IPL 2025: ಏನಿದು RTM ಆಯ್ಕೆ: ಇದನ್ನು ಬಳಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

IPL 2025 RTM Card Rules: ಐಪಿಎಲ್ 2025ರ ಮೆಗಾ ಹರಾಜಿನಲ್ಲಿ ಓರ್ವ ಆಟಗಾರನ ಮೇಲೆ ಆರ್​ಟಿಎಂ ಆಯ್ಕೆ ಬಳಸಲು ಬಿಸಿಸಿಐ ಅವಕಾಶ ನೀಡಿದೆ. ಇದರ ಬೆನ್ನಲ್ಲೇ ಏನಿದು ಆರ್​ಟಿಎಂ ಆಯ್ಕೆ, ಇದರ ನಿಯಮಗಳೇನು ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಎಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ...

|

Updated on: Sep 29, 2024 | 11:30 AM

ಐಪಿಎಲ್​ 2025ರ ಮೆಗಾ ಆಕ್ಷನ್ ರಿಟೈನ್ ನಿಯಮ ಪ್ರಕಟವಾಗಿದೆ. ಈ ನಿಯಮದಂತೆ ಈ ಬಾರಿಯ ಹರಾಜಿಗೂ ಮುನ್ನ ಪ್ರತಿ ಫ್ರಾಂಚೈಸಿಗಳು 5+1 ಆಟಗಾರರನ್ನು ಉಳಿಸಿಕೊಳ್ಳಬಹುದು. ಇಲ್ಲಿ ಐವರು ಆಟಗಾರರನ್ನು ನೇರವಾಗಿ ಆಯ್ಕೆ ಮಾಡಬಹುದು. ಇನ್ನು ಓರ್ವ ಆಟಗಾರನ ಮೇಲೆ ಆರ್​ಟಿಎಂ ಆಯ್ಕೆ ಬಳಸಲು ಅವಕಾಶ ಕಲ್ಪಿಸಲಾಗಿದೆ. ಹಾಗಿದ್ರೆ ಏನಿದು RTM ಆಯ್ಕೆ? ಇದನ್ನು ಬಳಸುವುದು ಹೇಗೆ ಎಂಬ ಪ್ರಶ್ನೆಯೊಂದು ಮೂಡುವುದು ಸಹಜ. ನಿಮ್ಮೆಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ...

ಐಪಿಎಲ್​ 2025ರ ಮೆಗಾ ಆಕ್ಷನ್ ರಿಟೈನ್ ನಿಯಮ ಪ್ರಕಟವಾಗಿದೆ. ಈ ನಿಯಮದಂತೆ ಈ ಬಾರಿಯ ಹರಾಜಿಗೂ ಮುನ್ನ ಪ್ರತಿ ಫ್ರಾಂಚೈಸಿಗಳು 5+1 ಆಟಗಾರರನ್ನು ಉಳಿಸಿಕೊಳ್ಳಬಹುದು. ಇಲ್ಲಿ ಐವರು ಆಟಗಾರರನ್ನು ನೇರವಾಗಿ ಆಯ್ಕೆ ಮಾಡಬಹುದು. ಇನ್ನು ಓರ್ವ ಆಟಗಾರನ ಮೇಲೆ ಆರ್​ಟಿಎಂ ಆಯ್ಕೆ ಬಳಸಲು ಅವಕಾಶ ಕಲ್ಪಿಸಲಾಗಿದೆ. ಹಾಗಿದ್ರೆ ಏನಿದು RTM ಆಯ್ಕೆ? ಇದನ್ನು ಬಳಸುವುದು ಹೇಗೆ ಎಂಬ ಪ್ರಶ್ನೆಯೊಂದು ಮೂಡುವುದು ಸಹಜ. ನಿಮ್ಮೆಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ...

1 / 6
ಆರ್​ಟಿಎಂ ಎಂದರೆ ರೈಟ್ ಟು ಮ್ಯಾಚ್ (RTM) ಆಯ್ಕೆ. ಅಂದರೆ ಮೆಗಾ ಹರಾಜಿನಲ್ಲಿ ಆಟಗಾರರನ್ನು ಸ್ವಾಧೀನಪಡಿಸಿಕೊಳ್ಳಲು ಇರುವ ವಿಶೇಷ ಆಯ್ಕೆ. ಇನ್ನೂ ಸರಳವಾಗಿ ಹೇಳಬೇಕೆಂದರೆ, ಆಟಗಾರರ ಮೇಲೆ ಹಕ್ಕುಸ್ವಾಮ್ಯ ಸ್ಥಾಪಿಸುವುದು. ಆದರೆ ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶವೆಂದರೆ ಆರ್​ಟಿಎಂ ಆಯ್ಕೆಯನ್ನು ಬಳಸಲಾದ ಆಟಗಾರನನ್ನು ನೇರವಾಗಿ ಆಯ್ಕೆ ಮಾಡುವಂತಿಲ್ಲ ಎಂಬುದು.

