Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ತಂಡಕ್ಕೆ ವಿರಾಟ್ ಕೊಹ್ಲಿ ಕ್ಯಾಪ್ಟನ್..?

IPL 2025: RCB ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ವಿರಾಟ್ ಕೊಹ್ಲಿ ಮತ್ತೆ ಕ್ಯಾಪ್ಟನ್ ಪಟ್ಟಕ್ಕೇರುವ ಸಾಧ್ಯತೆಯಿದೆ. ಏಕೆಂದರೆ ಐಪಿಎಲ್ 2025 ಕ್ಕಾಗಿ ಮೆಗಾ ಹರಾಜು ನಡೆಯಲಿದ್ದು, ಇದಕ್ಕೂ ಮುನ್ನ ಕೆಲವೇ ಆಟಗಾರರನ್ನು ಮಾತ್ರ ಆರ್​ಸಿಬಿ ಉಳಿಸಿಕೊಳ್ಳಬಹುದು. ಈ ವೇಳೆ 39 ವರ್ಷದ ಫಾಫ್ ಡುಪ್ಲೆಸಿಸ್​ ಅವರನ್ನು ಆರ್​ಸಿಬಿ ರಿಟೈನ್ ಮಾಡಿಕೊಳ್ಳುವ ಸಾಧ್ಯತೆಯಿಲ್ಲ.

ಝಾಹಿರ್ ಯೂಸುಫ್
|

Updated on:Jul 02, 2024 | 1:10 PM

IPL 2025: ಕಳೆದ 17 ಸೀಸನ್​ಗಳಿಂದ ಚಾಂಪಿಯನ್ ಪಟ್ಟ ಅಲಂಕರಿಸುವ ರಾಯಲ್ ಚಾಲೆಂಜರ್ಸ್​ ಬೆಂಗಳೂರು (RCB) ತಂಡದ ಕನಸು ಮುಂದುವರೆದಿದೆ. ಪ್ರತಿ ಬಾರಿ ಈ ಸಲ ಕಪ್ ನಮ್ದೆ ಎಂಬ ಘೋಷವಾಕ್ಯದೊಂದಿಗೆ ಅಭಿಯಾನ ಆರಂಭಿಸುವ ಆರ್​ಸಿಬಿ ಫೈನಲ್​ ಪ್ರವೇಶಿಸದೇ 8 ವರ್ಷಗಳೇ ಕಳೆದಿವೆ.

IPL 2025: ಕಳೆದ 17 ಸೀಸನ್​ಗಳಿಂದ ಚಾಂಪಿಯನ್ ಪಟ್ಟ ಅಲಂಕರಿಸುವ ರಾಯಲ್ ಚಾಲೆಂಜರ್ಸ್​ ಬೆಂಗಳೂರು (RCB) ತಂಡದ ಕನಸು ಮುಂದುವರೆದಿದೆ. ಪ್ರತಿ ಬಾರಿ ಈ ಸಲ ಕಪ್ ನಮ್ದೆ ಎಂಬ ಘೋಷವಾಕ್ಯದೊಂದಿಗೆ ಅಭಿಯಾನ ಆರಂಭಿಸುವ ಆರ್​ಸಿಬಿ ಫೈನಲ್​ ಪ್ರವೇಶಿಸದೇ 8 ವರ್ಷಗಳೇ ಕಳೆದಿವೆ.

1 / 6
ಅದರಲ್ಲೂ ಕಳೆದ ಸೀಸನ್​ನಲ್ಲಿ ಆರ್​ಸಿಬಿ 14 ಪಂದ್ಯಗಳಲ್ಲಿ ಗೆದ್ದಿದ್ದು ಕೇವಲ 7 ಮ್ಯಾಚ್ ಮಾತ್ರ. ಹೀಗಾಗಿ ಮುಂದಿನ ಸೀಸನ್​ನಲ್ಲಿ ಆರ್​ಸಿಬಿ ತಂಡದ ನಾಯಕತ್ವ ಬದಲಾಗುವುದು ಬಹುತೇಕ ಖಚಿತ ಎನ್ನಬಹುದು. ಏಕೆಂದರೆ ಆರ್​ಸಿಬಿ ತಂಡದ ಪ್ರಸ್ತುತ ನಾಯಕ ಫಾಫ್ ಡುಪ್ಲೆಸಿಸ್​ಗೆ ಈಗ 39 ವರ್ಷ. ಹೀಗಾಗಿ ಮುಂದಿನ ಸೀಸನ್​ನಲ್ಲಿ ಆರ್​ಸಿಬಿ ಪರ ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ.

