AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ರಿಷಭ್ ಪಂತ್​ಗಾಗಿ ಏಕಾಏಕಿ 7 ಕೋಟಿ ರೂ. ಹೆಚ್ಚಿಸಿದ LSG

IPL 2025 Mega Auction: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಮೆಗಾ ಹರಾಜಿನಲ್ಲಿ ರಿಷಭ್ ಪಂತ್ 20.75 ಕೋಟಿ ರೂ.ಗೆ ಹರಾಜಾಗಿದ್ದರು. ಆದರೆ ಆರ್​ಟಿಎಂ ಬಳಕೆಯನ್ನು ತಪ್ಪಿಸಿಕೊಳ್ಳಲು ಲಕ್ನೋ ಸೂಪರ್ ಜೈಂಟ್ಸ್ 27 ಕೋಟಿ ರೂ. ನೀಡಿ ರಿಷಭ್ ಪಂತ್ ಅವರನ್ನು ಖರೀದಿಸಿರುವುದು ವಿಶೇಷ.

ಝಾಹಿರ್ ಯೂಸುಫ್
|

Updated on: Nov 25, 2024 | 10:54 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಇತಿಹಾಸದಲ್ಲಿ ಅತ್ಯಧಿಕ ಮೊತ್ತಕ್ಕೆ ಬಿಕರಿಯಾದ ಆಟಗಾರನ ದಾಖಲೆ ರಿಷಭ್ ಪಂತ್ ಹೆಸರಿಗೆ ಸೇರ್ಪಡೆಯಾಗಿದೆ. ಐಪಿಎಲ್​ ಸೀಸನ್-18ರ ಮೆಗಾ ಹರಾಜಿ ಮೂಲಕ ಲಕ್ನೋ ಸೂಪರ್ ಜೈಂಟ್ಸ್​ ಫ್ರಾಂಚೈಸಿಯು ಪಂತ್ ಅವರನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದು ಕೂಡ ಬರೋಬ್ಬರಿ 27 ಕೋಟಿ ರೂ. ನೀಡುವ ಮೂಲಕ ಎಂಬುದು ವಿಶೇಷ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಇತಿಹಾಸದಲ್ಲಿ ಅತ್ಯಧಿಕ ಮೊತ್ತಕ್ಕೆ ಬಿಕರಿಯಾದ ಆಟಗಾರನ ದಾಖಲೆ ರಿಷಭ್ ಪಂತ್ ಹೆಸರಿಗೆ ಸೇರ್ಪಡೆಯಾಗಿದೆ. ಐಪಿಎಲ್​ ಸೀಸನ್-18ರ ಮೆಗಾ ಹರಾಜಿ ಮೂಲಕ ಲಕ್ನೋ ಸೂಪರ್ ಜೈಂಟ್ಸ್​ ಫ್ರಾಂಚೈಸಿಯು ಪಂತ್ ಅವರನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದು ಕೂಡ ಬರೋಬ್ಬರಿ 27 ಕೋಟಿ ರೂ. ನೀಡುವ ಮೂಲಕ ಎಂಬುದು ವಿಶೇಷ.

1 / 7
ಕುತೂಹಲಕಾರಿ ವಿಷಯ ಎಂದರೆ ರಿಷಭ್ ಪಂತ್ ಬಿಡ್ಡಿಂಗ್ ಮೂಲಕ ಪಡೆದ ಮೊತ್ತ 20.75 ಕೋಟಿ ರೂ. ಮಾತ್ರ. ಪಂತ್ ಖರೀದಿಗಾಗಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್​ ನಡುವೆ ಆರಂಭದಿಂದಲೇ ಪೈಪೋಟಿ ಏರ್ಪಟ್ಟಿತ್ತು.

ಕುತೂಹಲಕಾರಿ ವಿಷಯ ಎಂದರೆ ರಿಷಭ್ ಪಂತ್ ಬಿಡ್ಡಿಂಗ್ ಮೂಲಕ ಪಡೆದ ಮೊತ್ತ 20.75 ಕೋಟಿ ರೂ. ಮಾತ್ರ. ಪಂತ್ ಖರೀದಿಗಾಗಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್​ ನಡುವೆ ಆರಂಭದಿಂದಲೇ ಪೈಪೋಟಿ ಏರ್ಪಟ್ಟಿತ್ತು.

2 / 7
ಈ ಪೈಪೋಟಿಯೊಂದಿಗೆ ಪಂತ್ ಅವರ ಮೊತ್ತವು 20 ಕೋಟಿ ರೂ. ದಾಟಿದೆ. ಈ ವೇಳೆ ಅಂತಿಮವಾಗಿ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು 20.75 ಕೋಟಿ ರೂ. ಹರಾಜು ಕೂಗಿದ್ದರು. ಇದೇ ವೇಳೆ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ RTM ಆಯ್ಕೆ ಬಳಸಿಕೊಂಡಿತು.

ಈ ಪೈಪೋಟಿಯೊಂದಿಗೆ ಪಂತ್ ಅವರ ಮೊತ್ತವು 20 ಕೋಟಿ ರೂ. ದಾಟಿದೆ. ಈ ವೇಳೆ ಅಂತಿಮವಾಗಿ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು 20.75 ಕೋಟಿ ರೂ. ಹರಾಜು ಕೂಗಿದ್ದರು. ಇದೇ ವೇಳೆ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ RTM ಆಯ್ಕೆ ಬಳಸಿಕೊಂಡಿತು.

