AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಮೂವರು ಆಟಗಾರರಿಗೆ 55 ಕೋಟಿ ರೂ. ನೀಡಿದ SRH

IPL 2025: ಐಪಿಎಲ್ ಮೆಗಾ ಹರಾಜಿನ ನಿಯಮದ ಪ್ರಕಾರ ಒಟ್ಟು 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಬಹುದು. ಒಂದು ಫ್ರಾಂಚೈಸಿಯು ಆರು ಆಟಗಾರರನ್ನು ಉಳಿಸಿಕೊಳ್ಳಲು ಬಯಸಿದರೆ ಒಟ್ಟು 79 ಕೋಟಿ ರೂ. ಖರ್ಚು ಮಾಡಬೇಕಾಗುತ್ತದೆ. ಹೀಗೆ ಖರ್ಚು ಮಾಡಲಾದ ಮೊತ್ತವನ್ನು ಒಟ್ಟು ಹರಾಜು ಮೊತ್ತದಿಂದ ಕಡಿತ ಮಾಡಲಾಗುತ್ತದೆ.

ಝಾಹಿರ್ ಯೂಸುಫ್
|

Updated on:Oct 17, 2024 | 10:25 AM

Share
IPL 2025: ಐಪಿಎಲ್ ಮೆಗಾ ಹರಾಜಿಗಾಗಿ ಸಿದ್ಧತೆಗಳು ಶುರುವಾಗಿದೆ. ಅದರ ಮೊದಲ ಹೆಜ್ಜೆ ಎಂಬಂತೆ ಇದೀಗ ಎಲ್ಲಾ ಫ್ರಾಂಚೈಸಿಗಳು ರಿಟೈನ್ ಆಟಗಾರರ ಪಟ್ಟಿಯನ್ನು ಸಿದ್ಧಪಡಿಸುತ್ತಿದೆ. ಅತ್ತ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಈಗಾಗಲೇ ಮೂವರು ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ನಿರ್ಧರಿಸಿದೆ.

IPL 2025: ಐಪಿಎಲ್ ಮೆಗಾ ಹರಾಜಿಗಾಗಿ ಸಿದ್ಧತೆಗಳು ಶುರುವಾಗಿದೆ. ಅದರ ಮೊದಲ ಹೆಜ್ಜೆ ಎಂಬಂತೆ ಇದೀಗ ಎಲ್ಲಾ ಫ್ರಾಂಚೈಸಿಗಳು ರಿಟೈನ್ ಆಟಗಾರರ ಪಟ್ಟಿಯನ್ನು ಸಿದ್ಧಪಡಿಸುತ್ತಿದೆ. ಅತ್ತ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಈಗಾಗಲೇ ಮೂವರು ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ನಿರ್ಧರಿಸಿದೆ.

1 / 6
ಇಲ್ಲಿ ಎಸ್​ಆರ್​ಹೆಚ್ ತಂಡ ಮೊದಲ ರಿಟೈನ್ ಸ್ಪೋಟಕ ದಾಂಡಿಗ ಹೆನ್ರಿಕ್ ಕ್ಲಾಸೆನ್. ಕಳೆದೆರಡು ಸೀಸನ್​ಗಳಲ್ಲಿ ಸನ್​ರೈಸರ್ಸ್ ಹೈದರಾಬಾದ್ ಪರ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿರುವ ಸೌತ್ ಆಫ್ರಿಕಾ ಆಟಗಾರ ಕ್ಲಾಸೆನ್ ಅವರನ್ನು ಬರೋಬ್ಬರಿ 23 ಕೋಟಿ ರೂ. ನೀಡಿ ತಂಡದಲ್ಲೇ ಉಳಿಸಿಕೊಳ್ಳಲು ನಿರ್ಧರಿಸಿದೆ.

ಇಲ್ಲಿ ಎಸ್​ಆರ್​ಹೆಚ್ ತಂಡ ಮೊದಲ ರಿಟೈನ್ ಸ್ಪೋಟಕ ದಾಂಡಿಗ ಹೆನ್ರಿಕ್ ಕ್ಲಾಸೆನ್. ಕಳೆದೆರಡು ಸೀಸನ್​ಗಳಲ್ಲಿ ಸನ್​ರೈಸರ್ಸ್ ಹೈದರಾಬಾದ್ ಪರ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿರುವ ಸೌತ್ ಆಫ್ರಿಕಾ ಆಟಗಾರ ಕ್ಲಾಸೆನ್ ಅವರನ್ನು ಬರೋಬ್ಬರಿ 23 ಕೋಟಿ ರೂ. ನೀಡಿ ತಂಡದಲ್ಲೇ ಉಳಿಸಿಕೊಳ್ಳಲು ನಿರ್ಧರಿಸಿದೆ.

