AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: 3 ವರ್ಷಗಳಲ್ಲಿ ಕಪ್: ನಿವೃತ್ತಿ ಸುಳಿವು ನೀಡಿದ ವಿರಾಟ್ ಕೊಹ್ಲಿ

IPL 2025 RCB: ಐಪಿಎಲ್ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಮೂವರನ್ನು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಇಲ್ಲಿ ವಿರಾಟ್ ಕೊಹ್ಲಿಗೆ 21 ಕೋಟಿ ರೂ. ನೀಡಲಾಗಿದ್ದರೆ, ರಜತ್ ಪಾಟಿದಾರ್​ಗೆ 11 ಕೋಟಿ ರೂ. ನೀಡಿದ್ದಾರೆ. ಇನ್ನು ಯಶ್ ದಯಾಳ್​ 5 ಕೋಟಿ ರೂ.ಗೆ ರಿಟೈನ್ ಆಗಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 03, 2024 | 10:33 AM

Share
17 ವರ್ಷ, 17 ಸೀಸನ್​, ಒಂದೇ ತಂಡ, ಒಂದೇ ಗುರಿ... ಇದುವೇ ವಿರಾಟ್ ಕೊಹ್ಲಿಯ ಬಹುದೊಡ್ಡ ಕನಸು. ಹೌದು, ಕಳೆದ ಹದಿನೇಳು ಸೀಸನ್​ಗಳಿಂದ ಆರ್​ಸಿಬಿ ಪರ ಕಣಕ್ಕಿಳಿದಿರುವ ವಿರಾಟ್ ಕೊಹ್ಲಿ ಇದೀಗ 18ನೇ ಆವೃತ್ತಿಗಾಗಿ ಸಜ್ಜಾಗಿ ನಿಂತಿದ್ದಾರೆ. ಅದು ಸಹ ಈ ಸಲ ಆದರೂ ಕಪ್ ಗೆಲ್ಲಬೇಕೆಂಬ ಮಹದಾಸೆಯೊಂದಿಗೆ ಎಂಬುದು ವಿಶೇಷ.

17 ವರ್ಷ, 17 ಸೀಸನ್​, ಒಂದೇ ತಂಡ, ಒಂದೇ ಗುರಿ... ಇದುವೇ ವಿರಾಟ್ ಕೊಹ್ಲಿಯ ಬಹುದೊಡ್ಡ ಕನಸು. ಹೌದು, ಕಳೆದ ಹದಿನೇಳು ಸೀಸನ್​ಗಳಿಂದ ಆರ್​ಸಿಬಿ ಪರ ಕಣಕ್ಕಿಳಿದಿರುವ ವಿರಾಟ್ ಕೊಹ್ಲಿ ಇದೀಗ 18ನೇ ಆವೃತ್ತಿಗಾಗಿ ಸಜ್ಜಾಗಿ ನಿಂತಿದ್ದಾರೆ. ಅದು ಸಹ ಈ ಸಲ ಆದರೂ ಕಪ್ ಗೆಲ್ಲಬೇಕೆಂಬ ಮಹದಾಸೆಯೊಂದಿಗೆ ಎಂಬುದು ವಿಶೇಷ.

1 / 5
ಈ ಬಾರಿಯ ಐಪಿಎಲ್ ಹರಾಜಿಗೂ ಮುನ್ನ ಆರ್​ಸಿಬಿ ಫ್ರಾಂಚೈಸಿ ಬರೋಬ್ಬರಿ 21 ಕೋಟಿ ರೂ. ನೀಡಿ ವಿರಾಟ್ ಕೊಹ್ಲಿಯನ್ನು ಉಳಿಸಿಕೊಂಡಿದೆ. ಇದರೊಂದಿಗೆ ಕಿಂಗ್ ಕೊಹ್ಲಿ ಆರ್​ಸಿಬಿ ಪರ 18ನೇ ಸೀಸನ್ ಆಡುವುದು ಕೂಡ ಖಚಿತವಾಗಿದೆ. ಅಷ್ಟೇ ಅಲ್ಲದೆ ಮುಂದಿನ ಮೂರು ಆವೃತ್ತಿಗಳಲ್ಲೂ ಅವರು ಬೆಂಗಳೂರು ಫ್ರಾಂಚೈಸಿಯಲ್ಲೇ ಉಳಿಯಲಿದ್ದಾರೆ. ಇದನ್ನು ಖುದ್ದು ವಿರಾಟ್ ಕೊಹ್ಲಿಯೇ ಖಚಿತಪಡಿಸಿದ್ದಾರೆ.

