IPL 2025: ಪಾಪ… ಈ ಸಲವಾದರೂ ವಿರಾಟ್ ಕೊಹ್ಲಿ ಕಪ್ ಗೆಲ್ಲಲಿ ಎಂದ RCB ಮಾಜಿ ಆಟಗಾರ

IPL 2025: 2013 ಮತ್ತು 2021 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಒಟ್ಟು 11 ಪಂದ್ಯಗಳನ್ನಾಡಿರುವ ಡೇನಿಯಲ್ ಕ್ರಿಶ್ಚಿಯನ್ ಕೇವಲ 20 ರನ್ ಮಾತ್ರ ಕಲೆಹಾಕಿದ್ದಾರೆ. ಅಲ್ಲದೆ ಈ ಪಂದ್ಯಗಳಲ್ಲಿ 136 ಎಸೆತಗಳನ್ನು ಎಸೆದಿರುವ ಅವರು ಪಡೆದಿದ್ದು ಕೇವಲ 4 ವಿಕೆಟ್ ಮಾತ್ರ.

|

Updated on: Oct 08, 2024 | 8:53 AM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18ರ ಆರಂಭಕ್ಕೆ ಸಿದ್ಧತೆಗಳು ಶುರುವಾಗಿದೆ. ಅದರ ಮೊದಲ ಹೆಜ್ಜೆಯಾಗಿ ಇದೀಗ ಐಪಿಎಲ್ ಮೆಗಾ ಹರಾಜಿಗಾಗಿ ರಿಟೆನ್ಷನ್ ನಿಯಮಗಳನ್ನು ಪ್ರಕಟಿಸಲಾಗಿದೆ. ಇನ್ನು ಅಕ್ಟೋಬರ್ 31 ರೊಳಗೆ ಎಲ್ಲಾ ತಂಡಗಳು ರಿಟೈನ್ ಆಟಗಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಇದಾದ ಬಳಿಕ ಮೆಗಾ ಆಕ್ಷನ್ ನಡೆಯಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18ರ ಆರಂಭಕ್ಕೆ ಸಿದ್ಧತೆಗಳು ಶುರುವಾಗಿದೆ. ಅದರ ಮೊದಲ ಹೆಜ್ಜೆಯಾಗಿ ಇದೀಗ ಐಪಿಎಲ್ ಮೆಗಾ ಹರಾಜಿಗಾಗಿ ರಿಟೆನ್ಷನ್ ನಿಯಮಗಳನ್ನು ಪ್ರಕಟಿಸಲಾಗಿದೆ. ಇನ್ನು ಅಕ್ಟೋಬರ್ 31 ರೊಳಗೆ ಎಲ್ಲಾ ತಂಡಗಳು ರಿಟೈನ್ ಆಟಗಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಇದಾದ ಬಳಿಕ ಮೆಗಾ ಆಕ್ಷನ್ ನಡೆಯಲಿದೆ.

1 / 5
ಈ ಮೆಗಾ ಆಕ್ಷನ್​ನೊಂದಿಗೆ ಪ್ರತಿ ತಂಡಗಳು ಬದಲಾಗಲಿದೆ. ಅದರಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಹೊಸ ತಂಡ ಕಟ್ಟುವ ಇರಾದೆಯಲ್ಲಿದೆ. ಇಲ್ಲಿ ಆರ್​ಸಿಬಿ ಹೊಸ ಪಡೆಯನ್ನು ರೂಪಿಸಿದರೂ ತಂಡದಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳುವುದು ಖಚಿತ. ಹೀಗಾಗಿ ಆರ್​ಸಿಬಿ ಟ್ರೋಫಿ ಗೆದ್ದರೆ ಅದು ಕಿಂಗ್ ಕೊಹ್ಲಿಯ ಮೊದಲ ಐಪಿಎಲ್ ಕಿರೀಟವಾಗಿರಲಿದೆ.

ಈ ಮೆಗಾ ಆಕ್ಷನ್​ನೊಂದಿಗೆ ಪ್ರತಿ ತಂಡಗಳು ಬದಲಾಗಲಿದೆ. ಅದರಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಹೊಸ ತಂಡ ಕಟ್ಟುವ ಇರಾದೆಯಲ್ಲಿದೆ. ಇಲ್ಲಿ ಆರ್​ಸಿಬಿ ಹೊಸ ಪಡೆಯನ್ನು ರೂಪಿಸಿದರೂ ತಂಡದಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳುವುದು ಖಚಿತ. ಹೀಗಾಗಿ ಆರ್​ಸಿಬಿ ಟ್ರೋಫಿ ಗೆದ್ದರೆ ಅದು ಕಿಂಗ್ ಕೊಹ್ಲಿಯ ಮೊದಲ ಐಪಿಎಲ್ ಕಿರೀಟವಾಗಿರಲಿದೆ.

