AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ರೋಹಿತ್ ಶರ್ಮಾ ಮೇಲೆ ಕಣ್ಣಿಟ್ಟಿರುವ ಪಂಜಾಬ್ ಕಿಂಗ್ಸ್

IPL 2025: ಐಪಿಎಲ್ 2024 ರಲ್ಲಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ಕೆಳಗಿಳಿಸಿದ್ದರು. ಅಲ್ಲದೆ ತಂಡದ ಹೊಸ ನಾಯಕನಾಗಿ ಹಾರ್ದಿಕ್ ಪಾಂಡ್ಯರನ್ನು ಆಯ್ಕೆ ಮಾಡಿಕೊಂಡಿತ್ತು. ಹೀಗಾಗಿಯೇ ಈ ಬಾರಿಯ ಐಪಿಎಲ್​ನಲ್ಲಿ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುವುದಿಲ್ಲ ಎನ್ನಲಾಗುತ್ತಿದೆ. ಇತ್ತ ರೋಹಿತ್ ಶರ್ಮಾ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದನ್ನು ಹಲವು ಫ್ರಾಂಚೈಸಿಗಳು ಎದುರು ನೋಡುತ್ತಿದೆ.

ಝಾಹಿರ್ ಯೂಸುಫ್
|

Updated on: Aug 26, 2024 | 10:04 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ ಯಶಸ್ವಿ ನಾಯಕ ರೋಹಿತ್ ಶರ್ಮಾ ಐಪಿಎಲ್ 2025 ರಲ್ಲಿ ಮುಂಬೈ ಇಂಡಿಯನ್ಸ್ ತಂಡದಲ್ಲೇ ಉಳಿಯಲಿದ್ದಾರಾ ಎಂಬುದೇ ಪ್ರಶ್ನೆ. ಏಕೆಂದರೆ ಹಿಟ್​ಮ್ಯಾನ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಹಲವು ಫ್ರಾಂಚೈಸಿಗಳು ಹವಣಿಸುತ್ತಿದೆ. ಈ ಪಟ್ಟಿಗೆ ಹೊಸ ಸೇರ್ಪಡೆ ಪಂಜಾಬ್ ಕಿಂಗ್ಸ್.

ಇಂಡಿಯನ್ ಪ್ರೀಮಿಯರ್ ಲೀಗ್​ನ ಯಶಸ್ವಿ ನಾಯಕ ರೋಹಿತ್ ಶರ್ಮಾ ಐಪಿಎಲ್ 2025 ರಲ್ಲಿ ಮುಂಬೈ ಇಂಡಿಯನ್ಸ್ ತಂಡದಲ್ಲೇ ಉಳಿಯಲಿದ್ದಾರಾ ಎಂಬುದೇ ಪ್ರಶ್ನೆ. ಏಕೆಂದರೆ ಹಿಟ್​ಮ್ಯಾನ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಹಲವು ಫ್ರಾಂಚೈಸಿಗಳು ಹವಣಿಸುತ್ತಿದೆ. ಈ ಪಟ್ಟಿಗೆ ಹೊಸ ಸೇರ್ಪಡೆ ಪಂಜಾಬ್ ಕಿಂಗ್ಸ್.

1 / 6
ಈಗಾಗಲೇ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಗಳು ರೋಹಿತ್ ಶರ್ಮಾ ಅವರ ಮುಂದಿನ ನಡೆಯನ್ನು ಎದುರು ನೋಡುತ್ತಿದೆ. ಅಲ್ಲದೆ ಹಿಟ್​ಮ್ಯಾನ್ ಹರಾಜಿನಲ್ಲಿ ಕಾಣಿಸಿಕೊಳ್ಳಲು ಬಯಸಿದರೆ, ಅವರ ಖರೀದಿಗಾಗಿಯೇ 50 ಕೋಟಿ ರೂ. ತೆಗೆದಿಡಲು ಈ ಎರಡು ಫ್ರಾಂಚೈಸಿಗಳು ಪ್ಲ್ಯಾನ್ ರೂಪಿಸಿದೆ ಎಂದು ವರದಿಯಾಗಿದೆ.

