AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಮುಂಬೈ ಇಂಡಿಯನ್ಸ್ ಆಫೀಸ್​ನಲ್ಲಿ ರೋಹಿತ್ ಶರ್ಮಾ: ಕುತೂಹಲ ಮೂಡಿಸಿದ ಹಿಟ್​ಮ್ಯಾನ್ ನಡೆ

IPL 2025: ಮುಂಬೈ ಇಂಡಿಯನ್ಸ್ ತಂಡದ ಪ್ರಮುಖ ಆಟಗಾರ ರೋಹಿತ್ ಶರ್ಮಾ ಎಂಐ ಕಾರ್ಪೋರೇಟ್ ಆಫೀಸ್​ಗೆ ಭೇಟಿ ನೀಡಿದ್ದಾರೆ. ನೀಲಿ ಲಂಬೋರ್ಘಿನಿ ಕಾರಿನಲ್ಲಿ ಆಗಮಿಸಿದ್ದ ಹಿಟ್​ಮ್ಯಾನ್ ಅವರ ಫೋಟೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದರ ಬೆನ್ನಲ್ಲೇ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡದಲ್ಲೇ ರಿಟೈನ್ ಆಗಲಿದ್ದಾರೆಂಬ ಸುದ್ದಿಗಳು ಸಹ ಕೇಳಿಬರುತ್ತಿವೆ.

ಝಾಹಿರ್ ಯೂಸುಫ್
|

Updated on: Oct 12, 2024 | 11:21 AM

Share
IPL 2025: ಐಪಿಎಲ್ ಸೀಸನ್-18ರ ಮೆಗಾ ಹರಾಜಿಗಾಗಿ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ MI ಆಫೀಸ್​ನಲ್ಲಿ ಕಾಣಿಸಿಕೊಂಡು ಕುತೂಹಲ ಮೂಡಿಸಿದ್ದಾರೆ.

IPL 2025: ಐಪಿಎಲ್ ಸೀಸನ್-18ರ ಮೆಗಾ ಹರಾಜಿಗಾಗಿ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ MI ಆಫೀಸ್​ನಲ್ಲಿ ಕಾಣಿಸಿಕೊಂಡು ಕುತೂಹಲ ಮೂಡಿಸಿದ್ದಾರೆ.

1 / 6
ಕೆಲ ದಿನಗಳ ಹಿಂದೆಯಷ್ಟೇ ರೋಹಿತ್ ಶರ್ಮಾ ತಮ್ಮ ನೀಲಿ ಲಂಬೋರ್ಘಿನಿ ಕಾರಿನಲ್ಲಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಕಾರ್ಪೊರೇಟ್ ಆಫೀಸ್​ಗೆ ಭೇಟಿ ನೀಡಿದ್ದಾರೆ. ಮುಂಬೈ ಇಂಡಿಯನ್ಸ್ ಮಾಲೀಕರು ರಿಟೈನ್ ಬಗ್ಗೆ ಚರ್ಚಿಸಲು ರೋಹಿತ್ ಶರ್ಮಾ ಅವರನ್ನು ತಮ್ಮ ಆಫೀಸ್​ಗೆ ಕರೆಸಿದ್ದಾರೆ ಎಂದು ವರದಿಯಾಗಿದೆ.

ಕೆಲ ದಿನಗಳ ಹಿಂದೆಯಷ್ಟೇ ರೋಹಿತ್ ಶರ್ಮಾ ತಮ್ಮ ನೀಲಿ ಲಂಬೋರ್ಘಿನಿ ಕಾರಿನಲ್ಲಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಕಾರ್ಪೊರೇಟ್ ಆಫೀಸ್​ಗೆ ಭೇಟಿ ನೀಡಿದ್ದಾರೆ. ಮುಂಬೈ ಇಂಡಿಯನ್ಸ್ ಮಾಲೀಕರು ರಿಟೈನ್ ಬಗ್ಗೆ ಚರ್ಚಿಸಲು ರೋಹಿತ್ ಶರ್ಮಾ ಅವರನ್ನು ತಮ್ಮ ಆಫೀಸ್​ಗೆ ಕರೆಸಿದ್ದಾರೆ ಎಂದು ವರದಿಯಾಗಿದೆ.

