Virat Kohli: ವಿರಾಟ್ ಕೊಹ್ಲಿ ಹರಾಜಿನಲ್ಲಿ ಕಾಣಿಸಿಕೊಂಡರೆ 30 ಕೋಟಿ ರೂ. ಗ್ಯಾರಂಟಿ..!

Virat Kohli: ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಮಾತ್ರ ಕಣಕ್ಕಿಳಿದಿದ್ದಾರೆ. 2008 ರಲ್ಲಿ 12 ಲಕ್ಷ ರೂ. ಸಂಭಾವನೆಯೊಂದಿಗೆ ಶುರುವಾದ ಜರ್ನಿಯು ಇದೀಗ 15 ಕೋಟಿ ರೂ.ಗೆ ಬಂದು ನಿಂತಿದೆ. ಇನ್ನು ಈ ಬಾರಿಯ ಮೆಗಾ ಹರಾಜಿಗೂ ಮುನ್ನ 15 ಕೋಟಿ ರೂ.ಗೂ ಅಧಿಕ ಮೊತ್ತ ನೀಡಿ ವಿರಾಟ್ ಕೊಹ್ಲಿಯನ್ನು ಆರ್​ಸಿಬಿ ಉಳಿಸಿಕೊಳ್ಳಲಿದೆ.

|

Updated on: Aug 13, 2024 | 8:03 AM

ಐಪಿಎಲ್ (IPL 2025) ಮೆಗಾ ಹರಾಜಿನ ಸಿದ್ಧತೆಗಳು ಶುರುವಾಗಿದೆ. ಈ ಹರಾಜಿಗೆ ಬೇಕಾದ ರೂಪುರೇಷೆಗಳನ್ನು ಸಿದ್ಧಪಡಿಸುವಲ್ಲಿ ಐಪಿಎಲ್ ಆಡಳಿತ ಮಂಡಳಿ ನಿರತರಾಗಿದ್ದಾರೆ. ಇದರ ನಡುವೆ ಈ ಬಾರಿಯ ಹರಾಜಿಗೂ ಮುನ್ನ 6 ಆಟಗಾರರನ್ನು ಉಳಿಸಿಕೊಳ್ಳಲು ಫ್ರಾಂಚೈಸಿಗಳಿಗೆ ಅವಕಾಶ ನೀಡುವ ಸಾಧ್ಯತೆಯಿದೆ ಎಂಬ ಸುದ್ದಿಯೊಂದು ಹೊರಬಿದ್ದಿದೆ.

ಐಪಿಎಲ್ (IPL 2025) ಮೆಗಾ ಹರಾಜಿನ ಸಿದ್ಧತೆಗಳು ಶುರುವಾಗಿದೆ. ಈ ಹರಾಜಿಗೆ ಬೇಕಾದ ರೂಪುರೇಷೆಗಳನ್ನು ಸಿದ್ಧಪಡಿಸುವಲ್ಲಿ ಐಪಿಎಲ್ ಆಡಳಿತ ಮಂಡಳಿ ನಿರತರಾಗಿದ್ದಾರೆ. ಇದರ ನಡುವೆ ಈ ಬಾರಿಯ ಹರಾಜಿಗೂ ಮುನ್ನ 6 ಆಟಗಾರರನ್ನು ಉಳಿಸಿಕೊಳ್ಳಲು ಫ್ರಾಂಚೈಸಿಗಳಿಗೆ ಅವಕಾಶ ನೀಡುವ ಸಾಧ್ಯತೆಯಿದೆ ಎಂಬ ಸುದ್ದಿಯೊಂದು ಹೊರಬಿದ್ದಿದೆ.

1 / 6
ಹೀಗಾಗಿ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ಎಲ್ಲಾ ಫ್ರಾಂಚೈಸಿಗಳು ತಮ್ಮ ಸ್ಟಾರ್ ಆಟಗಾರರನ್ನು ಉಳಿಸಿಕೊಳ್ಳುವುದು ಖಚಿತ. ಒಂದು ವೇಳೆ ಕೆಲ ಪ್ರಮುಖ ಆಟಗಾರರು ಹರಾಜಿನಲ್ಲಿ ಕಾಣಿಸಿಕೊಂಡರೆ ಕೋಟಿ ಮೊತ್ತಕ್ಕೆ ಬಿಕರಿಯಾಗುವುದರಲ್ಲಿ ಅನುಮಾನವೇ ಇಲ್ಲ.

