AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ತಂಡಕ್ಕೆ ವಿರಾಟ್ ಕೊಹ್ಲಿ ಕ್ಯಾಪ್ಟನ್..?

IPL 2025: RCB ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ವಿರಾಟ್ ಕೊಹ್ಲಿ ಮತ್ತೆ ಕ್ಯಾಪ್ಟನ್ ಪಟ್ಟಕ್ಕೇರುವ ಸಾಧ್ಯತೆಯಿದೆ. ಏಕೆಂದರೆ ಐಪಿಎಲ್ 2025 ಕ್ಕಾಗಿ ಮೆಗಾ ಹರಾಜು ನಡೆಯಲಿದ್ದು, ಇದಕ್ಕೂ ಮುನ್ನ ಕೆಲವೇ ಆಟಗಾರರನ್ನು ಮಾತ್ರ ಆರ್​ಸಿಬಿ ಉಳಿಸಿಕೊಳ್ಳಬಹುದು. ಈ ವೇಳೆ 39 ವರ್ಷದ ಫಾಫ್ ಡುಪ್ಲೆಸಿಸ್​ ಅವರನ್ನು ಆರ್​ಸಿಬಿ ರಿಟೈನ್ ಮಾಡಿಕೊಳ್ಳುವ ಸಾಧ್ಯತೆಯಿಲ್ಲ.

ಝಾಹಿರ್ ಯೂಸುಫ್
|

Updated on:Jul 02, 2024 | 1:10 PM

Share
IPL 2025: ಕಳೆದ 17 ಸೀಸನ್​ಗಳಿಂದ ಚಾಂಪಿಯನ್ ಪಟ್ಟ ಅಲಂಕರಿಸುವ ರಾಯಲ್ ಚಾಲೆಂಜರ್ಸ್​ ಬೆಂಗಳೂರು (RCB) ತಂಡದ ಕನಸು ಮುಂದುವರೆದಿದೆ. ಪ್ರತಿ ಬಾರಿ ಈ ಸಲ ಕಪ್ ನಮ್ದೆ ಎಂಬ ಘೋಷವಾಕ್ಯದೊಂದಿಗೆ ಅಭಿಯಾನ ಆರಂಭಿಸುವ ಆರ್​ಸಿಬಿ ಫೈನಲ್​ ಪ್ರವೇಶಿಸದೇ 8 ವರ್ಷಗಳೇ ಕಳೆದಿವೆ.

IPL 2025: ಕಳೆದ 17 ಸೀಸನ್​ಗಳಿಂದ ಚಾಂಪಿಯನ್ ಪಟ್ಟ ಅಲಂಕರಿಸುವ ರಾಯಲ್ ಚಾಲೆಂಜರ್ಸ್​ ಬೆಂಗಳೂರು (RCB) ತಂಡದ ಕನಸು ಮುಂದುವರೆದಿದೆ. ಪ್ರತಿ ಬಾರಿ ಈ ಸಲ ಕಪ್ ನಮ್ದೆ ಎಂಬ ಘೋಷವಾಕ್ಯದೊಂದಿಗೆ ಅಭಿಯಾನ ಆರಂಭಿಸುವ ಆರ್​ಸಿಬಿ ಫೈನಲ್​ ಪ್ರವೇಶಿಸದೇ 8 ವರ್ಷಗಳೇ ಕಳೆದಿವೆ.

