AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025 Auction: ಮೊದಲ ದಿನ ಮೂವರು ಕನ್ನಡಿಗರು ಅನ್​ಸೋಲ್ಡ್

IPL 2025 Auction: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಮೆಗಾ ಹರಾಜಿನ ಮೊದಲ ದಿನದ ಬಿಡ್ಡಿಂಗ್​ನಲ್ಲಿ 72 ಆಟಗಾರರು ಬಿಕರಿಯಾಗಿದ್ದಾರೆ. ಇವರಲ್ಲಿ ಅತ್ಯಧಿಕ ಮೊತ್ತ ಪಡೆದಿರುವುದು ರಿಷಭ್ ಪಂತ್. ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಪಂತ್ ಅವರನ್ನು ಬರೋಬ್ಬರಿ 27 ಕೋಟಿ ರೂ.ಗೆ ಖರೀದಿಸಿದೆ.

ಝಾಹಿರ್ ಯೂಸುಫ್
|

Updated on:Nov 26, 2024 | 7:13 AM

Share
ಸೌದಿ ಅರೇಬಿಯಾದ ಜಿದ್ದಾದಲ್ಲಿ ನಡೆದ ಐಪಿಎಲ್ ಸೀಸನ್-18ರ ಮೆಗಾ ಹರಾಜಿನ ಮೊದಲ ದಿನ 12 ಆಟಗಾರರು ಮಾರಾಟವಾಗದೇ ಉಳಿದಿದ್ದಾರೆ. ಈ ಹನ್ನೆರಡು ಆಟಗಾರರಲ್ಲಿ ಮೂವರು ಕನ್ನಡಿಗರಿರುವುದು ವಿಶೇಷ. ಹಾಗಿದ್ರೆ ಮೊದಲ ದಿನ ಬಿಕರಿಯಾಗದೇ ಉಳಿದ ಆಟಗಾರರು ಯಾರೆಲ್ಲಾ ಎಂದು ನೋಡುವುದಾದರೆ....

ಸೌದಿ ಅರೇಬಿಯಾದ ಜಿದ್ದಾದಲ್ಲಿ ನಡೆದ ಐಪಿಎಲ್ ಸೀಸನ್-18ರ ಮೆಗಾ ಹರಾಜಿನ ಮೊದಲ ದಿನ 12 ಆಟಗಾರರು ಮಾರಾಟವಾಗದೇ ಉಳಿದಿದ್ದಾರೆ. ಈ ಹನ್ನೆರಡು ಆಟಗಾರರಲ್ಲಿ ಮೂವರು ಕನ್ನಡಿಗರಿರುವುದು ವಿಶೇಷ. ಹಾಗಿದ್ರೆ ಮೊದಲ ದಿನ ಬಿಕರಿಯಾಗದೇ ಉಳಿದ ಆಟಗಾರರು ಯಾರೆಲ್ಲಾ ಎಂದು ನೋಡುವುದಾದರೆ....

1 / 6
ದೇವದತ್ ಪಡಿಕ್ಕಲ್: 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಕರ್ನಾಟಕದ ಎಡಗೈ ದಾಂಡಿಗ ದೇವದತ್ ಪಡಿಕ್ಕಲ್ ಮೊದಲ ದಿನದ ಹರಾಜಿನಲ್ಲಿ ಮಾರಾಟವಾಗದೇ ಉಳಿದಿದ್ದಾರೆ. ಕಳೆದ ಸೀಸನ್​ನಲ್ಲಿ ಪಡಿಕ್ಕಲ್ ಲಕ್ನೋ ಸೂಪರ್ ಜೈಂಟ್ಸ್ ತಂಡದ ಭಾಗವಾಗಿದ್ದರು.

