AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಅತೀ ಕಡಿಮೆ ಮೂಲ ಬೆಲೆ: ಐಪಿಎಲ್​ಗೆ ಆಯ್ಕೆಯಾದರೆ ಹೊಸ ಇತಿಹಾಸ

IPL 2025: ಮುಂಬೈ ಮೂಲದ ಸೌರಭ್ ನೇತ್ರವಾಲ್ಕರ್ ಈ ಹಿಂದೆ ಭಾರತದ ಪರ ಅಂಡರ್-19 ವಿಶ್ವಕಪ್ ಆಡಿದ್ದರು. ಇದಾದ ಬಳಿಕ ಯುಎಸ್​ಎಗೆ ವಲಸೆ ಹೋಗಿದ್ದ ಅವರು ಇದೀಗ ಅಲ್ಲಿನ ರಾಷ್ಟ್ರೀಯ ತಂಡದ ಖಾಯಂ ಸದಸ್ಯರಾಗಿದ್ದಾರೆ. ಅದರಂತೆ ವಿದೇಶಿ ಆಟಗಾರರ ಪಟ್ಟಿಯಲ್ಲಿ ಸೌರಭ್ ನೇತ್ರವಾಲ್ಕರ್ ಐಪಿಎಲ್ ಹರಾಜಿಗಾಗಿ ಹೆಸರು ನೋಂದಾಯಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 10, 2024 | 8:35 AM

Share
ಸೌರಭ್ ನೇತ್ರವಾಲ್ಕರ್... ಈ ಹೆಸರು ಭಾರತೀಯರಿಗೆ ಚಿರಪರಿಚಿತ. ಏಕೆಂದರೆ ಕಳೆದ ಟಿ20 ವಿಶ್ವಕಪ್​ನಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ವಿಕೆಟ್​ ಕಬಳಿಸುವ ಮೂಲಕ ಭಾರತೀಯ ಮೂಲದ ಯುಎಸ್​ಎ ವೇಗಿ ಎಲ್ಲರ ಗಮನ ಸೆಳೆದಿದ್ದರು. ಅಲ್ಲದೆ ಟೂರ್ನಿಯುದ್ದಕ್ಕೂ ಅದ್ಭುತ ಪ್ರದರ್ಶನದೊಂದಿಗೆ ಮಿಂಚಿದ್ದರು. ಇದೀಗ ಇದೇ ಸೌರಭ್ ನೇತ್ರವಾಲ್ಕರ್ ಐಪಿಎಲ್​ಗೆ ಎಂಟ್ರಿ ಕೊಡಲು ತುದಿಗಾಲಲ್ಲಿ ನಿಂತಿದ್ದಾರೆ.

ಸೌರಭ್ ನೇತ್ರವಾಲ್ಕರ್... ಈ ಹೆಸರು ಭಾರತೀಯರಿಗೆ ಚಿರಪರಿಚಿತ. ಏಕೆಂದರೆ ಕಳೆದ ಟಿ20 ವಿಶ್ವಕಪ್​ನಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ವಿಕೆಟ್​ ಕಬಳಿಸುವ ಮೂಲಕ ಭಾರತೀಯ ಮೂಲದ ಯುಎಸ್​ಎ ವೇಗಿ ಎಲ್ಲರ ಗಮನ ಸೆಳೆದಿದ್ದರು. ಅಲ್ಲದೆ ಟೂರ್ನಿಯುದ್ದಕ್ಕೂ ಅದ್ಭುತ ಪ್ರದರ್ಶನದೊಂದಿಗೆ ಮಿಂಚಿದ್ದರು. ಇದೀಗ ಇದೇ ಸೌರಭ್ ನೇತ್ರವಾಲ್ಕರ್ ಐಪಿಎಲ್​ಗೆ ಎಂಟ್ರಿ ಕೊಡಲು ತುದಿಗಾಲಲ್ಲಿ ನಿಂತಿದ್ದಾರೆ.