ಈಗಾಗಲೇ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಗಳು ರೋಹಿತ್ ಶರ್ಮಾ ಅವರ ಮುಂದಿನ ನಡೆಯನ್ನು ಎದುರು ನೋಡುತ್ತಿದೆ. ಅಲ್ಲದೆ ಹಿಟ್​ಮ್ಯಾನ್ ಹರಾಜಿನಲ್ಲಿ ಕಾಣಿಸಿಕೊಳ್ಳಲು ಬಯಸಿದರೆ, ಅವರ ಖರೀದಿಗಾಗಿಯೇ 50 ಕೋಟಿ ರೂ. ತೆಗೆದಿಡಲು ಈ ಎರಡು ಫ್ರಾಂಚೈಸಿಗಳು ಪ್ಲ್ಯಾನ್ ರೂಪಿಸಿದೆ ಎಂದು ವರದಿಯಾಗಿದೆ.

2 / 6
ಇದರ ಬೆನ್ನಲ್ಲೇ ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯ ಹಿಟ್​​ ಲಿಸ್ಟ್​ನಲ್ಲೂ ರೋಹಿತ್ ಶರ್ಮಾ ಹೆಸರು ಇರುವುದು ಬಹಿರಂಗವಾಗಿದೆ. ಏಕೆಂದರೆ  ಮುಂದಿನ ಸೀಸನ್​ ಐಪಿಎಲ್​​ಗಾಗಿ ಪಂಜಾಬ್ ಕಿಂಗ್ಸ್ ತಂಡಕ್ಕೆ ಹೊಸ ನಾಯಕನ ಅಗತ್ಯತೆಯಿದೆ. ಹಾಲಿ ನಾಯಕರಾಗಿರುವ ಶಿಖರ್ ಧವನ್ ಅವರನ್ನು ಪಂಜಾಬ್ ಫ್ರಾಂಚೈಸಿ ರಿಟೈನ್ ಮಾಡಿಕೊಳ್ಳುವ ಸಾಧ್ಯತೆಯಿಲ್ಲ.

ಇದರ ಬೆನ್ನಲ್ಲೇ ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯ ಹಿಟ್​​ ಲಿಸ್ಟ್​ನಲ್ಲೂ ರೋಹಿತ್ ಶರ್ಮಾ ಹೆಸರು ಇರುವುದು ಬಹಿರಂಗವಾಗಿದೆ. ಏಕೆಂದರೆ ಮುಂದಿನ ಸೀಸನ್​ ಐಪಿಎಲ್​​ಗಾಗಿ ಪಂಜಾಬ್ ಕಿಂಗ್ಸ್ ತಂಡಕ್ಕೆ ಹೊಸ ನಾಯಕನ ಅಗತ್ಯತೆಯಿದೆ. ಹಾಲಿ ನಾಯಕರಾಗಿರುವ ಶಿಖರ್ ಧವನ್ ಅವರನ್ನು ಪಂಜಾಬ್ ಫ್ರಾಂಚೈಸಿ ರಿಟೈನ್ ಮಾಡಿಕೊಳ್ಳುವ ಸಾಧ್ಯತೆಯಿಲ್ಲ.