3 / 7
ಕಳೆದ ಸೀಸನ್​ನಲ್ಲಿ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿದ್ದರು. ಹೀಗಾಗಿ ಅವರ ಮೇಲೆ ಆರ್​ಟಿಎಂ ಆಯ್ಕೆ ಬಳಸಿ ತಂಡದಲ್ಲೇ ಉಳಿಸಿಕೊಳ್ಳಲು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಗೆ ಅವಕಾಶವಿತ್ತು. ಹೀಗಾಗಿಯೇ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ 20.75 ಕೋಟಿ ರೂ. ನಾವೇ ನೀಡುತ್ತೇವೆ ಎಂದು ಪಂತ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಲು ಮುಂದಾಗಿದೆ.

ಕಳೆದ ಸೀಸನ್​ನಲ್ಲಿ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿದ್ದರು. ಹೀಗಾಗಿ ಅವರ ಮೇಲೆ ಆರ್​ಟಿಎಂ ಆಯ್ಕೆ ಬಳಸಿ ತಂಡದಲ್ಲೇ ಉಳಿಸಿಕೊಳ್ಳಲು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಗೆ ಅವಕಾಶವಿತ್ತು. ಹೀಗಾಗಿಯೇ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ 20.75 ಕೋಟಿ ರೂ. ನಾವೇ ನೀಡುತ್ತೇವೆ ಎಂದು ಪಂತ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಲು ಮುಂದಾಗಿದೆ.

4 / 7
ಆದರೆ ಐಪಿಎಲ್ ಮೆಗಾ ಹರಾಜಿನ ಹೊಸ ನಿಯಮದ ಪ್ರಕಾರ, ಆರ್​ಟಿಎಂ ಬಳಕೆಯ ಬಳಿಕ ಕೊನೆಯ ಬಾರಿ ಬಿಡ್ ಮಾಡಿದ ಫ್ರಾಂಚೈಸಿಗೆ ಇನ್ನೊಮ್ಮೆ ಬಿಡ್ ಮಾಡಲು ಅವಕಾಶ ನೀಡಲಾಗುತ್ತದೆ. ಅದರಂತೆ ಲಕ್ನೋ ಸೂಪರ್ ಜೈಂಟ್ಸ್​ಗೆ ಅಂತಿಮ ಬಿಡ್​ಗೆ ಅವಕಾಶ ನೀಡಲಾಗಿದೆ.

ಆದರೆ ಐಪಿಎಲ್ ಮೆಗಾ ಹರಾಜಿನ ಹೊಸ ನಿಯಮದ ಪ್ರಕಾರ, ಆರ್​ಟಿಎಂ ಬಳಕೆಯ ಬಳಿಕ ಕೊನೆಯ ಬಾರಿ ಬಿಡ್ ಮಾಡಿದ ಫ್ರಾಂಚೈಸಿಗೆ ಇನ್ನೊಮ್ಮೆ ಬಿಡ್ ಮಾಡಲು ಅವಕಾಶ ನೀಡಲಾಗುತ್ತದೆ. ಅದರಂತೆ ಲಕ್ನೋ ಸೂಪರ್ ಜೈಂಟ್ಸ್​ಗೆ ಅಂತಿಮ ಬಿಡ್​ಗೆ ಅವಕಾಶ ನೀಡಲಾಗಿದೆ.

5 / 7
ಅದಾಗಲೇ ಆರ್​ಟಿಎಂ ಮೂಲಕ ರಿಷಭ್ ಪಂತ್ ಅವರನ್ನು ಉಳಿಸಿಕೊಳ್ಳಲು ಬಯಸಿದ್ದ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯ ತಂತ್ರ ಅರಿತಿದ್ದ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಏಕಾಏಕಿ 7 ಕೋಟಿ ರೂ. ಹೆಚ್ಚಿಸಿ ತಂತ್ರಕ್ಕೆ ಪ್ರತಿತಂತ್ರ ಹೆಣೆದರು.

ಅದಾಗಲೇ ಆರ್​ಟಿಎಂ ಮೂಲಕ ರಿಷಭ್ ಪಂತ್ ಅವರನ್ನು ಉಳಿಸಿಕೊಳ್ಳಲು ಬಯಸಿದ್ದ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯ ತಂತ್ರ ಅರಿತಿದ್ದ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಏಕಾಏಕಿ 7 ಕೋಟಿ ರೂ. ಹೆಚ್ಚಿಸಿ ತಂತ್ರಕ್ಕೆ ಪ್ರತಿತಂತ್ರ ಹೆಣೆದರು.

6 / 7
ಅತ್ತ ಅಷ್ಟೊಂದು ದುಬಾರಿ ಮೊತ್ತ ನೀಡುವ ಪರಿಸ್ಥಿತಿಯಲ್ಲಿರದ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ರಿಷಭ್ ಪಂತ್ ಅವರನ್ನು ಕೈ ಬಿಟ್ಟಿದೆ. ಈ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ದಾಖಲೆಯ ಮೊತ್ತಕ್ಕೆ ರಿಷಭ್ ಪಂತ್ ಅವರನ್ನು ಖರೀದಿಸುವಲ್ಲಿ ಯಶಸ್ವಿಯಾಗಿದೆ.

ಅತ್ತ ಅಷ್ಟೊಂದು ದುಬಾರಿ ಮೊತ್ತ ನೀಡುವ ಪರಿಸ್ಥಿತಿಯಲ್ಲಿರದ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ರಿಷಭ್ ಪಂತ್ ಅವರನ್ನು ಕೈ ಬಿಟ್ಟಿದೆ. ಈ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ದಾಖಲೆಯ ಮೊತ್ತಕ್ಕೆ ರಿಷಭ್ ಪಂತ್ ಅವರನ್ನು ಖರೀದಿಸುವಲ್ಲಿ ಯಶಸ್ವಿಯಾಗಿದೆ.

7 / 7
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