AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಸೂರ್ಯಕುಮಾರ್ ಯಾದವ್​ಗೆ ಬಿಗ್ ಆಫರ್ ನೀಡಿದ KKR

Suryakumar Yadav: ಸೂರ್ಯಕುಮಾರ್ ಯಾದವ್ ಮುಂಬೈ ಇಂಡಿಯನ್ಸ್ ಪರ 9 ಸೀಸನ್​ಗಳನ್ನು ಆಡಿದ್ದರು. ಇದಾಗ್ಯೂ ಅವರು ಪಡೆಯುತ್ತಿರುವ ಸಂಭಾವನೆ ಮೊತ್ತ ಕೇವಲ 8 ಕೋಟಿ ರೂ. ಮಾತ್ರ. ಅದೇ ಇಶಾನ್ ಕಿಶನ್ ಸೇರಿದಂತೆ ಕೆಲ ಯುವ ಆಟಗಾರರು 10 ರಿಂದ 15 ಕೋಟಿ ರೂ. ಪಡೆಯುತ್ತಿದ್ದಾರೆ. ಇತ್ತ ಈ ಬಾರಿ ಮುಂಬೈ ಇಂಡಿಯನ್ಸ್ ಸೂರ್ಯಕುಮಾರ್ ಯಾದವ್ ಅವರನ್ನು ಉಳಿಸಿಕೊಂಡರೆ ಗರಿಷ್ಠ 12 ಕೋಟಿ ರೂ. ಪಡೆಯಬಹುದಷ್ಟೇ. ಈ ಎಲ್ಲಾ ಕಾರಣಗಳಿಂದ ಸೂರ್ಯ ಕೆಕೆಆರ್ ಆಫರ್ ಅನ್ನು ಒಪ್ಪಲಿದ್ದಾರಾ ಕಾದು ನೋಡಬೇಕಿದೆ.

ಝಾಹಿರ್ ಯೂಸುಫ್
|

Updated on: Aug 25, 2024 | 8:22 AM

Share
IPL 2025: ಐಪಿಎಲ್ 2025ರ ಮೆಗಾ ಹರಾಜಿಗೂ ಮುನ್ನ ಫ್ರಾಂಚೈಸಿಗಳು ಸ್ಟಾರ್ ಆಟಗಾರರನ್ನು ಸೆಳೆಯುವ ಪ್ರಯತ್ನಕ್ಕೆ ಕೈ ಹಾಕಿದೆ. ಒಂದೆಡೆ ಡೆಲ್ಲಿ ಕ್ಯಾಪಿಟಲ್ಸ್​ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ರೋಹಿತ್ ಶರ್ಮಾಗಾಗಿ ಪ್ಲ್ಯಾನ್ ರೂಪಿಸುತ್ತಿದ್ದರೆ, ಮತ್ತೊಂದೆಡೆ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ತೆರೆಮರೆಯಲ್ಲೇ ಸೂರ್ಯಕುಮಾರ್ ಯಾದವ್ ಅವರಿಗೆ ಬಿಗ್ ಆಫರ್ ನೀಡಿದೆ.

IPL 2025: ಐಪಿಎಲ್ 2025ರ ಮೆಗಾ ಹರಾಜಿಗೂ ಮುನ್ನ ಫ್ರಾಂಚೈಸಿಗಳು ಸ್ಟಾರ್ ಆಟಗಾರರನ್ನು ಸೆಳೆಯುವ ಪ್ರಯತ್ನಕ್ಕೆ ಕೈ ಹಾಕಿದೆ. ಒಂದೆಡೆ ಡೆಲ್ಲಿ ಕ್ಯಾಪಿಟಲ್ಸ್​ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ರೋಹಿತ್ ಶರ್ಮಾಗಾಗಿ ಪ್ಲ್ಯಾನ್ ರೂಪಿಸುತ್ತಿದ್ದರೆ, ಮತ್ತೊಂದೆಡೆ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ತೆರೆಮರೆಯಲ್ಲೇ ಸೂರ್ಯಕುಮಾರ್ ಯಾದವ್ ಅವರಿಗೆ ಬಿಗ್ ಆಫರ್ ನೀಡಿದೆ.

