IPL 2025: RCB ತಂಡಕ್ಕೆ ವಿರಾಟ್ ಕೊಹ್ಲಿ ಕ್ಯಾಪ್ಟನ್..?

IPL 2025: RCB ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ವಿರಾಟ್ ಕೊಹ್ಲಿ ಮತ್ತೆ ಕ್ಯಾಪ್ಟನ್ ಪಟ್ಟಕ್ಕೇರುವ ಸಾಧ್ಯತೆಯಿದೆ. ಏಕೆಂದರೆ ಐಪಿಎಲ್ 2025 ಕ್ಕಾಗಿ ಮೆಗಾ ಹರಾಜು ನಡೆಯಲಿದ್ದು, ಇದಕ್ಕೂ ಮುನ್ನ ಕೆಲವೇ ಆಟಗಾರರನ್ನು ಮಾತ್ರ ಆರ್​ಸಿಬಿ ಉಳಿಸಿಕೊಳ್ಳಬಹುದು. ಈ ವೇಳೆ 39 ವರ್ಷದ ಫಾಫ್ ಡುಪ್ಲೆಸಿಸ್​ ಅವರನ್ನು ಆರ್​ಸಿಬಿ ರಿಟೈನ್ ಮಾಡಿಕೊಳ್ಳುವ ಸಾಧ್ಯತೆಯಿಲ್ಲ.

|

Updated on:Jul 02, 2024 | 1:10 PM

IPL 2025: ಕಳೆದ 17 ಸೀಸನ್​ಗಳಿಂದ ಚಾಂಪಿಯನ್ ಪಟ್ಟ ಅಲಂಕರಿಸುವ ರಾಯಲ್ ಚಾಲೆಂಜರ್ಸ್​ ಬೆಂಗಳೂರು (RCB) ತಂಡದ ಕನಸು ಮುಂದುವರೆದಿದೆ. ಪ್ರತಿ ಬಾರಿ ಈ ಸಲ ಕಪ್ ನಮ್ದೆ ಎಂಬ ಘೋಷವಾಕ್ಯದೊಂದಿಗೆ ಅಭಿಯಾನ ಆರಂಭಿಸುವ ಆರ್​ಸಿಬಿ ಫೈನಲ್​ ಪ್ರವೇಶಿಸದೇ 8 ವರ್ಷಗಳೇ ಕಳೆದಿವೆ.

IPL 2025: ಕಳೆದ 17 ಸೀಸನ್​ಗಳಿಂದ ಚಾಂಪಿಯನ್ ಪಟ್ಟ ಅಲಂಕರಿಸುವ ರಾಯಲ್ ಚಾಲೆಂಜರ್ಸ್​ ಬೆಂಗಳೂರು (RCB) ತಂಡದ ಕನಸು ಮುಂದುವರೆದಿದೆ. ಪ್ರತಿ ಬಾರಿ ಈ ಸಲ ಕಪ್ ನಮ್ದೆ ಎಂಬ ಘೋಷವಾಕ್ಯದೊಂದಿಗೆ ಅಭಿಯಾನ ಆರಂಭಿಸುವ ಆರ್​ಸಿಬಿ ಫೈನಲ್​ ಪ್ರವೇಶಿಸದೇ 8 ವರ್ಷಗಳೇ ಕಳೆದಿವೆ.

1 / 6
ಅದರಲ್ಲೂ ಕಳೆದ ಸೀಸನ್​ನಲ್ಲಿ ಆರ್​ಸಿಬಿ 14 ಪಂದ್ಯಗಳಲ್ಲಿ ಗೆದ್ದಿದ್ದು ಕೇವಲ 7 ಮ್ಯಾಚ್ ಮಾತ್ರ. ಹೀಗಾಗಿ ಮುಂದಿನ ಸೀಸನ್​ನಲ್ಲಿ ಆರ್​ಸಿಬಿ ತಂಡದ ನಾಯಕತ್ವ ಬದಲಾಗುವುದು ಬಹುತೇಕ ಖಚಿತ ಎನ್ನಬಹುದು. ಏಕೆಂದರೆ ಆರ್​ಸಿಬಿ ತಂಡದ ಪ್ರಸ್ತುತ ನಾಯಕ ಫಾಫ್ ಡುಪ್ಲೆಸಿಸ್​ಗೆ ಈಗ 39 ವರ್ಷ. ಹೀಗಾಗಿ ಮುಂದಿನ ಸೀಸನ್​ನಲ್ಲಿ ಆರ್​ಸಿಬಿ ಪರ ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ.