2 / 6
ಇನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯ ಎರಡನೇ ರಿಟೈನ್ ನಾಯಕ ಪ್ಯಾಟ್ ಕಮಿನ್ಸ್. ಕಳೆದ ಸೀಸನ್​​ನಲ್ಲಿ ಎಸ್​ಆರ್​ಹೆಚ್ ತಂಡವನ್ನು ಅತ್ಯಂತ ಯಶಸ್ವಿಯಾಗಿ ಮುನ್ನಡೆಸಿರುವ ಆಸ್ಟ್ರೇಲಿಯಾ ಆಟಗಾರನಿಗೆ 18 ಕೋಟಿ ರೂ. ನೀಡಲು ಎಸ್​ಆರ್​ಹೆಚ್ ಫ್ರಾಂಚೈಸಿ ಮುಂದಾಗಿದೆ.

ಇನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯ ಎರಡನೇ ರಿಟೈನ್ ನಾಯಕ ಪ್ಯಾಟ್ ಕಮಿನ್ಸ್. ಕಳೆದ ಸೀಸನ್​​ನಲ್ಲಿ ಎಸ್​ಆರ್​ಹೆಚ್ ತಂಡವನ್ನು ಅತ್ಯಂತ ಯಶಸ್ವಿಯಾಗಿ ಮುನ್ನಡೆಸಿರುವ ಆಸ್ಟ್ರೇಲಿಯಾ ಆಟಗಾರನಿಗೆ 18 ಕೋಟಿ ರೂ. ನೀಡಲು ಎಸ್​ಆರ್​ಹೆಚ್ ಫ್ರಾಂಚೈಸಿ ಮುಂದಾಗಿದೆ.

3 / 6
ಹಾಗೆಯೇ ಮೂರನೇ ರಿಟೈನ್ ಆಗಿ ಅಭಿಷೇಕ್ ಶರ್ಮಾ ಸನ್​ರೈಸರ್ಸ್ ಹೈದರಾಬಾದ್ ತಂಡದಲ್ಲೇ ಉಳಿದುಕೊಳ್ಳಲಿದ್ದಾರೆ. ಕಳೆದ ಸೀಸನ್​ನಲ್ಲಿ ಎಸ್​ಆರ್​​ಹೆಚ್ ಪರ ಆರಂಭಿಕನಾಗಿ ಕಣಕ್ಕಿಳಿದಿರುವ ಅಭಿಷೇಕ್ ಸ್ಪೋಟಕ ಬ್ಯಾಟಿಂಗ್​ನೊಂದಿಗೆ ಗಮನ ಸೆಳೆದಿದ್ದರು. ಹೀಗಾಗಿ ಅವರನ್ನು 14 ಕೋಟಿ ರೂ. ರಿಟೈನ್ ಮಾಡಿಕೊಳ್ಳಲು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ನಿರ್ಧರಿಸಿದೆ.

ಹಾಗೆಯೇ ಮೂರನೇ ರಿಟೈನ್ ಆಗಿ ಅಭಿಷೇಕ್ ಶರ್ಮಾ ಸನ್​ರೈಸರ್ಸ್ ಹೈದರಾಬಾದ್ ತಂಡದಲ್ಲೇ ಉಳಿದುಕೊಳ್ಳಲಿದ್ದಾರೆ. ಕಳೆದ ಸೀಸನ್​ನಲ್ಲಿ ಎಸ್​ಆರ್​​ಹೆಚ್ ಪರ ಆರಂಭಿಕನಾಗಿ ಕಣಕ್ಕಿಳಿದಿರುವ ಅಭಿಷೇಕ್ ಸ್ಪೋಟಕ ಬ್ಯಾಟಿಂಗ್​ನೊಂದಿಗೆ ಗಮನ ಸೆಳೆದಿದ್ದರು. ಹೀಗಾಗಿ ಅವರನ್ನು 14 ಕೋಟಿ ರೂ. ರಿಟೈನ್ ಮಾಡಿಕೊಳ್ಳಲು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ನಿರ್ಧರಿಸಿದೆ.

