. ಇವರಲ್ಲಿ ರಿಷಭ್ ಪಂತ್ ಸೇರಿದಂತೆ 12 ಆಟಗಾರರು ಮೊದಲ ಸುತ್ತಿನಲ್ಲಿ ಹರಾಜಾಗಲಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 20, 2024 | 9:57 AM

Share
ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಈ ಬಾರಿಯ ಐಪಿಎಲ್ (IPL 2025) ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕಳೆದ ಸೀಸನ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿದ್ದ ಪಂತ್ ಅವರು ಈ ಬಾರಿ ರಿಟೈನ್ ಆಗಿಲ್ಲ. ಇದರ ಬೆನ್ನಲ್ಲೇ ರಿಷಭ್ ಡೆಲ್ಲಿ ತಂಡ ತೊರೆಯಲು ಮುಖ್ಯ ಕಾರಣ ಬೃಹತ್ ಮೊತ್ತದ ಡಿಮ್ಯಾಂಡ್ ಎನ್ನಲಾಗಿತ್ತು.

ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಈ ಬಾರಿಯ ಐಪಿಎಲ್ (IPL 2025) ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕಳೆದ ಸೀಸನ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿದ್ದ ಪಂತ್ ಅವರು ಈ ಬಾರಿ ರಿಟೈನ್ ಆಗಿಲ್ಲ. ಇದರ ಬೆನ್ನಲ್ಲೇ ರಿಷಭ್ ಡೆಲ್ಲಿ ತಂಡ ತೊರೆಯಲು ಮುಖ್ಯ ಕಾರಣ ಬೃಹತ್ ಮೊತ್ತದ ಡಿಮ್ಯಾಂಡ್ ಎನ್ನಲಾಗಿತ್ತು.

1 / 5
ಕಳೆದ ಸೀಸನ್​ನಲ್ಲಿ 16 ಕೋಟಿ ರೂ. ಪಡೆದಿದ್ದ ರಿಷಭ್ ಪಂತ್ ಈ ಬಾರಿ ಹೆಚ್ಚಿನ ಸಂಭಾವನೆಗಾಗಿ ಬೇಡಿಕೆಯಿಟ್ಟಿದ್ದಾರೆ. ಆದರೆ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಬೃಹತ್ ಮೊತ್ತ ನೀಡಲು ಹಿಂದೇಟು ಹಾಕಿದ್ದರಿಂದ ಅವರು ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲು ನಿರ್ಧರಿಸಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು.

ಕಳೆದ ಸೀಸನ್​ನಲ್ಲಿ 16 ಕೋಟಿ ರೂ. ಪಡೆದಿದ್ದ ರಿಷಭ್ ಪಂತ್ ಈ ಬಾರಿ ಹೆಚ್ಚಿನ ಸಂಭಾವನೆಗಾಗಿ ಬೇಡಿಕೆಯಿಟ್ಟಿದ್ದಾರೆ. ಆದರೆ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಬೃಹತ್ ಮೊತ್ತ ನೀಡಲು ಹಿಂದೇಟು ಹಾಕಿದ್ದರಿಂದ ಅವರು ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲು ನಿರ್ಧರಿಸಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು.

2 / 5
ಅಲ್ಲದೆ ಇತ್ತೀಚೆಗೆ ಸುನಿಲ್ ಗವಾಸ್ಕರ್ ಖಾಸಗಿ ಚಾನೆಲ್​ವೊಂದರಲ್ಲಿ, ರಿಷಭ್ ಪಂತ್ ಹೆಚ್ಚಿನ ಹಣಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ತೊರೆದಿದ್ದಾರೆ ಎಂಬ ಹೇಳಿಕೆ ನೀಡಿದ್ದರು. ಈ ಆರೋಪದ ಬೆನ್ನಲ್ಲೇ ಇದೀಗ ರಿಷಭ್ ಪಂತ್ ಮೌನ ಮುರಿದಿದ್ದಾರೆ.

ಅಲ್ಲದೆ ಇತ್ತೀಚೆಗೆ ಸುನಿಲ್ ಗವಾಸ್ಕರ್ ಖಾಸಗಿ ಚಾನೆಲ್​ವೊಂದರಲ್ಲಿ, ರಿಷಭ್ ಪಂತ್ ಹೆಚ್ಚಿನ ಹಣಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ತೊರೆದಿದ್ದಾರೆ ಎಂಬ ಹೇಳಿಕೆ ನೀಡಿದ್ದರು. ಈ ಆರೋಪದ ಬೆನ್ನಲ್ಲೇ ಇದೀಗ ರಿಷಭ್ ಪಂತ್ ಮೌನ ಮುರಿದಿದ್ದಾರೆ.

3 / 5
ತಮ್ಮ ಸೋಷಿಯಲ್ ಮೀಡಿಯಾ ಖಾತೆಯ ಮೂಲಕ ಸ್ಪಷ್ಟನೆ ನೀಡಿರುವ ಪಂತ್, ಹಣದ ವಿಚಾರಕ್ಕೆ ನಾನು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ತೊರೆದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಸದ್ಯ ಹರಿದಾಡುತ್ತಿರುವ ಸುದ್ದಿಗಳಲ್ಲಿ ಸತ್ಯಾಂಶವಿಲ್ಲ ಎಂದು ಪಂತ್ ಹೇಳಿದ್ದಾರೆ.

ತಮ್ಮ ಸೋಷಿಯಲ್ ಮೀಡಿಯಾ ಖಾತೆಯ ಮೂಲಕ ಸ್ಪಷ್ಟನೆ ನೀಡಿರುವ ಪಂತ್, ಹಣದ ವಿಚಾರಕ್ಕೆ ನಾನು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ತೊರೆದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಸದ್ಯ ಹರಿದಾಡುತ್ತಿರುವ ಸುದ್ದಿಗಳಲ್ಲಿ ಸತ್ಯಾಂಶವಿಲ್ಲ ಎಂದು ಪಂತ್ ಹೇಳಿದ್ದಾರೆ.

4 / 5
ರಿಷಭ್ ಪಂತ್ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಐಪಿಎಲ್ ಹರಾಜು ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಮೊದಲ ಸೆಟ್​ನಲ್ಲೇ ಸ್ಥಾನ ಪಡೆದಿರುವ ಪಂತ್​ ಖರೀದಿಗಾಗಿ ಆರಂಭದಲ್ಲೇ ಭರ್ಜರಿ ಪೈಪೋಟಿ ಕಂಡು ಬರಲಿದೆ. ಈ ಪೈಪೋಟಿಯೊಂದಿಗೆ ರಿಷಭ್ ಪಂತ್ ಯಾವ ತಂಡದ ಪಾಲಾಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ರಿಷಭ್ ಪಂತ್ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಐಪಿಎಲ್ ಹರಾಜು ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಮೊದಲ ಸೆಟ್​ನಲ್ಲೇ ಸ್ಥಾನ ಪಡೆದಿರುವ ಪಂತ್​ ಖರೀದಿಗಾಗಿ ಆರಂಭದಲ್ಲೇ ಭರ್ಜರಿ ಪೈಪೋಟಿ ಕಂಡು ಬರಲಿದೆ. ಈ ಪೈಪೋಟಿಯೊಂದಿಗೆ ರಿಷಭ್ ಪಂತ್ ಯಾವ ತಂಡದ ಪಾಲಾಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

5 / 5
Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