AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ರಿಷಭ್ ಪಂತ್​ಗೆ 30 ಕೋಟಿ ರೂ: ಸುರೇಶ್ ರೈನಾ

IPL 2025 Mega Auction: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮೆಗಾ ಹರಾಜು ನವೆಂಬರ್ 24 ಮತ್ತು 25 ರಂದು ನಡೆಯಲಿದೆ. ಸೌದಿ ಅರೇಬಿಯಾದ ಜಿದ್ದಾದಲ್ಲಿ ನಡೆಯಲಿರುವ ಈ ಹರಾಜು ಪ್ರಕ್ರಿಯೆಯಲ್ಲಿ ಒಟ್ಟು 574 ಆಟಗಾರರ ಹೆಸರು ಕಾಣಿಸಿಕೊಳ್ಳಲಿದೆ. ಈ ಪಟ್ಟಿಯ ಮೊದಲ ಸುತ್ತಿನಲ್ಲಿ 6 ಆಟಗಾರರು ಹರಾಜಾಗಲಿದ್ದು, ಈ ಪಟ್ಟಿಯಲ್ಲಿ ರಿಷಭ್ ಪಂತ್ ಹೆಸರು ಕೂಡ ಕಾಣಿಸಿಕೊಳ್ಳಲಿದೆ.

TV9 Web
| Edited By: |

Updated on: Nov 21, 2024 | 10:08 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18ರ ಮೆಗಾ ಹರಾಜಿನಲ್ಲಿ ರಿಷಭ್ ಪಂತ್ ದಾಖಲೆಯ ಮೊತ್ತಕ್ಕೆ ಹರಾಜಾಗಲಿದ್ದಾರೆ ಎಂದು ಟೀಮ್ ಇಂಡಿಯಾದ ಮಾಜಿ ಆಟಗಾರ ಸುರೇಶ್ ರೈನಾ ಭವಿಷ್ಯ ನುಡಿದಿದ್ದಾರೆ. 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿರುವ ಪಂತ್ ಎರಡಂಕಿ ಕೋಟಿಯೊಂದಿಗೆ ಹರಾಜಾಗುವುದು ಖಚಿತ ಎಂದಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18ರ ಮೆಗಾ ಹರಾಜಿನಲ್ಲಿ ರಿಷಭ್ ಪಂತ್ ದಾಖಲೆಯ ಮೊತ್ತಕ್ಕೆ ಹರಾಜಾಗಲಿದ್ದಾರೆ ಎಂದು ಟೀಮ್ ಇಂಡಿಯಾದ ಮಾಜಿ ಆಟಗಾರ ಸುರೇಶ್ ರೈನಾ ಭವಿಷ್ಯ ನುಡಿದಿದ್ದಾರೆ. 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿರುವ ಪಂತ್ ಎರಡಂಕಿ ಕೋಟಿಯೊಂದಿಗೆ ಹರಾಜಾಗುವುದು ಖಚಿತ ಎಂದಿದ್ದಾರೆ.

1 / 5
ರಿಷಭ್ ಪಂತ್ ಅವರ ನಾಯಕತ್ವದ ಅನುಭವ, ಬ್ಯಾಟಿಂಗ್ ಪರಾಕ್ರಮ ಮತ್ತು ಬ್ರ್ಯಾಂಡ್ ಮೌಲ್ಯವನ್ನು ಪರಿಗಣಿಸಿ, ಅವರ ಖರೀದಿಗಾಗಿ ಬಿಡ್ಡಿಂಗ್ ವಾರ್​ ನಡೆಯುವುದು ಖಚಿತ. ಅಲ್ಲದೆ ಈ ಪೈಪೋಟಿಯಿಂದಾಗಿ ಅವರ ಮೊತ್ತ 25 ಕೋಟಿ ರೂ. ದಾಟಲಿದೆ ಎಂದು ಸುರೇಶ್ ರೈನಾ ಹೇಳಿದ್ದಾರೆ.