4 / 6
ಅಂದರೆ ಇಲ್ಲಿ ಮೂವರು ಆಟಗಾರರಿಗಾಗಿ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಒಟ್ಟು 55 ಕೋಟಿ ರೂ. ಅನ್ನು ವ್ಯಯಿಸಿದೆ. ಈ 55 ಕೋಟಿ ರೂ. ಅನ್ನು ಒಟ್ಟು ಹರಾಜು ಮೊತ್ತ 120 ಕೋಟಿ ರೂ.ಯಿಂದ ಕಡಿತ ಮಾಡಲಾಗುತ್ತದೆ. ಅದರಂತೆ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಬಳಿ ಸದ್ಯ ಉಳಿದಿರುವುದು 65 ಕೋಟಿ ರೂ. ಮಾತ್ರ.

ಅಂದರೆ ಇಲ್ಲಿ ಮೂವರು ಆಟಗಾರರಿಗಾಗಿ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಒಟ್ಟು 55 ಕೋಟಿ ರೂ. ಅನ್ನು ವ್ಯಯಿಸಿದೆ. ಈ 55 ಕೋಟಿ ರೂ. ಅನ್ನು ಒಟ್ಟು ಹರಾಜು ಮೊತ್ತ 120 ಕೋಟಿ ರೂ.ಯಿಂದ ಕಡಿತ ಮಾಡಲಾಗುತ್ತದೆ. ಅದರಂತೆ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಬಳಿ ಸದ್ಯ ಉಳಿದಿರುವುದು 65 ಕೋಟಿ ರೂ. ಮಾತ್ರ.

5 / 6
ಇತ್ತ ಐಪಿಎಲ್ ಮೆಗಾ ಹರಾಜು ನಿಯಮದ ಪ್ರಕಾರ ಒಟ್ಟು 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಬಹುದು. ಇದಕ್ಕಾಗಿ ಒಟ್ಟು 79 ಕೋಟಿ ರೂ. ಅನ್ನು ವ್ಯಯಿಸಬೇಕಾಗುತ್ತದೆ. ಅದರಂತೆ ಇದೀಗ 55 ಕೋಟಿ ರೂ. ಖರ್ಚು ಮಾಡಿರುವ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಇನ್ನುಳಿದ 24 ಕೋಟಿಯಲ್ಲಿ ಮತ್ತೆ ಮೂವರನ್ನು ಉಳಿಸಿಕೊಳ್ಳಲು ಅವಕಾಶವಿದೆ. ಹಿಗಾಗಿ ಮೆಗಾ ಹರಾಜಿಗೂ ಮುನ್ನ SRH ತಂಡದಲ್ಲಿ ಸ್ಟಾರ್ ಆಟಗಾರರ ರಿಟೈನ್ ಅನ್ನು ನಿರೀಕ್ಷಿಸಬಹುದು.

ಇತ್ತ ಐಪಿಎಲ್ ಮೆಗಾ ಹರಾಜು ನಿಯಮದ ಪ್ರಕಾರ ಒಟ್ಟು 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಬಹುದು. ಇದಕ್ಕಾಗಿ ಒಟ್ಟು 79 ಕೋಟಿ ರೂ. ಅನ್ನು ವ್ಯಯಿಸಬೇಕಾಗುತ್ತದೆ. ಅದರಂತೆ ಇದೀಗ 55 ಕೋಟಿ ರೂ. ಖರ್ಚು ಮಾಡಿರುವ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಇನ್ನುಳಿದ 24 ಕೋಟಿಯಲ್ಲಿ ಮತ್ತೆ ಮೂವರನ್ನು ಉಳಿಸಿಕೊಳ್ಳಲು ಅವಕಾಶವಿದೆ. ಹಿಗಾಗಿ ಮೆಗಾ ಹರಾಜಿಗೂ ಮುನ್ನ SRH ತಂಡದಲ್ಲಿ ಸ್ಟಾರ್ ಆಟಗಾರರ ರಿಟೈನ್ ಅನ್ನು ನಿರೀಕ್ಷಿಸಬಹುದು.

6 / 6

Published On - 10:23 am, Thu, 17 October 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್