AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಬರೀ ದುಡ್ಡಿಗಾಗಿ ಅಲ್ಲ… ಮೌನ ಮುರಿದ ರಿಷಭ್ ಪಂತ್

IPL 2025 Mega Auction: ಈ ಬಾರಿಯ ಐಪಿಎಲ್ ಮೆಗಾ ಹರಾಜು ನವೆಂಬರ್ 24 ಮತ್ತು 25 ರಂದು ನಡೆಯಲಿದೆ. ಸೌದಿ ಅರೇಬಿಯಾದ ಜಿದ್ಧಾದಲ್ಲಿ ಜರುಗಲಿರುವ ಈ ಹರಾಜು ಪ್ರಕ್ರಿಯೆಯಲ್ಲಿ 574 ಆಟಗಾರರ ಹೆಸರು ಕಾಣಿಸಿಕೊಳ್ಳಲಿದೆ. ಇವರಲ್ಲಿ ರಿಷಭ್ ಪಂತ್ ಸೇರಿದಂತೆ 12 ಆಟಗಾರರು ಮೊದಲ ಸುತ್ತಿನಲ್ಲಿ ಹರಾಜಾಗಲಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 20, 2024 | 9:57 AM

Share
ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಈ ಬಾರಿಯ ಐಪಿಎಲ್ (IPL 2025) ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕಳೆದ ಸೀಸನ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿದ್ದ ಪಂತ್ ಅವರು ಈ ಬಾರಿ ರಿಟೈನ್ ಆಗಿಲ್ಲ. ಇದರ ಬೆನ್ನಲ್ಲೇ ರಿಷಭ್ ಡೆಲ್ಲಿ ತಂಡ ತೊರೆಯಲು ಮುಖ್ಯ ಕಾರಣ ಬೃಹತ್ ಮೊತ್ತದ ಡಿಮ್ಯಾಂಡ್ ಎನ್ನಲಾಗಿತ್ತು.

ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಈ ಬಾರಿಯ ಐಪಿಎಲ್ (IPL 2025) ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕಳೆದ ಸೀಸನ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿದ್ದ ಪಂತ್ ಅವರು ಈ ಬಾರಿ ರಿಟೈನ್ ಆಗಿಲ್ಲ. ಇದರ ಬೆನ್ನಲ್ಲೇ ರಿಷಭ್ ಡೆಲ್ಲಿ ತಂಡ ತೊರೆಯಲು ಮುಖ್ಯ ಕಾರಣ ಬೃಹತ್ ಮೊತ್ತದ ಡಿಮ್ಯಾಂಡ್ ಎನ್ನಲಾಗಿತ್ತು.

1 / 5
ಕಳೆದ ಸೀಸನ್​ನಲ್ಲಿ 16 ಕೋಟಿ ರೂ. ಪಡೆದಿದ್ದ ರಿಷಭ್ ಪಂತ್ ಈ ಬಾರಿ ಹೆಚ್ಚಿನ ಸಂಭಾವನೆಗಾಗಿ ಬೇಡಿಕೆಯಿಟ್ಟಿದ್ದಾರೆ. ಆದರೆ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಬೃಹತ್ ಮೊತ್ತ ನೀಡಲು ಹಿಂದೇಟು ಹಾಕಿದ್ದರಿಂದ ಅವರು ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲು ನಿರ್ಧರಿಸಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು.

ಕಳೆದ ಸೀಸನ್​ನಲ್ಲಿ 16 ಕೋಟಿ ರೂ. ಪಡೆದಿದ್ದ ರಿಷಭ್ ಪಂತ್ ಈ ಬಾರಿ ಹೆಚ್ಚಿನ ಸಂಭಾವನೆಗಾಗಿ ಬೇಡಿಕೆಯಿಟ್ಟಿದ್ದಾರೆ. ಆದರೆ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಬೃಹತ್ ಮೊತ್ತ ನೀಡಲು ಹಿಂದೇಟು ಹಾಕಿದ್ದರಿಂದ ಅವರು ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲು ನಿರ್ಧರಿಸಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು.