ಈ ಬಾರಿಯ ಐಪಿಎಲ್ ಹರಾಜಿಗೂ ಮುನ್ನ ಆರ್​ಸಿಬಿ ಫ್ರಾಂಚೈಸಿ ಬರೋಬ್ಬರಿ 21 ಕೋಟಿ ರೂ. ನೀಡಿ ವಿರಾಟ್ ಕೊಹ್ಲಿಯನ್ನು ಉಳಿಸಿಕೊಂಡಿದೆ. ಇದರೊಂದಿಗೆ ಕಿಂಗ್ ಕೊಹ್ಲಿ ಆರ್​ಸಿಬಿ ಪರ 18ನೇ ಸೀಸನ್ ಆಡುವುದು ಕೂಡ ಖಚಿತವಾಗಿದೆ. ಅಷ್ಟೇ ಅಲ್ಲದೆ ಮುಂದಿನ ಮೂರು ಆವೃತ್ತಿಗಳಲ್ಲೂ ಅವರು ಬೆಂಗಳೂರು ಫ್ರಾಂಚೈಸಿಯಲ್ಲೇ ಉಳಿಯಲಿದ್ದಾರೆ. ಇದನ್ನು ಖುದ್ದು ವಿರಾಟ್ ಕೊಹ್ಲಿಯೇ ಖಚಿತಪಡಿಸಿದ್ದಾರೆ.

2 / 5
ಈ ಬಗ್ಗೆ ಮಾತನಾಡಿರುವ ವಿರಾಟ್ ಕೊಹ್ಲಿ, ಒಂದು ತಂಡಕ್ಕಾಗಿ ಇಷ್ಟು ವರ್ಷ ಆಡಲಿದ್ದೇನೆ ಎಂದು ನಾನು ಎಂದಿಗೂ ಯೋಚಿಸಿರಲಿಲ್ಲ. ಆದರೆ ಈ ಸಂಬಂಧವು ಹಲವು ವರ್ಷಗಳಿಂದ ಮುಂದುವರೆದಿದೆ. ಇದು ನಿಜಕ್ಕೂ ನನ್ನ ಪಾಲಿಗೆ ತುಂಬಾ ವಿಶೇಷ ಅನುಭವ. ನನ್ನ ವೃತ್ತಿಜೀವನದ ಅಂತ್ಯದ ವೇಳೆಗೆ 20 ವರ್ಷಗಳು ಪೂರ್ಣಗೊಳ್ಳಲಿದೆ. ಈ 20 ವರ್ಷಗಳನ್ನು ನಾನು ಆರ್​ಸಿಬಿ ಪರವಾಗಿಯೇ ಕಣಕ್ಕಿಳಿಯಲಿದ್ದೇನೆ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿರುವ ವಿರಾಟ್ ಕೊಹ್ಲಿ, ಒಂದು ತಂಡಕ್ಕಾಗಿ ಇಷ್ಟು ವರ್ಷ ಆಡಲಿದ್ದೇನೆ ಎಂದು ನಾನು ಎಂದಿಗೂ ಯೋಚಿಸಿರಲಿಲ್ಲ. ಆದರೆ ಈ ಸಂಬಂಧವು ಹಲವು ವರ್ಷಗಳಿಂದ ಮುಂದುವರೆದಿದೆ. ಇದು ನಿಜಕ್ಕೂ ನನ್ನ ಪಾಲಿಗೆ ತುಂಬಾ ವಿಶೇಷ ಅನುಭವ. ನನ್ನ ವೃತ್ತಿಜೀವನದ ಅಂತ್ಯದ ವೇಳೆಗೆ 20 ವರ್ಷಗಳು ಪೂರ್ಣಗೊಳ್ಳಲಿದೆ. ಈ 20 ವರ್ಷಗಳನ್ನು ನಾನು ಆರ್​ಸಿಬಿ ಪರವಾಗಿಯೇ ಕಣಕ್ಕಿಳಿಯಲಿದ್ದೇನೆ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.