2 / 5
ಅಂತಹದೊಂದು ಅಪೂರ್ಣ ಕ್ಷಣಗಳನ್ನು ಎದುರು ನೋಡುತ್ತಿದ್ದಾರೆ ಆರ್​ಸಿಬಿ ತಂಡದ ಮಾಜಿ ಆಟಗಾರ ಡೇನಿಯಲ್ ಕ್ರಿಶ್ಚಿಯನ್. ಈ ಹಿಂದೆ ಆರ್​ಸಿಬಿ ಪರ ಕಣಕ್ಕಿಳಿದಿದ್ದ ಆಸ್ಟ್ರೇಲಿಯಾ ಆಟಗಾರ, ವಿರಾಟ್ ಕೊಹ್ಲಿ ಈ ಬಾರಿಯಾದರೂ ಕಪ್ ಎತ್ತಿ ಹಿಡಿಯಲಿ ಎಂದು ಆಶಿಸಿದ್ದಾರೆ. ಅಲ್ಲದೆ ಐಪಿಎಲ್ ಟ್ರೋಫಿ ಗೆಲ್ಲಲು ಕೊಹ್ಲಿ ಅರ್ಹರು ಎಂದು ತಿಳಿಸಿದ್ದಾರೆ.

ಅಂತಹದೊಂದು ಅಪೂರ್ಣ ಕ್ಷಣಗಳನ್ನು ಎದುರು ನೋಡುತ್ತಿದ್ದಾರೆ ಆರ್​ಸಿಬಿ ತಂಡದ ಮಾಜಿ ಆಟಗಾರ ಡೇನಿಯಲ್ ಕ್ರಿಶ್ಚಿಯನ್. ಈ ಹಿಂದೆ ಆರ್​ಸಿಬಿ ಪರ ಕಣಕ್ಕಿಳಿದಿದ್ದ ಆಸ್ಟ್ರೇಲಿಯಾ ಆಟಗಾರ, ವಿರಾಟ್ ಕೊಹ್ಲಿ ಈ ಬಾರಿಯಾದರೂ ಕಪ್ ಎತ್ತಿ ಹಿಡಿಯಲಿ ಎಂದು ಆಶಿಸಿದ್ದಾರೆ. ಅಲ್ಲದೆ ಐಪಿಎಲ್ ಟ್ರೋಫಿ ಗೆಲ್ಲಲು ಕೊಹ್ಲಿ ಅರ್ಹರು ಎಂದು ತಿಳಿಸಿದ್ದಾರೆ.

3 / 5
ಖಾಸಗಿ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಡೇನಿಯಲ್ ಕ್ರಿಶ್ಚಿಯನ್, ಪ್ರತಿ ಸೀಸನ್​ನಲ್ಲೂ ವಿರಾಟ್ ಕೊಹ್ಲಿ ತಂಡಕ್ಕಾಗಿ ತಮ್ಮನ್ನು ಸಮರ್ಪಿಸಿಕೊಳ್ಳುತ್ತಾರೆ. ಆದರೆ ದುರಾದೃಷ್ಟವಶಾತ್ ಆರ್​ಸಿಬಿಗೆ ಫೈನಲ್ ಗೆಲ್ಲಲು ಸಾಧ್ಯವಾಗಿಲ್ಲ. ಒಂದಾರ್ಥದಲ್ಲಿ ಐಪಿಎಲ್ ಟ್ರೋಫಿ ಗೆಲ್ಲಲು ಖಂಡಿತವಾಗಿಯೂ ವಿರಾಟ್ ಕೊಹ್ಲಿ ಅರ್ಹರು. ಪಾಪ.. ಆ ಅದೃಷ್ಟ ಅವರಿಗೆ ಒಲಿದಿಲ್ಲ ಎಂದು ಆಸೀಸ್ ಆಟಗಾರ ಹೇಳಿದ್ದಾರೆ.

ಖಾಸಗಿ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಡೇನಿಯಲ್ ಕ್ರಿಶ್ಚಿಯನ್, ಪ್ರತಿ ಸೀಸನ್​ನಲ್ಲೂ ವಿರಾಟ್ ಕೊಹ್ಲಿ ತಂಡಕ್ಕಾಗಿ ತಮ್ಮನ್ನು ಸಮರ್ಪಿಸಿಕೊಳ್ಳುತ್ತಾರೆ. ಆದರೆ ದುರಾದೃಷ್ಟವಶಾತ್ ಆರ್​ಸಿಬಿಗೆ ಫೈನಲ್ ಗೆಲ್ಲಲು ಸಾಧ್ಯವಾಗಿಲ್ಲ. ಒಂದಾರ್ಥದಲ್ಲಿ ಐಪಿಎಲ್ ಟ್ರೋಫಿ ಗೆಲ್ಲಲು ಖಂಡಿತವಾಗಿಯೂ ವಿರಾಟ್ ಕೊಹ್ಲಿ ಅರ್ಹರು. ಪಾಪ.. ಆ ಅದೃಷ್ಟ ಅವರಿಗೆ ಒಲಿದಿಲ್ಲ ಎಂದು ಆಸೀಸ್ ಆಟಗಾರ ಹೇಳಿದ್ದಾರೆ.

