AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಡೆಲ್ಲಿ ಕ್ಯಾಪಿಟಲ್ಸ್ ತೊರೆಯಲಿದ್ದಾರಾ ರಿಷಭ್ ಪಂತ್..!

IPL 2025 Rishabh Pant: ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಒಟ್ಟು 43 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಈ ವೇಳೆ 19 ಪಂದ್ಯಗಳಲ್ಲಿ ಮಾತ್ರ ಡೆಲ್ಲಿ ಕ್ಯಾಪಿಟಲ್ಸ್ ತಂಡ ಜಯ ಸಾಧಿಸಿದೆ. ಇನ್ನು 1 ಮ್ಯಾಚ್ ರದ್ದಾದರೆ, ಒಳಿದ 23 ಪಂದ್ಯಗಳಲ್ಲಿ ಡೆಲ್ಲಿ ಪಡೆ ಸೋಲನುಭವಿಸಿದೆ.

ಝಾಹಿರ್ ಯೂಸುಫ್
|

Updated on: Oct 13, 2024 | 9:59 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಮೆಗಾ ಹರಾಜಿಗಾಗಿ ಸಿದ್ಧತೆಗಳು ಶುರುವಾಗಿದೆ. ಅದರ ಮೊದಲ ಹೆಜ್ಜೆಯಾಗಿ ಇದೀಗ ಎಲ್ಲಾ ಫ್ರಾಂಚೈಸಿಗಳು ತಮ್ಮ ರಿಟೈನ್ ಆಟಗಾರರ ಪಟ್ಟಿಯನ್ನು ಸಿದ್ಧಪಡಿಸಿಕೊಳ್ಳುತ್ತಿದೆ. ಇದರ ನಡುವೆ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ತೊರೆಯಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಮೆಗಾ ಹರಾಜಿಗಾಗಿ ಸಿದ್ಧತೆಗಳು ಶುರುವಾಗಿದೆ. ಅದರ ಮೊದಲ ಹೆಜ್ಜೆಯಾಗಿ ಇದೀಗ ಎಲ್ಲಾ ಫ್ರಾಂಚೈಸಿಗಳು ತಮ್ಮ ರಿಟೈನ್ ಆಟಗಾರರ ಪಟ್ಟಿಯನ್ನು ಸಿದ್ಧಪಡಿಸಿಕೊಳ್ಳುತ್ತಿದೆ. ಇದರ ನಡುವೆ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ತೊರೆಯಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

1 / 6
ಇಂತಹದೊಂದು ಪ್ರಶ್ನೆ ಮೂಡಲು ಮುಖ್ಯ ಕಾರಣ ಸೋಷಿಯಲ್ ಮೀಡಿಯಾದಲ್ಲಿ ರಿಷಭ್ ಪಂತ್ ಕೇಳಿರುವ ಪ್ರಶ್ನೆ. ಹೌದು, ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕನಾಗಿರುವ ಪಂತ್, ನಾನು ಹರಾಜಿನಲ್ಲಿ ಕಾಣಿಸಿಕೊಂಡರೆ ಮಾರಾಟವಾಗಲಿದ್ದೇನೆಯೇ ಎಂದು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೆ ಎಷ್ಟು ಮೊತ್ತಕ್ಕೆ ಮಾರಾಟವಾಗಬಹುದು ಎಂದು ಕೇಳಿದ್ದಾರೆ.

ಇಂತಹದೊಂದು ಪ್ರಶ್ನೆ ಮೂಡಲು ಮುಖ್ಯ ಕಾರಣ ಸೋಷಿಯಲ್ ಮೀಡಿಯಾದಲ್ಲಿ ರಿಷಭ್ ಪಂತ್ ಕೇಳಿರುವ ಪ್ರಶ್ನೆ. ಹೌದು, ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕನಾಗಿರುವ ಪಂತ್, ನಾನು ಹರಾಜಿನಲ್ಲಿ ಕಾಣಿಸಿಕೊಂಡರೆ ಮಾರಾಟವಾಗಲಿದ್ದೇನೆಯೇ ಎಂದು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೆ ಎಷ್ಟು ಮೊತ್ತಕ್ಕೆ ಮಾರಾಟವಾಗಬಹುದು ಎಂದು ಕೇಳಿದ್ದಾರೆ.