3 / 5
ಅಂದರೆ ವಿರಾಟ್ ಕೊಹ್ಲಿ ಐಪಿಎಲ್ 2027ರವರೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲೇ ಮುಂದುವರೆಯುವುದಾಗಿ ತಿಳಿಸಿದ್ದಾರೆ. ಆದರೆ ಆ ಬಳಿಕ ಅವರು ನಿವೃತ್ತಿ ನೀಡುವ ಸಾಧ್ಯತೆಯಿದೆ. ಇದೇ ಕಾರಣದಿಂದಾಗಿ ಅವರು ವೃತ್ತಿಜೀವನದ ಅಂತ್ಯದ ವೇಳೆಗೆ 20 ವರ್ಷಗಳನ್ನು ಪೂರ್ಣಗೊಳಿಸಲಿದ್ದೇನೆ ಎಂದು ಒತ್ತಿ ಹೇಳಿದ್ದಾರೆ.

ಅಂದರೆ ವಿರಾಟ್ ಕೊಹ್ಲಿ ಐಪಿಎಲ್ 2027ರವರೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲೇ ಮುಂದುವರೆಯುವುದಾಗಿ ತಿಳಿಸಿದ್ದಾರೆ. ಆದರೆ ಆ ಬಳಿಕ ಅವರು ನಿವೃತ್ತಿ ನೀಡುವ ಸಾಧ್ಯತೆಯಿದೆ. ಇದೇ ಕಾರಣದಿಂದಾಗಿ ಅವರು ವೃತ್ತಿಜೀವನದ ಅಂತ್ಯದ ವೇಳೆಗೆ 20 ವರ್ಷಗಳನ್ನು ಪೂರ್ಣಗೊಳಿಸಲಿದ್ದೇನೆ ಎಂದು ಒತ್ತಿ ಹೇಳಿದ್ದಾರೆ.

4 / 5
35 ವರ್ಷದ ವಿರಾಟ್ ಕೊಹ್ಲಿಗೆ 2027ರ ವೇಳೆಗೆ 38 ವರ್ಷ ತುಂಬಲಿದೆ. ಇದೇ ಅವಧಿಯಲ್ಲಿ ಕಿಂಗ್ ಕೊಹ್ಲಿ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳುವ ಸಾಧ್ಯತೆಯಿದೆ. ಹೀಗಾಗಿಯೇ ಮುಂದಿನ ಮೂರು ವರ್ಷಗಳಲ್ಲಿ ಆರ್​ಸಿಬಿಗೆ ಕಪ್ ಗೆದ್ದುಕೊಡಬೇಕೆಂಬ ಮಹದಾಸೆಯನ್ನು ವಿರಾಟ್ ಕೊಹ್ಲಿ ಹೊಂದಿದ್ದಾರೆ. ಈ ಮೂಲಕ ತಮ್ಮ 17 ವರ್ಷಗಳ ಕನಸನ್ನು ನನಸು ಮಾಡಿಕೊಳ್ಳುವ ಇರಾದೆಯಲ್ಲಿದ್ದಾರೆ. ಕಿಂಗ್ ಕೊಹ್ಲಿಯ ಈ ಕನಸು ಐಪಿಎಲ್ 2025 ರಲ್ಲೇ ನನಸಾಗಲಿದೆಯಾ ಕಾದು ನೋಡಬೇಕಿದೆ.

35 ವರ್ಷದ ವಿರಾಟ್ ಕೊಹ್ಲಿಗೆ 2027ರ ವೇಳೆಗೆ 38 ವರ್ಷ ತುಂಬಲಿದೆ. ಇದೇ ಅವಧಿಯಲ್ಲಿ ಕಿಂಗ್ ಕೊಹ್ಲಿ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳುವ ಸಾಧ್ಯತೆಯಿದೆ. ಹೀಗಾಗಿಯೇ ಮುಂದಿನ ಮೂರು ವರ್ಷಗಳಲ್ಲಿ ಆರ್​ಸಿಬಿಗೆ ಕಪ್ ಗೆದ್ದುಕೊಡಬೇಕೆಂಬ ಮಹದಾಸೆಯನ್ನು ವಿರಾಟ್ ಕೊಹ್ಲಿ ಹೊಂದಿದ್ದಾರೆ. ಈ ಮೂಲಕ ತಮ್ಮ 17 ವರ್ಷಗಳ ಕನಸನ್ನು ನನಸು ಮಾಡಿಕೊಳ್ಳುವ ಇರಾದೆಯಲ್ಲಿದ್ದಾರೆ. ಕಿಂಗ್ ಕೊಹ್ಲಿಯ ಈ ಕನಸು ಐಪಿಎಲ್ 2025 ರಲ್ಲೇ ನನಸಾಗಲಿದೆಯಾ ಕಾದು ನೋಡಬೇಕಿದೆ.

5 / 5
Follow Us
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು