AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: CSK ಯತ್ತ ರಿಷಭ್ ಪಂತ್ ಚಿತ್ತ

MS Dhoni - Rishabh Pant: 43 ವರ್ಷದ ಮಹೇಂದ್ರ ಸಿಂಗ್ ಧೋನಿ ಮುಂದಿನ ಸೀಸನ್​ನಲ್ಲಿ ಸಿಎಸ್​ಕೆ ಪರ ಕಣಕ್ಕಿಳಿಯುವುದು ಅನುಮಾನ ಎನ್ನಲಾಗುತ್ತಿದೆ. ಇದಾಗ್ಯೂ ಅವರು ಚೆನ್ನೈ ಸೂಪರ್ ಕಿಂಗ್ಸ್​ ತಂಡದ ಮೆಂಟರ್ ಅಥವಾ ಕೋಚ್ ಆಗಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಹೀಗಾಗಿಯೇ ಹೊಸ ತಂಡವನ್ನು ಕಟ್ಟಲು ಧೋನಿ ಕೂಡ ತೆರೆಮರೆಯ ಸಿದ್ಧತೆಗಳನ್ನು ಆರಂಭಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Jul 21, 2024 | 12:30 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ಮೆಗಾ ಹರಾಜಿನ ಸಿದ್ಧತೆಗಳು ಆರಂಭವಾದ ಬೆನ್ನಲ್ಲೇ, ಇತ್ತ ಐಪಿಎಲ್ ಸ್ಟಾರ್ ಆಟಗಾರರ ಲೆಕ್ಕಾಚಾರಗಳು ಶುರುವಾಗಿದೆ. ಈ ಲೆಕ್ಕಾಚಾರಗಳ ನಡುವೆ ಎಲ್ಲರ ಗಮನ ಸೆಳೆಯುತ್ತಿರುವುದು ರಿಷಭ್ ಪಂತ್. ಏಕೆಂದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಈ ಬಾರಿಯ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ಮೆಗಾ ಹರಾಜಿನ ಸಿದ್ಧತೆಗಳು ಆರಂಭವಾದ ಬೆನ್ನಲ್ಲೇ, ಇತ್ತ ಐಪಿಎಲ್ ಸ್ಟಾರ್ ಆಟಗಾರರ ಲೆಕ್ಕಾಚಾರಗಳು ಶುರುವಾಗಿದೆ. ಈ ಲೆಕ್ಕಾಚಾರಗಳ ನಡುವೆ ಎಲ್ಲರ ಗಮನ ಸೆಳೆಯುತ್ತಿರುವುದು ರಿಷಭ್ ಪಂತ್. ಏಕೆಂದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಈ ಬಾರಿಯ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ.

1 / 5
ಸಿಎಸ್​ಕೆ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯ ಸೂಚನೆಯ ಮೇರೆಗೆ ಈ ನಿರ್ಧಾರಕ್ಕೆ ಮುಂದಾಗಿದ್ದಾರೆ ಎಂಬ ಮಾತುಗಳು ಕೂಡ ಕೇಳಿ ಬರುತ್ತಿವೆ. ಅಂದರೆ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡರೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಖರೀದಿಸುವ ಬಗ್ಗೆ ಪಂತ್​ಗೆ ಧೋನಿ ಮಾತುಕೊಟ್ಟಿದ್ದಾರೆ ಎನ್ನಲಾಗುತ್ತಿದೆ.

ಸಿಎಸ್​ಕೆ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯ ಸೂಚನೆಯ ಮೇರೆಗೆ ಈ ನಿರ್ಧಾರಕ್ಕೆ ಮುಂದಾಗಿದ್ದಾರೆ ಎಂಬ ಮಾತುಗಳು ಕೂಡ ಕೇಳಿ ಬರುತ್ತಿವೆ. ಅಂದರೆ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡರೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಖರೀದಿಸುವ ಬಗ್ಗೆ ಪಂತ್​ಗೆ ಧೋನಿ ಮಾತುಕೊಟ್ಟಿದ್ದಾರೆ ಎನ್ನಲಾಗುತ್ತಿದೆ.

2 / 5
ಇದೇ ಕಾರಣದಿಂದಾಗಿ ಇದೀಗ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕತ್ವವನ್ನು ತ್ಯಜಿಸಿ, ಚೆನ್ನೈ ಸೂಪರ್ ಕಿಂಗ್ಸ್​​ ತಂಡದತ್ತ ಮುಖ ಮಾಡಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಅದರಂತೆ ಮುಂಬರುವ ಮೆಗಾ ಹರಾಜಿನಲ್ಲಿ ರಿಷಭ್ ಪಂತ್ ಹೆಸರು ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.

ಇದೇ ಕಾರಣದಿಂದಾಗಿ ಇದೀಗ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕತ್ವವನ್ನು ತ್ಯಜಿಸಿ, ಚೆನ್ನೈ ಸೂಪರ್ ಕಿಂಗ್ಸ್​​ ತಂಡದತ್ತ ಮುಖ ಮಾಡಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಅದರಂತೆ ಮುಂಬರುವ ಮೆಗಾ ಹರಾಜಿನಲ್ಲಿ ರಿಷಭ್ ಪಂತ್ ಹೆಸರು ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.