ಅದರಲ್ಲೂ ಕಳೆದ ಸೀಸನ್​ನಲ್ಲಿ ಆರ್​ಸಿಬಿ 14 ಪಂದ್ಯಗಳಲ್ಲಿ ಗೆದ್ದಿದ್ದು ಕೇವಲ 7 ಮ್ಯಾಚ್ ಮಾತ್ರ. ಹೀಗಾಗಿ ಮುಂದಿನ ಸೀಸನ್​ನಲ್ಲಿ ಆರ್​ಸಿಬಿ ತಂಡದ ನಾಯಕತ್ವ ಬದಲಾಗುವುದು ಬಹುತೇಕ ಖಚಿತ ಎನ್ನಬಹುದು. ಏಕೆಂದರೆ ಆರ್​ಸಿಬಿ ತಂಡದ ಪ್ರಸ್ತುತ ನಾಯಕ ಫಾಫ್ ಡುಪ್ಲೆಸಿಸ್​ಗೆ ಈಗ 39 ವರ್ಷ. ಹೀಗಾಗಿ ಮುಂದಿನ ಸೀಸನ್​ನಲ್ಲಿ ಆರ್​ಸಿಬಿ ಪರ ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ.

2 / 6
ಇತ್ತ ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳುತ್ತಿದ್ದಂತೆ ಮತ್ತೆ ನಾಯಕತ್ವದ ಚರ್ಚೆಗಳು ಶುರುವಾಗಿದೆ. ಏಕೆಂದರೆ ಈ ಹಿಂದೆ ಟೀಮ್ ಇಂಡಿಯಾ ನಾಯಕತ್ವದ ಹೊರೆಯ ಕಾರಣ ವಿರಾಟ್ ಕೊಹ್ಲಿ ಆರ್​ಸಿಬಿ ತಂಡದ ಕ್ಯಾಪ್ಟನ್ಸಿಗೆ ರಾಜೀನಾಮೆ ನೀಡಿದ್ದರು. ಅಂದರೆ ಭಾರತ ತಂಡವನ್ನು ಹಾಗೂ ಆರ್​ಸಿಬಿಯನ್ನು ಮುನ್ನಡೆಸುತ್ತಿರುವುದು ಹೊರೆಯಾಗುತ್ತಿದೆ. ಹೀಗಾಗಿ ಲೀಗ್ ಕ್ರಿಕೆಟ್​ನ ನಾಯಕತ್ವನ ಜವಾಬ್ದಾರಿಯಿಂದ ಕೆಳಗಿಳಿಯುತ್ತಿರುವುದಾಗಿ ಕೊಹ್ಲಿ ತಿಳಿಸಿದ್ದರು.

ಇತ್ತ ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳುತ್ತಿದ್ದಂತೆ ಮತ್ತೆ ನಾಯಕತ್ವದ ಚರ್ಚೆಗಳು ಶುರುವಾಗಿದೆ. ಏಕೆಂದರೆ ಈ ಹಿಂದೆ ಟೀಮ್ ಇಂಡಿಯಾ ನಾಯಕತ್ವದ ಹೊರೆಯ ಕಾರಣ ವಿರಾಟ್ ಕೊಹ್ಲಿ ಆರ್​ಸಿಬಿ ತಂಡದ ಕ್ಯಾಪ್ಟನ್ಸಿಗೆ ರಾಜೀನಾಮೆ ನೀಡಿದ್ದರು. ಅಂದರೆ ಭಾರತ ತಂಡವನ್ನು ಹಾಗೂ ಆರ್​ಸಿಬಿಯನ್ನು ಮುನ್ನಡೆಸುತ್ತಿರುವುದು ಹೊರೆಯಾಗುತ್ತಿದೆ. ಹೀಗಾಗಿ ಲೀಗ್ ಕ್ರಿಕೆಟ್​ನ ನಾಯಕತ್ವನ ಜವಾಬ್ದಾರಿಯಿಂದ ಕೆಳಗಿಳಿಯುತ್ತಿರುವುದಾಗಿ ಕೊಹ್ಲಿ ತಿಳಿಸಿದ್ದರು.

3 / 6
ಇದೀಗ ವಿರಾಟ್ ಕೊಹ್ಲಿ ಸಂಪೂರ್ಣ ಫ್ರೀಯಾಗಿದ್ದಾರೆ. ಟೀಮ್ ಇಂಡಿಯಾದ ಮೂರು ತಂಡಗಳ ನಾಯಕತ್ವವನ್ನು ತೊರೆದಿದ್ದಾರೆ. ಅಲ್ಲದೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೂ ವಿದಾಯ ಹೇಳಿದ್ದಾರೆ. ಅತ್ತ ಟಿ20 ಮಾದರಿಗೆ ನಿವೃತ್ತಿ ಘೋಷಿಸಿರುವ ಕಾರಣ, ವಿರಾಟ್ ಕೊಹ್ಲಿ ಆರ್​ಸಿಬಿ ಪರ ಸಂಪೂರ್ಣ ತೊಡಗಿಸಿಕೊಳ್ಳಬಹುದು.