ಅದರಲ್ಲೂ ಕಳೆದ ಸೀಸನ್​ನಲ್ಲಿ ಆರ್​ಸಿಬಿ 14 ಪಂದ್ಯಗಳಲ್ಲಿ ಗೆದ್ದಿದ್ದು ಕೇವಲ 7 ಮ್ಯಾಚ್ ಮಾತ್ರ. ಹೀಗಾಗಿ ಮುಂದಿನ ಸೀಸನ್​ನಲ್ಲಿ ಆರ್​ಸಿಬಿ ತಂಡದ ನಾಯಕತ್ವ ಬದಲಾಗುವುದು ಬಹುತೇಕ ಖಚಿತ ಎನ್ನಬಹುದು. ಏಕೆಂದರೆ ಆರ್​ಸಿಬಿ ತಂಡದ ಪ್ರಸ್ತುತ ನಾಯಕ ಫಾಫ್ ಡುಪ್ಲೆಸಿಸ್​ಗೆ ಈಗ 39 ವರ್ಷ. ಹೀಗಾಗಿ ಮುಂದಿನ ಸೀಸನ್​ನಲ್ಲಿ ಆರ್​ಸಿಬಿ ಪರ ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ.

2 / 6
ಇತ್ತ ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳುತ್ತಿದ್ದಂತೆ ಮತ್ತೆ ನಾಯಕತ್ವದ ಚರ್ಚೆಗಳು ಶುರುವಾಗಿತ್ತು. ಏಕೆಂದರೆ ಈ ಹಿಂದೆ ಟೀಮ್ ಇಂಡಿಯಾ ನಾಯಕತ್ವದ ಹೊರೆಯ ಕಾರಣ ವಿರಾಟ್ ಕೊಹ್ಲಿ ಆರ್​ಸಿಬಿ ತಂಡದ ಕ್ಯಾಪ್ಟನ್ಸಿಗೆ ರಾಜೀನಾಮೆ ನೀಡಿದ್ದರು. ಅಂದರೆ ಭಾರತ ತಂಡವನ್ನು ಹಾಗೂ ಆರ್​ಸಿಬಿಯನ್ನು ಮುನ್ನಡೆಸುತ್ತಿರುವುದು ಹೊರೆಯಾಗುತ್ತಿದೆ. ಹೀಗಾಗಿ ಲೀಗ್ ಕ್ರಿಕೆಟ್​ನ ನಾಯಕತ್ವನ ಜವಾಬ್ದಾರಿಯಿಂದ ಕೆಳಗಿಳಿಯುತ್ತಿರುವುದಾಗಿ ಕೊಹ್ಲಿ ತಿಳಿಸಿದ್ದರು.

ಇತ್ತ ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳುತ್ತಿದ್ದಂತೆ ಮತ್ತೆ ನಾಯಕತ್ವದ ಚರ್ಚೆಗಳು ಶುರುವಾಗಿತ್ತು. ಏಕೆಂದರೆ ಈ ಹಿಂದೆ ಟೀಮ್ ಇಂಡಿಯಾ ನಾಯಕತ್ವದ ಹೊರೆಯ ಕಾರಣ ವಿರಾಟ್ ಕೊಹ್ಲಿ ಆರ್​ಸಿಬಿ ತಂಡದ ಕ್ಯಾಪ್ಟನ್ಸಿಗೆ ರಾಜೀನಾಮೆ ನೀಡಿದ್ದರು. ಅಂದರೆ ಭಾರತ ತಂಡವನ್ನು ಹಾಗೂ ಆರ್​ಸಿಬಿಯನ್ನು ಮುನ್ನಡೆಸುತ್ತಿರುವುದು ಹೊರೆಯಾಗುತ್ತಿದೆ. ಹೀಗಾಗಿ ಲೀಗ್ ಕ್ರಿಕೆಟ್​ನ ನಾಯಕತ್ವನ ಜವಾಬ್ದಾರಿಯಿಂದ ಕೆಳಗಿಳಿಯುತ್ತಿರುವುದಾಗಿ ಕೊಹ್ಲಿ ತಿಳಿಸಿದ್ದರು.

3 / 6
RCB ತಂಡವನ್ನು 143 ಪಂದ್ಯಗಳಲ್ಲಿ ಮುನ್ನಡೆಸಿರುವ ವಿರಾಟ್ ಕೊಹ್ಲಿ 66 ಪಂದ್ಯಗಳಲ್ಲಿ ಜಯ ತಂದುಕೊಟ್ಟಿದ್ದಾರೆ. ಅಲ್ಲದೆ ಕಿಂಗ್ ಕೊಹ್ಲಿ ನಾಯಕತ್ವದಲ್ಲೇ ಆರ್​ಸಿಬಿ 2016 ರಲ್ಲಿ ಫೈನಲ್​ಗೆ ಪ್ರವೇಶಿಸಿದರೆ, 3 ಬಾರಿ ಪ್ಲೇಆಫ್ಸ್ ಆಡಿತ್ತು. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಕಿಂಗ್ ಕೊಹ್ಲಿಗೆ ಮತ್ತೆ ನಾಯಕನ ಪಟ್ಟ ನೀಡುವ ಸಾಧ್ಯತೆಯಿದೆ.