1 / 6
ಸೂರ್ಯಕುಮಾರ್ ಯಾದವ್ ಅವರೊಂದಿಗೆ ಕೆಕೆಆರ್ ಫ್ರಾಂಚೈಸಿ ಮಾತುಕತೆ ನಡೆಸಿದ್ದು, ಈ ವೇಳೆ ಬೃಹತ್ ಮೊತ್ತದ ಆಫರ್ ನೀಡಲಾಗಿದೆ. ಅಷ್ಟೇ ಅಲ್ಲದೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಆಗಮಿಸಿದರೆ ನಾಯಕತ್ವವನ್ನು ಸಹ ನೀಡುವುದಾಗಿ ತಿಳಿಸಿದೆ. ಈ ಮೂಲಕ ಸೂರ್ಯಕುಮಾರ್ ಯಾದವ್ ಅವರ ಖರೀದಿಗೆ ಕೆಕೆಆರ್ ಪ್ಲ್ಯಾನ್ ರೂಪಿಸುತ್ತಿದೆ.

ಸೂರ್ಯಕುಮಾರ್ ಯಾದವ್ ಅವರೊಂದಿಗೆ ಕೆಕೆಆರ್ ಫ್ರಾಂಚೈಸಿ ಮಾತುಕತೆ ನಡೆಸಿದ್ದು, ಈ ವೇಳೆ ಬೃಹತ್ ಮೊತ್ತದ ಆಫರ್ ನೀಡಲಾಗಿದೆ. ಅಷ್ಟೇ ಅಲ್ಲದೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಆಗಮಿಸಿದರೆ ನಾಯಕತ್ವವನ್ನು ಸಹ ನೀಡುವುದಾಗಿ ತಿಳಿಸಿದೆ. ಈ ಮೂಲಕ ಸೂರ್ಯಕುಮಾರ್ ಯಾದವ್ ಅವರ ಖರೀದಿಗೆ ಕೆಕೆಆರ್ ಪ್ಲ್ಯಾನ್ ರೂಪಿಸುತ್ತಿದೆ.

2 / 6
ಪ್ರಸ್ತುತ ಮುಂಬೈ ಇಂಡಿಯನ್ಸ್ ತಂಡದ ಭಾಗವಾಗಿರುವ ಸೂರ್ಯಕುಮಾರ್ ಯಾದವ್ ಪಡೆಯುತ್ತಿರುವುದು ಕೇವಲ 8 ಕೋಟಿ ರೂ. ಮಾತ್ರ. ಆದರೆ ಕೆಕೆಆರ್ ತಂಡಕ್ಕೆ ಬಂದರೆ ನಾಯಕನಾಗಿ ಆಯ್ಕೆ ಮಾಡುವುದರೊಂದಿಗೆ ಬೃಹತ್ ಮೊತ್ತವನ್ನು ನೀಡುವುದಾಗಿ ಕೊಲ್ಕತ್ತಾ ನೈಟ್ ರೈಡರ್ಸ್​ ಫ್ರಾಂಚೈಸಿ ತಿಳಿಸಿದೆ ಎಂದು ವರದಿಯಾಗಿದೆ.

ಪ್ರಸ್ತುತ ಮುಂಬೈ ಇಂಡಿಯನ್ಸ್ ತಂಡದ ಭಾಗವಾಗಿರುವ ಸೂರ್ಯಕುಮಾರ್ ಯಾದವ್ ಪಡೆಯುತ್ತಿರುವುದು ಕೇವಲ 8 ಕೋಟಿ ರೂ. ಮಾತ್ರ. ಆದರೆ ಕೆಕೆಆರ್ ತಂಡಕ್ಕೆ ಬಂದರೆ ನಾಯಕನಾಗಿ ಆಯ್ಕೆ ಮಾಡುವುದರೊಂದಿಗೆ ಬೃಹತ್ ಮೊತ್ತವನ್ನು ನೀಡುವುದಾಗಿ ಕೊಲ್ಕತ್ತಾ ನೈಟ್ ರೈಡರ್ಸ್​ ಫ್ರಾಂಚೈಸಿ ತಿಳಿಸಿದೆ ಎಂದು ವರದಿಯಾಗಿದೆ.

3 / 6
ಹೀಗಾಗಿ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ಸೂರ್ಯಕುಮಾರ್ ಯಾದವ್ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ರೋಹಿತ್ ಶರ್ಮಾ ಬಳಿಕ ಸೂರ್ಯ ಮುಂಬೈ ಇಂಡಿಯನ್ಸ್ ತಂಡದ ಚುಕ್ಕಾಣಿ ಹಿಡಿಯುವ ವಿಶ್ವಾಸದಲ್ಲಿದ್ದರು.

