AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಬರೀ ದುಡ್ಡಿಗಾಗಿ ಅಲ್ಲ… ಮೌನ ಮುರಿದ ರಿಷಭ್ ಪಂತ್

IPL 2025 Mega Auction: ಈ ಬಾರಿಯ ಐಪಿಎಲ್ ಮೆಗಾ ಹರಾಜು ನವೆಂಬರ್ 24 ಮತ್ತು 25 ರಂದು ನಡೆಯಲಿದೆ. ಸೌದಿ ಅರೇಬಿಯಾದ ಜಿದ್ಧಾದಲ್ಲಿ ಜರುಗಲಿರುವ ಈ ಹರಾಜು ಪ್ರಕ್ರಿಯೆಯಲ್ಲಿ 574 ಆಟಗಾರರ ಹೆಸರು ಕಾಣಿಸಿಕೊಳ್ಳಲಿದೆ. ಇವರಲ್ಲಿ ರಿಷಭ್ ಪಂತ್ ಸೇರಿದಂತೆ 12 ಆಟಗಾರರು ಮೊದಲ ಸುತ್ತಿನಲ್ಲಿ ಹರಾಜಾಗಲಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 20, 2024 | 9:57 AM

Share
ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಈ ಬಾರಿಯ ಐಪಿಎಲ್ (IPL 2025) ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕಳೆದ ಸೀಸನ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿದ್ದ ಪಂತ್ ಅವರು ಈ ಬಾರಿ ರಿಟೈನ್ ಆಗಿಲ್ಲ. ಇದರ ಬೆನ್ನಲ್ಲೇ ರಿಷಭ್ ಡೆಲ್ಲಿ ತಂಡ ತೊರೆಯಲು ಮುಖ್ಯ ಕಾರಣ ಬೃಹತ್ ಮೊತ್ತದ ಡಿಮ್ಯಾಂಡ್ ಎನ್ನಲಾಗಿತ್ತು.

ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಈ ಬಾರಿಯ ಐಪಿಎಲ್ (IPL 2025) ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕಳೆದ ಸೀಸನ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿದ್ದ ಪಂತ್ ಅವರು ಈ ಬಾರಿ ರಿಟೈನ್ ಆಗಿಲ್ಲ. ಇದರ ಬೆನ್ನಲ್ಲೇ ರಿಷಭ್ ಡೆಲ್ಲಿ ತಂಡ ತೊರೆಯಲು ಮುಖ್ಯ ಕಾರಣ ಬೃಹತ್ ಮೊತ್ತದ ಡಿಮ್ಯಾಂಡ್ ಎನ್ನಲಾಗಿತ್ತು.

1 / 5
ಕಳೆದ ಸೀಸನ್​ನಲ್ಲಿ 16 ಕೋಟಿ ರೂ. ಪಡೆದಿದ್ದ ರಿಷಭ್ ಪಂತ್ ಈ ಬಾರಿ ಹೆಚ್ಚಿನ ಸಂಭಾವನೆಗಾಗಿ ಬೇಡಿಕೆಯಿಟ್ಟಿದ್ದಾರೆ. ಆದರೆ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಬೃಹತ್ ಮೊತ್ತ ನೀಡಲು ಹಿಂದೇಟು ಹಾಕಿದ್ದರಿಂದ ಅವರು ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲು ನಿರ್ಧರಿಸಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು.

ಕಳೆದ ಸೀಸನ್​ನಲ್ಲಿ 16 ಕೋಟಿ ರೂ. ಪಡೆದಿದ್ದ ರಿಷಭ್ ಪಂತ್ ಈ ಬಾರಿ ಹೆಚ್ಚಿನ ಸಂಭಾವನೆಗಾಗಿ ಬೇಡಿಕೆಯಿಟ್ಟಿದ್ದಾರೆ. ಆದರೆ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಬೃಹತ್ ಮೊತ್ತ ನೀಡಲು ಹಿಂದೇಟು ಹಾಕಿದ್ದರಿಂದ ಅವರು ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲು ನಿರ್ಧರಿಸಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು.

2 / 5
ಅಲ್ಲದೆ ಇತ್ತೀಚೆಗೆ ಸುನಿಲ್ ಗವಾಸ್ಕರ್ ಖಾಸಗಿ ಚಾನೆಲ್​ವೊಂದರಲ್ಲಿ, ರಿಷಭ್ ಪಂತ್ ಹೆಚ್ಚಿನ ಹಣಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ತೊರೆದಿದ್ದಾರೆ ಎಂಬ ಹೇಳಿಕೆ ನೀಡಿದ್ದರು. ಈ ಆರೋಪದ ಬೆನ್ನಲ್ಲೇ ಇದೀಗ ರಿಷಭ್ ಪಂತ್ ಮೌನ ಮುರಿದಿದ್ದಾರೆ.

ಅಲ್ಲದೆ ಇತ್ತೀಚೆಗೆ ಸುನಿಲ್ ಗವಾಸ್ಕರ್ ಖಾಸಗಿ ಚಾನೆಲ್​ವೊಂದರಲ್ಲಿ, ರಿಷಭ್ ಪಂತ್ ಹೆಚ್ಚಿನ ಹಣಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ತೊರೆದಿದ್ದಾರೆ ಎಂಬ ಹೇಳಿಕೆ ನೀಡಿದ್ದರು. ಈ ಆರೋಪದ ಬೆನ್ನಲ್ಲೇ ಇದೀಗ ರಿಷಭ್ ಪಂತ್ ಮೌನ ಮುರಿದಿದ್ದಾರೆ.

3 / 5
ತಮ್ಮ ಸೋಷಿಯಲ್ ಮೀಡಿಯಾ ಖಾತೆಯ ಮೂಲಕ ಸ್ಪಷ್ಟನೆ ನೀಡಿರುವ ಪಂತ್, ಹಣದ ವಿಚಾರಕ್ಕೆ ನಾನು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ತೊರೆದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಸದ್ಯ ಹರಿದಾಡುತ್ತಿರುವ ಸುದ್ದಿಗಳಲ್ಲಿ ಸತ್ಯಾಂಶವಿಲ್ಲ ಎಂದು ಪಂತ್ ಹೇಳಿದ್ದಾರೆ.

ತಮ್ಮ ಸೋಷಿಯಲ್ ಮೀಡಿಯಾ ಖಾತೆಯ ಮೂಲಕ ಸ್ಪಷ್ಟನೆ ನೀಡಿರುವ ಪಂತ್, ಹಣದ ವಿಚಾರಕ್ಕೆ ನಾನು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ತೊರೆದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಸದ್ಯ ಹರಿದಾಡುತ್ತಿರುವ ಸುದ್ದಿಗಳಲ್ಲಿ ಸತ್ಯಾಂಶವಿಲ್ಲ ಎಂದು ಪಂತ್ ಹೇಳಿದ್ದಾರೆ.

4 / 5
ರಿಷಭ್ ಪಂತ್ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಐಪಿಎಲ್ ಹರಾಜು ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಮೊದಲ ಸೆಟ್​ನಲ್ಲೇ ಸ್ಥಾನ ಪಡೆದಿರುವ ಪಂತ್​ ಖರೀದಿಗಾಗಿ ಆರಂಭದಲ್ಲೇ ಭರ್ಜರಿ ಪೈಪೋಟಿ ಕಂಡು ಬರಲಿದೆ. ಈ ಪೈಪೋಟಿಯೊಂದಿಗೆ ರಿಷಭ್ ಪಂತ್ ಯಾವ ತಂಡದ ಪಾಲಾಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ರಿಷಭ್ ಪಂತ್ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಐಪಿಎಲ್ ಹರಾಜು ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಮೊದಲ ಸೆಟ್​ನಲ್ಲೇ ಸ್ಥಾನ ಪಡೆದಿರುವ ಪಂತ್​ ಖರೀದಿಗಾಗಿ ಆರಂಭದಲ್ಲೇ ಭರ್ಜರಿ ಪೈಪೋಟಿ ಕಂಡು ಬರಲಿದೆ. ಈ ಪೈಪೋಟಿಯೊಂದಿಗೆ ರಿಷಭ್ ಪಂತ್ ಯಾವ ತಂಡದ ಪಾಲಾಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

5 / 5
Follow Us
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