ಆರ್​ಟಿಎಂ ಎಂದರೆ ರೈಟ್ ಟು ಮ್ಯಾಚ್ (RTM) ಆಯ್ಕೆ. ಅಂದರೆ ಮೆಗಾ ಹರಾಜಿನಲ್ಲಿ ಆಟಗಾರರನ್ನು ಸ್ವಾಧೀನಪಡಿಸಿಕೊಳ್ಳಲು ಇರುವ ವಿಶೇಷ ಆಯ್ಕೆ. ಇನ್ನೂ ಸರಳವಾಗಿ ಹೇಳಬೇಕೆಂದರೆ, ಆಟಗಾರರ ಮೇಲೆ ಹಕ್ಕುಸ್ವಾಮ್ಯ ಸ್ಥಾಪಿಸುವುದು. ಆದರೆ ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶವೆಂದರೆ ಆರ್​ಟಿಎಂ ಆಯ್ಕೆಯನ್ನು ಬಳಸಲಾದ ಆಟಗಾರನನ್ನು ನೇರವಾಗಿ ಆಯ್ಕೆ ಮಾಡುವಂತಿಲ್ಲ ಎಂಬುದು.

2 / 6
ಅಂದರೆ ಒಬ್ಬ ಆಟಗಾರನ ಮೇಲೆ ಆರ್​ಟಿಎಂ ಆಯ್ಕೆ ಬಳಸಿದರೆ ಆತನನ್ನು ಮೆಗಾ ಹರಾಜಿಗಾಗಿ ಬಿಡುಗಡೆ ಮಾಡಬೇಕಾಗುತ್ತದೆ. ಇದಾಗ್ಯೂ ಮೆಗಾ ಹರಾಜಿನಲ್ಲಿ ಆ ಆಟಗಾರನ ಸಂಪೂರ್ಣ ಹಕ್ಕು ಬಿಡುಗಡೆ ಮಾಡಿದ ಫ್ರಾಂಚೈಸಿಯ ಬಳಿಯೇ ಇರಲಿದೆ. ಇದುವೇ ಈ ಆಯ್ಕೆಯ ವಿಶೇಷತೆ.

ಅಂದರೆ ಒಬ್ಬ ಆಟಗಾರನ ಮೇಲೆ ಆರ್​ಟಿಎಂ ಆಯ್ಕೆ ಬಳಸಿದರೆ ಆತನನ್ನು ಮೆಗಾ ಹರಾಜಿಗಾಗಿ ಬಿಡುಗಡೆ ಮಾಡಬೇಕಾಗುತ್ತದೆ. ಇದಾಗ್ಯೂ ಮೆಗಾ ಹರಾಜಿನಲ್ಲಿ ಆ ಆಟಗಾರನ ಸಂಪೂರ್ಣ ಹಕ್ಕು ಬಿಡುಗಡೆ ಮಾಡಿದ ಫ್ರಾಂಚೈಸಿಯ ಬಳಿಯೇ ಇರಲಿದೆ. ಇದುವೇ ಈ ಆಯ್ಕೆಯ ವಿಶೇಷತೆ.

3 / 6
ಉದಾಹರಣೆಗೆ: ಆರ್​ಸಿಬಿ ತಂಡವು ರಜತ್ ಪಾಟಿದಾರ್ ಅವರನ್ನು ಹರಾಜಿಗಾಗಿ ರಿಲೀಸ್ ಮಾಡಿದೆ ಎಂದಿಟ್ಟುಕೊಳ್ಳಿ. ಆದರೆ ಬಿಡುಗಡೆಗೂ ಮುನ್ನ ಆರ್​ಟಿಎಂ ಆಯ್ಕೆ ಬಳಸಿ ಮೆಗಾ ಹರಾಜಿಗಾಗಿ ರಿಲೀಸ್ ಮಾಡಿದರೆ, ಪಾಟಿದಾರ್ ಮೇಲಿನ ಹಕ್ಕು ಆರ್​ಸಿಬಿ ಬಳಿಯೇ ಇರುತ್ತದೆ.

ಉದಾಹರಣೆಗೆ: ಆರ್​ಸಿಬಿ ತಂಡವು ರಜತ್ ಪಾಟಿದಾರ್ ಅವರನ್ನು ಹರಾಜಿಗಾಗಿ ರಿಲೀಸ್ ಮಾಡಿದೆ ಎಂದಿಟ್ಟುಕೊಳ್ಳಿ. ಆದರೆ ಬಿಡುಗಡೆಗೂ ಮುನ್ನ ಆರ್​ಟಿಎಂ ಆಯ್ಕೆ ಬಳಸಿ ಮೆಗಾ ಹರಾಜಿಗಾಗಿ ರಿಲೀಸ್ ಮಾಡಿದರೆ, ಪಾಟಿದಾರ್ ಮೇಲಿನ ಹಕ್ಕು ಆರ್​ಸಿಬಿ ಬಳಿಯೇ ಇರುತ್ತದೆ.