3 / 6
ಹೀಗಾಗಿ ನಾಯಕತ್ವ ಗುಣವಿರುವ ಕೆಲ ಆಟಗಾರರ ಹಿಟ್​ ಲಿಸ್ಟ್ ಅನ್ನು ಪಂಜಾಬ್ ಕಿಂಗ್ಸ್ ರೆಡಿ ಮಾಡಿಕೊಂಡಿದೆ. ಈ ಪಟ್ಟಿಯಲ್ಲಿ ರೋಹಿತ್ ಶರ್ಮಾ ಹೆಸರು ಮುಂಚೂಣಿಯಲ್ಲಿದೆ. ಒಂದು ವೇಳೆ ಹಿಟ್​ಮ್ಯಾನ್ ಹರಾಜಿನಲ್ಲಿ ಕಾಣಿಸಿಕೊಂಡರೆ ಅವರ ಖರೀದಿಗೆ ಪಂಜಾಬ್ ಕಿಂಗ್ಸ್ ಪೈಪೋಟಿಗೆ ಇಳಿಯುವುದು ಖಚಿತ. ಇದಕ್ಕೆ ಸಾಕ್ಷಿ ಇತ್ತೀಚೆಗೆ ಸಂಜಯ್ ಬಂಗಾರ್ ನೀಡಿರುವ ಹೇಳಿಕೆ.

ಹೀಗಾಗಿ ನಾಯಕತ್ವ ಗುಣವಿರುವ ಕೆಲ ಆಟಗಾರರ ಹಿಟ್​ ಲಿಸ್ಟ್ ಅನ್ನು ಪಂಜಾಬ್ ಕಿಂಗ್ಸ್ ರೆಡಿ ಮಾಡಿಕೊಂಡಿದೆ. ಈ ಪಟ್ಟಿಯಲ್ಲಿ ರೋಹಿತ್ ಶರ್ಮಾ ಹೆಸರು ಮುಂಚೂಣಿಯಲ್ಲಿದೆ. ಒಂದು ವೇಳೆ ಹಿಟ್​ಮ್ಯಾನ್ ಹರಾಜಿನಲ್ಲಿ ಕಾಣಿಸಿಕೊಂಡರೆ ಅವರ ಖರೀದಿಗೆ ಪಂಜಾಬ್ ಕಿಂಗ್ಸ್ ಪೈಪೋಟಿಗೆ ಇಳಿಯುವುದು ಖಚಿತ. ಇದಕ್ಕೆ ಸಾಕ್ಷಿ ಇತ್ತೀಚೆಗೆ ಸಂಜಯ್ ಬಂಗಾರ್ ನೀಡಿರುವ ಹೇಳಿಕೆ.

4 / 6
ಪಂಜಾಬ್ ಕಿಂಗ್ಸ್ ಅಭಿವೃದ್ಧಿಯ ಮುಖ್ಯಸ್ಥರಾಗಿರುವ ಸಂಜಯ್ ಬಂಗಾರ್ ಅವರಲ್ಲಿ ರೋಹಿತ್ ಶರ್ಮಾ ಅವರ ಖರೀದಿ ಬಗ್ಗೆ ಪ್ರಶ್ನಿಸಲಾಗಿದೆ. ಈ ವೇಳೆ ಈ ಸಾಧ್ಯತೆಯನ್ನು ತಳ್ಳಿ ಹಾಕಲು ಅವರು ನಿರಾಕರಿಸಿದರು. ಅಲ್ಲದೆ ರೋಹಿತ್ ಶರ್ಮಾ ಅವರು ಹರಾಜಿಗೆ ಬಂದರೆ ಬೃಹತ್ ಮೊತ್ತ ಪಡೆಯಲಿದ್ದಾರೆ ಎಂಬ ಸುಳಿವು ನೀಡಿದ್ದಾರೆ. ಈ ಮೂಲಕ ಪಂಜಾಬ್ ಕಿಂಗ್ಸ್ ಕೂಡ ಹಿಟ್​ಮ್ಯಾನ್ ಖರೀದಿಗಾಗಿ ಬೃಹತ್ ಮೊತ್ತವನ್ನು ವ್ಯಯಿಸಲು ಸಿದ್ಧವಿರುವುದಾಗಿ ಸಂಜಯ್ ಬಂಗಾರ್ ಪರೋಕ್ಷವಾಗಿ ತಿಳಿಸಿದ್ದಾರೆ.