ಹೀಗಾಗಿ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ಸೂರ್ಯಕುಮಾರ್ ಯಾದವ್ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ರೋಹಿತ್ ಶರ್ಮಾ ಬಳಿಕ ಸೂರ್ಯ ಮುಂಬೈ ಇಂಡಿಯನ್ಸ್ ತಂಡದ ಚುಕ್ಕಾಣಿ ಹಿಡಿಯುವ ವಿಶ್ವಾಸದಲ್ಲಿದ್ದರು.

4 / 6
ಆದರೆ ಅನಿರೀಕ್ಷಿತ ಎಂಬಂತೆ ಗುಜರಾತ್ ಟೈಟಾನ್ಸ್ ತಂಡದಿಂದ ಹಾರ್ದಿಕ್ ಪಾಂಡ್ಯರನ್ನು ಕರೆತರುವ ಮೂಲಕ ಮುಂಬೈ ಇಂಡಿಯನ್ಸ್ ನಾಯಕತ್ವ ನೀಡಿತ್ತು. ಇದೀಗ ಸೂರ್ಯಕುಮಾರ್ ಯಾದವ್ ಮುಂದೆ ಕೂಡ ಇದೇ ಮಾದರಿಯ ಆಫರ್ ಇದೆ. ಮುಂಬೈ ಇಂಡಿಯನ್ಸ್ ತೊರೆದು ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡರೆ, ನಾವು ಖರೀದಿಸುತ್ತೇವೆ, ಅಲ್ಲದೆ ಕ್ಯಾಪ್ಟನ್ ಪಟ್ಟವನ್ನು ನೀಡುತ್ತೇವೆ ಎಂದು ಕೆಕೆಆರ್ ತಿಳಿಸಿದೆ.

ಆದರೆ ಅನಿರೀಕ್ಷಿತ ಎಂಬಂತೆ ಗುಜರಾತ್ ಟೈಟಾನ್ಸ್ ತಂಡದಿಂದ ಹಾರ್ದಿಕ್ ಪಾಂಡ್ಯರನ್ನು ಕರೆತರುವ ಮೂಲಕ ಮುಂಬೈ ಇಂಡಿಯನ್ಸ್ ನಾಯಕತ್ವ ನೀಡಿತ್ತು. ಇದೀಗ ಸೂರ್ಯಕುಮಾರ್ ಯಾದವ್ ಮುಂದೆ ಕೂಡ ಇದೇ ಮಾದರಿಯ ಆಫರ್ ಇದೆ. ಮುಂಬೈ ಇಂಡಿಯನ್ಸ್ ತೊರೆದು ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡರೆ, ನಾವು ಖರೀದಿಸುತ್ತೇವೆ, ಅಲ್ಲದೆ ಕ್ಯಾಪ್ಟನ್ ಪಟ್ಟವನ್ನು ನೀಡುತ್ತೇವೆ ಎಂದು ಕೆಕೆಆರ್ ತಿಳಿಸಿದೆ.

5 / 6
ಅಂದಹಾಗೆ ಸೂರ್ಯಕುಮಾರ್ ಯಾದವ್ 2014 ರಿಂದ 2017ರವರೆಗೆ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಆಡಿದ್ದರು. ಹೀಗಾಗಿ ಕೆಕೆಆರ್ ಫ್ರಾಂಚೈಸಿ ಸೂರ್ಯನ ಪಾಲಿಗೆ ಹೊಸದೇನಲ್ಲ. ಅದರಲ್ಲೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮಾಲೀಕ ಶಾರುಖ್ ಖಾನ್ ಸೂರ್ಯಕುಮಾರ್ ಯಾದವ್ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಹೀಗಾಗಿ ಸೂರ್ಯಕುಮಾರ್ ಯಾದವ್ ಕೆಕೆಆರ್ ಆಫರ್ ಅನ್ನು ಒಪ್ಪಿ ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

ಅಂದಹಾಗೆ ಸೂರ್ಯಕುಮಾರ್ ಯಾದವ್ 2014 ರಿಂದ 2017ರವರೆಗೆ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಆಡಿದ್ದರು. ಹೀಗಾಗಿ ಕೆಕೆಆರ್ ಫ್ರಾಂಚೈಸಿ ಸೂರ್ಯನ ಪಾಲಿಗೆ ಹೊಸದೇನಲ್ಲ. ಅದರಲ್ಲೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮಾಲೀಕ ಶಾರುಖ್ ಖಾನ್ ಸೂರ್ಯಕುಮಾರ್ ಯಾದವ್ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಹೀಗಾಗಿ ಸೂರ್ಯಕುಮಾರ್ ಯಾದವ್ ಕೆಕೆಆರ್ ಆಫರ್ ಅನ್ನು ಒಪ್ಪಿ ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

6 / 6
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