4 / 6
ಅದರಂತೆ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡ ರಜತ್ ಪಾಟಿದಾರ್​ (ಆರ್​ಟಿಎಂ) ಅವರ ಖರೀದಿಗೆ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿಯು 10 ಕೋಟಿ ರೂ.ವರೆಗೆ ಬಿಡ್ ಮಾಡಿತು ಎಂದಿಟ್ಟುಕೊಳ್ಳಿ. ಈ ವೇಳೆ ಆ ಮೊತ್ತವನ್ನು ತಾವೇ ನೀಡುತ್ತೇವೆ ಎಂದು ಪಾಟಿದಾರ್ ಅವರನ್ನು ಆರ್​ಸಿಬಿ ಮರಳಿ ಖರೀದಿಸಬಹುದು.

ಅದರಂತೆ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡ ರಜತ್ ಪಾಟಿದಾರ್​ (ಆರ್​ಟಿಎಂ) ಅವರ ಖರೀದಿಗೆ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿಯು 10 ಕೋಟಿ ರೂ.ವರೆಗೆ ಬಿಡ್ ಮಾಡಿತು ಎಂದಿಟ್ಟುಕೊಳ್ಳಿ. ಈ ವೇಳೆ ಆ ಮೊತ್ತವನ್ನು ತಾವೇ ನೀಡುತ್ತೇವೆ ಎಂದು ಪಾಟಿದಾರ್ ಅವರನ್ನು ಆರ್​ಸಿಬಿ ಮರಳಿ ಖರೀದಿಸಬಹುದು.

5 / 6
ಒಂದು ವೇಳೆ ಬಿಡುಗಡೆ ಮಾಡಿದ ತಂಡವು ಮರಳಿ ಖರೀದಿಸಲು ಇಚ್ಛಿಸದಿದ್ದರೆ ಮಾತ್ರ ಆರ್​ಟಿಎಂ ಆಯ್ಕೆಯಲ್ಲಿ ಕಾಣಿಸಿಕೊಂಡ ಆಟಗಾರರು ಕೊನೆಯದಾಗಿ ಬಿಡ್ ಮಾಡಿದ ತಂಡದ ಪಾಲಾಗಲಿದ್ದಾರೆ. ಹೀಗಾಗಿಯೇ ಈ ಆಯ್ಕೆಯನ್ನು ಆಟಗಾರರ ಮೇಲಿನ ಹಕ್ಕುಸ್ವಾಮ್ಯ ಎನ್ನಲಾಗುತ್ತದೆ. ಅದರಂತೆ ಈ ಬಾರಿಯ ಐಪಿಎಲ್ ಮೆಗಾ ಹರಾಜಿನಲ್ಲಿ ಒಬ್ಬ ಆಟಗಾರನ ಮೇಲೆ ಆರ್​ಟಿಎಂ ಆಯ್ಕೆ ಬಳಸಬಹುದಾಗಿದ್ದು, ಹೀಗಾಗಿ ಈ ಸಲ ಕೆಲ ಸ್ಟಾರ್ ಆಟಗಾರರು ಆರ್​ಟಿಎಂ ಆಯ್ಕೆಯಡಿ ಬಿಡುಗಡೆಯಾದರೂ ಅಚ್ಚರಿಪಡಬೇಕಿಲ್ಲ.

ಒಂದು ವೇಳೆ ಬಿಡುಗಡೆ ಮಾಡಿದ ತಂಡವು ಮರಳಿ ಖರೀದಿಸಲು ಇಚ್ಛಿಸದಿದ್ದರೆ ಮಾತ್ರ ಆರ್​ಟಿಎಂ ಆಯ್ಕೆಯಲ್ಲಿ ಕಾಣಿಸಿಕೊಂಡ ಆಟಗಾರರು ಕೊನೆಯದಾಗಿ ಬಿಡ್ ಮಾಡಿದ ತಂಡದ ಪಾಲಾಗಲಿದ್ದಾರೆ. ಹೀಗಾಗಿಯೇ ಈ ಆಯ್ಕೆಯನ್ನು ಆಟಗಾರರ ಮೇಲಿನ ಹಕ್ಕುಸ್ವಾಮ್ಯ ಎನ್ನಲಾಗುತ್ತದೆ. ಅದರಂತೆ ಈ ಬಾರಿಯ ಐಪಿಎಲ್ ಮೆಗಾ ಹರಾಜಿನಲ್ಲಿ ಒಬ್ಬ ಆಟಗಾರನ ಮೇಲೆ ಆರ್​ಟಿಎಂ ಆಯ್ಕೆ ಬಳಸಬಹುದಾಗಿದ್ದು, ಹೀಗಾಗಿ ಈ ಸಲ ಕೆಲ ಸ್ಟಾರ್ ಆಟಗಾರರು ಆರ್​ಟಿಎಂ ಆಯ್ಕೆಯಡಿ ಬಿಡುಗಡೆಯಾದರೂ ಅಚ್ಚರಿಪಡಬೇಕಿಲ್ಲ.

6 / 6
Follow us
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