ಪಂಜಾಬ್ ಕಿಂಗ್ಸ್ ಅಭಿವೃದ್ಧಿಯ ಮುಖ್ಯಸ್ಥರಾಗಿರುವ ಸಂಜಯ್ ಬಂಗಾರ್ ಅವರಲ್ಲಿ ರೋಹಿತ್ ಶರ್ಮಾ ಅವರ ಖರೀದಿ ಬಗ್ಗೆ ಪ್ರಶ್ನಿಸಲಾಗಿದೆ. ಈ ವೇಳೆ ಈ ಸಾಧ್ಯತೆಯನ್ನು ತಳ್ಳಿ ಹಾಕಲು ಅವರು ನಿರಾಕರಿಸಿದರು. ಅಲ್ಲದೆ ರೋಹಿತ್ ಶರ್ಮಾ ಅವರು ಹರಾಜಿಗೆ ಬಂದರೆ ಬೃಹತ್ ಮೊತ್ತ ಪಡೆಯಲಿದ್ದಾರೆ ಎಂಬ ಸುಳಿವು ನೀಡಿದ್ದಾರೆ. ಈ ಮೂಲಕ ಪಂಜಾಬ್ ಕಿಂಗ್ಸ್ ಕೂಡ ಹಿಟ್​ಮ್ಯಾನ್ ಖರೀದಿಗಾಗಿ ಬೃಹತ್ ಮೊತ್ತವನ್ನು ವ್ಯಯಿಸಲು ಸಿದ್ಧವಿರುವುದಾಗಿ ಸಂಜಯ್ ಬಂಗಾರ್ ಪರೋಕ್ಷವಾಗಿ ತಿಳಿಸಿದ್ದಾರೆ.

5 / 6
ಹೀಗಾಗಿ ರೋಹಿತ್ ಶರ್ಮಾ ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡರೆ ಬಿಡ್ಡಿಂಗ್ ಪೈಪೋಟಿಯಂತು ಕಂಡು ಬರಲಿದೆ. ಅದರಲ್ಲೂ ನಾಯಕನ ಹುಡುಕಾಟದಲ್ಲಿರುವ ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯು ಹಿಟ್​ಮ್ಯಾನ್ ಖರೀದಿಗಾಗಿ ಇನ್ನಿಲ್ಲದ ಪ್ರಯತ್ನ ನಡೆಸುವುದಂತು ದಿಟ. ಅದರಂತೆ ರೋಹಿತ್ ಶರ್ಮಾ ಮುಂದಿನ ಸೀಸನ್​ನಲ್ಲಿ ಯಾವ ತಂಡದ ಪರ ಕಣಕ್ಕಿಳಿಯಲಿದ್ದಾರೆ ಕಾದು ನೋಡಬೇಕಿದೆ.

ಹೀಗಾಗಿ ರೋಹಿತ್ ಶರ್ಮಾ ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡರೆ ಬಿಡ್ಡಿಂಗ್ ಪೈಪೋಟಿಯಂತು ಕಂಡು ಬರಲಿದೆ. ಅದರಲ್ಲೂ ನಾಯಕನ ಹುಡುಕಾಟದಲ್ಲಿರುವ ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯು ಹಿಟ್​ಮ್ಯಾನ್ ಖರೀದಿಗಾಗಿ ಇನ್ನಿಲ್ಲದ ಪ್ರಯತ್ನ ನಡೆಸುವುದಂತು ದಿಟ. ಅದರಂತೆ ರೋಹಿತ್ ಶರ್ಮಾ ಮುಂದಿನ ಸೀಸನ್​ನಲ್ಲಿ ಯಾವ ತಂಡದ ಪರ ಕಣಕ್ಕಿಳಿಯಲಿದ್ದಾರೆ ಕಾದು ನೋಡಬೇಕಿದೆ.

6 / 6
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