AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಝಹೀರ್ ಖಾನ್ ಎಂಟ್ರಿ

ಟೀಮ್ ಇಂಡಿಯಾ ಪರ ಝಹೀರ್ ಖಾನ್ 17 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 352 ಎಸೆತಗಳನ್ನು ಎಸೆದಿರುವ ಝಾಕ್ 448 ರನ್​ಗಳನ್ನು ನೀಡಿ 17 ವಿಕೆಟ್ ಕಬಳಿಸಿದ್ದಾರೆ. ಇನ್ನು ಐಪಿಎಲ್​ನಲ್ಲಿ 100 ಪಂದ್ಯಗಳಲ್ಲಿ ಕಾಣಿಸಿಕೊಂಡಿರುವ ಎಡಗೈ ವೇಗಿ ಒಟ್ಟು 102 ವಿಕೆಟ್ ಪಡೆದಿದ್ದಾರೆ. ಇದೀಗ ಲಕ್ನೋ ಸೂಪರ್ ಜೈಂಟ್ಸ್ ಪರ ಹೊಸ ಇನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ.

ಝಾಹಿರ್ ಯೂಸುಫ್
|

Updated on:Aug 28, 2024 | 10:53 AM

Share
ಟೀಮ್ ಇಂಡಿಯಾದ ಮಾಜಿ ವೇಗಿ ಝಹೀರ್ ಖಾನ್ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡದ ಮೆಂಟರ್ ಆಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಮುಂಬೈ ಇಂಡಿಯನ್ಸ್ ತಂಡದ ಸಿಬ್ಬಂದಿ ವರ್ಗದಲ್ಲಿ ಕಾಣಿಸಿಕೊಂಡಿದ್ದ ಝಹೀರ್ ಖಾನ್ ಇದೀಗ ಹೊಸ ಹುದ್ದೆಯೊಂದಿಗೆ ಐಪಿಎಲ್​ಗೆ ಮರಳುತ್ತಿರುವುದು ವಿಶೇಷ.

ಟೀಮ್ ಇಂಡಿಯಾದ ಮಾಜಿ ವೇಗಿ ಝಹೀರ್ ಖಾನ್ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡದ ಮೆಂಟರ್ ಆಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಮುಂಬೈ ಇಂಡಿಯನ್ಸ್ ತಂಡದ ಸಿಬ್ಬಂದಿ ವರ್ಗದಲ್ಲಿ ಕಾಣಿಸಿಕೊಂಡಿದ್ದ ಝಹೀರ್ ಖಾನ್ ಇದೀಗ ಹೊಸ ಹುದ್ದೆಯೊಂದಿಗೆ ಐಪಿಎಲ್​ಗೆ ಮರಳುತ್ತಿರುವುದು ವಿಶೇಷ.

1 / 5
2018 ರಿಂದ 2022 ರವರೆಗೆ, ಝಹೀರ್ ಖಾನ್ ಮುಂಬೈ ಇಂಡಿಯನ್ಸ್ (MI) ತಂಡದ ನಿರ್ದೇಶಕರಾಗಿ ಮತ್ತು ಆ ಬಳಿಕ ಜಾಗತಿಕ ಅಭಿವೃದ್ಧಿಯ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿದ್ದರು. ಇದರ ನಡುವೆ ಮುಂಬೈ ಇಂಡಿಯನ್ಸ್ ತಂಡದ ಬೌಲಿಂಗ್ ಕೋಚ್ ಆಗಿಯೂ ಕಾಣಿಸಿಕೊಂಡಿದ್ದರು.

2018 ರಿಂದ 2022 ರವರೆಗೆ, ಝಹೀರ್ ಖಾನ್ ಮುಂಬೈ ಇಂಡಿಯನ್ಸ್ (MI) ತಂಡದ ನಿರ್ದೇಶಕರಾಗಿ ಮತ್ತು ಆ ಬಳಿಕ ಜಾಗತಿಕ ಅಭಿವೃದ್ಧಿಯ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿದ್ದರು. ಇದರ ನಡುವೆ ಮುಂಬೈ ಇಂಡಿಯನ್ಸ್ ತಂಡದ ಬೌಲಿಂಗ್ ಕೋಚ್ ಆಗಿಯೂ ಕಾಣಿಸಿಕೊಂಡಿದ್ದರು.

2 / 5
ಇದೀಗ ಗೌತಮ್ ಗಂಭೀರ್ ಅವರಿಂದ ತೆರವಾಗಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಹುದ್ದೆಗೆ ಝಹೀರ್ ಖಾನ್ ಅವರನ್ನು ನೇಮಿಸಲಾಗಿದೆ. ಗಂಭೀರ್ ಐಪಿಎಲ್ 2022-23 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾರ್ಗದರ್ಶಕರಾಗಿ ಕಾರ್ಯ ನಿರ್ವಹಿಸಿದ್ದರು. ಆದರೆ 2024 ರಲ್ಲಿ ಲಕ್ನೋ ಫ್ರಾಂಚೈಸಿಯನ್ನು ತೊರೆದಿದ್ದ ಗಂಭೀರ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮೆಂಟರ್ ಆಗಿ ಕಾಣಿಸಿಕೊಂಡಿದ್ದರು.