1 / 6
ಅದರಲ್ಲೂ ಕಳೆದ ಸೀಸನ್​ನಲ್ಲಿ ಆರ್​ಸಿಬಿ 14 ಪಂದ್ಯಗಳಲ್ಲಿ ಗೆದ್ದಿದ್ದು ಕೇವಲ 7 ಮ್ಯಾಚ್ ಮಾತ್ರ. ಹೀಗಾಗಿ ಮುಂದಿನ ಸೀಸನ್​ನಲ್ಲಿ ಆರ್​ಸಿಬಿ ತಂಡದ ನಾಯಕತ್ವ ಬದಲಾಗುವುದು ಬಹುತೇಕ ಖಚಿತ ಎನ್ನಬಹುದು. ಏಕೆಂದರೆ ಆರ್​ಸಿಬಿ ತಂಡದ ಪ್ರಸ್ತುತ ನಾಯಕ ಫಾಫ್ ಡುಪ್ಲೆಸಿಸ್​ಗೆ ಈಗ 39 ವರ್ಷ. ಹೀಗಾಗಿ ಮುಂದಿನ ಸೀಸನ್​ನಲ್ಲಿ ಆರ್​ಸಿಬಿ ಪರ ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ.

ಅದರಲ್ಲೂ ಕಳೆದ ಸೀಸನ್​ನಲ್ಲಿ ಆರ್​ಸಿಬಿ 14 ಪಂದ್ಯಗಳಲ್ಲಿ ಗೆದ್ದಿದ್ದು ಕೇವಲ 7 ಮ್ಯಾಚ್ ಮಾತ್ರ. ಹೀಗಾಗಿ ಮುಂದಿನ ಸೀಸನ್​ನಲ್ಲಿ ಆರ್​ಸಿಬಿ ತಂಡದ ನಾಯಕತ್ವ ಬದಲಾಗುವುದು ಬಹುತೇಕ ಖಚಿತ ಎನ್ನಬಹುದು. ಏಕೆಂದರೆ ಆರ್​ಸಿಬಿ ತಂಡದ ಪ್ರಸ್ತುತ ನಾಯಕ ಫಾಫ್ ಡುಪ್ಲೆಸಿಸ್​ಗೆ ಈಗ 39 ವರ್ಷ. ಹೀಗಾಗಿ ಮುಂದಿನ ಸೀಸನ್​ನಲ್ಲಿ ಆರ್​ಸಿಬಿ ಪರ ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ.

2 / 6
ಇತ್ತ ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳುತ್ತಿದ್ದಂತೆ ಮತ್ತೆ ನಾಯಕತ್ವದ ಚರ್ಚೆಗಳು ಶುರುವಾಗಿತ್ತು. ಏಕೆಂದರೆ ಈ ಹಿಂದೆ ಟೀಮ್ ಇಂಡಿಯಾ ನಾಯಕತ್ವದ ಹೊರೆಯ ಕಾರಣ ವಿರಾಟ್ ಕೊಹ್ಲಿ ಆರ್​ಸಿಬಿ ತಂಡದ ಕ್ಯಾಪ್ಟನ್ಸಿಗೆ ರಾಜೀನಾಮೆ ನೀಡಿದ್ದರು. ಅಂದರೆ ಭಾರತ ತಂಡವನ್ನು ಹಾಗೂ ಆರ್​ಸಿಬಿಯನ್ನು ಮುನ್ನಡೆಸುತ್ತಿರುವುದು ಹೊರೆಯಾಗುತ್ತಿದೆ. ಹೀಗಾಗಿ ಲೀಗ್ ಕ್ರಿಕೆಟ್​ನ ನಾಯಕತ್ವನ ಜವಾಬ್ದಾರಿಯಿಂದ ಕೆಳಗಿಳಿಯುತ್ತಿರುವುದಾಗಿ ಕೊಹ್ಲಿ ತಿಳಿಸಿದ್ದರು.