RCB ತಂಡವನ್ನು 143 ಪಂದ್ಯಗಳಲ್ಲಿ ಮುನ್ನಡೆಸಿರುವ ವಿರಾಟ್ ಕೊಹ್ಲಿ 66 ಪಂದ್ಯಗಳಲ್ಲಿ ಜಯ ತಂದುಕೊಟ್ಟಿದ್ದಾರೆ. ಅಲ್ಲದೆ ಕಿಂಗ್ ಕೊಹ್ಲಿ ನಾಯಕತ್ವದಲ್ಲೇ ಆರ್​ಸಿಬಿ 2016 ರಲ್ಲಿ ಫೈನಲ್​ಗೆ ಪ್ರವೇಶಿಸಿದರೆ, 3 ಬಾರಿ ಪ್ಲೇಆಫ್ಸ್ ಆಡಿತ್ತು. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಕಿಂಗ್ ಕೊಹ್ಲಿಗೆ ಮತ್ತೆ ನಾಯಕನ ಪಟ್ಟ ನೀಡುವ ಸಾಧ್ಯತೆಯಿದೆ.

4 / 6
ಹೀಗಾಗಿ ವಿರಾಟ್ ಕೊಹ್ಲಿ ಮತ್ತೆ ಆರ್​ಸಿಬಿ ತಂಡದ ಚುಕ್ಕಾಣಿ ಹಿಡಿಯಲಿದ್ದಾರೆ ಎನ್ನಲಾಗುತ್ತಿದೆ. ಅದರಂತೆ ಐಪಿಎಲ್ 2025 ರಿಂದ ಕಿಂಗ್ ಕೊಹ್ಲಿ ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಕ್ರಿಕ್​ಇನ್​ಫೋ ಮೂಲಗಳು ತಿಳಿಸಿವೆ.

ಹೀಗಾಗಿ ವಿರಾಟ್ ಕೊಹ್ಲಿ ಮತ್ತೆ ಆರ್​ಸಿಬಿ ತಂಡದ ಚುಕ್ಕಾಣಿ ಹಿಡಿಯಲಿದ್ದಾರೆ ಎನ್ನಲಾಗುತ್ತಿದೆ. ಅದರಂತೆ ಐಪಿಎಲ್ 2025 ರಿಂದ ಕಿಂಗ್ ಕೊಹ್ಲಿ ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಕ್ರಿಕ್​ಇನ್​ಫೋ ಮೂಲಗಳು ತಿಳಿಸಿವೆ.

5 / 6
ಈಗಾಗಲೇ ವಿರಾಟ್ ಕೊಹ್ಲಿ ಆರ್​ಸಿಬಿ ಫ್ರಾಂಚೈಸಿ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಇದೇ ವೇಳೆ ನಾಯಕತ್ವ ವಹಿಸಿಕೊಳ್ಳುವ ಬಗ್ಗೆ ಕೂಡ ಮಾತುಕತೆ ನಡೆದಿದೆ ಎಂದು ವರದಿಯಾಗಿದೆ. ಹೀಗಾಗಿ ಐಪಿಎಲ್ 2025 ರಲ್ಲಿ ಕಿಂಗ್ ಕೊಹ್ಲಿ ಮತ್ತೆ ಆರ್​ಸಿಬಿ ತಂಡದ ನಾಯಕರಾಗಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

ಈಗಾಗಲೇ ವಿರಾಟ್ ಕೊಹ್ಲಿ ಆರ್​ಸಿಬಿ ಫ್ರಾಂಚೈಸಿ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಇದೇ ವೇಳೆ ನಾಯಕತ್ವ ವಹಿಸಿಕೊಳ್ಳುವ ಬಗ್ಗೆ ಕೂಡ ಮಾತುಕತೆ ನಡೆದಿದೆ ಎಂದು ವರದಿಯಾಗಿದೆ. ಹೀಗಾಗಿ ಐಪಿಎಲ್ 2025 ರಲ್ಲಿ ಕಿಂಗ್ ಕೊಹ್ಲಿ ಮತ್ತೆ ಆರ್​ಸಿಬಿ ತಂಡದ ನಾಯಕರಾಗಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

6 / 6

Published On - 1:07 pm, Tue, 2 July 24

Follow us
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