AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ರಿಷಭ್ ಪಂತ್​ಗಾಗಿ ಏಕಾಏಕಿ 7 ಕೋಟಿ ರೂ. ಹೆಚ್ಚಿಸಿದ LSG

IPL 2025 Mega Auction: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಮೆಗಾ ಹರಾಜಿನಲ್ಲಿ ರಿಷಭ್ ಪಂತ್ 20.75 ಕೋಟಿ ರೂ.ಗೆ ಹರಾಜಾಗಿದ್ದರು. ಆದರೆ ಆರ್​ಟಿಎಂ ಬಳಕೆಯನ್ನು ತಪ್ಪಿಸಿಕೊಳ್ಳಲು ಲಕ್ನೋ ಸೂಪರ್ ಜೈಂಟ್ಸ್ 27 ಕೋಟಿ ರೂ. ನೀಡಿ ರಿಷಭ್ ಪಂತ್ ಅವರನ್ನು ಖರೀದಿಸಿರುವುದು ವಿಶೇಷ.

ಝಾಹಿರ್ ಯೂಸುಫ್
|

Updated on: Nov 25, 2024 | 10:54 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಇತಿಹಾಸದಲ್ಲಿ ಅತ್ಯಧಿಕ ಮೊತ್ತಕ್ಕೆ ಬಿಕರಿಯಾದ ಆಟಗಾರನ ದಾಖಲೆ ರಿಷಭ್ ಪಂತ್ ಹೆಸರಿಗೆ ಸೇರ್ಪಡೆಯಾಗಿದೆ. ಐಪಿಎಲ್​ ಸೀಸನ್-18ರ ಮೆಗಾ ಹರಾಜಿ ಮೂಲಕ ಲಕ್ನೋ ಸೂಪರ್ ಜೈಂಟ್ಸ್​ ಫ್ರಾಂಚೈಸಿಯು ಪಂತ್ ಅವರನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದು ಕೂಡ ಬರೋಬ್ಬರಿ 27 ಕೋಟಿ ರೂ. ನೀಡುವ ಮೂಲಕ ಎಂಬುದು ವಿಶೇಷ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಇತಿಹಾಸದಲ್ಲಿ ಅತ್ಯಧಿಕ ಮೊತ್ತಕ್ಕೆ ಬಿಕರಿಯಾದ ಆಟಗಾರನ ದಾಖಲೆ ರಿಷಭ್ ಪಂತ್ ಹೆಸರಿಗೆ ಸೇರ್ಪಡೆಯಾಗಿದೆ. ಐಪಿಎಲ್​ ಸೀಸನ್-18ರ ಮೆಗಾ ಹರಾಜಿ ಮೂಲಕ ಲಕ್ನೋ ಸೂಪರ್ ಜೈಂಟ್ಸ್​ ಫ್ರಾಂಚೈಸಿಯು ಪಂತ್ ಅವರನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದು ಕೂಡ ಬರೋಬ್ಬರಿ 27 ಕೋಟಿ ರೂ. ನೀಡುವ ಮೂಲಕ ಎಂಬುದು ವಿಶೇಷ.

1 / 7
ಕುತೂಹಲಕಾರಿ ವಿಷಯ ಎಂದರೆ ರಿಷಭ್ ಪಂತ್ ಬಿಡ್ಡಿಂಗ್ ಮೂಲಕ ಪಡೆದ ಮೊತ್ತ 20.75 ಕೋಟಿ ರೂ. ಮಾತ್ರ. ಪಂತ್ ಖರೀದಿಗಾಗಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್​ ನಡುವೆ ಆರಂಭದಿಂದಲೇ ಪೈಪೋಟಿ ಏರ್ಪಟ್ಟಿತ್ತು.

ಕುತೂಹಲಕಾರಿ ವಿಷಯ ಎಂದರೆ ರಿಷಭ್ ಪಂತ್ ಬಿಡ್ಡಿಂಗ್ ಮೂಲಕ ಪಡೆದ ಮೊತ್ತ 20.75 ಕೋಟಿ ರೂ. ಮಾತ್ರ. ಪಂತ್ ಖರೀದಿಗಾಗಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್​ ನಡುವೆ ಆರಂಭದಿಂದಲೇ ಪೈಪೋಟಿ ಏರ್ಪಟ್ಟಿತ್ತು.

2 / 7
ಈ ಪೈಪೋಟಿಯೊಂದಿಗೆ ಪಂತ್ ಅವರ ಮೊತ್ತವು 20 ಕೋಟಿ ರೂ. ದಾಟಿದೆ. ಈ ವೇಳೆ ಅಂತಿಮವಾಗಿ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು 20.75 ಕೋಟಿ ರೂ. ಹರಾಜು ಕೂಗಿದ್ದರು. ಇದೇ ವೇಳೆ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ RTM ಆಯ್ಕೆ ಬಳಸಿಕೊಂಡಿತು.

ಈ ಪೈಪೋಟಿಯೊಂದಿಗೆ ಪಂತ್ ಅವರ ಮೊತ್ತವು 20 ಕೋಟಿ ರೂ. ದಾಟಿದೆ. ಈ ವೇಳೆ ಅಂತಿಮವಾಗಿ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು 20.75 ಕೋಟಿ ರೂ. ಹರಾಜು ಕೂಗಿದ್ದರು. ಇದೇ ವೇಳೆ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ RTM ಆಯ್ಕೆ ಬಳಸಿಕೊಂಡಿತು.