ರಿಷಭ್ ಪಂತ್ ಅವರ ನಾಯಕತ್ವದ ಅನುಭವ, ಬ್ಯಾಟಿಂಗ್ ಪರಾಕ್ರಮ ಮತ್ತು ಬ್ರ್ಯಾಂಡ್ ಮೌಲ್ಯವನ್ನು ಪರಿಗಣಿಸಿ, ಅವರ ಖರೀದಿಗಾಗಿ ಬಿಡ್ಡಿಂಗ್ ವಾರ್​ ನಡೆಯುವುದು ಖಚಿತ. ಅಲ್ಲದೆ ಈ ಪೈಪೋಟಿಯಿಂದಾಗಿ ಅವರ ಮೊತ್ತ 25 ಕೋಟಿ ರೂ. ದಾಟಲಿದೆ ಎಂದು ಸುರೇಶ್ ರೈನಾ ಹೇಳಿದ್ದಾರೆ.

2 / 5
ನನ್ನ ಪ್ರಕಾರ ರಿಷಭ್ ಪಂತ್ ಅವರಿಗೆ 25 ರಿಂದ 30 ಕೋಟಿ ರೂ. ಸಿಗಬೇಕು. ಏಕೆಂದರೆ ಆಸ್ಟ್ರೇಲಿಯಾ ಆಟಗಾರರಿಗೆ ಬೃಹತ್ ಮೊತ್ತವನ್ನು ಪಾವತಿಸಲಾಗುತ್ತದೆ. ಇದೀಗ ಎಲ್ಲಾ ವಿಭಾಗಗಳಲ್ಲೂ ಉತ್ತಮವಾಗಿರುವ ಪಂತ್ ಕೂಡ ದೊಡ್ಡ ಮೊತ್ತ ಪಡೆಯಲು ಅರ್ಹರು. ಹೀಗಾಗಿ ರಿಷಭ್ ಪಂತ್ 30 ಕೋಟಿ ರೂ.ಗೆ ಹರಾಜಾಗುವ ನಿರೀಕ್ಷೆಯಿದೆ ಎಂದು ಸುರೇಶ್ ರೈನಾ ಹೇಳಿದ್ದಾರೆ.

ನನ್ನ ಪ್ರಕಾರ ರಿಷಭ್ ಪಂತ್ ಅವರಿಗೆ 25 ರಿಂದ 30 ಕೋಟಿ ರೂ. ಸಿಗಬೇಕು. ಏಕೆಂದರೆ ಆಸ್ಟ್ರೇಲಿಯಾ ಆಟಗಾರರಿಗೆ ಬೃಹತ್ ಮೊತ್ತವನ್ನು ಪಾವತಿಸಲಾಗುತ್ತದೆ. ಇದೀಗ ಎಲ್ಲಾ ವಿಭಾಗಗಳಲ್ಲೂ ಉತ್ತಮವಾಗಿರುವ ಪಂತ್ ಕೂಡ ದೊಡ್ಡ ಮೊತ್ತ ಪಡೆಯಲು ಅರ್ಹರು. ಹೀಗಾಗಿ ರಿಷಭ್ ಪಂತ್ 30 ಕೋಟಿ ರೂ.ಗೆ ಹರಾಜಾಗುವ ನಿರೀಕ್ಷೆಯಿದೆ ಎಂದು ಸುರೇಶ್ ರೈನಾ ಹೇಳಿದ್ದಾರೆ.

3 / 5
ಇತ್ತ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿರುವ ರಿಷಭ್ ಪಂತ್ ಮೊದಲ ಹರಾಜು ಪಟ್ಟಿಯಲ್ಲಿದ್ದಾರೆ. ಹೀಗಾಗಿ ಮೊದಲ ಸುತ್ತಿನಲ್ಲೇ ಪಂತ್ ಖರೀದಿಗಾಗಿ ಎಲ್ಲಾ ಫ್ರಾಂಚೈಸಿಗಳು ಭರ್ಜರಿ ಪೈಪೋಟಿ ನಡೆಸಲಿದೆ. ಈ ಪೈಪೋಟಿಯಿಂದಾಗಿ ರಿಷಭ್ ಪಂತ್ 25 ರಿಂದ 30 ಕೋಟಿ ರೂ. ಪಡೆದರೂ ಅಚ್ಚರಿಯಿಲ್ಲ.