4 / 5
ವಿರಾಟ್ ಕೊಹ್ಲಿ ಅದ್ಭುತ ವೃತ್ತಿಜೀವನವನ್ನು ಹೊಂದಿದ್ದಾರೆ. ಅಲ್ಲದೆ ಅತ್ಯಂತ ಯಶಸ್ವಿ ಆಟಗಾರ. ಭಾರತಕ್ಕಾಗಿ ಹಲವು ಟ್ರೋಫಿಗಳನ್ನು ಗೆದ್ದಿದ್ದಾರೆ. ಹೀಗಾಗಿ ಈ ಸಲ ಆರ್​ಸಿಬಿ ಟ್ರೋಫಿ ಎತ್ತಿ ಹಿಡಿಯುವ ಮೂಲಕ ವಿರಾಟ್ ಕೊಹ್ಲಿಯ ಬಹುಕಾಲದ ಕನಸು ನನಸಾಗಲಿ ಎಂದು ಡೇನಿಯಲ್ ಕ್ರಿಶ್ಚಿಯನ್ ಹೇಳಿದ್ದಾರೆ. ಆರ್​ಸಿಬಿ ತಂಡದ ಮಾಜಿ ಆಟಗಾರನ ಹೇಳಿಕೆಯಂತೆ ಈ ಸಲ ಕಪ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಾಗಲಿದೆಯಾ ಕಾದು ನೋಡಬೇಕಿದೆ.

ವಿರಾಟ್ ಕೊಹ್ಲಿ ಅದ್ಭುತ ವೃತ್ತಿಜೀವನವನ್ನು ಹೊಂದಿದ್ದಾರೆ. ಅಲ್ಲದೆ ಅತ್ಯಂತ ಯಶಸ್ವಿ ಆಟಗಾರ. ಭಾರತಕ್ಕಾಗಿ ಹಲವು ಟ್ರೋಫಿಗಳನ್ನು ಗೆದ್ದಿದ್ದಾರೆ. ಹೀಗಾಗಿ ಈ ಸಲ ಆರ್​ಸಿಬಿ ಟ್ರೋಫಿ ಎತ್ತಿ ಹಿಡಿಯುವ ಮೂಲಕ ವಿರಾಟ್ ಕೊಹ್ಲಿಯ ಬಹುಕಾಲದ ಕನಸು ನನಸಾಗಲಿ ಎಂದು ಡೇನಿಯಲ್ ಕ್ರಿಶ್ಚಿಯನ್ ಹೇಳಿದ್ದಾರೆ. ಆರ್​ಸಿಬಿ ತಂಡದ ಮಾಜಿ ಆಟಗಾರನ ಹೇಳಿಕೆಯಂತೆ ಈ ಸಲ ಕಪ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಾಗಲಿದೆಯಾ ಕಾದು ನೋಡಬೇಕಿದೆ.

5 / 5
Follow us
ನವರಾತ್ರಿ 6ನೇ ದಿನ ಕಾತ್ಯಾಯಿನಿ ದೇವಿ ಆರಾಧನೆ ಮಹತ್ವ ತಿಳಿಯಿರಿ
ನವರಾತ್ರಿ 6ನೇ ದಿನ ಕಾತ್ಯಾಯಿನಿ ದೇವಿ ಆರಾಧನೆ ಮಹತ್ವ ತಿಳಿಯಿರಿ
ಈ ರಾಶಿಯವರು ಸರ್ಕಾರಿ ಉದ್ಯೋಗದಲ್ಲಿ ಹೆಚ್ಚಿನ‌ ಪ್ರಗತಿ ಕಾಣಲಿದ್ದಾರೆ
ಈ ರಾಶಿಯವರು ಸರ್ಕಾರಿ ಉದ್ಯೋಗದಲ್ಲಿ ಹೆಚ್ಚಿನ‌ ಪ್ರಗತಿ ಕಾಣಲಿದ್ದಾರೆ
45 ಲಕ್ಷ ರೂ. ನೋಟುಗಳಿಂದ ದುರ್ಗಾದೇವಿಗೆ ಅಲಂಕಾರ! ಬೆರಗಾದ ಭಕ್ತರು
45 ಲಕ್ಷ ರೂ. ನೋಟುಗಳಿಂದ ದುರ್ಗಾದೇವಿಗೆ ಅಲಂಕಾರ! ಬೆರಗಾದ ಭಕ್ತರು
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