ಇದೀಗ ವಿರಾಟ್ ಕೊಹ್ಲಿ ಸಂಪೂರ್ಣ ಫ್ರೀಯಾಗಿದ್ದಾರೆ. ಟೀಮ್ ಇಂಡಿಯಾದ ಮೂರು ತಂಡಗಳ ನಾಯಕತ್ವವನ್ನು ತೊರೆದಿದ್ದಾರೆ. ಅಲ್ಲದೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೂ ವಿದಾಯ ಹೇಳಿದ್ದಾರೆ. ಅತ್ತ ಟಿ20 ಮಾದರಿಗೆ ನಿವೃತ್ತಿ ಘೋಷಿಸಿರುವ ಕಾರಣ, ವಿರಾಟ್ ಕೊಹ್ಲಿ ಆರ್​ಸಿಬಿ ಪರ ಸಂಪೂರ್ಣ ತೊಡಗಿಸಿಕೊಳ್ಳಬಹುದು.

4 / 6
ಹೀಗಾಗಿ ವಿರಾಟ್ ಕೊಹ್ಲಿ ಮತ್ತೆ ಆರ್​ಸಿಬಿ ತಂಡದ ಚುಕ್ಕಾಣಿ ಹಿಡಿಯಲಿದ್ದಾರೆ ಎನ್ನಲಾಗುತ್ತಿದೆ. ಅದರಂತೆ ಐಪಿಎಲ್ 2025 ರಿಂದ ಕಿಂಗ್ ಕೊಹ್ಲಿ ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

ಹೀಗಾಗಿ ವಿರಾಟ್ ಕೊಹ್ಲಿ ಮತ್ತೆ ಆರ್​ಸಿಬಿ ತಂಡದ ಚುಕ್ಕಾಣಿ ಹಿಡಿಯಲಿದ್ದಾರೆ ಎನ್ನಲಾಗುತ್ತಿದೆ. ಅದರಂತೆ ಐಪಿಎಲ್ 2025 ರಿಂದ ಕಿಂಗ್ ಕೊಹ್ಲಿ ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

5 / 6
RCB ತಂಡವನ್ನು 143 ಪಂದ್ಯಗಳಲ್ಲಿ ಮುನ್ನಡೆಸಿರುವ ವಿರಾಟ್ ಕೊಹ್ಲಿ 66 ಪಂದ್ಯಗಳಲ್ಲಿ ಜಯ ತಂದುಕೊಟ್ಟಿದ್ದಾರೆ. ಅಲ್ಲದೆ ಕಿಂಗ್ ಕೊಹ್ಲಿ ನಾಯಕತ್ವದಲ್ಲೇ ಆರ್​ಸಿಬಿ 2016 ರಲ್ಲಿ ಫೈನಲ್​ಗೆ ಪ್ರವೇಶಿಸಿದರೆ, 3 ಬಾರಿ ಪ್ಲೇಆಫ್ಸ್ ಆಡಿತ್ತು. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಕಿಂಗ್ ಕೊಹ್ಲಿಗೆ ಮತ್ತೆ ನಾಯಕನ ಪಟ್ಟ ನೀಡುವ ಸಾಧ್ಯತೆಯಿದೆ.

RCB ತಂಡವನ್ನು 143 ಪಂದ್ಯಗಳಲ್ಲಿ ಮುನ್ನಡೆಸಿರುವ ವಿರಾಟ್ ಕೊಹ್ಲಿ 66 ಪಂದ್ಯಗಳಲ್ಲಿ ಜಯ ತಂದುಕೊಟ್ಟಿದ್ದಾರೆ. ಅಲ್ಲದೆ ಕಿಂಗ್ ಕೊಹ್ಲಿ ನಾಯಕತ್ವದಲ್ಲೇ ಆರ್​ಸಿಬಿ 2016 ರಲ್ಲಿ ಫೈನಲ್​ಗೆ ಪ್ರವೇಶಿಸಿದರೆ, 3 ಬಾರಿ ಪ್ಲೇಆಫ್ಸ್ ಆಡಿತ್ತು. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಕಿಂಗ್ ಕೊಹ್ಲಿಗೆ ಮತ್ತೆ ನಾಯಕನ ಪಟ್ಟ ನೀಡುವ ಸಾಧ್ಯತೆಯಿದೆ.

6 / 6

Published On - 1:07 pm, Tue, 2 July 24

Follow us
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