ಇತ್ತ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿರುವ ರಿಷಭ್ ಪಂತ್ ಮೊದಲ ಹರಾಜು ಪಟ್ಟಿಯಲ್ಲಿದ್ದಾರೆ. ಹೀಗಾಗಿ ಮೊದಲ ಸುತ್ತಿನಲ್ಲೇ ಪಂತ್ ಖರೀದಿಗಾಗಿ ಎಲ್ಲಾ ಫ್ರಾಂಚೈಸಿಗಳು ಭರ್ಜರಿ ಪೈಪೋಟಿ ನಡೆಸಲಿದೆ. ಈ ಪೈಪೋಟಿಯಿಂದಾಗಿ ರಿಷಭ್ ಪಂತ್ 25 ರಿಂದ 30 ಕೋಟಿ ರೂ. ಪಡೆದರೂ ಅಚ್ಚರಿಯಿಲ್ಲ.

4 / 5
ಅಂದಹಾಗೆ ಕಳೆದ ಸೀಸನ್​ನಲ್ಲಿ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯಿಂದ 16 ಕೋಟಿ ರೂ. ಪಡೆದಿದ್ದರು. ಇದೀಗ ವರ್ಷಗಳ ಬಳಿಕ ಮೆಗಾ ಹರಾಜಿನಲ್ಲಿ ಅದೃಷ್ಟ ಪರೀಕ್ಷೆಗಿಳಿದಿರುವ ರಿಷಭ್ ಅವರ ಖರೀದಿಗಾಗಿ ಪಂಜಾಬ್ ಕಿಂಗ್ಸ್, ಚೆನ್ನೈ ಸೂಪರ್ ಕಿಂಗ್ಸ್, ಆರ್​ಸಿಬಿ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಗಳು ಮುಂಚೂಣಿಯಲ್ಲಿವೆ. ಹೀಗಾಗಿ ನವೆಂಬರ್ 24 ರಂದು ನಡೆಯಲಿರುವ ಮೆಗಾ ಹರಾಜಿನಲ್ಲಿ ಪಂಟರ್ ಪಂತ್​ಗಾಗಿ ಬಿಡ್ಡಿಂಗ್ ವಾರ್ ನಡೆಯುವುದು ಖಚಿತ ಎನ್ನಬಹುದು.

ಅಂದಹಾಗೆ ಕಳೆದ ಸೀಸನ್​ನಲ್ಲಿ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯಿಂದ 16 ಕೋಟಿ ರೂ. ಪಡೆದಿದ್ದರು. ಇದೀಗ ವರ್ಷಗಳ ಬಳಿಕ ಮೆಗಾ ಹರಾಜಿನಲ್ಲಿ ಅದೃಷ್ಟ ಪರೀಕ್ಷೆಗಿಳಿದಿರುವ ರಿಷಭ್ ಅವರ ಖರೀದಿಗಾಗಿ ಪಂಜಾಬ್ ಕಿಂಗ್ಸ್, ಚೆನ್ನೈ ಸೂಪರ್ ಕಿಂಗ್ಸ್, ಆರ್​ಸಿಬಿ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಗಳು ಮುಂಚೂಣಿಯಲ್ಲಿವೆ. ಹೀಗಾಗಿ ನವೆಂಬರ್ 24 ರಂದು ನಡೆಯಲಿರುವ ಮೆಗಾ ಹರಾಜಿನಲ್ಲಿ ಪಂಟರ್ ಪಂತ್​ಗಾಗಿ ಬಿಡ್ಡಿಂಗ್ ವಾರ್ ನಡೆಯುವುದು ಖಚಿತ ಎನ್ನಬಹುದು.

5 / 5
Follow Us
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