1 / 5
ಇದರ ಮೊದಲ ಹೆಜ್ಜೆಯಾಗಿ ಐಪಿಎಲ್ 2025 ರ ಮೆಗಾ ಹರಾಜಿಗಾಗಿ ಸೌರಭ್ ನೇತ್ರವಾಲ್ಕರ್ ಹೆಸರು ನೋಂದಾಯಿಸಿಕೊಂಡಿದ್ದಾರೆ. ಅದು ಕೂಡ ಕೇವಲ 30 ಲಕ್ಷ ರೂ. ಮೂಲ ಬೆಲೆಯೊಂದಿಗೆ ಎಂಬುದು ವಿಶೇಷ. ಅಂದರೆ ಚೊಚ್ಚಲ ಐಪಿಎಲ್ ಅವಕಾಶವನ್ನು ಎದುರು ನೋಡುತ್ತಿರುವ ಸೌರಭ್ ಅತೀ ಕಡಿಮೆ ಬೇಸ್ ಪ್ರೈಸ್​ನೊಂದಿಗೆ ಹೆಸರು ರಿಜಿಸ್ಟರ್ ಮಾಡಿಕೊಂಡಿದ್ದಾರೆ.

ಇದರ ಮೊದಲ ಹೆಜ್ಜೆಯಾಗಿ ಐಪಿಎಲ್ 2025 ರ ಮೆಗಾ ಹರಾಜಿಗಾಗಿ ಸೌರಭ್ ನೇತ್ರವಾಲ್ಕರ್ ಹೆಸರು ನೋಂದಾಯಿಸಿಕೊಂಡಿದ್ದಾರೆ. ಅದು ಕೂಡ ಕೇವಲ 30 ಲಕ್ಷ ರೂ. ಮೂಲ ಬೆಲೆಯೊಂದಿಗೆ ಎಂಬುದು ವಿಶೇಷ. ಅಂದರೆ ಚೊಚ್ಚಲ ಐಪಿಎಲ್ ಅವಕಾಶವನ್ನು ಎದುರು ನೋಡುತ್ತಿರುವ ಸೌರಭ್ ಅತೀ ಕಡಿಮೆ ಬೇಸ್ ಪ್ರೈಸ್​ನೊಂದಿಗೆ ಹೆಸರು ರಿಜಿಸ್ಟರ್ ಮಾಡಿಕೊಂಡಿದ್ದಾರೆ.

2 / 5
ಈಗಾಗಲೇ ಯುಎಸ್​ಎ ಪರ 36 ಟಿ20 ಪಂದ್ಯಗಳನ್ನಾಡಿರುವ ಸೌರಭ್ ನೇತ್ರವಾಲ್ಕರ್ 36 ವಿಕೆಟ್ ಕಬಳಿಸಿದ್ದಾರೆ. ಅದರಲ್ಲೂ ಎಡಗೈ ವೇಗದ ಬೌಲಿಂಗ್ ಮೂಲಕ ಬ್ಯಾಟರ್​ಗಳನ್ನು ಇಕ್ಕಟಿಗೆ ಸಿಲುಕಿಸುವಲ್ಲಿ ನಿಸ್ಸೀಮರಾಗಿ ಗುರುತಿಸಿಕೊಂಡಿದ್ದಾರೆ. ಇದಕ್ಕೆ ಸಾಕ್ಷಿ ಅವರು ಕಳೆದ 36 ಪಂದ್ಯಗಳಲ್ಲಿ ಕೇವಲ 6.71 ಸರಾಸರಿಯಲ್ಲಿ ರನ್ ಬಿಟ್ಟು ಕೊಟ್ಟಿರುವುದು.

ಈಗಾಗಲೇ ಯುಎಸ್​ಎ ಪರ 36 ಟಿ20 ಪಂದ್ಯಗಳನ್ನಾಡಿರುವ ಸೌರಭ್ ನೇತ್ರವಾಲ್ಕರ್ 36 ವಿಕೆಟ್ ಕಬಳಿಸಿದ್ದಾರೆ. ಅದರಲ್ಲೂ ಎಡಗೈ ವೇಗದ ಬೌಲಿಂಗ್ ಮೂಲಕ ಬ್ಯಾಟರ್​ಗಳನ್ನು ಇಕ್ಕಟಿಗೆ ಸಿಲುಕಿಸುವಲ್ಲಿ ನಿಸ್ಸೀಮರಾಗಿ ಗುರುತಿಸಿಕೊಂಡಿದ್ದಾರೆ. ಇದಕ್ಕೆ ಸಾಕ್ಷಿ ಅವರು ಕಳೆದ 36 ಪಂದ್ಯಗಳಲ್ಲಿ ಕೇವಲ 6.71 ಸರಾಸರಿಯಲ್ಲಿ ರನ್ ಬಿಟ್ಟು ಕೊಟ್ಟಿರುವುದು.