ದೇವದತ್ ಪಡಿಕ್ಕಲ್: 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಕರ್ನಾಟಕದ ಎಡಗೈ ದಾಂಡಿಗ ದೇವದತ್ ಪಡಿಕ್ಕಲ್ ಮೊದಲ ದಿನದ ಹರಾಜಿನಲ್ಲಿ ಮಾರಾಟವಾಗದೇ ಉಳಿದಿದ್ದಾರೆ. ಕಳೆದ ಸೀಸನ್​ನಲ್ಲಿ ಪಡಿಕ್ಕಲ್ ಲಕ್ನೋ ಸೂಪರ್ ಜೈಂಟ್ಸ್ ತಂಡದ ಭಾಗವಾಗಿದ್ದರು.

2 / 6
ಲವ್​ನೀತ್ ಸಿಸೋಡಿಯಾ: ಕರ್ನಾಟಕದ ವಿಕೆಟ್ ಕೀಪರ್ ಬ್ಯಾಟರ್ ಲವ್​ನೀತ್ ಸಿಸೋಡಿಯಾ ಈ ಬಾರಿಯ ಮೆಗಾ ಹರಾಜಿನಲ್ಲಿ 30 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದಾರೆ. ಇದಾಗ್ಯೂ ಮೊದಲ ದಿನದ ಹರಾಜಿನಲ್ಲಿ ಆರ್​ಸಿಬಿಯ ಮಾಜಿ ಆಟಗಾರನನ್ನು ಖರೀದಿಸಲು ಫ್ರಾಂಚೈಸಿಗಳು ಹಿಂದೇಟು ಹಾಕಿದೆ.

ಲವ್​ನೀತ್ ಸಿಸೋಡಿಯಾ: ಕರ್ನಾಟಕದ ವಿಕೆಟ್ ಕೀಪರ್ ಬ್ಯಾಟರ್ ಲವ್​ನೀತ್ ಸಿಸೋಡಿಯಾ ಈ ಬಾರಿಯ ಮೆಗಾ ಹರಾಜಿನಲ್ಲಿ 30 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದಾರೆ. ಇದಾಗ್ಯೂ ಮೊದಲ ದಿನದ ಹರಾಜಿನಲ್ಲಿ ಆರ್​ಸಿಬಿಯ ಮಾಜಿ ಆಟಗಾರನನ್ನು ಖರೀದಿಸಲು ಫ್ರಾಂಚೈಸಿಗಳು ಹಿಂದೇಟು ಹಾಕಿದೆ.

3 / 6
ಶ್ರೇಯಸ್ ಗೋಪಾಲ್: ಸ್ಪಿನ್ ಆಲ್​ರೌಂಡರ್ ಶ್ರೇಯಸ್ ಗೋಪಾಲ್ ಕೂಡ ಮೊದಲ ದಿನದ ಹರಾಜಿನಲ್ಲಿ ಬಿಕರಿಯಾಗದೇ ಉಳಿದಿದ್ದಾರೆ. ಕಳೆದ ಸೀಸನ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದ ಕನ್ನಡಿಗನ ಖರೀದಿಗೆ ಮೊದಲ ದಿನ ಯಾವುದೇ ಫ್ರಾಂಚೈಸಿ ಆಸಕ್ತಿ ತೋರಲಿಲ್ಲ.

ಶ್ರೇಯಸ್ ಗೋಪಾಲ್: ಸ್ಪಿನ್ ಆಲ್​ರೌಂಡರ್ ಶ್ರೇಯಸ್ ಗೋಪಾಲ್ ಕೂಡ ಮೊದಲ ದಿನದ ಹರಾಜಿನಲ್ಲಿ ಬಿಕರಿಯಾಗದೇ ಉಳಿದಿದ್ದಾರೆ. ಕಳೆದ ಸೀಸನ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದ ಕನ್ನಡಿಗನ ಖರೀದಿಗೆ ಮೊದಲ ದಿನ ಯಾವುದೇ ಫ್ರಾಂಚೈಸಿ ಆಸಕ್ತಿ ತೋರಲಿಲ್ಲ.