2 / 6
ಈ ಪ್ರಶ್ನೆಗಳ ಬೆನ್ನಲ್ಲೇ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ತೊರೆಯಲಿದ್ದಾರೆಯೇ ಎಂಬ ಅನುಮಾನ ಮೂಡಿದೆ. ಇದಕ್ಕೂ ಮುನ್ನ ಪಂತ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಅದರಲ್ಲೂ ಸಿಎಸ್​ಕೆ ಫ್ರಾಂಚೈಸಿಯ ಹಿಟ್​ ಲೀಸ್ಟ್​ನಲ್ಲಿ ರಿಷಭ್ ಅವರ ಹೆಸರಿದೆ ಎಂಬ ಸುದ್ದಿಗಳು ಕೇಳಿ ಬಂದಿದ್ದವು.

ಈ ಪ್ರಶ್ನೆಗಳ ಬೆನ್ನಲ್ಲೇ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ತೊರೆಯಲಿದ್ದಾರೆಯೇ ಎಂಬ ಅನುಮಾನ ಮೂಡಿದೆ. ಇದಕ್ಕೂ ಮುನ್ನ ಪಂತ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಅದರಲ್ಲೂ ಸಿಎಸ್​ಕೆ ಫ್ರಾಂಚೈಸಿಯ ಹಿಟ್​ ಲೀಸ್ಟ್​ನಲ್ಲಿ ರಿಷಭ್ ಅವರ ಹೆಸರಿದೆ ಎಂಬ ಸುದ್ದಿಗಳು ಕೇಳಿ ಬಂದಿದ್ದವು.

3 / 6
ಈ ಸುದ್ದಿಗಳ ನಡುವೆ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ರಿಷಭ್ ಪಂತ್ ಅವರನ್ನು ಉಳಿಸಿಕೊಳ್ಳುವುದು ಖಚಿತ ಎನ್ನಲಾಗಿತ್ತು. ಏಕೆಂದರೆ ಕ್ಯಾಪಿಟಲ್ಸ್ ತಂಡದ ಸಹ-ಮಾಲೀಕ ಪಾರ್ಥ್ ಜಿಂದಾಲ್ ಹಾಗೂ ರಿಷಭ್ ಪಂತ್ ಮುಂಬೈನಲ್ಲಿ ಭೇಟಿಯಾಗಿ ಈ ಬಗ್ಗೆ ಚರ್ಚಿಸಿದ್ದರು. ಅಲ್ಲದೆ ಅವರನ್ನು ಮೊದಲ ರಿಟೈನ್ ಆಗಿ ತಂಡದಲ್ಲೇ ಉಳಿಸಿಕೊಳ್ಳುವುದಾಗಿ ತಿಳಿಸಿದ್ದರು.

ಈ ಸುದ್ದಿಗಳ ನಡುವೆ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ರಿಷಭ್ ಪಂತ್ ಅವರನ್ನು ಉಳಿಸಿಕೊಳ್ಳುವುದು ಖಚಿತ ಎನ್ನಲಾಗಿತ್ತು. ಏಕೆಂದರೆ ಕ್ಯಾಪಿಟಲ್ಸ್ ತಂಡದ ಸಹ-ಮಾಲೀಕ ಪಾರ್ಥ್ ಜಿಂದಾಲ್ ಹಾಗೂ ರಿಷಭ್ ಪಂತ್ ಮುಂಬೈನಲ್ಲಿ ಭೇಟಿಯಾಗಿ ಈ ಬಗ್ಗೆ ಚರ್ಚಿಸಿದ್ದರು. ಅಲ್ಲದೆ ಅವರನ್ನು ಮೊದಲ ರಿಟೈನ್ ಆಗಿ ತಂಡದಲ್ಲೇ ಉಳಿಸಿಕೊಳ್ಳುವುದಾಗಿ ತಿಳಿಸಿದ್ದರು.