ಹೀಗಾಗಿ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ಎಲ್ಲಾ ಫ್ರಾಂಚೈಸಿಗಳು ತಮ್ಮ ಸ್ಟಾರ್ ಆಟಗಾರರನ್ನು ಉಳಿಸಿಕೊಳ್ಳುವುದು ಖಚಿತ. ಒಂದು ವೇಳೆ ಕೆಲ ಪ್ರಮುಖ ಆಟಗಾರರು ಹರಾಜಿನಲ್ಲಿ ಕಾಣಿಸಿಕೊಂಡರೆ ಕೋಟಿ ಮೊತ್ತಕ್ಕೆ ಬಿಕರಿಯಾಗುವುದರಲ್ಲಿ ಅನುಮಾನವೇ ಇಲ್ಲ.

2 / 6
ಅದರಲ್ಲೂ ಬ್ಯಾಟಿಂಗ್ ಮೆಸ್ಟ್ರೋ ವಿರಾಟ್ ಕೊಹ್ಲಿ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡರೆ 30 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಹರಾಜಾಗುವುದು ಖಚಿತ. ಹೀಗೆ ಅಂದಿದ್ದು ಮತ್ಯಾರೂ ಅಲ್ಲ, ಅನುಭವಿ ಹರಾಜುದಾರ ಹ್ಯೂ ಎಡ್ಮೀಡ್ಸ್. ಎಡ್ಮೀಡ್ಸ್ 2018 ರಿಂದ 2022 ರವರೆಗೆ ಐಪಿಎಲ್​​ನಲ್ಲಿ ಹರಾಜುದಾರನಾಗಿ ಕಾರ್ಯ ನಿರ್ವಹಿಸಿದ್ದರು. ಅಲ್ಲದೆ ವಿಶ್ವದಾದ್ಯಂತ ಅವರು 2,500 ಕ್ಕೂ ಹೆಚ್ಚು ಹರಾಜುಗಳನ್ನು ನಡೆಸಿದ್ದಾರೆ.

ಅದರಲ್ಲೂ ಬ್ಯಾಟಿಂಗ್ ಮೆಸ್ಟ್ರೋ ವಿರಾಟ್ ಕೊಹ್ಲಿ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡರೆ 30 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಹರಾಜಾಗುವುದು ಖಚಿತ. ಹೀಗೆ ಅಂದಿದ್ದು ಮತ್ಯಾರೂ ಅಲ್ಲ, ಅನುಭವಿ ಹರಾಜುದಾರ ಹ್ಯೂ ಎಡ್ಮೀಡ್ಸ್. ಎಡ್ಮೀಡ್ಸ್ 2018 ರಿಂದ 2022 ರವರೆಗೆ ಐಪಿಎಲ್​​ನಲ್ಲಿ ಹರಾಜುದಾರನಾಗಿ ಕಾರ್ಯ ನಿರ್ವಹಿಸಿದ್ದರು. ಅಲ್ಲದೆ ವಿಶ್ವದಾದ್ಯಂತ ಅವರು 2,500 ಕ್ಕೂ ಹೆಚ್ಚು ಹರಾಜುಗಳನ್ನು ನಡೆಸಿದ್ದಾರೆ.

3 / 6
ಹೀಗೆ ಹಲವು ಹರಾಜುಗಳಲ್ಲಿ ಪಾಲ್ಗೊಂಡಿರುವ ಹ್ಯೂ ಎಡ್ಮೀಡ್ಸ್ ಅವರ ಪ್ರಕಾರ, ಐಪಿಎಲ್​ನ ಸ್ಟಾರ್ ಎಂದರೆ ವಿರಾಟ್ ಕೊಹ್ಲಿ. ಅವರೇನಾದರೂ ಹರಾಜಿನ ಭಾಗವಾದರೆ 30 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಬಿಕರಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ. ಈ ಮೂಲಕ ಕಿಂಗ್ ಕೊಹ್ಲಿ ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ಮೊತ್ತ ಪಡೆದ ಆಟಗಾರ ಎನಿಸಿಕೊಳ್ಳಲಿದ್ದಾರೆ ಎಂದು ಎಡ್ಮೀಡ್ಸ್ ಅಭಿಪ್ರಾಯಪಟ್ಟಿದ್ದಾರೆ.

ಹೀಗೆ ಹಲವು ಹರಾಜುಗಳಲ್ಲಿ ಪಾಲ್ಗೊಂಡಿರುವ ಹ್ಯೂ ಎಡ್ಮೀಡ್ಸ್ ಅವರ ಪ್ರಕಾರ, ಐಪಿಎಲ್​ನ ಸ್ಟಾರ್ ಎಂದರೆ ವಿರಾಟ್ ಕೊಹ್ಲಿ. ಅವರೇನಾದರೂ ಹರಾಜಿನ ಭಾಗವಾದರೆ 30 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಬಿಕರಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ. ಈ ಮೂಲಕ ಕಿಂಗ್ ಕೊಹ್ಲಿ ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ಮೊತ್ತ ಪಡೆದ ಆಟಗಾರ ಎನಿಸಿಕೊಳ್ಳಲಿದ್ದಾರೆ ಎಂದು ಎಡ್ಮೀಡ್ಸ್ ಅಭಿಪ್ರಾಯಪಟ್ಟಿದ್ದಾರೆ.