4 / 6
ಈ ಮೂವರಲ್ಲದೆ ಮೊದಲ ದಿನದ ಹರಾಜಿನಲ್ಲಿ ಮಾರಾಟವಾಗದೇ ಉಳಿದ ಆಟಗಾರರೆಂದರೆ... ಡೇವಿಡ್ ವಾರ್ನರ್, ಜಾನಿ ಬೈರ್​ಸ್ಟೋವ್, ಕಾರ್ ಸಲಾಮ್ಖೈಲ್, ಯಶ್ ಧುಲ್, ಅನ್ಮೋಲ್ಪ್ರೀತ್ ಸಿಂಗ್, ಉತ್ಕರ್ಷ್ ಸಿಂಗ್, ಕಾರ್ತಿಕ್ ತ್ಯಾಗಿ, ಉಪೇಂದ್ರ ಯಾದವ್, ಪಿಯೂಷ್ ಚಾವ್ಲಾ.

ಈ ಮೂವರಲ್ಲದೆ ಮೊದಲ ದಿನದ ಹರಾಜಿನಲ್ಲಿ ಮಾರಾಟವಾಗದೇ ಉಳಿದ ಆಟಗಾರರೆಂದರೆ... ಡೇವಿಡ್ ವಾರ್ನರ್, ಜಾನಿ ಬೈರ್​ಸ್ಟೋವ್, ಕಾರ್ ಸಲಾಮ್ಖೈಲ್, ಯಶ್ ಧುಲ್, ಅನ್ಮೋಲ್ಪ್ರೀತ್ ಸಿಂಗ್, ಉತ್ಕರ್ಷ್ ಸಿಂಗ್, ಕಾರ್ತಿಕ್ ತ್ಯಾಗಿ, ಉಪೇಂದ್ರ ಯಾದವ್, ಪಿಯೂಷ್ ಚಾವ್ಲಾ.

5 / 6
ಇನ್ನು ಮೊದಲ ದಿನ ಮಾರಾಟವಾಗದೇ ಉಳಿದ ಆಟಗಾರರ ಪಟ್ಟಿಯನ್ನು ಕೊನೆಯ ಸುತ್ತಿನ ಹರಾಜಿನ ವೇಳೆ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಅದರಂತೆ ಅಂತಿಮ ಸುತ್ತಿನಲ್ಲಿ ಅನ್​ಸೋಲ್ಡ್ ಆಟಗಾರರಿಗಾಗಿ ಮತ್ತೆ ಬಿಡ್ಡಿಂಗ್ ನಡೆಯಲಿದೆ. ಹೀಗಾಗಿ ಮೊದಲ ದಿನ ಬಿಕರಿಯಾಗದೇ ಉಳಿದ ಆಟಗಾರರಿಗೆ ಎರಡನೇ ದಿನ ಅದೃಷ್ಟ ಖುಲಾಯಿಸಬಹುದು.

ಇನ್ನು ಮೊದಲ ದಿನ ಮಾರಾಟವಾಗದೇ ಉಳಿದ ಆಟಗಾರರ ಪಟ್ಟಿಯನ್ನು ಕೊನೆಯ ಸುತ್ತಿನ ಹರಾಜಿನ ವೇಳೆ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಅದರಂತೆ ಅಂತಿಮ ಸುತ್ತಿನಲ್ಲಿ ಅನ್​ಸೋಲ್ಡ್ ಆಟಗಾರರಿಗಾಗಿ ಮತ್ತೆ ಬಿಡ್ಡಿಂಗ್ ನಡೆಯಲಿದೆ. ಹೀಗಾಗಿ ಮೊದಲ ದಿನ ಬಿಕರಿಯಾಗದೇ ಉಳಿದ ಆಟಗಾರರಿಗೆ ಎರಡನೇ ದಿನ ಅದೃಷ್ಟ ಖುಲಾಯಿಸಬಹುದು.

6 / 6

Published On - 9:04 am, Mon, 25 November 24

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