ಇದೀಗ ಗೌತಮ್ ಗಂಭೀರ್ ಅವರಿಂದ ತೆರವಾಗಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಹುದ್ದೆಗೆ ಝಹೀರ್ ಖಾನ್ ಅವರನ್ನು ನೇಮಿಸಲಾಗಿದೆ. ಗಂಭೀರ್ ಐಪಿಎಲ್ 2022-23 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾರ್ಗದರ್ಶಕರಾಗಿ ಕಾರ್ಯ ನಿರ್ವಹಿಸಿದ್ದರು. ಆದರೆ 2024 ರಲ್ಲಿ ಲಕ್ನೋ ಫ್ರಾಂಚೈಸಿಯನ್ನು ತೊರೆದಿದ್ದ ಗಂಭೀರ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮೆಂಟರ್ ಆಗಿ ಕಾಣಿಸಿಕೊಂಡಿದ್ದರು.

3 / 5
ಇನ್ನು ಝಹೀರ್ ಖಾನ್ ಆಯ್ಕೆ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು 2 ಹುದ್ದೆಗಳನ್ನು ಭರ್ತಿ ಮಾಡುವ ಸಾಧ್ಯತೆಯಿದೆ. ಈಗಾಗಲೇ ಮೆಂಟರ್ ಆಗಿ ಆಯ್ಕೆಯಾಗಿರುವ ಝಾಕ್, ಎಲ್​ಎಸ್​ಜಿ ತಂಡದ ಬೌಲಿಂಗ್ ಕೋಚ್ ಆಗಿಯೂ ಕಾಣಿಸಿಕೊಳ್ಳುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಏಕೆಂದರೆ ಭಾರತ ಕಂಡಂತಹ ಅತ್ಯುತ್ತಮ ವೇಗಿಗಳಲ್ಲಿ ಝಹೀರ್ ಖಾನ್ ಕೂಡ ಒಬ್ಬರು. ಅಲ್ಲದೆ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಬೌಲಿಂಗ್ ಕೋಚ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಹೀಗಾಗಿ ಮೆಂಟರ್ ಹುದ್ದೆಯೊಂದಿಗೆ ಝಹೀರ್ ಖಾನ್ ಬೌಲಿಂಗ್ ಕೋಚ್ ಆಗಿಯೂ ಕಾರ್ಯ ನಿರ್ವಹಿಸುವ ಸಾಧ್ಯತೆಯಿದೆ.

ಇನ್ನು ಝಹೀರ್ ಖಾನ್ ಆಯ್ಕೆ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು 2 ಹುದ್ದೆಗಳನ್ನು ಭರ್ತಿ ಮಾಡುವ ಸಾಧ್ಯತೆಯಿದೆ. ಈಗಾಗಲೇ ಮೆಂಟರ್ ಆಗಿ ಆಯ್ಕೆಯಾಗಿರುವ ಝಾಕ್, ಎಲ್​ಎಸ್​ಜಿ ತಂಡದ ಬೌಲಿಂಗ್ ಕೋಚ್ ಆಗಿಯೂ ಕಾಣಿಸಿಕೊಳ್ಳುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಏಕೆಂದರೆ ಭಾರತ ಕಂಡಂತಹ ಅತ್ಯುತ್ತಮ ವೇಗಿಗಳಲ್ಲಿ ಝಹೀರ್ ಖಾನ್ ಕೂಡ ಒಬ್ಬರು. ಅಲ್ಲದೆ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಬೌಲಿಂಗ್ ಕೋಚ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಹೀಗಾಗಿ ಮೆಂಟರ್ ಹುದ್ದೆಯೊಂದಿಗೆ ಝಹೀರ್ ಖಾನ್ ಬೌಲಿಂಗ್ ಕೋಚ್ ಆಗಿಯೂ ಕಾರ್ಯ ನಿರ್ವಹಿಸುವ ಸಾಧ್ಯತೆಯಿದೆ.

4 / 5
ಅಂದಹಾಗೆ ಝಹೀರ್ ಖಾನ್ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿದಿದ್ದಾರೆ. ಈ ವೇಳೆ ಒಟ್ಟು 100 ಪಂದ್ಯಗಳನ್ನಾಡಿರುವ ಅವರು ಒಟ್ಟು 102 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಇದಾದ ಬಳಿಕ ಮುಂಬೈ ಇಂಡಿಯನ್ಸ್ ಪರ ಕೋಚಿಂಗ್ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸಿದ್ದರು. ಇದೀಗ ಮೆಂಟರ್ ಹುದ್ದೆಯೊಂದಿಗೆ ಐಪಿಎಲ್ 2025 ರಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಅಂದಹಾಗೆ ಝಹೀರ್ ಖಾನ್ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿದಿದ್ದಾರೆ. ಈ ವೇಳೆ ಒಟ್ಟು 100 ಪಂದ್ಯಗಳನ್ನಾಡಿರುವ ಅವರು ಒಟ್ಟು 102 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಇದಾದ ಬಳಿಕ ಮುಂಬೈ ಇಂಡಿಯನ್ಸ್ ಪರ ಕೋಚಿಂಗ್ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸಿದ್ದರು. ಇದೀಗ ಮೆಂಟರ್ ಹುದ್ದೆಯೊಂದಿಗೆ ಐಪಿಎಲ್ 2025 ರಲ್ಲಿ ಕಾಣಿಸಿಕೊಳ್ಳಲಿದ್ದಾರೆ.

5 / 5

Published On - 10:00 am, Wed, 28 August 24

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!