ಇತ್ತ ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳುತ್ತಿದ್ದಂತೆ ಮತ್ತೆ ನಾಯಕತ್ವದ ಚರ್ಚೆಗಳು ಶುರುವಾಗಿತ್ತು. ಏಕೆಂದರೆ ಈ ಹಿಂದೆ ಟೀಮ್ ಇಂಡಿಯಾ ನಾಯಕತ್ವದ ಹೊರೆಯ ಕಾರಣ ವಿರಾಟ್ ಕೊಹ್ಲಿ ಆರ್​ಸಿಬಿ ತಂಡದ ಕ್ಯಾಪ್ಟನ್ಸಿಗೆ ರಾಜೀನಾಮೆ ನೀಡಿದ್ದರು. ಅಂದರೆ ಭಾರತ ತಂಡವನ್ನು ಹಾಗೂ ಆರ್​ಸಿಬಿಯನ್ನು ಮುನ್ನಡೆಸುತ್ತಿರುವುದು ಹೊರೆಯಾಗುತ್ತಿದೆ. ಹೀಗಾಗಿ ಲೀಗ್ ಕ್ರಿಕೆಟ್​ನ ನಾಯಕತ್ವನ ಜವಾಬ್ದಾರಿಯಿಂದ ಕೆಳಗಿಳಿಯುತ್ತಿರುವುದಾಗಿ ಕೊಹ್ಲಿ ತಿಳಿಸಿದ್ದರು.

3 / 6
RCB ತಂಡವನ್ನು 143 ಪಂದ್ಯಗಳಲ್ಲಿ ಮುನ್ನಡೆಸಿರುವ ವಿರಾಟ್ ಕೊಹ್ಲಿ 66 ಪಂದ್ಯಗಳಲ್ಲಿ ಜಯ ತಂದುಕೊಟ್ಟಿದ್ದಾರೆ. ಅಲ್ಲದೆ ಕಿಂಗ್ ಕೊಹ್ಲಿ ನಾಯಕತ್ವದಲ್ಲೇ ಆರ್​ಸಿಬಿ 2016 ರಲ್ಲಿ ಫೈನಲ್​ಗೆ ಪ್ರವೇಶಿಸಿದರೆ, 3 ಬಾರಿ ಪ್ಲೇಆಫ್ಸ್ ಆಡಿತ್ತು. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಕಿಂಗ್ ಕೊಹ್ಲಿಗೆ ಮತ್ತೆ ನಾಯಕನ ಪಟ್ಟ ನೀಡುವ ಸಾಧ್ಯತೆಯಿದೆ.

RCB ತಂಡವನ್ನು 143 ಪಂದ್ಯಗಳಲ್ಲಿ ಮುನ್ನಡೆಸಿರುವ ವಿರಾಟ್ ಕೊಹ್ಲಿ 66 ಪಂದ್ಯಗಳಲ್ಲಿ ಜಯ ತಂದುಕೊಟ್ಟಿದ್ದಾರೆ. ಅಲ್ಲದೆ ಕಿಂಗ್ ಕೊಹ್ಲಿ ನಾಯಕತ್ವದಲ್ಲೇ ಆರ್​ಸಿಬಿ 2016 ರಲ್ಲಿ ಫೈನಲ್​ಗೆ ಪ್ರವೇಶಿಸಿದರೆ, 3 ಬಾರಿ ಪ್ಲೇಆಫ್ಸ್ ಆಡಿತ್ತು. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಕಿಂಗ್ ಕೊಹ್ಲಿಗೆ ಮತ್ತೆ ನಾಯಕನ ಪಟ್ಟ ನೀಡುವ ಸಾಧ್ಯತೆಯಿದೆ.

4 / 6
ಹೀಗಾಗಿ ವಿರಾಟ್ ಕೊಹ್ಲಿ ಮತ್ತೆ ಆರ್​ಸಿಬಿ ತಂಡದ ಚುಕ್ಕಾಣಿ ಹಿಡಿಯಲಿದ್ದಾರೆ ಎನ್ನಲಾಗುತ್ತಿದೆ. ಅದರಂತೆ ಐಪಿಎಲ್ 2025 ರಿಂದ ಕಿಂಗ್ ಕೊಹ್ಲಿ ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಕ್ರಿಕ್​ಇನ್​ಫೋ ಮೂಲಗಳು ತಿಳಿಸಿವೆ.