4 / 6
ಆದರೆ 2008 ರಲ್ಲಿ 12 ಲಕ್ಷ ರೂ.ಗೆ ಆರ್​ಸಿಬಿ ತಂಡಕ್ಕೆ ಎಂಟ್ರಿ ಕೊಟ್ಟ ವಿರಾಟ್ ಕೊಹ್ಲಿ ಆ ಬಳಿಕ ಯಾವತ್ತೂ ಹರಾಜಿನಲ್ಲಿ ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ. ಅಲ್ಲದೆ ಐಪಿಎಲ್ ಇತಿಹಾಸದಲ್ಲಿ ಒಂದೇ ತಂಡದ ಪರ ಅತೀ ವರ್ಷ ಆಡಿದ ಆಟಗಾರ ಎಂಬ ದಾಖಲೆ ಕೂಡ ಕಿಂಗ್ ಕೊಹ್ಲಿ ಹೆಸರಿನಲ್ಲಿದೆ.

ಆದರೆ 2008 ರಲ್ಲಿ 12 ಲಕ್ಷ ರೂ.ಗೆ ಆರ್​ಸಿಬಿ ತಂಡಕ್ಕೆ ಎಂಟ್ರಿ ಕೊಟ್ಟ ವಿರಾಟ್ ಕೊಹ್ಲಿ ಆ ಬಳಿಕ ಯಾವತ್ತೂ ಹರಾಜಿನಲ್ಲಿ ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ. ಅಲ್ಲದೆ ಐಪಿಎಲ್ ಇತಿಹಾಸದಲ್ಲಿ ಒಂದೇ ತಂಡದ ಪರ ಅತೀ ವರ್ಷ ಆಡಿದ ಆಟಗಾರ ಎಂಬ ದಾಖಲೆ ಕೂಡ ಕಿಂಗ್ ಕೊಹ್ಲಿ ಹೆಸರಿನಲ್ಲಿದೆ.

5 / 6
ಇನ್ನು ಈ ಬಾರಿ ಐಪಿಎಲ್​ನಲ್ಲಿ ಮೆಗಾ ಹರಾಜು ನಡೆಯಲಿದ್ದು, ಅದಕ್ಕೂ ಮುನ್ನ ಆರ್​ಸಿಬಿ ವಿರಾಟ್ ಕೊಹ್ಲಿಯನ್ನು ರಿಟೈನ್ ಮಾಡಿಕೊಳ್ಳುವುದರಲ್ಲಿ ಅನುಮಾನವೇ ಇಲ್ಲ. ಹೀಗಾಗಿ ಈ ಬಾರಿ ಸಹ ಕಿಂಗ್ ಕೊಹ್ಲಿಯನ್ನು ಹರಾಜಿನಲ್ಲಿ ನಿರೀಕ್ಷಿಸುವಂತಿಲ್ಲ.

ಇನ್ನು ಈ ಬಾರಿ ಐಪಿಎಲ್​ನಲ್ಲಿ ಮೆಗಾ ಹರಾಜು ನಡೆಯಲಿದ್ದು, ಅದಕ್ಕೂ ಮುನ್ನ ಆರ್​ಸಿಬಿ ವಿರಾಟ್ ಕೊಹ್ಲಿಯನ್ನು ರಿಟೈನ್ ಮಾಡಿಕೊಳ್ಳುವುದರಲ್ಲಿ ಅನುಮಾನವೇ ಇಲ್ಲ. ಹೀಗಾಗಿ ಈ ಬಾರಿ ಸಹ ಕಿಂಗ್ ಕೊಹ್ಲಿಯನ್ನು ಹರಾಜಿನಲ್ಲಿ ನಿರೀಕ್ಷಿಸುವಂತಿಲ್ಲ.