3 / 5
ಇದೀಗ ಐಪಿಎಲ್ ಅಂಗಳಕ್ಕೆ ಕಾಲಿಡಲು ಸಜ್ಜಾಗಿರುವ ಸೌರಭ್ ನೇತ್ರವಾಲ್ಕರ್ ಅವರ ಮೇಲೆ ಒಂದಷ್ಟು ಫ್ರಾಂಚೈಸಿಗಳು ಕಣ್ಣಿಟ್ಟಿರುವುದು ಸುಳ್ಳಲ್ಲ. ಅದರಲ್ಲೂ ಅತೀ ಕಡಿಮೆ ಮೂಲ ಬೆಲೆ ಘೋಷಿಸಿರುವ ಕಾರಣ ಅವರನ್ನು ಯಾವುದಾದರೂ ಫ್ರಾಂಚೈಸಿ ಬ್ಯಾಕ್ ಅಪ್ ಬೌಲರ್ ಆಗಿ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆಯಿದೆ.

ಇದೀಗ ಐಪಿಎಲ್ ಅಂಗಳಕ್ಕೆ ಕಾಲಿಡಲು ಸಜ್ಜಾಗಿರುವ ಸೌರಭ್ ನೇತ್ರವಾಲ್ಕರ್ ಅವರ ಮೇಲೆ ಒಂದಷ್ಟು ಫ್ರಾಂಚೈಸಿಗಳು ಕಣ್ಣಿಟ್ಟಿರುವುದು ಸುಳ್ಳಲ್ಲ. ಅದರಲ್ಲೂ ಅತೀ ಕಡಿಮೆ ಮೂಲ ಬೆಲೆ ಘೋಷಿಸಿರುವ ಕಾರಣ ಅವರನ್ನು ಯಾವುದಾದರೂ ಫ್ರಾಂಚೈಸಿ ಬ್ಯಾಕ್ ಅಪ್ ಬೌಲರ್ ಆಗಿ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆಯಿದೆ.

4 / 5
ಒಂದು ವೇಳೆ ಸೌರಭ್ ನೇತ್ರವಾಲ್ಕರ್ ಐಪಿಎಲ್ ಮೆಗಾ ಹರಾಜಿನ ಮೂಲಕ ಆಯ್ಕೆಯಾದರೆ ಹೊಸ ಇತಿಹಾಸ ಕೂಡ ನಿರ್ಮಾಣವಾಗಲಿದೆ. ಏಕೆಂದರೆ ಐಪಿಎಲ್ ಇತಿಹಾಸದಲ್ಲಿ  ಯುಎಸ್​ಎ ತಂಡದ ಯಾವುದೇ ಆಟಗಾರ ಹರಾಜಿನ ಮೂಲಕ ಆಯ್ಕೆಯಾಗಿಲ್ಲ. ಹೀಗಾಗಿ ನವೆಂಬರ್ 24 ಮತ್ತು 25 ರಂದು ನಡೆಯಲಿರುವ ಮೆಗಾ ಹರಾಜಿನ ಮೂಲಕ ಸೌರಭ್ ನೇತ್ರವಾಲ್ಕರ್ ಹೆಸರು ಇತಿಹಾಸ ಪುಟಕ್ಕೆ ಸೇರ್ಪಡೆಯಾಗಲಿದೆಯಾ ಕಾದು ನೋಡಬೇಕಿದೆ.

ಒಂದು ವೇಳೆ ಸೌರಭ್ ನೇತ್ರವಾಲ್ಕರ್ ಐಪಿಎಲ್ ಮೆಗಾ ಹರಾಜಿನ ಮೂಲಕ ಆಯ್ಕೆಯಾದರೆ ಹೊಸ ಇತಿಹಾಸ ಕೂಡ ನಿರ್ಮಾಣವಾಗಲಿದೆ. ಏಕೆಂದರೆ ಐಪಿಎಲ್ ಇತಿಹಾಸದಲ್ಲಿ ಯುಎಸ್​ಎ ತಂಡದ ಯಾವುದೇ ಆಟಗಾರ ಹರಾಜಿನ ಮೂಲಕ ಆಯ್ಕೆಯಾಗಿಲ್ಲ. ಹೀಗಾಗಿ ನವೆಂಬರ್ 24 ಮತ್ತು 25 ರಂದು ನಡೆಯಲಿರುವ ಮೆಗಾ ಹರಾಜಿನ ಮೂಲಕ ಸೌರಭ್ ನೇತ್ರವಾಲ್ಕರ್ ಹೆಸರು ಇತಿಹಾಸ ಪುಟಕ್ಕೆ ಸೇರ್ಪಡೆಯಾಗಲಿದೆಯಾ ಕಾದು ನೋಡಬೇಕಿದೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