ಹೀಗಾಗಿ ವಿರಾಟ್ ಕೊಹ್ಲಿ ಮತ್ತೆ ಆರ್​ಸಿಬಿ ತಂಡದ ಚುಕ್ಕಾಣಿ ಹಿಡಿಯಲಿದ್ದಾರೆ ಎನ್ನಲಾಗುತ್ತಿದೆ. ಅದರಂತೆ ಐಪಿಎಲ್ 2025 ರಿಂದ ಕಿಂಗ್ ಕೊಹ್ಲಿ ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಕ್ರಿಕ್​ಇನ್​ಫೋ ಮೂಲಗಳು ತಿಳಿಸಿವೆ.

5 / 6
ಈಗಾಗಲೇ ವಿರಾಟ್ ಕೊಹ್ಲಿ ಆರ್​ಸಿಬಿ ಫ್ರಾಂಚೈಸಿ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಇದೇ ವೇಳೆ ನಾಯಕತ್ವ ವಹಿಸಿಕೊಳ್ಳುವ ಬಗ್ಗೆ ಕೂಡ ಮಾತುಕತೆ ನಡೆದಿದೆ ಎಂದು ವರದಿಯಾಗಿದೆ. ಹೀಗಾಗಿ ಐಪಿಎಲ್ 2025 ರಲ್ಲಿ ಕಿಂಗ್ ಕೊಹ್ಲಿ ಮತ್ತೆ ಆರ್​ಸಿಬಿ ತಂಡದ ನಾಯಕರಾಗಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

ಈಗಾಗಲೇ ವಿರಾಟ್ ಕೊಹ್ಲಿ ಆರ್​ಸಿಬಿ ಫ್ರಾಂಚೈಸಿ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಇದೇ ವೇಳೆ ನಾಯಕತ್ವ ವಹಿಸಿಕೊಳ್ಳುವ ಬಗ್ಗೆ ಕೂಡ ಮಾತುಕತೆ ನಡೆದಿದೆ ಎಂದು ವರದಿಯಾಗಿದೆ. ಹೀಗಾಗಿ ಐಪಿಎಲ್ 2025 ರಲ್ಲಿ ಕಿಂಗ್ ಕೊಹ್ಲಿ ಮತ್ತೆ ಆರ್​ಸಿಬಿ ತಂಡದ ನಾಯಕರಾಗಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

6 / 6

Published On - 1:07 pm, Tue, 2 July 24

Follow Us
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ
125 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಮಾಡಿಸಿದ ಶಾಸಕ
125 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಮಾಡಿಸಿದ ಶಾಸಕ
ನಾಳೆ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಸಂಪುಟಕ್ಕೆ ಸಣ್ಣ ಸರ್ಜರಿ ಆಗುತ್ತಾ?
ನಾಳೆ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಸಂಪುಟಕ್ಕೆ ಸಣ್ಣ ಸರ್ಜರಿ ಆಗುತ್ತಾ?
ಹೆಲ್ಮೆಟ್ ಧರಿಸದೆ ಬೈಕ್ ಓಡಿಸಿದ ಶಾಸಕ ಪ್ರಕಾಶ್ ಕೋಳಿವಾಡಗೆ ಪೊಲೀಸರಿಂದ ದಂಡ
ಹೆಲ್ಮೆಟ್ ಧರಿಸದೆ ಬೈಕ್ ಓಡಿಸಿದ ಶಾಸಕ ಪ್ರಕಾಶ್ ಕೋಳಿವಾಡಗೆ ಪೊಲೀಸರಿಂದ ದಂಡ
ಉಡುಪಿ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಬಲೆಗೆ ಬಿದ್ದ ಕ್ರಿಮಿನಲ್!
ಉಡುಪಿ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಬಲೆಗೆ ಬಿದ್ದ ಕ್ರಿಮಿನಲ್!