6 / 6
Follow us
ಮುಡಾ ಆರೋಪಿ ಸಿದ್ದರಾಮಯ್ಯ ಪ್ರಚೋದನಾಕಾರಿ ಭಾಷಣ ಮಾಡುತ್ತಿದ್ದಾರೆ: ಕೃಷ್ಣ
ಮುಡಾ ಆರೋಪಿ ಸಿದ್ದರಾಮಯ್ಯ ಪ್ರಚೋದನಾಕಾರಿ ಭಾಷಣ ಮಾಡುತ್ತಿದ್ದಾರೆ: ಕೃಷ್ಣ
ಮಧ್ಯಾಹ್ನವಾದರೂ ತುಮಕೂರು-ಶಿರಾ ಹೆದ್ದಾರಿಯಲ್ಲಿ ಕ್ಲಿಯರ್​ ಆಗದ ಟ್ರಾಫಿಕ್​​​
ಮಧ್ಯಾಹ್ನವಾದರೂ ತುಮಕೂರು-ಶಿರಾ ಹೆದ್ದಾರಿಯಲ್ಲಿ ಕ್ಲಿಯರ್​ ಆಗದ ಟ್ರಾಫಿಕ್​​​
ಸಂಡೂರು ಅಭ್ಯರ್ಥಿ ಆಯ್ಕೆ ಜಮೀರ್ ಅಹ್ಮದ್ ನೀಡುವ ಸಲಹೆ ಅಂತಿಮವಾಗುವ ಸಾಧ್ಯತೆ
ಸಂಡೂರು ಅಭ್ಯರ್ಥಿ ಆಯ್ಕೆ ಜಮೀರ್ ಅಹ್ಮದ್ ನೀಡುವ ಸಲಹೆ ಅಂತಿಮವಾಗುವ ಸಾಧ್ಯತೆ
ಸಿಎಂರನ್ನೂ ವಿಚಾರಣೆಗೆ ಒಳಪಡಿಸಿ: ಲೋಕಾಯುಕ್ತಕ್ಕೆ ಸ್ನೇಹಮಯಿ ಕೃಷ್ಣ ಮನವಿ
ಸಿಎಂರನ್ನೂ ವಿಚಾರಣೆಗೆ ಒಳಪಡಿಸಿ: ಲೋಕಾಯುಕ್ತಕ್ಕೆ ಸ್ನೇಹಮಯಿ ಕೃಷ್ಣ ಮನವಿ
ಮಳೆಯಿರಲಿ ಅಥವಾ ಬಿಸಿಲು; ಪ್ರೀ-ವೆಡ್ಡಿಂಗ್ ಶೂಟ್ ಮಾತ್ರ ಆಗಲೇಬೇಕು!
ಮಳೆಯಿರಲಿ ಅಥವಾ ಬಿಸಿಲು; ಪ್ರೀ-ವೆಡ್ಡಿಂಗ್ ಶೂಟ್ ಮಾತ್ರ ಆಗಲೇಬೇಕು!
ಮಳೆಗೆ ಲಕ್ಷದ್ವೀಪದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಕಾರಣವೇ?
ಮಳೆಗೆ ಲಕ್ಷದ್ವೀಪದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಕಾರಣವೇ?
ಮೈಸೂರು: ಮಹಿಳಾ ಪೊಲೀಸ್​ಗೆ ಮಡಿಲು ತುಂಬಿ ಸೀಮಂತ ಮಾಡಿದ ಪೊಲೀಸ್ ಸಿಬ್ಬಂದಿ
ಮೈಸೂರು: ಮಹಿಳಾ ಪೊಲೀಸ್​ಗೆ ಮಡಿಲು ತುಂಬಿ ಸೀಮಂತ ಮಾಡಿದ ಪೊಲೀಸ್ ಸಿಬ್ಬಂದಿ
ಸ್ಪರ್ಧಿಗಳ ವರ್ತನೆಗೆ, ಉಡಾಫೆತನಕ್ಕೆ ಬೇಸತ್ತ ಬಿಗ್ ಬಾಸ್
ಸ್ಪರ್ಧಿಗಳ ವರ್ತನೆಗೆ, ಉಡಾಫೆತನಕ್ಕೆ ಬೇಸತ್ತ ಬಿಗ್ ಬಾಸ್
ಅಯೋಧ್ಯೆ ಬಾಲರಾಮನ ದರ್ಶನಕ್ಕೆ ಸೈಕಲ್ ಏರಿ ಹೊರಟ ಕೋಲಾರ ಯುವಕರು
ಅಯೋಧ್ಯೆ ಬಾಲರಾಮನ ದರ್ಶನಕ್ಕೆ ಸೈಕಲ್ ಏರಿ ಹೊರಟ ಕೋಲಾರ ಯುವಕರು
ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಲ್ಲಿ ಪ್ಯಾರಾಗ್ಲೈಡಿಂಗ್ ಆರಂಭ
ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಲ್ಲಿ ಪ್ಯಾರಾಗ್ಲೈಡಿಂಗ್ ಆರಂಭ