4 / 6
ಆದರೀಗ ದಿಢೀರ್ ಮೆಗಾ ಹರಾಜಿನ ಕುರಿತಾದ ಪೋಸ್ಟ್ ಹಂಚಿಕೊಳ್ಳುವ ಮೂಲಕ ರಿಷಭ್ ಪಂತ್ ಕುತೂಹಲ ಮೂಡಿಸಿದ್ದಾರೆ. ಅದರಲ್ಲೂ ಹರಾಜಿನಲ್ಲಿ ಕಾಣಿಸಿಕೊಳ್ಳುವ ಇಂಗಿತದೊಂದಿಗೆ ಪೋಸ್ಟ್ ಮಾಡಿರುವ ಕಾರಣ, ಅವರು ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ಹೊರಬರಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಸ್ಪಷ್ಟ ಉತ್ತರ ಸಿಗಬೇಕಿದ್ದರೆ, ಅಕ್ಟೋಬರ್ 31ರವರೆಗೆ ಕಾಯಲೇಬೇಕು.

ಆದರೀಗ ದಿಢೀರ್ ಮೆಗಾ ಹರಾಜಿನ ಕುರಿತಾದ ಪೋಸ್ಟ್ ಹಂಚಿಕೊಳ್ಳುವ ಮೂಲಕ ರಿಷಭ್ ಪಂತ್ ಕುತೂಹಲ ಮೂಡಿಸಿದ್ದಾರೆ. ಅದರಲ್ಲೂ ಹರಾಜಿನಲ್ಲಿ ಕಾಣಿಸಿಕೊಳ್ಳುವ ಇಂಗಿತದೊಂದಿಗೆ ಪೋಸ್ಟ್ ಮಾಡಿರುವ ಕಾರಣ, ಅವರು ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ಹೊರಬರಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಸ್ಪಷ್ಟ ಉತ್ತರ ಸಿಗಬೇಕಿದ್ದರೆ, ಅಕ್ಟೋಬರ್ 31ರವರೆಗೆ ಕಾಯಲೇಬೇಕು.

5 / 6
ಅಂದಹಾಗೆ ರಿಷಭ್ ಪಂತ್ 2016 ರಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಭಾಗವಾಗಿದ್ದಾರೆ. ಇದೀಗ ಡಿಸಿ ತಂಡದ ಕ್ಯಾಪ್ಟನ್ ಆಗಿರುವ ಅವರು ಪಡೆಯುತ್ತಿರುವ ಸಂಭಾವನೆ 16 ಕೋಟಿ ರೂ. ಒಂದು ವೇಳೆ ಪಂತ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡರೆ, ಅವರ ಖರೀದಿಗಾಗಿ ಹಲವು ಫ್ರಾಂಚೈಸಿಗಳು ಪೈಪೋಟಿ ನಡೆಸುವುದಂತು ಖಚಿತ ಎನ್ನಬಹುದು.

ಅಂದಹಾಗೆ ರಿಷಭ್ ಪಂತ್ 2016 ರಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಭಾಗವಾಗಿದ್ದಾರೆ. ಇದೀಗ ಡಿಸಿ ತಂಡದ ಕ್ಯಾಪ್ಟನ್ ಆಗಿರುವ ಅವರು ಪಡೆಯುತ್ತಿರುವ ಸಂಭಾವನೆ 16 ಕೋಟಿ ರೂ. ಒಂದು ವೇಳೆ ಪಂತ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡರೆ, ಅವರ ಖರೀದಿಗಾಗಿ ಹಲವು ಫ್ರಾಂಚೈಸಿಗಳು ಪೈಪೋಟಿ ನಡೆಸುವುದಂತು ಖಚಿತ ಎನ್ನಬಹುದು.

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