2 / 6
ಇತ್ತ ಈ ಭೇಟಿಯ ಬೆನ್ನಲ್ಲೇ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡದಲ್ಲೇ ಉಳಿಯಲಿದ್ದಾರೆ ಎಂಬ ಸುದ್ದಿಗಳು ಕೂಡ ಹರಿದಾಡುತ್ತಿದೆ. ಇಂತಹದೊಂದು ಸುದ್ದಿ ಹುಟ್ಟಿಕೊಳ್ಳಲು ಮುಖ್ಯ ಕಾರಣ ಹಿಟ್​ಮ್ಯಾನ್, ರಿಲಯನ್ಸ್ ಕಾರ್ಪೊರೇಟ್ ಪಾರ್ಕ್ ಕ್ರಿಕೆಟ್ ಮೈದಾನದಲ್ಲಿ ಅಭ್ಯಾಸ ನಡೆಸುತ್ತಿರುವುದು.

ಇತ್ತ ಈ ಭೇಟಿಯ ಬೆನ್ನಲ್ಲೇ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡದಲ್ಲೇ ಉಳಿಯಲಿದ್ದಾರೆ ಎಂಬ ಸುದ್ದಿಗಳು ಕೂಡ ಹರಿದಾಡುತ್ತಿದೆ. ಇಂತಹದೊಂದು ಸುದ್ದಿ ಹುಟ್ಟಿಕೊಳ್ಳಲು ಮುಖ್ಯ ಕಾರಣ ಹಿಟ್​ಮ್ಯಾನ್, ರಿಲಯನ್ಸ್ ಕಾರ್ಪೊರೇಟ್ ಪಾರ್ಕ್ ಕ್ರಿಕೆಟ್ ಮೈದಾನದಲ್ಲಿ ಅಭ್ಯಾಸ ನಡೆಸುತ್ತಿರುವುದು.

3 / 6
ಈ ಮೈದಾನವು ರಿಲಯನ್ಸ್ ಇಂಡಸ್ಟ್ರೀಸ್ ಒಡೆತನದಲ್ಲಿದ್ದು, ಇದನ್ನು ಮುಂಬೈ ಇಂಡಿಯನ್ಸ್ ಆಟಗಾರರ ತರಬೇತಿ ಉದ್ದೇಶಗಳಿಗಾಗಿ ಬಳಸಲಾಗುತ್ತದೆ. ಇದೀಗ ಮೆಗಾ ಹರಾಜಿಗೂ ಮುನ್ನ ರೋಹಿತ್ ಶರ್ಮಾ ರಿಲಯನ್ಸ್ ಕಾರ್ಪೊರೇಟ್ ಪಾರ್ಕ್ ಮೈದಾನದಲ್ಲಿ ಅಭ್ಯಾಸ ನಡೆಸುತ್ತಿರುವುದರಿಂದ ಅವರು ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯಲ್ಲೇ ಉಳಿಯಲಿದ್ದಾರೆ ಎನ್ನಲಾಗುತ್ತಿದೆ.

ಈ ಮೈದಾನವು ರಿಲಯನ್ಸ್ ಇಂಡಸ್ಟ್ರೀಸ್ ಒಡೆತನದಲ್ಲಿದ್ದು, ಇದನ್ನು ಮುಂಬೈ ಇಂಡಿಯನ್ಸ್ ಆಟಗಾರರ ತರಬೇತಿ ಉದ್ದೇಶಗಳಿಗಾಗಿ ಬಳಸಲಾಗುತ್ತದೆ. ಇದೀಗ ಮೆಗಾ ಹರಾಜಿಗೂ ಮುನ್ನ ರೋಹಿತ್ ಶರ್ಮಾ ರಿಲಯನ್ಸ್ ಕಾರ್ಪೊರೇಟ್ ಪಾರ್ಕ್ ಮೈದಾನದಲ್ಲಿ ಅಭ್ಯಾಸ ನಡೆಸುತ್ತಿರುವುದರಿಂದ ಅವರು ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯಲ್ಲೇ ಉಳಿಯಲಿದ್ದಾರೆ ಎನ್ನಲಾಗುತ್ತಿದೆ.