2 / 5
ಅಲ್ಲದೆ ಇತ್ತೀಚೆಗೆ ಸುನಿಲ್ ಗವಾಸ್ಕರ್ ಖಾಸಗಿ ಚಾನೆಲ್​ವೊಂದರಲ್ಲಿ, ರಿಷಭ್ ಪಂತ್ ಹೆಚ್ಚಿನ ಹಣಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ತೊರೆದಿದ್ದಾರೆ ಎಂಬ ಹೇಳಿಕೆ ನೀಡಿದ್ದರು. ಈ ಆರೋಪದ ಬೆನ್ನಲ್ಲೇ ಇದೀಗ ರಿಷಭ್ ಪಂತ್ ಮೌನ ಮುರಿದಿದ್ದಾರೆ.

ಅಲ್ಲದೆ ಇತ್ತೀಚೆಗೆ ಸುನಿಲ್ ಗವಾಸ್ಕರ್ ಖಾಸಗಿ ಚಾನೆಲ್​ವೊಂದರಲ್ಲಿ, ರಿಷಭ್ ಪಂತ್ ಹೆಚ್ಚಿನ ಹಣಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ತೊರೆದಿದ್ದಾರೆ ಎಂಬ ಹೇಳಿಕೆ ನೀಡಿದ್ದರು. ಈ ಆರೋಪದ ಬೆನ್ನಲ್ಲೇ ಇದೀಗ ರಿಷಭ್ ಪಂತ್ ಮೌನ ಮುರಿದಿದ್ದಾರೆ.

3 / 5
ತಮ್ಮ ಸೋಷಿಯಲ್ ಮೀಡಿಯಾ ಖಾತೆಯ ಮೂಲಕ ಸ್ಪಷ್ಟನೆ ನೀಡಿರುವ ಪಂತ್, ಹಣದ ವಿಚಾರಕ್ಕೆ ನಾನು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ತೊರೆದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಸದ್ಯ ಹರಿದಾಡುತ್ತಿರುವ ಸುದ್ದಿಗಳಲ್ಲಿ ಸತ್ಯಾಂಶವಿಲ್ಲ ಎಂದು ಪಂತ್ ಹೇಳಿದ್ದಾರೆ.

ತಮ್ಮ ಸೋಷಿಯಲ್ ಮೀಡಿಯಾ ಖಾತೆಯ ಮೂಲಕ ಸ್ಪಷ್ಟನೆ ನೀಡಿರುವ ಪಂತ್, ಹಣದ ವಿಚಾರಕ್ಕೆ ನಾನು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ತೊರೆದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಸದ್ಯ ಹರಿದಾಡುತ್ತಿರುವ ಸುದ್ದಿಗಳಲ್ಲಿ ಸತ್ಯಾಂಶವಿಲ್ಲ ಎಂದು ಪಂತ್ ಹೇಳಿದ್ದಾರೆ.

4 / 5
ರಿಷಭ್ ಪಂತ್ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಐಪಿಎಲ್ ಹರಾಜು ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಮೊದಲ ಸೆಟ್​ನಲ್ಲೇ ಸ್ಥಾನ ಪಡೆದಿರುವ ಪಂತ್​ ಖರೀದಿಗಾಗಿ ಆರಂಭದಲ್ಲೇ ಭರ್ಜರಿ ಪೈಪೋಟಿ ಕಂಡು ಬರಲಿದೆ. ಈ ಪೈಪೋಟಿಯೊಂದಿಗೆ ರಿಷಭ್ ಪಂತ್ ಯಾವ ತಂಡದ ಪಾಲಾಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ರಿಷಭ್ ಪಂತ್ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಐಪಿಎಲ್ ಹರಾಜು ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಮೊದಲ ಸೆಟ್​ನಲ್ಲೇ ಸ್ಥಾನ ಪಡೆದಿರುವ ಪಂತ್​ ಖರೀದಿಗಾಗಿ ಆರಂಭದಲ್ಲೇ ಭರ್ಜರಿ ಪೈಪೋಟಿ ಕಂಡು ಬರಲಿದೆ. ಈ ಪೈಪೋಟಿಯೊಂದಿಗೆ ರಿಷಭ್ ಪಂತ್ ಯಾವ ತಂಡದ ಪಾಲಾಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