3 / 5
ಇನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ರಿಷಭ್ ಪಂತ್ ಎಂಟ್ರಿ ಕೊಟ್ಟರೆ ನಾಯಕತ್ವ ಒಲಿಯುವುದು ಕೂಡ ಖಚಿತ. ಕಳೆದ ಸೀಸನ್​ನಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದ ರುತುರಾಜ್ ಗಾಯಕ್ವಾಡ್ ಧೋನಿಯನ್ನು ಅವಲಂಭಿಸಿಯೇ ತಂಡವನ್ನು ಮುನ್ನಡೆಸಿದ್ದರು. ಇದರೊಂದಿಗೆ ಧೋನಿಯ ಬಳಿಕ ತಂಡವನ್ನು ಮುನ್ನಡೆಸಬಲ್ಲ ಸಮರ್ಥ ನಾಯಕನ ಅವಶ್ಯಕತೆ ಸಿಎಸ್​ಕೆ ತಂಡಕ್ಕಿದೆ ಎಂಬುದು ಫ್ರಾಂಚೈಸಿಗೂ ಮನದಟ್ಟದಾಗಿದೆ.

ಇನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ರಿಷಭ್ ಪಂತ್ ಎಂಟ್ರಿ ಕೊಟ್ಟರೆ ನಾಯಕತ್ವ ಒಲಿಯುವುದು ಕೂಡ ಖಚಿತ. ಕಳೆದ ಸೀಸನ್​ನಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದ ರುತುರಾಜ್ ಗಾಯಕ್ವಾಡ್ ಧೋನಿಯನ್ನು ಅವಲಂಭಿಸಿಯೇ ತಂಡವನ್ನು ಮುನ್ನಡೆಸಿದ್ದರು. ಇದರೊಂದಿಗೆ ಧೋನಿಯ ಬಳಿಕ ತಂಡವನ್ನು ಮುನ್ನಡೆಸಬಲ್ಲ ಸಮರ್ಥ ನಾಯಕನ ಅವಶ್ಯಕತೆ ಸಿಎಸ್​ಕೆ ತಂಡಕ್ಕಿದೆ ಎಂಬುದು ಫ್ರಾಂಚೈಸಿಗೂ ಮನದಟ್ಟದಾಗಿದೆ.

4 / 5
ಹೀಗಾಗಿಯೇ ರಿಷಭ್ ಪಂತ್ ಅವರ ಮೇಲೆ ಸಿಎಸ್​ಕೆ ಕಣ್ಣಿಟ್ಟಿದೆ. ಇಲ್ಲಿ ಪಂತ್ ಅವರ ಆಯ್ಕೆಯಿಂದ ಸಿಎಸ್​ಕೆ ಎರಡು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದೆ. ಅಂದರೆ ಧೋನಿಯ ಸ್ಥಾನದಲ್ಲಿ ಹೊಸ ವಿಕೆಟ್ ಕೀಪರ್ ಹಾಗೂ ನಾಯಕನಾಗಿ ರಿಷಭ್ ಪಂತ್ ಅವರನ್ನು ಕಣಕ್ಕಿಳಿಸಬಹುದು. ಈ ಮೂಲಕ ಮಹೇಂದ್ರ ಸಿಂಗ್ ಧೋನಿಯ ಉತ್ತರಾಧಿಕಾರಿಯನ್ನು ನೇಮಿಸಲು ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಪ್ಲ್ಯಾನ್ ರೂಪಿಸಿದೆ. ಅದರಂತೆ ಸಿಎಸ್​ಕೆ ತಂಡಕ್ಕೆ ಪಂತ್ ಎಂಟ್ರಿ ಕೊಟ್ಟರೆ ನಾಯಕನಾಗಿ ಕಣಕ್ಕಿಳಿಯುವುದು ಖಚಿತ ಎನ್ನಬಹುದು.

ಹೀಗಾಗಿಯೇ ರಿಷಭ್ ಪಂತ್ ಅವರ ಮೇಲೆ ಸಿಎಸ್​ಕೆ ಕಣ್ಣಿಟ್ಟಿದೆ. ಇಲ್ಲಿ ಪಂತ್ ಅವರ ಆಯ್ಕೆಯಿಂದ ಸಿಎಸ್​ಕೆ ಎರಡು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದೆ. ಅಂದರೆ ಧೋನಿಯ ಸ್ಥಾನದಲ್ಲಿ ಹೊಸ ವಿಕೆಟ್ ಕೀಪರ್ ಹಾಗೂ ನಾಯಕನಾಗಿ ರಿಷಭ್ ಪಂತ್ ಅವರನ್ನು ಕಣಕ್ಕಿಳಿಸಬಹುದು. ಈ ಮೂಲಕ ಮಹೇಂದ್ರ ಸಿಂಗ್ ಧೋನಿಯ ಉತ್ತರಾಧಿಕಾರಿಯನ್ನು ನೇಮಿಸಲು ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಪ್ಲ್ಯಾನ್ ರೂಪಿಸಿದೆ. ಅದರಂತೆ ಸಿಎಸ್​ಕೆ ತಂಡಕ್ಕೆ ಪಂತ್ ಎಂಟ್ರಿ ಕೊಟ್ಟರೆ ನಾಯಕನಾಗಿ ಕಣಕ್ಕಿಳಿಯುವುದು ಖಚಿತ ಎನ್ನಬಹುದು.

5 / 5
Follow Us
ಕೋರಮಂಗಲದಲ್ಲಿ 13 ಟನ್ ಹಸಿ ಕಸದಿಂದ ಇಂಧನ ಉತ್ಪಾದನೆ
ಕೋರಮಂಗಲದಲ್ಲಿ 13 ಟನ್ ಹಸಿ ಕಸದಿಂದ ಇಂಧನ ಉತ್ಪಾದನೆ
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!