4 / 6
ಇದಕ್ಕೂ ಮುನ್ನ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯಲಿದ್ದಾರೆ ಎಂಬ ಸುದ್ದಿಗಳು ಕೇಳಿ ಬಂದಿದ್ದವು. ಇದಕ್ಕೆ ಮುಖ್ಯ ಕಾರಣ, ಕಳೆದ ಸೀಸನ್​ನಲ್ಲಿ ಹಿಟ್​ಮ್ಯಾನ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್ ಪಾಂಡ್ಯಗೆ ಕ್ಯಾಪ್ಟನ್ ಸ್ಥಾನ ನೀಡಿರುವುದು. ಇದರಿಂದ ಅಸಂತುಷ್ಟರಾಗಿರುವ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡಕ್ಕೆ ಗುಡ್ ಬೈ ಹೇಳಲಿದ್ದಾರೆ ಎನ್ನಲಾಗಿತ್ತು.

ಇದಕ್ಕೂ ಮುನ್ನ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯಲಿದ್ದಾರೆ ಎಂಬ ಸುದ್ದಿಗಳು ಕೇಳಿ ಬಂದಿದ್ದವು. ಇದಕ್ಕೆ ಮುಖ್ಯ ಕಾರಣ, ಕಳೆದ ಸೀಸನ್​ನಲ್ಲಿ ಹಿಟ್​ಮ್ಯಾನ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್ ಪಾಂಡ್ಯಗೆ ಕ್ಯಾಪ್ಟನ್ ಸ್ಥಾನ ನೀಡಿರುವುದು. ಇದರಿಂದ ಅಸಂತುಷ್ಟರಾಗಿರುವ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡಕ್ಕೆ ಗುಡ್ ಬೈ ಹೇಳಲಿದ್ದಾರೆ ಎನ್ನಲಾಗಿತ್ತು.

5 / 6
ಆದರೀಗ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್​ ಕಾರ್ಪೊರೇಟ್ ಪಾರ್ಕ್ ಮೈದಾನದಲ್ಲಿ ಅಭ್ಯಾಸ ಶುರು ಮಾಡಿದ್ದಾರೆ. ಅದು ಕೂಡ ಮುಂಬೈ ಇಂಡಿಯನ್ಸ್ ತಂಡದ ರಿಟೈನ್ ಪ್ರಕ್ರಿಯೆ ನಡೆಯುವ ಸಮಯದಲ್ಲಿ. ಹೀಗಾಗಿಯೇ ಹಿಟ್​ಮ್ಯಾನ್ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯುವ ಸಾಧ್ಯತೆಯಿಲ್ಲ ಎನ್ನಬಹುದು.

ಆದರೀಗ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್​ ಕಾರ್ಪೊರೇಟ್ ಪಾರ್ಕ್ ಮೈದಾನದಲ್ಲಿ ಅಭ್ಯಾಸ ಶುರು ಮಾಡಿದ್ದಾರೆ. ಅದು ಕೂಡ ಮುಂಬೈ ಇಂಡಿಯನ್ಸ್ ತಂಡದ ರಿಟೈನ್ ಪ್ರಕ್ರಿಯೆ ನಡೆಯುವ ಸಮಯದಲ್ಲಿ. ಹೀಗಾಗಿಯೇ ಹಿಟ್​ಮ್ಯಾನ್ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯುವ ಸಾಧ್ಯತೆಯಿಲ್ಲ ಎನ್ನಬಹುದು.

6 / 6
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