3 / 7
ಕಳೆದ ಸೀಸನ್​ನಲ್ಲಿ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿದ್ದರು. ಹೀಗಾಗಿ ಅವರ ಮೇಲೆ ಆರ್​ಟಿಎಂ ಆಯ್ಕೆ ಬಳಸಿ ತಂಡದಲ್ಲೇ ಉಳಿಸಿಕೊಳ್ಳಲು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಗೆ ಅವಕಾಶವಿತ್ತು. ಹೀಗಾಗಿಯೇ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ 20.75 ಕೋಟಿ ರೂ. ನಾವೇ ನೀಡುತ್ತೇವೆ ಎಂದು ಪಂತ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಲು ಮುಂದಾಗಿದೆ.

ಕಳೆದ ಸೀಸನ್​ನಲ್ಲಿ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿದ್ದರು. ಹೀಗಾಗಿ ಅವರ ಮೇಲೆ ಆರ್​ಟಿಎಂ ಆಯ್ಕೆ ಬಳಸಿ ತಂಡದಲ್ಲೇ ಉಳಿಸಿಕೊಳ್ಳಲು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಗೆ ಅವಕಾಶವಿತ್ತು. ಹೀಗಾಗಿಯೇ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ 20.75 ಕೋಟಿ ರೂ. ನಾವೇ ನೀಡುತ್ತೇವೆ ಎಂದು ಪಂತ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಲು ಮುಂದಾಗಿದೆ.

4 / 7
ಆದರೆ ಐಪಿಎಲ್ ಮೆಗಾ ಹರಾಜಿನ ಹೊಸ ನಿಯಮದ ಪ್ರಕಾರ, ಆರ್​ಟಿಎಂ ಬಳಕೆಯ ಬಳಿಕ ಕೊನೆಯ ಬಾರಿ ಬಿಡ್ ಮಾಡಿದ ಫ್ರಾಂಚೈಸಿಗೆ ಇನ್ನೊಮ್ಮೆ ಬಿಡ್ ಮಾಡಲು ಅವಕಾಶ ನೀಡಲಾಗುತ್ತದೆ. ಅದರಂತೆ ಲಕ್ನೋ ಸೂಪರ್ ಜೈಂಟ್ಸ್​ಗೆ ಅಂತಿಮ ಬಿಡ್​ಗೆ ಅವಕಾಶ ನೀಡಲಾಗಿದೆ.

ಆದರೆ ಐಪಿಎಲ್ ಮೆಗಾ ಹರಾಜಿನ ಹೊಸ ನಿಯಮದ ಪ್ರಕಾರ, ಆರ್​ಟಿಎಂ ಬಳಕೆಯ ಬಳಿಕ ಕೊನೆಯ ಬಾರಿ ಬಿಡ್ ಮಾಡಿದ ಫ್ರಾಂಚೈಸಿಗೆ ಇನ್ನೊಮ್ಮೆ ಬಿಡ್ ಮಾಡಲು ಅವಕಾಶ ನೀಡಲಾಗುತ್ತದೆ. ಅದರಂತೆ ಲಕ್ನೋ ಸೂಪರ್ ಜೈಂಟ್ಸ್​ಗೆ ಅಂತಿಮ ಬಿಡ್​ಗೆ ಅವಕಾಶ ನೀಡಲಾಗಿದೆ.

5 / 7
ಅದಾಗಲೇ ಆರ್​ಟಿಎಂ ಮೂಲಕ ರಿಷಭ್ ಪಂತ್ ಅವರನ್ನು ಉಳಿಸಿಕೊಳ್ಳಲು ಬಯಸಿದ್ದ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯ ತಂತ್ರ ಅರಿತಿದ್ದ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಏಕಾಏಕಿ 7 ಕೋಟಿ ರೂ. ಹೆಚ್ಚಿಸಿ ತಂತ್ರಕ್ಕೆ ಪ್ರತಿತಂತ್ರ ಹೆಣೆದರು.

ಅದಾಗಲೇ ಆರ್​ಟಿಎಂ ಮೂಲಕ ರಿಷಭ್ ಪಂತ್ ಅವರನ್ನು ಉಳಿಸಿಕೊಳ್ಳಲು ಬಯಸಿದ್ದ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯ ತಂತ್ರ ಅರಿತಿದ್ದ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಏಕಾಏಕಿ 7 ಕೋಟಿ ರೂ. ಹೆಚ್ಚಿಸಿ ತಂತ್ರಕ್ಕೆ ಪ್ರತಿತಂತ್ರ ಹೆಣೆದರು.

6 / 7
ಅತ್ತ ಅಷ್ಟೊಂದು ದುಬಾರಿ ಮೊತ್ತ ನೀಡುವ ಪರಿಸ್ಥಿತಿಯಲ್ಲಿರದ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ರಿಷಭ್ ಪಂತ್ ಅವರನ್ನು ಕೈ ಬಿಟ್ಟಿದೆ. ಈ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ದಾಖಲೆಯ ಮೊತ್ತಕ್ಕೆ ರಿಷಭ್ ಪಂತ್ ಅವರನ್ನು ಖರೀದಿಸುವಲ್ಲಿ ಯಶಸ್ವಿಯಾಗಿದೆ.

ಅತ್ತ ಅಷ್ಟೊಂದು ದುಬಾರಿ ಮೊತ್ತ ನೀಡುವ ಪರಿಸ್ಥಿತಿಯಲ್ಲಿರದ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ರಿಷಭ್ ಪಂತ್ ಅವರನ್ನು ಕೈ ಬಿಟ್ಟಿದೆ. ಈ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ದಾಖಲೆಯ ಮೊತ್ತಕ್ಕೆ ರಿಷಭ್ ಪಂತ್ ಅವರನ್ನು ಖರೀದಿಸುವಲ್ಲಿ ಯಶಸ್ವಿಯಾಗಿದೆ.

7 / 7
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್